Homeಚಳವಳಿಭೀಮ್‌ ಆರ್ಮಿಯ ಚಂದ್ರಶೇಖರ್‌ ಅಜಾದ್‌ರಿಂದ ಹೊಸಪಕ್ಷದ ಘೋಷಣೆ : ದೆಹಲಿ ವಿಧಾನಸಭೆಗೆ ಸ್ಪರ್ಧೆ..

ಭೀಮ್‌ ಆರ್ಮಿಯ ಚಂದ್ರಶೇಖರ್‌ ಅಜಾದ್‌ರಿಂದ ಹೊಸಪಕ್ಷದ ಘೋಷಣೆ : ದೆಹಲಿ ವಿಧಾನಸಭೆಗೆ ಸ್ಪರ್ಧೆ..

- Advertisement -
- Advertisement -

ಪೌರತ್ವ ತಿದ್ದುಪಡಿ ಮಸೂದೆಯನ್ನು ಬೆಂಬಲಿಸಿದ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ನಿಲುವಿನಿಂದ ಸಿಟ್ಟಿಗೆದ್ದಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅವರು ಸ್ವಂತ ಪಕ್ಷವನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ಚುನಾವಣೆಯಲ್ಲಿ ಸ್ಪರ್ಧಿಸುವುದ್ದಲ್ಲದೇ, ಈ ಪಕ್ಷ ಯುಪಿಯಲ್ಲಿ ನಡೆಯುವ ಮೊದಲ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲಿದೆ.

ಭೀಮ್‌ ಆರ್ಮಿಯ ಸಂಸ್ಥಾಪಕ ಚಂದ್ರಶೇಖರ್ ಈಗ ಸಂಪೂರ್ಣವಾಗಿ ರಾಜಕೀಯ ಪ್ರವೇಶಿಸಲು ನಿರ್ಧರಿಸಿದ್ದಾರೆ. ಅವರು ಶೀಘ್ರದಲ್ಲೇ ತಮ್ಮ ಪಕ್ಷದ ಹೆಸರನ್ನು ಪ್ರಕಟಿಸಲಿದ್ದಾರೆ. ಇಲ್ಲಿಯವರೆಗೆ, ಭೀಮ್‌ ಆರ್ಮಿಯು ಬಿಎಸ್ಪಿಯನ್ನು ರಾಜಕೀಯ ಆಯ್ಕೆಯಾಗಿ ಬೆಂಬಲಿಸುತ್ತಿತ್ತು. ಆದರೆ ಪೌರತ್ವ ತಿದ್ದುಪಡಿ ಮಸೂದೆಯನ್ನು ಬಿಎಸ್‌ಪಿ ಬೆಂಬಲಿಸಿದ್ದರಿಂದ ನೊಂದ ಅವರು ಹೊಸ ಪಕ್ಷ ಸ್ಥಾಪಿಸುವ ಪಣತೊಟ್ಟಿದ್ದಾರೆ.

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಶೇಖರ್ ಅವರ ಪಕ್ಷ ಹೆಚ್ಚು ಹೆಚ್ಚು ಸ್ಥಾನಗಳಿಗೆ ಸ್ಪರ್ಧಿಸಲಿದೆ. ಕೆಲವೇ ದಿನಗಳಲ್ಲಿ ಪಕ್ಷದ ಹೆಸರನ್ನು ಪ್ರಕಟಿಸಲಾಗುವುದು ಎಂದು ಚಂದ್ರ ಶೇಖರ್ ಅವರ ಸಹಾಯಕ ಕುಶ್ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ. ಈ ಪಕ್ಷ ಯುಪಿಯಲ್ಲಿ ನಡೆಯುವ ಮೊದಲ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಇದರ ನಂತರ, 2022 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಾಗುವುದು. ಚಂದ್ರಶೇಖರ್ ಅವರೇ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಯೇ ಎಂಬುದನ್ನು ನಂತರ ನಿರ್ಧರಿಸಲಾಗುತ್ತದೆ. ಪ್ರಸ್ತುತ ಲಖನೌದಲ್ಲಿ ಪಕ್ಷದ ಕಚೇರಿ ಸ್ಥಾಪಿಸಲು ಉದ್ದೇಶಿಸಿರುವ ಅವರು ಪಶ್ಚಿಮ ಯುಪಿಯಲ್ಲಿ ಭೀಮ್‌ ಆರ್ಮಿಗೆ ಬಲವಾದ ಹಿಡಿತವಿದೆ ಎಂದಿದ್ದಾರೆ.

ಇದನ್ನೂ ಓದಿ: ನಾವು ಕೇವಲ ವೀಕ್ಷಕರಲ್ಲ. ಚಳವಳಿಯನ್ನು ಮುನ್ನಡೆಸುವ ನಾಯಕರುಗಳಾಗಲು ಬಯಸುತ್ತೇವೆ: ಚಂದ್ರಶೇಖರ್ ರಾವಣ್ ಸಂದರ್ಶನ

ಈ ಕುರಿತು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ಚಂದ್ರಶೇಖರ್ ಅಜಾದ್‌ ರಾವಣ್‌ ‘ನಾನು ಇಂದು ಹೊಸ ರಾಜಕೀಯ ಆಯ್ಕೆಗಳನ್ನು ಬಹುಜನ ಸಮಾಜಕ್ಕೆ ಘೋಷಿಸುತ್ತಿದ್ದೇನೆ. ಸಮಾಜಕ್ಕೆ ತಮ್ಮ ಜೀವನವನ್ನು ಅರ್ಪಿಸಿ ನಾಯಕತ್ವವನ್ನು ವಹಿಸುವ ಪ್ರಾಮಾಣಿಕ, ಹೋರಾಟನಿರತ ಮತ್ತು ಮಹತ್ವಕಾಂಕ್ಷೆಯುಳ್ಳ ಯುವಜನರಿಗೆ ಪಕ್ಷ ಸೇರಲು ಮನವಿ ಮಾಡುತ್ತೇನೆ. ಇನ್ನು ಮುಂದೆ ಶ್ರೀಮಂತರಲ್ಲ, ಕಾರ್ಯಕರ್ತರು ನಾಯಕನಾಗುತ್ತಾರೆ. ಜೈ ಭೀಮ್‌’ ಎಂದು ಘೋಷಿಸಿದ್ದಾರೆ.

ಸಂಸತ್ತಿನಲ್ಲಿ ಸಂವಿಧಾನ ಹತ್ಯೆಯಾಗುತ್ತಿದ್ದಾಗ, ಆ ಸಮಯದಲ್ಲಿ ಇಬ್ಬರು ಬಿಎಸ್ಪಿ ರಾಜ್ಯಸಭಾ ಸಂಸದರು ಸಂವಿಧಾನವನ್ನು ಉಳಿಸದೇ ಓಡಿ ಹೋದರು. ಮತ್ತು ಪೌರತ್ವ ಮಸೂದೆಯಲ್ಲಿ ಬಿಜೆಪಿಗೆ ಸಹಾಯ ಮಾಡಿದರು. ಅವರು ಅಂಬೇಡ್ಕರ್, ಬಿಎಸ್ಪಿ ಸಂಸ್ಥಾಪಕ ಕಾನ್ಶಿರಾಮ್ ಮತ್ತು ದಲಿತರನ್ನು ವಂಚಿಸಿದ್ದಾರೆ ಎಂದು ಸಹ ಅವರು ಆರೋಪಿಸಿದ್ದಾರೆ. ಆರ್ಥಿಕ ಆಧಾರಲ್ಲಿ 10% ಮೀಸಲಾತಿ ನೀಡುವ ಸಂದರ್ಭ ಮತ್ತು ಕಾಶ್ಮೀರದ 370ನೇ ವಿಧಿ ರದ್ದಿನ ಸಂದರ್ಭದಲ್ಲಿಯೂ ಕೂಡ ಸಹೋದರಿ ಮಾಯಾವತಿಯವರು ಬಿಜೆಪಿಗೆ ಬೆಂಬಲ ನೀಡಿರುವುದು ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಕ್ಷದ ಹೆಸರಿಗಾಗಿ ಚಂದ್ರಶೇಖರ್ ಅಜಾದ್‌ರವರು ಸೋಷಿಯಲ್ ಮೀಡಿಯಾದಲ್ಲಿ ಸಲಹೆಗಳನ್ನು ಸಹ ಕೋರಿದ್ದಾರೆ. ಅವರ ಸಹಾಯಕ ಖುಷ್‌ ಸಹ ಉತ್ತರ ಪ್ರದೇಶದ ಚುನಾವಣೆಯಲ್ಲಿ ಭೀಮ್‌ ಆರ್ಮಿ ಸಹ ಸ್ಪರ್ಧಿಸಿದರೆ ಬಿಎಸ್‌ಪಿ ಅಥವಾ ಭೀಮ್‌ ಆರ್ಮಿ ಇವೆರಡರಲ್ಲಿ ಯಾವುದಕ್ಕೆ ಓಟು ಹಾಕುತ್ತೀರಿ ಎಂಬ ಪೊಲೀಂಗ್‌ ಸಹ ಆರಂಭಿಸಿದ್ದಾರೆ.

ಸಿಎಬಿ ಮತ್ತು ಎನ್‌ಆರ್‌ಸಿ ಸಂವಿಧಾನದ ವಿರುದ್ದವಿವೆ.
ಚಂದ್ರಶೇಖರ್ ಅವರ ಪ್ರಕಾರ, ಸಿಎಬಿ ಮತ್ತು ಎನ್ಆರ್‌ಸಿ ದೇಶದ ಸಂವಿಧಾನವನ್ನು ನಾಶಮಾಡುವ ಪಿತೂರಿ. ಈ ದೇಶದ ದಲಿತರು, ಬುಡಕಟ್ಟು ಜನಾಂಗದವರು, ಹಿಂದುಳಿದವರು, ಮುಸ್ಲಿಮರು ಇಲ್ಲಿ ಸ್ಥಳೀಯರಾಗಿದ್ದಾರೆ. ಹೊರಗಿನಿಂದ ಬಂದ ಮೇಲ್ಜಾತಿಯವರೆ ಆರ್ಯರಾಗಿದ್ದು, ಅವರ ಡಿಎನ್‌ಎ ಪರೀಕ್ಷೆ ಮಾಡಬೇಕು ಮತ್ತು ಅವರನ್ನು ಮೊದಲು ಎನ್‌ಆರ್‌ಸಿ ಅಡಿಯಲ್ಲಿ ತರಬೇಕು. ಸಂವಿಧಾನದ ರಕ್ಷಣೆಗಾಗಿ ಮತ್ತು ದೇಶದ ಅತಿದೊಡ್ಡ ಆಂದೋಲನಕ್ಕಾಗಿ ದೇಶದ ಬಹುಜನರು ಸಿದ್ದರಾಗಬೇಕು ಎಂದು ಕರೆ ನೀಡಿದ್ದಾರೆ.

ಮಾಯಾವತಿಯವರ ಬೆಂಬಲ ಸಿಗಲಿಲ್ಲ
ಚಂದ್ರಶೇಖರ್‌ರವರು ದಲಿತರ ಧ್ವನಿ ಎತ್ತರಿಸಲು ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಆಯೋಜಿಸಿದರು. ಆದರೆ ಅವರಿಗೆ ಎಂದಿಗೂ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿಯ ಬೆಂಬಲ ಸಿಗಲಿಲ್ಲ. ಹಲವಾರು ಬಾರಿ ಚಂದ್ರಶೇಖರ್ ಮಾಯಾವತಿಯವರನ್ನು ಭೇಟಿಯಾಗಲು ಪ್ರಯತ್ನಿಸಿದರೂ ಸಹ ಮಾಯಾವತಿಯವರು ಭೇಟಿಯಾಗಲಿಲ್ಲ. ಇದೇ ಕಾರಣಕ್ಕಾಗಿ ಬಹುಜನ ಸಮಾಜದ ಧ್ವನಿ ಹೆಚ್ಚಿಸಲು ಚಂದ್ರಶೇಖರ್ ಈಗ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಲು ನಿರ್ಧರಿಸಿದ್ದಾರೆ.

ಯಾರು ಈ ಚಂದ್ರಶೇಖರ್ ಅಜಾದ್‌ ರಾವಣ್‌?
ಚಂದ್ರಶೇಖರ್ ಜನಿಸಿದ್ದು ಸಹರಾನ್‌ಪುರದ ಚತ್ಮಾಲ್‌ಪುರದ ಬಳಿಯ ಧಕ್ಕುಲಿ ಗ್ರಾಮದಲ್ಲಿ. ಕಾನೂನು ಅಧ್ಯಯನ ಮಾಡಿದ ಅವರು ಮೊದಲು ಸುದ್ದಿಯಾಗಿದ್ದು 2015 ರಲ್ಲಿ. ಅವರು ತಮ್ಮ ಮೂಲ ಸ್ಥಳದಲ್ಲಿ ಒಂದು ಬೋರ್ಡ್ ಹಾಕಿದ್ದರು, ಅದರಲ್ಲಿ ಅವರು ‘ಮಹಾ ಚಮ್ಮಾರರನ್ನು ಧಡಕಲಿಯು ಸ್ವಾಗತಿಸುತ್ತದೆ (ಧಡಕಲಿ ವೆಲ್ಕಮ್ ಯು ದಿ ಗ್ರೇಟ್ ಚಾಮರ್ಸ್)’ ಎಂದು ಬರೆದಿದ್ದಾರೆ. ಈ ಕ್ರಮವು ಗ್ರಾಮದಲ್ಲಿ ದಲಿತರು ಮತ್ತು ಠಾಕೂರ್‌ಗಳ ನಡುವೆ ಉದ್ವಿಗ್ನತೆಯನ್ನು ಉಂಟುಮಾಡಿತು. ಚಂದ್ರಶೇಖರ್ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡಿದ್ದಾರೆ. ದಲಿತ-ಮುಸ್ಲಿಂ ಏಕತೆಯ ಪರವಾಗಿರುವ ಚಂದ್ರಶೇಖರ್ ಅವರು ಫೇಸ್‌ಬುಕ್ ಮತ್ತು ವಾಟ್ಸಪ್ ಮೂಲಕ ಜನರನ್ನು ಭೀಮ್‌ ಆರ್ಮಿಯೊಂದಿಗೆ ಸಂಪರ್ಕಿಸುವ ಕೆಲಸ ಮಾಡಿದರು.

ಇದನ್ನೂ ಓದಿ: ನಿಮಗೆ ಭೀಮ್ ಆರ್ಮಿ ಗೊತ್ತಿರಬಹುದು; ಭೀಮ್ ಪಾಠಶಾಲಾ?

ತನ್ನ ಮಿಲಿಂಟೆಂಟ್‌ ಹೋರಾಟಗಳ ಕಾರಣಕ್ಕಾಗಿ ಅತಿ ಶೀಘ್ರದಲ್ಲಿಯೇ ದೇಶಾದ್ಯಂತ ಯುವ ಅನುಯಾಯಿಗಳನ್ನು ಪಡೆದ ಇವರು ಮೇಲ್ಜಾತಿಗಳ ದೌರ್ಜನ್ಯಕ್ಕೆ ಹಿಂಸೆಯ ಮೂಲಕವೇ ತಿರುಗೇಟು ನೀಡಿ ಪ್ರಸಿದ್ದಿ ಪಡೆದಿದ್ದರು. ಈ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರ ಇವರನ್ನು ಒಂದೂ ವರ್ಷಕ್ಕೂ ಅಧಿಕ ಕಾಲ ಜೈಲಿನಲ್ಲಿಟ್ಟಿತ್ತು. ಬಹುಜನರಿಗಾಗಿ ಎಷ್ಟು ಬಾರಿ ಬೇಕಾದರೂ ಜೈಲಿಗೆ ಹೋಗಲು ಸಿದ್ದವಿರುವ ಇವರು ಕೆಲವೇ ವರ್ಷಗಳಲ್ಲಿ ಅನೇಕ ಬಾರಿ ಜೈಲುವಾಸ ಅನುಭವಿಸಿದ್ದಾರೆ.

ದಲಿತರಿಗೆ ಶಿಕ್ಷಣ ಬೇಕು ಎಂಬುದನ್ನು ಮನಗಂಡಿರುವ ಭೀಮ್‌ ಆರ್ಮಿ ಉತ್ತರ ಪ್ರದೇಶದಲ್ಲಿ ಸುಮಾರು 350ಕ್ಕೂ ಹೆಚ್ಚು ಭೀಮ್‌ ಪಾಠಶಾಲಾಗಳನ್ನು ನಡೆಸುತ್ತಿದೆ.

ಸಹರಾನ್‌ಪುರದ ಶಬ್ಬೀರ್‌ಪುರ ಗ್ರಾಮದಲ್ಲಿ 2017 ರಲ್ಲಿ ದಲಿತರು ಮತ್ತು ಮೇಲ್ಜಾತಿಗಳ ನಡುವೆ ಹಿಂಸಾಚಾರ ನಡೆದಿತ್ತು. ಈ ಸಮಯದಲ್ಲಿ ಭೀಮ್‌ ಆರ್ಮಿ ಎಂಬ ಹೆಸರಿನ ಸಂಘಟನೆ ಹೊರಹೊಮ್ಮಿತು. ಇದರ ಪೂರ್ಣ ಹೆಸರು ‘ಭಾರತ್ ಏಕ್ತಾ ಮಿಷನ್ ಭೀಮ್ ಆರ್ಮಿ’. ಈ ಸಂಘಟನೆಯ ಸ್ಥಾಪಕ ಮತ್ತು ಅಧ್ಯಕ್ಷರು ಚಂದ್ರಶೇಖರ್ ಅಜಾದ್‌. ಈ ಹಿಂದೆ ಅವರು ‘ರಾವಣ’ ಎಂಬ ಉಪನಾಮವನ್ನಿಟ್ಟುಕೊಂಡು ಪ್ರಸಿದ್ದರಾಗಿದ್ದರು. ನಂತರ ಅದನ್ನು ತೆಗೆದುಹಾಕಿದ್ದಾರೆ. ಡಾ.ಬಿ.ಆರ್‌ ಅಂಬೇಡ್ಕರ್‌ ಮತ್ತು ಕಾನ್ಶಿರಾಮ್‌ರವರ ಆಶಯಗಳನ್ನು ಈಡೇಸಿರುವ ಒಬ್ಬ ಕಾರ್ಯಕರ್ತ ಎಂದು ಅವರು ತಮ್ಮನ್ನು ತಾವು ಕರೆದುಕೊಳ್ಳುತ್ತಾರೆ.

ಕಳೆದೆರಡು ತಿಂಗಳ ಹಿಂದೆ ದೆಹಲಿಯ ದಲಿತರ ಪಾಲಿನ ದೇವಾಲಯವಾದ ರವಿದಾಸ ಮಂದಿರವನ್ನು ಹೈಕೋರ್ಟ್‌ ಸೂಚನೆಯ ಮೇರೆಗೆ ದೆಹಲಿ ಸ್ಥಳೀಯ ಆಡಳಿತ ನೆಮಸಮ ಮಾಡಿತ್ತು. ಇದರ ವಿರುದ್ಧ ನಡೆದ ಭಾರೀ ಜನಾಂದೋಲನದಲ್ಲಿ ಚಂದ್ರಶೇಖರ್‌ ಕೂಡ ಮಹತ್ವದ ಪಾತ್ರ ವಹಿಸಿದ್ದರು. ದಲಿತರ ಹೋರಾಟಕ್ಕೆ ಬೆದರಿದ ಕೇಂದ್ರ ಸರ್ಕಾರ ಅದೇ ಜಾಗದಲ್ಲಿ ದೇವಾಲಯದ ನಿರ್ಮಾಣಕ್ಕೆ ಅವಕಾಶಕೊಟ್ಟಿದೆ.

ಇದನ್ನೂ ಓದಿ: ನೀಲಿ ಸಮುದ್ರದ ಜೈಭೀಮ್ ಘೋಷಣೆಗೆ ಬೆದರಿದ ಕೇಂದ್ರ; ದೆಹಲಿಯ ರವಿದಾಸ್ ದೇವಸ್ಥಾನ ನಿರ್ಮಾಣಕ್ಕೆ ಅದೇ ಜಾಗ ನೀಡಲು ಒಪ್ಪಿಗೆ, ದಲಿತರ ಹೋರಾಟಕ್ಕೆ ಸಂದ ಜಯ..

ಇದೇ ವರ್ಷ ಆಗಸ್ಟ್‌ 15ರಂದು ಬೆಂಗಳೂರಿನಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ವತಿಯಿಂದ ಭೂಮಿ ಹಕ್ಕಿಗಾಗಿ ದೊರೆಸ್ವಾಮಿಯವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಮಧ್ಯರಾತ್ರಿ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಚಂದ್ರಶೇಖರ್‌ ಅಥಿತಿಯಾಗಿ ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...