Homeಕರ್ನಾಟಕಗೌರಿ ನುಡಿನಮನ: ಕೆಲವರು ಬದುಕಿದ್ದರೂ ಸತ್ತಂತೆ ಇರುತ್ತಾರೆ, ಆದರೆ ಗೌರಿ ಲಂಕೇಶ್‌ ಮರಣದ ನಂತರವೂ ಮತ್ತೆ...

ಗೌರಿ ನುಡಿನಮನ: ಕೆಲವರು ಬದುಕಿದ್ದರೂ ಸತ್ತಂತೆ ಇರುತ್ತಾರೆ, ಆದರೆ ಗೌರಿ ಲಂಕೇಶ್‌ ಮರಣದ ನಂತರವೂ ಮತ್ತೆ ಮತ್ತೆ ಜೀವಂತ; ದಿನೇಶ್ ಅಮೀನ್‌ಮಟ್ಟು

- Advertisement -
- Advertisement -

ಬೆಂಗಳೂರು: ಪತ್ರಕರ್ತೆ ಮತ್ತು ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ ಎಂಟನೇ ಪುಣ್ಯಸ್ಮರಣೆಯನ್ನು ಸೆಪ್ಟೆಂಬರ್ 5ರಂದು ಬೆಂಗಳೂರಿನ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅವರ ಸಮಾಧಿ ಬಳಿ ‘ಗೌರಿ ನುಡಿನಮನ’ ಕಾರ್ಯಕ್ರಮದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು, ಹೋರಾಟಗಾರರು, ಪತ್ರಕರ್ತರು ಮತ್ತು ಅಭಿಮಾನಿಗಳು ಗೌರಿ ಅವರ ಆದರ್ಶಗಳನ್ನು ಸ್ಮರಿಸಿ, ಅವರ ಹೋರಾಟವನ್ನು ಮುಂದುವರೆಸುವ ಸಂಕಲ್ಪ ಮಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಗೌರಿ ಲಂಕೇಶ್‌ ಅವರ ಹೋರಾಟ ಮತ್ತು ಆದರ್ಶಗಳನ್ನು ನೆನಪಿಸಿಕೊಂಡು, “ಕೆಲವರು ಬದುಕಿದ್ದರೂ ಸತ್ತಂತೆ ಇರುತ್ತಾರೆ, ಆದರೆ ಗೌರಿ ಲಂಕೇಶ್‌ ಅವರಂತಹ ಹೋರಾಟಗಾರರು ಮರಣದ ನಂತರವೂ ಮತ್ತೆ ಮತ್ತೆ ಜೀವಂತವಾಗಿರುತ್ತಾರೆ. ನಾವೆಲ್ಲರೂ ಬದುಕಿದ್ದರೂ ಸತ್ತಂತೆ ಇದ್ದೇವೆ ಎಂಬ ಭಾವನೆ ಒಮ್ಮೊಮ್ಮೆ ನನ್ನನ್ನೂ ಕಾಡುತ್ತದೆ” ಎಂದು ಹೇಳಿದರು.

ಗೌರಿ ಲಂಕೇಶ್‌ ಜನಪ್ರಿಯ ನಾಯಕಿಯಾಗಿರಲಿಲ್ಲ, ಘನಘೋರ ಭಾಷಣಕಾರರಾಗಲಿ ಅಥವಾ ದೊಡ್ಡ ಸಂಘಟನೆಗಳ ನಾಯಕಿಯಾಗಿರಲಿ ಇರಲಿಲ್ಲ. ಅವರದ್ದು ಪ್ರೀತಿ, ಕರುಣೆ, ಸತ್ಯ, ನ್ಯಾಯ, ಎಚ್ಚರ ಮತ್ತು ಧೈರ್ಯದಿಂದ ತುಂಬಿದ ವ್ಯಕ್ತಿತ್ವ. ಸಮಾಜದ ನೋವಿಗೆ ಸ್ಪಂದಿಸಲು ’56 ಇಂಚಿನ ಎದೆ’ ಬೇಕಾಗಿಲ್ಲ, ಬದಲಾಗಿ ತಾಯಿ ಹೃದಯದ ನಾಯಕರು ಮತ್ತು ನಾಯಕಿಯರು ಬೇಕಾಗಿದ್ದಾರೆ ಎಂಬುದನ್ನು ಗೌರಿ ತಮ್ಮ ಬದುಕಿನ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಅವರು ನುಡಿದರು.

ಎಲ್ಲರನ್ನೂ ಒಗ್ಗೂಡಿಸುವ ಶಕ್ತಿ ಮತ್ತು ಇಂದಿನ ಸವಾಲುಗಳು

ದಿನೇಶ್ ಅಮಿನ್ ಮಟ್ಟು ಅವರು ಗೌರಿ ಲಂಕೇಶ್‌ ಅವರ ವ್ಯಕ್ತಿತ್ವದ ಮತ್ತೊಂದು ದೊಡ್ಡ ಶಕ್ತಿಯನ್ನು ಅನಾವರಣಗೊಳಿಸಿದರು. “ಗೌರಿ ಅವರಿಗೆ ಎಲ್ಲರನ್ನೂ ಒಳಗೆ ತೆಗೆದುಕೊಳ್ಳುವ ಮತ್ತು ಒಗ್ಗೂಡಿಸುವ ಒಂದು ವಿಶೇಷ ಗುಣವಿತ್ತು. ಅವರು ನಾಡಿನ ಮುಖ್ಯಮಂತ್ರಿಗಳಿಂದ ಹಿಡಿದು ಕಾಡಿನ ಮೂಲೆಯಲ್ಲಿರುವವರನ್ನೂ ಒಪ್ಪಿಸಿಕೊಂಡು, ಜೊತೆಗೆ ಕರೆದುಕೊಂಡು ಹೋಗುವ ಸಾಮರ್ಥ್ಯ ಹೊಂದಿದ್ದರು” ಎಂದರು. ಸಮಾಜದಲ್ಲಿ ಜಾತ್ಯತೀತರು, ಸಾಮಾಜಿಕ ನ್ಯಾಯದ ಪರ ಇರುವವರು ಮತ್ತು ಸಜ್ಜನರ ಸಂಖ್ಯೆ ಹೆಚ್ಚಿದ್ದರೂ, ಇವರೆಲ್ಲರೂ ಚೆಲ್ಲಾಪಿಲ್ಲಿಯಾಗಿ ಹೋಗಿದ್ದಾರೆ. ಇಂತಹ ಶಕ್ತಿಗಳನ್ನು ಒಗ್ಗೂಡಿಸುವ ಕೌಶಲ್ಯ ಗೌರಿ ಲಂಕೇಶ್‌ ಅವರಲ್ಲಿತ್ತು. “ಕಳೆದ ಎಂಟು ವರ್ಷಗಳಲ್ಲಿ ನೂರಾರು ‘ಗೌರಿ’ಗಳು ಹುಟ್ಟಿಕೊಂಡಿದ್ದಾರೆ, ‘ನಾವೆಲ್ಲರೂ ಗೌರಿ’ ಎಂದು ಕರೆದುಕೊಂಡೆವು. ಆದರೆ ಇನ್ನೊಬ್ಬ ಗೌರಿಯನ್ನು ಸೃಷ್ಟಿಸಲು ಸಾಧ್ಯವಾಗಿಲ್ಲ” ಎಂದು ಅವರು ವಿಷಾದಿಸಿದರು.

ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಕಳವಳ ವ್ಯಕ್ತಪಡಿಸಿದ ಮಟ್ಟು, “ಉಮರ್ ಖಾಲಿದ್ ಅವರಂತಹ ಹೋರಾಟಗಾರರು ಇನ್ನೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಸೂಚ್ಯಂಕದಲ್ಲಿ ಭಾರತವು ಅತ್ಯಂತ ಕೆಳಗೆ ತಲುಪಿದೆ” ಎಂದು ಹೇಳಿದರು. ಗೌರಿ ಯಾವ ಭೀತಿಯನ್ನು ಕಂಡು ಹೋರಾಟಕ್ಕೆ ಇಳಿದಿದ್ದರೋ, ಅದು ಇಂದು ವಾಸ್ತವವಾಗುತ್ತಿದೆ. ಅವರ ಹತ್ಯೆಯ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿದ್ದು, ನ್ಯಾಯಾಂಗದ ಪ್ರಕ್ರಿಯೆಗಳ ಮೇಲೆ ಸವಾಲುಗಳು ಹೆಚ್ಚಾಗಿವೆ. ಗೌರಿ ಬಿಟ್ಟು ಹೋದ ಹೋರಾಟದ ನಿರ್ವಾತವನ್ನು ತುಂಬಲು ನಮಗೆ ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು. ಗೌರಿ ಬಯಸಿದ್ದಂತಹ ಸಮಾಜವನ್ನು ನಿರ್ಮಿಸುವುದು ಒಂದು ನಿರಂತರ ಪ್ರಕ್ರಿಯೆ. ಆ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದು ಅವರು ಕರೆ ನೀಡಿದರು.

ಗಣ್ಯರ ಉಪಸ್ಥಿತಿ

ಈ ‘ಗೌರಿ ನುಡಿನಮನ’ ಕಾರ್ಯಕ್ರಮದಲ್ಲಿ ಬಿ.ಟಿ.ಲಲಿತಾ ನಾಯಕ್, ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್, ಡಾ. ವಿಜಯಮ್ಮ, ಶಿವಸುಂದರ್, ಕೆ. ಬಾಲು, ವಿ.ಆರ್. ಕಾರ್ಪೆಂಟರ್, ಅಂಬಣ್ಣ ಅರೋಲಿಕರ್, ವಿ.ಎಸ್. ಶ್ರೀಧರ್, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಕೆ.ಎಲ್. ಅಶೋಕ್, ನೂರ್ ಶ್ರೀಧರ್ ಮತ್ತು ರಾಜಲಕ್ಷ್ಮಿ ಅಂಕಲಗಿ ಸೇರಿದಂತೆ ಅನೇಕ ಗಣ್ಯರು, ಹೋರಾಟಗಾರರು, ಪತ್ರಕರ್ತರು ಮತ್ತು ಗೌರಿ ಲಂಕೇಶ್‌ ಅವರ ಅಭಿಮಾನಿಗಳು ಭಾಗವಹಿಸಿದ್ದರು. ಎಲ್ಲರೂ ಗೌರಿ ಅವರ ಆದರ್ಶಗಳನ್ನು ನೆನಪಿಸಿಕೊಂಡು, ಅವರ ಹೋರಾಟವನ್ನು ಮುಂದುವರೆಸುವ ಸಂಕಲ್ಪ ಮಾಡಿದರು.

ಗೌರಿ ನುಡಿನಮನ: ಗುಂಡೇಟು ತಿಂದು ಸಾವನ್ನಪ್ಪಿದ ಗೌರಿ ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆನಸಿರುತ್ತಾರೆ; ಬಿ.ಟಿ.ಲಲಿತಾ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...