Homeಕರ್ನಾಟಕಗೌರಿ ನುಡಿನಮನ: ಕೆಲವರು ಬದುಕಿದ್ದರೂ ಸತ್ತಂತೆ ಇರುತ್ತಾರೆ, ಆದರೆ ಗೌರಿ ಲಂಕೇಶ್‌ ಮರಣದ ನಂತರವೂ ಮತ್ತೆ...

ಗೌರಿ ನುಡಿನಮನ: ಕೆಲವರು ಬದುಕಿದ್ದರೂ ಸತ್ತಂತೆ ಇರುತ್ತಾರೆ, ಆದರೆ ಗೌರಿ ಲಂಕೇಶ್‌ ಮರಣದ ನಂತರವೂ ಮತ್ತೆ ಮತ್ತೆ ಜೀವಂತ; ದಿನೇಶ್ ಅಮೀನ್‌ಮಟ್ಟು

- Advertisement -
- Advertisement -

ಬೆಂಗಳೂರು: ಪತ್ರಕರ್ತೆ ಮತ್ತು ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ ಎಂಟನೇ ಪುಣ್ಯಸ್ಮರಣೆಯನ್ನು ಸೆಪ್ಟೆಂಬರ್ 5ರಂದು ಬೆಂಗಳೂರಿನ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅವರ ಸಮಾಧಿ ಬಳಿ ‘ಗೌರಿ ನುಡಿನಮನ’ ಕಾರ್ಯಕ್ರಮದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು, ಹೋರಾಟಗಾರರು, ಪತ್ರಕರ್ತರು ಮತ್ತು ಅಭಿಮಾನಿಗಳು ಗೌರಿ ಅವರ ಆದರ್ಶಗಳನ್ನು ಸ್ಮರಿಸಿ, ಅವರ ಹೋರಾಟವನ್ನು ಮುಂದುವರೆಸುವ ಸಂಕಲ್ಪ ಮಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಗೌರಿ ಲಂಕೇಶ್‌ ಅವರ ಹೋರಾಟ ಮತ್ತು ಆದರ್ಶಗಳನ್ನು ನೆನಪಿಸಿಕೊಂಡು, “ಕೆಲವರು ಬದುಕಿದ್ದರೂ ಸತ್ತಂತೆ ಇರುತ್ತಾರೆ, ಆದರೆ ಗೌರಿ ಲಂಕೇಶ್‌ ಅವರಂತಹ ಹೋರಾಟಗಾರರು ಮರಣದ ನಂತರವೂ ಮತ್ತೆ ಮತ್ತೆ ಜೀವಂತವಾಗಿರುತ್ತಾರೆ. ನಾವೆಲ್ಲರೂ ಬದುಕಿದ್ದರೂ ಸತ್ತಂತೆ ಇದ್ದೇವೆ ಎಂಬ ಭಾವನೆ ಒಮ್ಮೊಮ್ಮೆ ನನ್ನನ್ನೂ ಕಾಡುತ್ತದೆ” ಎಂದು ಹೇಳಿದರು.

ಗೌರಿ ಲಂಕೇಶ್‌ ಜನಪ್ರಿಯ ನಾಯಕಿಯಾಗಿರಲಿಲ್ಲ, ಘನಘೋರ ಭಾಷಣಕಾರರಾಗಲಿ ಅಥವಾ ದೊಡ್ಡ ಸಂಘಟನೆಗಳ ನಾಯಕಿಯಾಗಿರಲಿ ಇರಲಿಲ್ಲ. ಅವರದ್ದು ಪ್ರೀತಿ, ಕರುಣೆ, ಸತ್ಯ, ನ್ಯಾಯ, ಎಚ್ಚರ ಮತ್ತು ಧೈರ್ಯದಿಂದ ತುಂಬಿದ ವ್ಯಕ್ತಿತ್ವ. ಸಮಾಜದ ನೋವಿಗೆ ಸ್ಪಂದಿಸಲು ’56 ಇಂಚಿನ ಎದೆ’ ಬೇಕಾಗಿಲ್ಲ, ಬದಲಾಗಿ ತಾಯಿ ಹೃದಯದ ನಾಯಕರು ಮತ್ತು ನಾಯಕಿಯರು ಬೇಕಾಗಿದ್ದಾರೆ ಎಂಬುದನ್ನು ಗೌರಿ ತಮ್ಮ ಬದುಕಿನ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಅವರು ನುಡಿದರು.

ಎಲ್ಲರನ್ನೂ ಒಗ್ಗೂಡಿಸುವ ಶಕ್ತಿ ಮತ್ತು ಇಂದಿನ ಸವಾಲುಗಳು

ದಿನೇಶ್ ಅಮಿನ್ ಮಟ್ಟು ಅವರು ಗೌರಿ ಲಂಕೇಶ್‌ ಅವರ ವ್ಯಕ್ತಿತ್ವದ ಮತ್ತೊಂದು ದೊಡ್ಡ ಶಕ್ತಿಯನ್ನು ಅನಾವರಣಗೊಳಿಸಿದರು. “ಗೌರಿ ಅವರಿಗೆ ಎಲ್ಲರನ್ನೂ ಒಳಗೆ ತೆಗೆದುಕೊಳ್ಳುವ ಮತ್ತು ಒಗ್ಗೂಡಿಸುವ ಒಂದು ವಿಶೇಷ ಗುಣವಿತ್ತು. ಅವರು ನಾಡಿನ ಮುಖ್ಯಮಂತ್ರಿಗಳಿಂದ ಹಿಡಿದು ಕಾಡಿನ ಮೂಲೆಯಲ್ಲಿರುವವರನ್ನೂ ಒಪ್ಪಿಸಿಕೊಂಡು, ಜೊತೆಗೆ ಕರೆದುಕೊಂಡು ಹೋಗುವ ಸಾಮರ್ಥ್ಯ ಹೊಂದಿದ್ದರು” ಎಂದರು. ಸಮಾಜದಲ್ಲಿ ಜಾತ್ಯತೀತರು, ಸಾಮಾಜಿಕ ನ್ಯಾಯದ ಪರ ಇರುವವರು ಮತ್ತು ಸಜ್ಜನರ ಸಂಖ್ಯೆ ಹೆಚ್ಚಿದ್ದರೂ, ಇವರೆಲ್ಲರೂ ಚೆಲ್ಲಾಪಿಲ್ಲಿಯಾಗಿ ಹೋಗಿದ್ದಾರೆ. ಇಂತಹ ಶಕ್ತಿಗಳನ್ನು ಒಗ್ಗೂಡಿಸುವ ಕೌಶಲ್ಯ ಗೌರಿ ಲಂಕೇಶ್‌ ಅವರಲ್ಲಿತ್ತು. “ಕಳೆದ ಎಂಟು ವರ್ಷಗಳಲ್ಲಿ ನೂರಾರು ‘ಗೌರಿ’ಗಳು ಹುಟ್ಟಿಕೊಂಡಿದ್ದಾರೆ, ‘ನಾವೆಲ್ಲರೂ ಗೌರಿ’ ಎಂದು ಕರೆದುಕೊಂಡೆವು. ಆದರೆ ಇನ್ನೊಬ್ಬ ಗೌರಿಯನ್ನು ಸೃಷ್ಟಿಸಲು ಸಾಧ್ಯವಾಗಿಲ್ಲ” ಎಂದು ಅವರು ವಿಷಾದಿಸಿದರು.

ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಕಳವಳ ವ್ಯಕ್ತಪಡಿಸಿದ ಮಟ್ಟು, “ಉಮರ್ ಖಾಲಿದ್ ಅವರಂತಹ ಹೋರಾಟಗಾರರು ಇನ್ನೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಸೂಚ್ಯಂಕದಲ್ಲಿ ಭಾರತವು ಅತ್ಯಂತ ಕೆಳಗೆ ತಲುಪಿದೆ” ಎಂದು ಹೇಳಿದರು. ಗೌರಿ ಯಾವ ಭೀತಿಯನ್ನು ಕಂಡು ಹೋರಾಟಕ್ಕೆ ಇಳಿದಿದ್ದರೋ, ಅದು ಇಂದು ವಾಸ್ತವವಾಗುತ್ತಿದೆ. ಅವರ ಹತ್ಯೆಯ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿದ್ದು, ನ್ಯಾಯಾಂಗದ ಪ್ರಕ್ರಿಯೆಗಳ ಮೇಲೆ ಸವಾಲುಗಳು ಹೆಚ್ಚಾಗಿವೆ. ಗೌರಿ ಬಿಟ್ಟು ಹೋದ ಹೋರಾಟದ ನಿರ್ವಾತವನ್ನು ತುಂಬಲು ನಮಗೆ ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು. ಗೌರಿ ಬಯಸಿದ್ದಂತಹ ಸಮಾಜವನ್ನು ನಿರ್ಮಿಸುವುದು ಒಂದು ನಿರಂತರ ಪ್ರಕ್ರಿಯೆ. ಆ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದು ಅವರು ಕರೆ ನೀಡಿದರು.

ಗಣ್ಯರ ಉಪಸ್ಥಿತಿ

ಈ ‘ಗೌರಿ ನುಡಿನಮನ’ ಕಾರ್ಯಕ್ರಮದಲ್ಲಿ ಬಿ.ಟಿ.ಲಲಿತಾ ನಾಯಕ್, ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್, ಡಾ. ವಿಜಯಮ್ಮ, ಶಿವಸುಂದರ್, ಕೆ. ಬಾಲು, ವಿ.ಆರ್. ಕಾರ್ಪೆಂಟರ್, ಅಂಬಣ್ಣ ಅರೋಲಿಕರ್, ವಿ.ಎಸ್. ಶ್ರೀಧರ್, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಕೆ.ಎಲ್. ಅಶೋಕ್, ನೂರ್ ಶ್ರೀಧರ್ ಮತ್ತು ರಾಜಲಕ್ಷ್ಮಿ ಅಂಕಲಗಿ ಸೇರಿದಂತೆ ಅನೇಕ ಗಣ್ಯರು, ಹೋರಾಟಗಾರರು, ಪತ್ರಕರ್ತರು ಮತ್ತು ಗೌರಿ ಲಂಕೇಶ್‌ ಅವರ ಅಭಿಮಾನಿಗಳು ಭಾಗವಹಿಸಿದ್ದರು. ಎಲ್ಲರೂ ಗೌರಿ ಅವರ ಆದರ್ಶಗಳನ್ನು ನೆನಪಿಸಿಕೊಂಡು, ಅವರ ಹೋರಾಟವನ್ನು ಮುಂದುವರೆಸುವ ಸಂಕಲ್ಪ ಮಾಡಿದರು.

ಗೌರಿ ನುಡಿನಮನ: ಗುಂಡೇಟು ತಿಂದು ಸಾವನ್ನಪ್ಪಿದ ಗೌರಿ ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆನಸಿರುತ್ತಾರೆ; ಬಿ.ಟಿ.ಲಲಿತಾ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...