Homeಮುಖಪುಟಮಧ್ಯಪ್ರದೇಶ| 'ಬುಡಕಟ್ಟು ಜನರು ಹಿಂದೂಗಳಲ್ಲ' ಎಂದ ವಿಪಕ್ಷ ನಾಯಕ; ಟೀಕಿಸಿದ ಬಿಜೆಪಿ

ಮಧ್ಯಪ್ರದೇಶ| ‘ಬುಡಕಟ್ಟು ಜನರು ಹಿಂದೂಗಳಲ್ಲ’ ಎಂದ ವಿಪಕ್ಷ ನಾಯಕ; ಟೀಕಿಸಿದ ಬಿಜೆಪಿ

- Advertisement -
- Advertisement -

ಬುಡಕಟ್ಟು ಜನಾಂಗದವರು ಹಿಂದೂಗಳಲ್ಲ ಎಂದು ಮಧ್ಯಪ್ರದೇಶದ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಉಮಾಂಗ್ ಸಿಂಘರ್ ಅವರು ನೀಡಿರುವ ಹೇಳಿಕೆ ರಾಜಕೀಯ ಬಿರುಗಾಳಿ ಹುಟ್ಟುಹಾಕಿದೆ. ಅವರ ಮಾತಿಗೆ ಆಡಳಿತಾರೂಢ ಬಿಜೆಪಿ ಮತ್ತು ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಂದ ವಿರೋಧ ವ್ಯಕ್ತವಾಗಿದೆ.

ಸೆಪ್ಟೆಂಬರ್ 4 ರ ಗುರುವಾರ ಚಿಂದ್ವಾರದಲ್ಲಿ ನಡೆದ ಬುಡಕಟ್ಟು ಅಭಿವೃದ್ಧಿ ಮಂಡಳಿಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ, “ನಾವು ಆದಿವಾಸಿಗಳು, ಹಿಂದೂಗಳಲ್ಲ ಎಂದು ನಾನು ಹೆಮ್ಮೆಯಿಂದ ಹೇಳುತ್ತೇನೆ. ನಾನು ಇದನ್ನು ಹಲವು ವರ್ಷಗಳಿಂದ ಹೇಳುತ್ತಿದ್ದೇನೆ. ಉಳಿದಿದ್ದ ಆಹಾರವನ್ನು ಭಗವಾನ್ ರಾಮನಿಗೆ ತಿನ್ನಿಸಿದವರು ಶಬರಿ; ಆಕೆ ಕೂಡ ಆದಿವಾಸಿ” ಎಂದಿದ್ದರು.

ವಿವಾದದ ಬಳಿಕ ಸ್ಪಷ್ಟನೆ ನೀಡಿರುವ ಅವರು, ತಮ್ಮ ಹೇಳಿಕೆಗಳು ಯಾವುದೇ ನಂಬಿಕೆಯನ್ನು ಅವಮಾನಿಸುವ ಗುರಿಯನ್ನು ಹೊಂದಿಲ್ಲ ಎಂದಿದ್ದಾರೆ. ಬುಡಕಟ್ಟು ಸಮುದಾಯದ ಸಂಪ್ರದಾಯಗಳು ಮತ್ತು ಪರಂಪರೆಯು ಮನ್ನಣೆಗೆ ಅರ್ಹವಾಗಿದೆ ಎಂದು ಒತ್ತಿ ಹೇಳಿದರು.

“ನಾವು ಯಾವುದೇ ಧರ್ಮವನ್ನು ಅಗೌರವಿಸುವುದಿಲ್ಲ. ಆದರೆ ನಮ್ಮ ಸಮುದಾಯ, ನಮ್ಮ ಸಂಸ್ಕೃತಿ, ನಮ್ಮ ಪರಂಪರೆಯನ್ನು ಒಪ್ಪಿಕೊಳ್ಳಬೇಕು. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಬುಡಕಟ್ಟು ಜನಾಂಗದವರು ಗೌರವಕ್ಕೆ ಅರ್ಹರು” ಎಂದು ಮಧ್ಯಪ್ರದೇಶದ ಅತಿದೊಡ್ಡ ಬುಡಕಟ್ಟು ಗುಂಪಾದ ಭಿಲ್ ಸಮುದಾಯದ ನಾಲ್ಕು ಬಾರಿ ಶಾಸಕರಾಗಿರುವ ಅವರು ಹೇಳಿದರು.

ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಕಾಂಗ್ರೆಸ್ ಹಿಂದೂ ವಿರೋಧಿ ವಾಕ್ಚಾತುರ್ಯದಲ್ಲಿ ತೊಡಗಿದೆ ಎಂದು ಆರೋಪಿಸಿ ಪ್ರತಿಕ್ರಿಯಿಸಿದರು.

ವೀಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕಾಂಗ್ರೆಸ್ ಯಾವಾಗಲೂ ಹಿಂದೂಗಳು ಮತ್ತು ಹಿಂದುತ್ವದ ವಿರುದ್ಧ ಕೆಲಸ ಮಾಡುವುದು ದುರದೃಷ್ಟಕರ; ಇದಕ್ಕಾಗಿ ಅವರು ನಾಚಿಕೆಪಡಬೇಕು. ಹಿಂದುತ್ವವನ್ನು ಪ್ರಶ್ನಿಸುವ ನಾಯಕರನ್ನು ಜನರು ಕ್ಷಮಿಸುವುದಿಲ್ಲ, ಕಾಂಗ್ರೆಸ್ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಟೀಕೆಗಳನ್ನು ಎದುರಿಸುತ್ತಿರುವ ಸಿಂಘರ್, ಬಿಜೆಪಿ ಮತ್ತು ಆರ್‌ಎಸ್‌ಎಸ್ ಬುಡಕಟ್ಟು ಗುರುತನ್ನು ಹಿಂದೂ ಧರ್ಮದ ಅಡಿಯಲ್ಲಿ ಮುಳುಗಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು. “ಬುಡಕಟ್ಟು ಜನರು ಈ ದೇಶದ ಮೂಲ ನಿವಾಸಿಗಳು. ಬಿಜೆಪಿ ಮತ್ತು ಆರ್‌ಎಸ್‌ಎಸ್ ನಮ್ಮನ್ನು ಪ್ರಕೃತಿಯನ್ನು ಪೂಜಿಸುವುದನ್ನು ತಡೆಯಲು ಏಕೆ ಬಯಸುತ್ತವೆ? ನಾನು ಹಿಂದೂ ಧರ್ಮವನ್ನು ಗೌರವಿಸುತ್ತೇನೆ, ಆದರೆ ಬುಡಕಟ್ಟು ಜನಾಂಗದ ವಿಷಯಕ್ಕೆ ಬಂದಾಗ, ಅವರು ತಮ್ಮ ಕಾರ್ಯಸೂಚಿಯನ್ನು ಹೇರಲು ಬಯಸುತ್ತಾರೆ” ಎಂದು ಅವರು ಆರೋಪಿಸಿದರು.

ಬುಡಕಟ್ಟು ಸಬಲೀಕರಣಕ್ಕೆ ಆಡಳಿತ ಪಕ್ಷದ ಬದ್ಧತೆಯನ್ನು ಮತ್ತಷ್ಟು ಪ್ರಶ್ನಿಸಿದ ಅವರು, “ಯಾವುದೇ ಬುಡಕಟ್ಟು ಜನಾಂಗದವರನ್ನು ಆರ್‌ಎಸ್‌ಎಸ್ ಮುಖ್ಯಸ್ಥರನ್ನಾಗಿ ಏಕೆ ಮಾಡಿಲ್ಲ? ಬಿಜೆಪಿ ನಮ್ಮ ಮತಗಳನ್ನು ಬಯಸುತ್ತದೆ. ಆದರೆ ನಮ್ಮ ಧರ್ಮ, ಸಂಸ್ಕೃತಿ ಮತ್ತು ಗುರುತಿನ ವಿಷಯಕ್ಕೆ ಬಂದಾಗ, ಅವರು ಅದನ್ನು ಅಳಿಸಲು ಬಯಸುತ್ತಾರೆ” ಎಂದರು.

ಮಧ್ಯಪ್ರದೇಶ ರಾಜಕೀಯದಲ್ಲಿ ಪ್ರಭಾವಿ ಭಿಲ್ ನಾಯಕರಾದ ಸಿಂಗರ್, ಮಧ್ಯಪ್ರದೇಶದ ಒಟ್ಟು ಬುಡಕಟ್ಟು ಜನಸಂಖ್ಯೆಯ ಶೇಕಡಾ 39 ರಷ್ಟಿರುವ ಸಮುದಾಯದ ಮೇಲೆ ಗಮನಾರ್ಹ ಪ್ರಭಾವ ಬೀರುತ್ತಾರೆ. 2011 ರ ಜನಗಣತಿಯ ಪ್ರಕಾರ ರಾಜ್ಯದ ಜನಸಂಖ್ಯೆಯ ಶೇಕಡಾ 21 ಕ್ಕಿಂತ ಹೆಚ್ಚು, ಅಂದರೆ 1.53 ಕೋಟಿ ಬುಡಕಟ್ಟು ಜನಾಂಗದವರೊಂದಿಗೆ, ರಾಜ್ಯವು ಭಾರತದಲ್ಲಿ ಅತಿ ಹೆಚ್ಚು ಬುಡಕಟ್ಟು ಜನಸಂಖ್ಯೆಯನ್ನು ಹೊಂದಿದೆ.

ಅದರ 230 ವಿಧಾನಸಭಾ ಸ್ಥಾನಗಳಲ್ಲಿ 47 ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿವೆ, ಇದು ಬುಡಕಟ್ಟು ಗುರುತಿನ ರಾಜಕೀಯವನ್ನು ಚುನಾವಣೆಗೆ ಮುನ್ನ ಪ್ರಮುಖ ಯುದ್ಧಭೂಮಿಯನ್ನಾಗಿ ಮಾಡುತ್ತದೆ.

ದಲಿತ ಕುಟುಂಬ ಇಸ್ಲಾಂಗೆ ಮತಾಂತರ ಆರೋಪ; ಉದ್ವಿಗ್ನತೆಗೆ ಕಾರಣವಾದ ಹಿಂದುತ್ವ ಸಂಘಟನೆಗಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...