Homeಮುಖಪುಟಸಂವಿಧಾನದ ಮೂಲ ಆಶಯವನ್ನು ರದ್ದುಗೊಳಿಸಲು ಕೇಂದ್ರ ಬಯಸಿದೆ: ಸುಪ್ರೀಂ ಮುಂದೆ ಕರ್ನಾಟಕ ಸೇರಿ 3 ರಾಜ್ಯಗಳ...

ಸಂವಿಧಾನದ ಮೂಲ ಆಶಯವನ್ನು ರದ್ದುಗೊಳಿಸಲು ಕೇಂದ್ರ ಬಯಸಿದೆ: ಸುಪ್ರೀಂ ಮುಂದೆ ಕರ್ನಾಟಕ ಸೇರಿ 3 ರಾಜ್ಯಗಳ ಕಳವಳ

- Advertisement -
- Advertisement -

ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕುವುದಕ್ಕೆ ಗಡುವು ವಿಧಿಸಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪನ್ನು ಪ್ರಶ್ನಿಸುವ ಮೂಲಕ ಕೇಂದ್ರ ಸರ್ಕಾರ ಸಂವಿಧಾನದ ಮೂಲ ತಿರುಳಿನ ರದ್ದತಿಗೆ ಮುಂದಾಗಿದೆ ಎಂದು ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ಹಿಮಾಚಲ ಪ್ರದೇಶ ಸರ್ಕಾರಗಳು ಬುಧವಾರ (ಸೆ.3) ಸುಪ್ರೀಂ ಕೋರ್ಟ್‌ಗೆ ಹೇಳಿದೆ.

ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕುವುದಕ್ಕೆ ಗಡುವು ವಿಧಿಸಬಹುದೇ ಎಂಬ ಕುರಿತು  ಸಂವಿಧಾನದ 143 ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್‌ನ ಸಲಹೆಯನ್ನು ಕೋರಿ ರಾಷ್ಟ್ರಪತಿಯವರು ಮಾಡಿದ್ದ ಶಿಫಾರಸ್ಸು ಸಂಬಂಧ 7ನೇ ದಿನದ ವಿಚಾರಣೆ ಬುಧವಾರ  ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ.

ಕರ್ನಾಟಕದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಗೋಪಾಲ್ ಸುಬ್ರಮಣಿಯಂ, “ಕೇಂದ್ರ ಸರ್ಕಾರವು ಪರೋಕ್ಷವಾಗಿ ಸಂವಿಧಾನದ ಮೂಲ ಆಶಯವಾದ ‘ಸಂಪುಟ ಸರ್ಕಾರ ಮತ್ತು ಶಾಸಕಾಂಗ’ದ ಜವಾಬ್ದಾರಿಯನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದೆ ಎಂದು ವಾದಿಸಿದ್ದಾರೆ.

ಸಚಿವ ಸಂಪುಟದ ಮೂಲಕ ಸರ್ಕಾರದ ಪ್ರಜಾಪ್ರಭುತ್ವ ರೂಪವು ಸಂವಿಧಾನದ ಮೂಲ ರಚನೆಯ ಭಾಗವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪಶ್ಚಿಮ ಬಂಗಾಳವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ರಾಜ್ಯಪಾಲರು ಸಂವಿಧಾನದ ಕಾರ್ಯನಿರ್ವಹಣೆಗೆ ಅಡ್ಡಿಯಾಗುವ ಬಲೆಗೆ ನ್ಯಾಯಾಲಯ ಬೀಳಬಾರದು ಎಂದು ಮನವಿ ಮಾಡಿದ್ದಾರೆ.

“ಸಂವಿಧಾನವು ಜೀವಂತ ದಾಖಲೆಯಾಗಿದೆ. ಅದು ಇತಿಹಾಸದಿಂದ ಹುಟ್ಟಿಕೊಂಡಿದೆ, ಆದರೆ ಭವಿಷ್ಯಕ್ಕೆ ನಿಷ್ಠವಾಗಿದೆ. ನೀವು [ನ್ಯಾಯಾಧೀಶರು] ಭವಿಷ್ಯ, ಏಕೆಂದರೆ ನೀವು ಅದನ್ನು ಅರ್ಥೈಸುತ್ತೀರಿ. ರಾಜ್ಯಪಾಲರು ಸಂವಿಧಾನದ ಕಾರ್ಯನಿರ್ವಹಣೆಗೆ ಅಡ್ಡಿಯಾಗುವ ಬಲೆಗೆ ಬೀಳಬಾರದು. ಆದ್ದರಿಂದ, ನೀವು ಏನನ್ನಾದರೂ ಹೇಳಬೇಕಾಗುತ್ತದೆ. ಕಾಲಮಿತಿಯನ್ನು ನೀಡಬೇಡಿ, ಆದರೆ, ಅದು (ಮಸೂದೆ) ಮತ್ತೊಮ್ಮೆ ಅಂಗೀಕರಿಸಲ್ಪಟ್ಟರೆ ತಡೆಹಿಡಿಯಲು ರಾಜ್ಯಪಾಲರಿಗೆ ಅವಕಾಶವಿಲ್ಲ ಎಂದು ನೀವು ಹೇಳಬೇಕು” ಎಂದು ಕಪಿಲ್ ಸಿಬಲ್ ಕೋರಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಪಿ.ಎಸ್. ನರಸಿಂಹ ಹಾಗೂ ಅತುಲ್ ಎಸ್. ಚಂದೂರ್ಕರ್ ಅವರ ಸಂವಿಧಾನ ಪೀಠದ ಮುಂದೆ ಈ ವಾದಗಳನ್ನು ಮಂಡಿಸಲಾಗಿದೆ.

ರಾಷ್ಟ್ರಪತಿಗಳ ಶಿಫಾರಸ್ಸನ್ನು ವಜಾಗೊಳಿಸುವಂತೆ ಕೋರಿ ಸಿಬಲ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ವಿಧಾನಸಭೆ ಅಂಗೀಕರಿಸಿದ ಮಸೂದೆಯ ಶಾಸಕಾಂಗ ಸಾಮರ್ಥ್ಯವನ್ನು ರಾಜ್ಯಪಾಲರು ಪರಿಶೀಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

“ಸ್ವಾತಂತ್ರ್ಯದ ನಂತರ, ಸಂಸತ್ತು ಅಂಗೀಕರಿಸಿದ ಮಸೂದೆಯು ಜನರ ಇಚ್ಛೆಯಾಗಿರುವುದರಿಂದ ರಾಷ್ಟ್ರಪತಿಗಳು ತಡೆಹಿಡಿದ ಯಾವುದೇ ಉದಾಹರಣೆ ಇಲ್ಲ. ಮಸೂದೆಯ ಶಾಸಕಾಂಗ ಸಾಮರ್ಥ್ಯವನ್ನು ನ್ಯಾಯಾಲಯಗಳಲ್ಲಿ ಪರೀಕ್ಷಿಸಬೇಕಾಗುತ್ತದೆ” ಎಂದಿದ್ದಾರೆ.

ರಾಜ್ಯಪಾಲರು ಮಸೂದೆಯ ಸಾಂವಿಧಾನಿಕತೆಯನ್ನು ಪರಿಶೀಲಿಸಲು ಸಾಧ್ಯವಿಲ್ಲ ಎಂಬ ಸಿಬಲ್ ವಾದಕ್ಕೆ ಪ್ರತಿಕ್ರಿಯಿಸಿದ ಪೀಠ, “ಕೇಂದ್ರ ಶಾಸನದ ದೃಷ್ಟಿಯಿಂದ ವ್ಯತಿರಿಕ್ತವಾಗಿದ್ದರೆ ರಾಜ್ಯಪಾಲರು ತಡೆಹಿಡಿಯಬಹುದೇ?” ಎಂದು ಕೇಳಿದೆ.

ಇದಕ್ಕೆ ಉತ್ತರಿಸಿದ ಸಿಬಲ್, “ಅದು ಅಪರೂಪದಲ್ಲೇ ಅಪರೂಪದ ಪ್ರಕರಣ” ಎಂದಿದ್ದಾರೆ. ನಾಗರಿಕರು ಅಥವಾ ಬೇರೆಯವರು ಕಾನೂನಿನ ನ್ಯಾಯಾಲಯದಲ್ಲಿ ಶಾಸನವನ್ನು ಪ್ರಶ್ನಿಸಬಹುದು. ನಾನು ಅಂಗೀಕರಿಸಲು ಸಾಧ್ಯವಿಲ್ಲ ಎಂದು ರಾಜ್ಯಪಾಲರು ಹೇಳುವುದು ಅತ್ಯಂತ ಅಪರೂಪದ ಪ್ರಕರಣದಲ್ಲಿ” ಎಂದು ಸಿಬಲ್ ಹೇಳಿದ್ದಾರೆ.

ಹಿಮಾಚಲ ಪ್ರದೇಶ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲ ಆನಂದ್ ಶರ್ಮಾ ವಾದ ಮಂಡಿಸಿ, ಸಂವಿಧಾನದ ವಿಚಾರಕ್ಕೆ ಬಂದಾಗ ನ್ಯಾಯಾಲಯಗಳೇ ಅಂತಿಮ ತೀರ್ಪುಗಾರರಾಗಿದ್ದು, ಅದು ಭಾರತೀಯ ಗಣರಾಜ್ಯದ ಶಕ್ತಿ. ರಾಜ್ಯಪಾಲರುಗಳು ವೈಸರಾಯ್‌ ಅಥವಾ ಗವರ್ನರ್‌ ಜನರಲ್‌ಗಳಲ್ಲ. ಅವರು ಸಚಿವ ಸಂಪುಟದ ಸಲಹೆ ಮತ್ತು ಮಾರ್ಗದರ್ಶನಕ್ಕೆ ಬದ್ಧರಾಗಿರಬೇಕು. ರಾಷ್ಟ್ರಪತಿ ಅಥವಾ ಗವರ್ನರ್‌ಗೆ ವಿಧಾನಮಂಡಲ ರೂಪಿಸುವಲ್ಲಿ ಅಥವಾ ಅದರ ಅಧಿವೇಶನ ನಡೆಸುವಲ್ಲಿ ಯಾವುದೇ ಸ್ವತಂತ್ರ ಪಾತ್ರವಿಲ್ಲ. ವಿಧಾನ ಮಂಡಲವೇ ಶ್ರೇಷ್ಠವಾದುದು ಎಂದು ತಿಳಿಸಿದ್ದಾರೆ.

ಜನರ ಇಚ್ಛೆಗೆ ವಿರುದ್ಧವಾಗಿ ರಾಜ್ಯಪಾಲರ ಹುದ್ದೆ ಬಳಕೆಯಾಗಬಾರದು. ರಾಜ್ಯ ಸರ್ಕಾರಗಳನ್ನು ಮುನಿಸಿಪಾಲಿಟಿಗಳಂತೆ ನಡೆಸಿಕೊಳ್ಳಲಾಗದು. ಅವುಗಳಿಗೆ ತಮ್ಮದೇ ಆದ ಸ್ವತಂತ್ರ ಸ್ಥಾನ ಇದ್ದು ಅದನ್ನು ಉಳಿಸಿ ಗೌರವಿಸಬೇಕು ಎಂದು ಹೇಳಿದ್ದಾರೆ.

ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ: ಕಸ್ಟಡಿ ಸಾವು ಕುರಿತ ವರದಿ ಬೆನ್ನಲ್ಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...