Homeಮುಖಪುಟಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ: ಕಸ್ಟಡಿ ಸಾವು ಕುರಿತ ವರದಿ ಬೆನ್ನಲ್ಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ...

ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ: ಕಸ್ಟಡಿ ಸಾವು ಕುರಿತ ವರದಿ ಬೆನ್ನಲ್ಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಸುಪ್ರೀಂ ಕೋರ್ಟ್

- Advertisement -
- Advertisement -

ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮರಾಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಗುರುವಾರ (ಸೆ.4) ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ಕಳೆದ 7 ರಿಂದ 8 ತಿಂಗಳುಗಳಲ್ಲಿ ಪೊಲೀಸ್ ಕಸ್ಟಡಿಯಲ್ಲಿ 11 ಸಾವುಗಳು ಸಂಭವಿಸಿವೆ ಎಂದು ದೈನಿಕ್ ಭಾಸ್ಕರ್ ಪತ್ರಿಕೆಯಲ್ಲಿ ಬಂದ ವರದಿಯ ಆಧಾರದ ಮೇಲೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಕ್ರಮ ಕೈಗೊಂಡಿದೆ.

“ದೈನಿಕ್ ಭಾಸ್ಕರ್ ವರದಿಯ ಆಧಾರದ ಮೇಲೆ ಕಳೆದ 7-8 ತಿಂಗಳಲ್ಲಿ ಪೊಲೀಸ್ ಕಸ್ಟಡಿಯಲ್ಲಿ 11 ಸಾವುಗಳು ಸಂಭವಿಸಿವೆ ಎಂದು ತಿಳಿದು ಬಂದಿರುವುದರಿಂದ ‘ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿಗಳ ಕೊರತೆ’ ಎಂಬ ಶೀರ್ಷಿಕೆಯಡಿಯಲ್ಲಿ ನಾವು ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ದಾಖಲಿಸಲು ನಿರ್ದೇಶಿಸುತ್ತಿದ್ದೇವೆ” ಎಂದು ನ್ಯಾಯಾಲಯ ತಿಳಿಸಿದೆ.

2020ರಲ್ಲಿ ನ್ಯಾಯಮೂರ್ತಿಗಳಾದ ರೋಹಿಂಟನ್ ಫಾಲಿ ನಾರಿಮನ್, ಕೆ.ಎಂ ಜೋಸೆಫ್ ಮತ್ತು ಅನಿರುದ್ಧ ಬೋಸ್ ಅವರ ಪೀಠವು ನೀಡಿದ ಮಹತ್ವದ ತೀರ್ಪಿನಲ್ಲಿ, ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಅಳವಡಿಸುವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿತ್ತು.

ಆ ತೀರ್ಪಿನಲ್ಲಿ, ನ್ಯಾಯಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ದೇಶದಾದ್ಯಂತ ಪ್ರತಿಯೊಂದು ಪೊಲೀಸ್ ಠಾಣೆಗಳಲ್ಲಿ ರಾತ್ರಿ ದೃಷ್ಟಿ ಕ್ಯಾಮರಾಗಳೊಂದಿಗೆ ಸಿಸಿಟಿವಿಗಳನ್ನು ಅಳವಡಿಸಲು ಆದೇಶಿಸಿತ್ತು.

ಕೇಂದ್ರೀಯ ತನಿಖಾ ದಳ (ಸಿಬಿಐ), ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ಜಾರಿ ನಿರ್ದೇಶನಾಲಯ (ಇಡಿ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ), ಕಂದಾಯ ಗುಪ್ತಚರ ಇಲಾಖೆ (ಡಿಆರ್‌ಐ), ಗಂಭೀರ ವಂಚನೆ ತನಿಖಾ ಕಚೇರಿ (ಎಸ್‌ಎಫ್‌ಐಒ) ಮತ್ತು ಜನರ ವಿಚಾರಣೆ ನಡೆಸುವ ಯಾವುದೇ ಕೇಂದ್ರೀಯ ಸಂಸ್ಥೆ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವಂತೆಯೂ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ತನ್ನ ಆದೇಶದಂತೆ ಅಳವಡಿಸಲಾದ ಸಿಸಿಟಿವಿ ವ್ಯವಸ್ಥೆಗಳು ‘ರಾತ್ರಿ ದೃಷ್ಟಿಯನ್ನು ಹೊಂದಿರಬೇಕು ಮತ್ತು ಅಗತ್ಯವಾಗಿ ಆಡಿಯೋ ಮತ್ತು ವಿಡಿಯೋ ದೃಶ್ಯಗಳನ್ನು ಒಳಗೊಂಡಿರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ವಿದ್ಯುತ್ ಮತ್ತು/ಅಥವಾ ಇಂಟರ್ನೆಟ್ ಇಲ್ಲದ ಪ್ರದೇಶಗಳಲ್ಲಿ, ಸೌರ/ಪವನ ವಿದ್ಯುತ್ ಸೇರಿದಂತೆ ಯಾವುದೇ ವಿದ್ಯುತ್ ಒದಗಿಸುವ ವಿಧಾನವನ್ನು ಬಳಸಿಕೊಂಡು ಸಾಧ್ಯವಾದಷ್ಟು ಬೇಗ ಅದನ್ನು ಸಿಸಿಟಿವಿ ಅಳವಡಿಸುವುದು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಕರ್ತವ್ಯವಾಗಿರುತ್ತದೆ ಎಂದು ನ್ಯಾಯಾಲಯವು ತಿಳಿಸಿತ್ತು.

ಪೊಲೀಸ್ ಠಾಣೆಯಲ್ಲಿ ಗಂಭೀರ ಗಾಯ ಅಥವಾ ಕಸ್ಟಡಿ ಸಾವಿನ ಘಟನೆ ನಡೆದಾಗ, ವ್ಯಕ್ತಿಯು ಮಾನವ ಹಕ್ಕುಗಳ ನ್ಯಾಯಾಲಯಗಳಿಗೆ ದೂರು ನೀಡಬಹುದು. ನಂತರ, ನ್ಯಾಯಾಲಯ ಸಿಸಿಟಿವಿ ದೃಶ್ಯಾವಳಿಗಳನ್ನು ಸುರಕ್ಷಿತವಾಗಿಡಲು ಸೂಚಿಸಬಹುದು. ಮಾನವ ಹಕ್ಕುಗಳ ಉಲ್ಲಂಘನೆಯ ಸಂದರ್ಭದಲ್ಲಿ ಸಂತ್ರಸ್ತರಿಗೆ ಸಿಸಿಟಿವಿ ದೃಶ್ಯಗಳು ಲಭ್ಯವಾಗುವಂತೆ ಮಾಡಬೇಕು ಎಂದು ನ್ಯಾಯಾಲಯ ಸೂಚಿಸಿತ್ತು.

ನ್ಯಾಯಾಲಯದ ಈ ನಿರ್ದೇಶನಗಳ ಹೊರತಾಗಿಯೂ, ಕಸ್ಟಡಿ ಹಿಂಸೆ/ಸಾವಿನಂತಹ ಘಟನೆಗಳು ನಡೆದಾಗ ಸಿಸಿಟಿವಿ ದೃಶ್ಯಗಳನ್ನು ಕೇಳಿದಾಗ, ಅವು ಕಾಣೆಯಾಗಿವೆ ಅಥವಾ ಸಿಸಿಟಿವಿ ಕೆಲಸ ಮಾಡುತ್ತಿಲ್ಲ ಎಂಬ ಸಬೂಬುಗಳನ್ನು ಪೊಲೀಸರು ನೀಡುತ್ತಿರುವುದು ಹೆಚ್ಚಾಗುತ್ತಿದೆ. ಹಾಗಾಗಿ, ಸಿಸಿಟಿವಿಯ ವಿಚಾರವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.

ಅತಿಕ್ರಮಣಕ್ಕೆ ಸಂಬಂಧಿಸಿದಂತೆ ದರ್ಗಾಗಳನ್ನು ಮಾತ್ರ ಗುರಿಯಾಗಿಸುತ್ತಿರುವುದು ಏಕೆ: ಹಿಂದುತ್ವ ಎನ್‌ಜಿಒಗೆ ದೆಹಲಿ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...