Homeಮುಖಪುಟಅಮಾನತು ಬೆನ್ನಲ್ಲೇ ಬಿಆರ್‌ಎಸ್‌ ತೊರೆದ ಕೆ. ಕವಿತಾ: ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ಸಾಧ್ಯತೆ

ಅಮಾನತು ಬೆನ್ನಲ್ಲೇ ಬಿಆರ್‌ಎಸ್‌ ತೊರೆದ ಕೆ. ಕವಿತಾ: ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ಸಾಧ್ಯತೆ

- Advertisement -
- Advertisement -

ತೆಲಂಗಾಣದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಕ್ಷದಿಂದ, ಅದರ ಸ್ಥಾಪಕ ಕೆ. ಚಂದ್ರಶೇಖರ್ ರಾವ್ ಅವರ ಮಗಳನ್ನು ಅಮಾನತುಗೊಳಿಸಲಾಗಿದೆ. ಅಪ್ಪ ಸ್ಥಾಪಿಸಿದ, ಸಹೋದರ ಅಧ್ಯಕ್ಷನಾಗಿರುವ ಪಕ್ಷದಿಂದ ವಿಧಾನಪರಿಷತ್ ಸದಸ್ಯೆ ಕೆ.ಕವಿತಾ ಅಮಾನತುಗೊಂಡಿದ್ದಾರೆ.

ಅಮಾನತುಗೊಂಡ ಬೆನ್ನಲ್ಲೇ, ಬುಧವಾರ (ಸೆ.3) ಹೈದಾರಾಬಾದ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಕವಿತಾ ಅವರು, ಪಕ್ಷ ತೊರೆಯುವುದಾಗಿ ಘೋಷಿಸಿದ್ದಾರೆ. ವಿಧಾನಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಬಿಆರ್‌ಎಸ್‌ 2014ರಿಂದ 2024ರವರೆಗೆ 10 ವರ್ಷಗಳ ಕಾಲ ತೆಲಂಗಾಣದಲ್ಲಿ ಆಡಳಿತ ನಡೆಸಿತ್ತು. ತೆಲಂಗಾಣ ಪ್ರತ್ಯೇಕ ರಾಜ್ಯದ ಹೋರಾಟದ ಮೂಲಕ ಹುಟ್ಟಿಕೊಂಡ ಪಕ್ಷವಾಗಿದೆ ಬಿಆರ್‌ಎಸ್‌. ಆರಂಭದಲ್ಲಿ ಟಿಆರ್‌ಎಸ್‌ (ತೆಲಂಗಾಣ ರಾಷ್ಟ್ರ ಸಮಿತಿ) ಎಂದಿದ್ದ ಪಕ್ಷದ ಹೆಸರನ್ನು, 2024ರ ಲೋಕಸಭೆ ಚುನಾವಣೆಗೆ ಮುನ್ನ ಬಿಆರ್‌ಎಸ್‌ ಎಂದು ಬದಲಾಯಿಸಲಾಯಿತು. ಬಿಆರ್‌ಎಸ್‌ ಪಕ್ಷದ ಸ್ಥಾಪಕ ಕೆ. ಚಂದ್ರಶೇಖರ್ ರಾವ್ (ಕೆಸಿಆರ್) 10 ವರ್ಷದ ತೆಲಂಗಾಣದ ಮುಖ್ಯಮಂತ್ರಿ ಆಗಿದ್ದರು. ಅವರ ಮಗ ಕೆ.ಟಿ ರಾಮರಾವ್ (ಕೆಟಿಆರ್‌) ಪೌರಾಡಳಿತ ಮತ್ತು ಐಟಿಬಿಟಿ ಸಚಿವರಾಗಿದ್ದರು. ಪ್ರಸ್ತುತ ಕೆಟಿಆರ್ ಬಿಆರ್‌ಎಸ್‌ ಪಕ್ಷದ ತೆಲಂಗಾಣ ರಾಜ್ಯ ಘಟಕದ ಕಾರ್ಯಾಧ್ಯಕ್ಷರಾಗಿದ್ದಾರೆ. ಕೆಸಿಆರ್‌ ಪಕ್ಷದ ರಾಷ್ಟ್ರೀಯ ನಾಯಕ ಎನಿಸಿಕೊಂಡಿದ್ದಾರೆ.

ಕವಿತಾ ಅವರು ಬಿಆರ್‌ಎಸ್‌ ತೊರೆದ ಬಳಿಕ ತಮ್ಮದೇ ಹೊಸ ಪಕ್ಷ ಕಟ್ಟುತ್ತಾರೆಯೇ ಎಂದು ಸ್ಪಷ್ಟವಾಗಿಲ್ಲ. ಆದರೆ, “ತಾನು ಬೇರೆ ಪಕ್ಷಕ್ಕೆ ಸೇರುವ ಬಗ್ಗೆ ಯೋಚನೆ ಮಾಡುವುದಿಲ್ಲ. ನನ್ನ ಜೀವನದ ಕಳೆದ 20 ವರ್ಷಗಳಿಂದ ನಾನು ತೆಲಂಗಾಣ ಮತ್ತು ಬಿಆರ್‌ಎಸ್‌ಗಾಗಿ ಕೆಲಸ ಮಾಡಿದ್ದೇನೆ. ನಾನು ತೆಲಂಗಾಣ ಆಂದೋಲನಕ್ಕೆ ಬಂದಾಗ 27 ವರ್ಷ ವಯಸ್ಸಾಗಿತ್ತು, ಈಗ 47 ವರ್ಷ. ನಾನು ನನ್ನ ಜೀವನದ ಬಹುಭಾಗವನ್ನು ತೆಲಂಗಾಣ ಮತ್ತು ಬಿಆರ್‌ಎಸ್‌ಗಾಗಿ ನೀಡಿದ್ದೇನೆ” ಎಂದು ಕವಿತಾ ಹೇಳಿದ್ದಾರೆ.

“ಕಲ್ವಕುಂಟ್ಲ ಕುಟುಂಬ (ಕೆಸಿಆರ್‌ ಕುಟುಂಬ) ಮತ್ತು ಬಿಆರ್‌ಎಸ್ ಅನ್ನು ಒಡೆಯಲು ಪಿತೂರಿ ನಡೆಯುತ್ತಿದೆ” ಎಂದ ಕವಿತಾ, “ನಿಮ್ಮನ್ನು ಯಾರು ಸುತ್ತುವರಿದಿದ್ದಾರೆ ಎಂದು ಪರಿಶೀಲಿಸಿಕೊಳ್ಳಿ” ಎಂದು ತಂದೆ ಕೆಸಿಆರ್ ಅವರಿಗೆ ಮನವಿ ಮಾಡಿದ್ದಾರೆ. ಪಕ್ಷದಿಂದ ತನ್ನನ್ನು ಹೊರಹಾಕುವಲ್ಲಿ ತನ್ನ ಸೋದರಸಂಬಂಧಿಗಳು ಮತ್ತು ಬಿಆರ್‌ಎಸ್ ನಾಯಕರಾದ ಟಿ. ಹರೀಶ್ ರಾವ್ ಮತ್ತು ಸಂತೋಷ್ ಕುಮಾರ್ ಪಾತ್ರವಿದೆ ಎಂದು ಆರೋಪಿಸಿದ್ದಾರೆ.

ಈ ಇಬ್ಬರ ವಿರುದ್ದ ದೊಡ್ಡ ಮಟ್ಟದ ಭ್ರಷ್ಟಾಚಾರದ ಆರೋಪ ಹೊರಿಸಿದ ಕವಿತಾ, “ಸುವರ್ಣ ತೆಲಂಗಾಣ ಎಂದರೆ ಹರೀಶ್ ರಾವ್ ಮತ್ತು ಸಂತೋಷ್ ಕುಮಾರ್ ಅವರ ಮನೆಗಳಿಗೆ ಚಿನ್ನ ತಲುಪುವುದು ಎಂದಲ್ಲ” ಎಂದು ಕಿಡಿಕಾರಿದ್ದಾರೆ.

ಬಿಆರ್‌ಎಸ್‌ ಸರ್ಕಾರದಲ್ಲಿ ಹರೀಶ್ ರಾವ್ ತೆಲಂಗಾಣದ ನೀರಾವರಿ ಸಚಿವರಾಗಿದ್ದರು. ಸಂತೋಷ್ ಕುಮಾರ್ ಪಕ್ಷದ ಮಾಜಿ ರಾಜ್ಯಸಭಾ ಸಂಸದರಾಗಿದ್ದಾರೆ.

“ಇಂದು ನನ್ನನ್ನು ಪಕ್ಷದಲ್ಲಿ ಕಡೆಗಣಿಸಲಾಗಿದೆ. ನಾಳೆ ಕೆಸಿಆರ್ ಸೇರಿದಂತೆ ಯಾರಿಗೂ ಬೇಕಾದರು ಇದೇ ಪರಿಸ್ಥಿತಿ ಎದುರಾಗಬಹುದು. ಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿಲ್ಲದಿದ್ದರೆ ಹರೀಶ್ ರಾವ್ ಸಂಪತ್ತು ಸಂಗ್ರಹಿಸಿದ್ದು ಹೇಗೆ? ಹರೀಶ್ ರಾವ್ ಭ್ರಷ್ಟಾಚಾರದ ಹಣವನ್ನು ತಮ್ಮ ಚುನಾವಣೆಗೆ ಬಳಸಿಕೊಂಡಿದ್ದಾರೆ” ಎಂದು ಕವಿತಾ ಗುಡುಗಿದ್ದಾರೆ.

ತನ್ನ ಸಹೋದರ ಹಾಗೂ ಬಿಆರ್‌ಎಸ್‌ನ ಕಾರ್ಯಾಧ್ಯಕ್ಷ ಕೆ.ಟಿ ರಾಮರಾವ್ ಅವರು ಪಕ್ಷದಲ್ಲಿನ ತನ್ನ ಸಮಸ್ಯೆಗಳೇನು ಎಂದು ಕೇಳಿಲ್ಲ. ಅವರ ತಂದೆ ಕೂಡ ಬಿಆರ್‌ಎಸ್‌ನಿಂದ ಮುಂದಿನ ಬಾರಿ ಉಚ್ಚಾಟನೆಗೆ ಒಳಗಾಗಬಹುದು ಎಂದು ಕವಿತಾ, “ಪಕ್ಷದ ಪ್ರಧಾನ ಕಚೇರಿಯಾದ ತೆಲಂಗಾಣ ಭವನದಲ್ಲಿ ಕುಳಿತು, ಪಕ್ಷದ ಮಹಿಳಾ ನಾಯಕಿಯಾಗಿ, ಪಕ್ಷದಲ್ಲಿ ನನ್ನನ್ನು ಗುರಿಯಾಗಿಸಿಕೊಂಡಿರುವ ದುಷ್ಟ ಶಕ್ತಿಗಳಿವೆ ಎಂದು ನಾನು ಹೇಳಿದ್ದೆ. ಪಕ್ಷದ ಕಾರ್ಯಾಧ್ಯಕ್ಷರಾಗಿ ಕೆಟಿಆರ್‌ ಈ ಬಗ್ಗೆ ನನಗೆ ಕರೆ ಮಾಡಿ ವಿಚಾರಿಸಬೇಕಿತ್ತು. ಅವರು ಏಕೆ ನನ್ನನ್ನು ಸಂಪರ್ಕಿಸಿಲ್ಲ? ನನ್ನನ್ನು ಗುರಿಯಾಗಿಸಿಕೊಂಡಿರುವ ಬಗ್ಗೆ ನಾನು ಮೊದಲ ಬಾರಿಗೆ ವಿಷಯ ಪ್ರಸ್ತಾಪಿಸಿ 103 ದಿನಗಳೇ ಕಳೆದಿವೆ ಆದರೂ ಅವರು ಒಂದು ಮಾತು ಏಕೆ ಕೇಳಿಲ್ಲ?” ಎಂದು ಕವಿತಾ ಪ್ರಶ್ನೆ ಹಾಕಿದ್ದಾರೆ.

“ಕೆಸಿಆರ್ ಮತ್ತು ಕೆಟಿಆರ್ ಅವರನ್ನು ತೆಲಂಗಾಣ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಎ. ರೇವಂತ್ ರೆಡ್ಡಿ ಅವರೊಂದಿಗೆ ಒಪ್ಪಂದ ಮಾಡಿಕೊಂಡಿರುವ ಸ್ಥಾಪಿತ ಹಿತಾಸಕ್ತಿಗಳು ಸುತ್ತುವರೆದಿವೆ. ಕೆಟಿಆರ್ ಮತ್ತು ಕೆಸಿಆರ್ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗುತ್ತಿದ್ದರೂ, ಹರೀಶ್ ರಾವ್ ಮತ್ತು ಸಂತೋಷ್ ಕುಮಾರ್ ಕಾಂಗ್ರೆಸ್ ಬೆಂಬಲವನ್ನು ಪಡೆಯುತ್ತಿದ್ದಾರೆ. ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳ ಅವರ ವಿಷಯಕ್ಕೆ ಬಂದಾಗ ಮೌನವಾಗುತ್ತಿದೆ” ಎಂದು ಕವಿತಾ ಆರೋಪಿಸಿದ್ದಾರೆ.

ತಮ್ಮ ಎನ್‌ಜಿಒ ಮತ್ತು ಸಾಂಸ್ಕೃತಿಕ ಸಂಘಟನೆಯಾದ ತೆಲಂಗಾಣ ಜಾಗೃತಿಯ ಕಚೇರಿಯಲ್ಲಿ ಬೆಂಬಲಿಗರ ಗುಂಪುಗಳ ನಡುವೆ ಕುಳಿತು ಮಾತನಾಡಿದ ಕವಿತಾ, “ನಾನು ಪಕ್ಷಕ್ಕಾಗಿ ನಿರಂತರವಾಗಿ ಕೆಲಸ ಮಾಡಿದ್ದೇನೆ. ತಳಮಟ್ಟದಲ್ಲಿ ಪಕ್ಷವನ್ನು ಕಟ್ಟಿದ್ದೇನೆ. ಗುರುಕುಲ ಶಾಲೆಗಳು, ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು, ಮಹಿಳೆಯರು ಮತ್ತು ಹಲವಾರು ದುರ್ಬಲ ವರ್ಗಗಳಿಗಾಗಿ ಕೆಲಸ ಮಾಡಿದ್ದೇನೆ. ನನ್ನ ಈ ಕೆಲಸಗಳಲ್ಲಿ ಪಕ್ಷ ವಿರೋಧಿ ಯಾವುದು?” ಎಂದು ಕವಿತಾ ಕೇಳಿದ್ದಾರೆ.

ಮಂಗಳವಾರ (ಸೆ.2) ಕವಿತಾ ಅವರಿಗೆ ನೀಡಲಾದ ಬಿಆರ್‌ಎಸ್‌ನ ಶಿಸ್ತು ಸಮಿತಿಯ ನೋಟಿಸ್‌ನಲ್ಲಿ, ಅವರ ಮೇಲೆ ‘ಪಕ್ಷ ವಿರೋಧಿ ಚಟುವಟಿಕೆಗಳ’ ಆರೋಪ ಹೊರಿಸಲಾಗಿತ್ತು. ತನ್ನ ತಂದೆ ಮಾರ್ಗದರ್ಶನ ನೀಡಿದಂತೆಯೇ ತಾನು ‘ಜನರ ತೆಲಂಗಾಣ’ ಮತ್ತು ‘ಸುವರ್ಣ ತೆಲಂಗಾಣ’ಕ್ಕಾಗಿ ಕೆಲಸ ಮಾಡುತ್ತಿದ್ದೇನೆ ಎಂದಿರುವ ಕವಿತಾ, “ಇವುಗಳು ಪಕ್ಷ ವಿರೋಧಿ ಚಟುವಟಿಕೆಗಳಾಗಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.

ಕಾಳೇಶ್ವರಂ ಏತ ನೀರಾವರಿ ಯೋಜನೆ ಭ್ರಷ್ಟಾಚಾರದ ಸಿಬಿಐ ತನಿಖೆ

ಕಾಳೇಶ್ವರಂ ಏತ ನೀರಾವರಿ ಯೋಜನೆ (Kaleshwaram Lift Irrigation Project – KLIP) ತೆಲಂಗಾಣದ ಅತಿದೊಡ್ಡ ಮತ್ತು ದುಬಾರಿ ಏತ ನೀರಾವರಿ ಯೋಜನೆಯಾಗಿದೆ. ಇದನ್ನು ಗೋದಾವರಿ ನದಿಯ ಮೇಲೆ ನಿರ್ಮಿಸಲಾಗಿದೆ. ಈ ಯೋಜನೆಯ ಉದ್ದೇಶ ತೆಲಂಗಾಣದ ವಿವಿಧ ಜಿಲ್ಲೆಗಳಿಗೆ ನೀರಾವರಿ, ಕುಡಿಯುವ ನೀರು ಮತ್ತು ಕೈಗಾರಿಕಾ ಬಳಕೆಗೆ ನೀರು ಒದಗಿಸುವುದಾಗಿದೆ. ಆದರೆ, ಈ ಯೋಜನೆಯು ತಾಂತ್ರಿಕ ದೋಷಗಳು, ಆರ್ಥಿಕ ಅಕ್ರಮಗಳು ಮತ್ತು ರಾಜಕೀಯ ವಿವಾದಗಳಿಂದಾಗಿ ಗಮನ ಸೆಳೆದಿದೆ.

ಬಿಆರ್‌ಎಸ್‌ ಸರ್ಕಾರ ಮಹತ್ವಕಾಂಕ್ಷಿ ಕಾಳೇಶ್ವರಂ ಏತ ನೀರಾವರಿಯ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಅದರಲ್ಲೂ, ಕವಿತಾ ಅವರು ತನ್ನ ವಿರುದ್ದ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿರುವ ಮಾಜಿ ನೀರಾವರಿ ಸಚಿವ ಹರೀಶ್ ರಾವ್ ವಿರುದ್ದ ಆರೋಪಗಳನ್ನು ಹೊರಿಸಲಾಗಿದೆ.

ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ನೇತೃತ್ವದ ತೆಲಂಗಾಣದ ಹಾಲಿ ಸರ್ಕಾರವು ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಗೆ ಆದೇಶಿಸಿದೆ.

ಆಗಸ್ಟ್ 31, 2025 ರಂದು ತೆಲಂಗಾಣ ವಿಧಾನಸಭೆಯಲ್ಲಿ 10 ಗಂಟೆಗಳ ಕಾಲ ನಡೆದ ಮ್ಯಾರಥಾನ್ ಚರ್ಚೆಯ ನಂತರ, ಸೆಪ್ಟೆಂಬರ್ 1, 2025 ರಂದು ಸಿಬಿಐ ತನಿಖೆಗೆ ಆದೇಶ ಹೊರಡಿಸಲಾಗಿದೆ. ಜುಲೈ 31, 2025 ರಂದು ನ್ಯಾಯಮೂರ್ತಿ ಪಿ.ಸಿ. ಘೋಷ್ ಆಯೋಗ ಸಲ್ಲಿಸಿದ ವರದಿಗಳನ್ನು ಆಧರಿಸಿ ತನಿಖೆಗೆ ಆದೇಶ ಮಾಡಲಾಗಿದೆ. ಆಗಸ್ಟ್ 31, 2025ರಂದು ವಿಧಾನಸಭೆಯಲ್ಲಿ ವರದಿಯನ್ನು ಮಂಡಿಸಲಾಗಿತ್ತು.

ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಪಿನಾಕಿ ಚಂದ್ರ ಘೋಷ್ ನೇತೃತ್ವದ ಆಯೋಗವು, ಮೇಡಿಗಡ್ಡ, ಅಣ್ಣಾರಾಮ್ ಮತ್ತು ಸುಂಡಿಲ್ಲಾ ಬ್ಯಾರೇಜ್‌ಗಳ ನಿರ್ಮಾಣದಲ್ಲಿ ನಿರ್ಲಕ್ಷ್ಯ, ಆರ್ಥಿಕ ಅಕ್ರಮಗಳು ಮತ್ತು ಕಳಪೆ ಯೋಜನೆ ಸೇರಿದಂತೆ ಗಮನಾರ್ಹ ಲೋಪಗಳನ್ನು ಗುರುತಿಸಿದೆ. ರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಪ್ರಾಧಿಕಾರ (NDSA) ವಿನ್ಯಾಸ ದೋಷಗಳು, ಕಳಪೆ ಗುಣಮಟ್ಟದ ನಿಯಂತ್ರಣ ಮತ್ತು ನಿರ್ಮಾಣ ನ್ಯೂನತೆಗಳನ್ನು ವರದಿ ಮಾಡಿದೆ, ವಿಶೇಷವಾಗಿ ಅಕ್ಟೋಬರ್ 21, 2023 ರಂದು ಮೇಡಿಗಡ್ಡ ಬ್ಯಾರೇಜ್‌ನಲ್ಲಿ ಆರು ಕಂಬಗಳು ಮುಳುಗಿದ್ದ ವಿಷಯವನ್ನು ಉಲ್ಲೇಖಿಸಿದೆ ಎಂದು ವರದಿಯಾಗಿದೆ.

ದೆಹಲಿ ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ ಕವಿತಾ ಬಂಧನ

ದೆಹಲಿ ಮದ್ಯ ನೀತಿ ಅಥವಾ ಅಬಕಾರಿ ನೀತಿ ಅಕ್ರಮ ಪ್ರಕರಣಕ್ಕೆ ಹೊಂದಿಕೊಂಡಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೆ. ಕವಿತಾ ಅವರನ್ನು ಮಾರ್ಚ್ 15, 2024ರಂದು ಹೈದರಾಬಾದ್‌ನ ಬಂಜಾರ ಹಿಲ್ಸ್‌ನಲ್ಲಿರುವ ಅವರ ನಿವಾಸದಿಂದ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.

ನಂತರ, ದೆಹಲಿ ಮದ್ಯ ನೀತಿ ಹಗರಣಕ್ಕೆ ಹೊಂದಿಕೊಂಡಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಕೆ. ಕವಿತಾ ಅವರನ್ನು ತಿಹಾರ್ ಜೈಲಿನಿಂದ ಬಂಧಿಸಿತ್ತು. ಇಡಿ ಬಂಧನದ ನಂತರ  ನ್ಯಾಯಾಂಗ ಬಂಧನದಲ್ಲಿದ್ದ ಕವಿತಾ ಅವರನ್ನು ಸಿಬಿಐ ವಶಕ್ಕೆ ಪಡೆದಿತ್ತು.

ಸರಿಸುಮಾರು ಐದು ತಿಂಗಳುಗಳ ಕಾಲ ಬಂಧನದಲ್ಲಿದ್ದ ನಂತರ, ಆಗಸ್ಟ್ 27, 2024 ರಂದು ಸುಪ್ರೀಂ ಕೋರ್ಟ್ ಕವಿತಾ ಅವರಿಗೆ ಜಾಮೀನು ನೀಡಿತ್ತು.

ಎಐಎಡಿಎಂಕೆ ನಾಯಕರ ನಡುವಿನ ಮಾತುಕತೆ ವಿಫಲ; ಎನ್‌ಡಿಎ ತೊರೆಯುವುದಾಗಿ ಘೋಷಿಸಿದ ಟಿಟಿವಿ ದಿನಕರನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...