Homeಮುಖಪುಟಮುಸ್ಲಿಮರ ಮೇಲೆ ದೋಷಾರೋಪಣೆಗೆ ಯತ್ನ: ಗಣೇಶ ಚತುರ್ಥಿ ವೇಳೆ ಹುಸಿ ಬೆದರಿಕೆ ಹಾಕಿದ ಹಿಂದೂ ವ್ಯಾಪಾರಿ...

ಮುಸ್ಲಿಮರ ಮೇಲೆ ದೋಷಾರೋಪಣೆಗೆ ಯತ್ನ: ಗಣೇಶ ಚತುರ್ಥಿ ವೇಳೆ ಹುಸಿ ಬೆದರಿಕೆ ಹಾಕಿದ ಹಿಂದೂ ವ್ಯಾಪಾರಿ ಸೆರೆ

- Advertisement -
- Advertisement -

ಗಣೇಶ ಚತುರ್ಥಿಯ ಮುನ್ನಾ ದಿನ ಮುಂಬೈ ಪೊಲೀಸರು ಭಯೋತ್ಪಾದನೆಯ ಕುರಿತು ಹುಸಿ ಸಂದೇಶವನ್ನು ಕಳುಹಿಸಿದ ಹಿಂದೂ ವ್ಯಾಪಾರಿಯನ್ನು ಬಿಹಾರದಲ್ಲಿ ಬಂಧಿಸಿದ್ದಾರೆ. ಈ ಸಂದೇಶವು ಮುಸ್ಲಿಮರ ಮೇಲೆ ಸುಳ್ಳು ಆರೋಪ ಹೊರಿಸುವ ಉದ್ದೇಶದಿಂದ ಕಳುಹಿಸಿದ್ದು ಎಂದು ಅಧಿಕಾರಿಗಳು ಮತ್ತು ಸಮುದಾಯದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಆರೋಪಿ ಅಶ್ವಿನಿಕುಮಾರ್ ಸುಪ್ರಾ, ಮುಂಬೈ ಟ್ರಾಫಿಕ್ ಪೊಲೀಸ್ ಸಹಾಯವಾಣಿಗೆ ವಾಟ್ಸಾಪ್ ಮೂಲಕ ಬೆದರಿಕೆಯ ಸಂದೇಶ ಕಳುಹಿಸಿದ್ದ. ಈ ಸಂದೇಶದಲ್ಲಿ “14 ಪಾಕಿಸ್ತಾನಿ ಭಯೋತ್ಪಾದಕರು 34 ವಾಹನಗಳಲ್ಲಿ 400 ಕಿಲೋಗ್ರಾಂ ಆರ್‌ಡಿಎಕ್ಸ್‌ನೊಂದಿಗೆ ಮುಂಬೈ ಪ್ರವೇಶಿಸಿದ್ದು, ಒಂದು ಕೋಟಿ ಜನರನ್ನು ಕೊಲ್ಲಲು ಉದ್ದೇಶಿಸಿದ್ದಾರೆ” ಎಂದು ಸುಳ್ಳು ಮಾಹಿತಿ ನೀಡಿದ್ದ.

ಈ ಸಂದೇಶವನ್ನು ‘ಲಷ್ಕರ್-ಎ-ಜಿಹಾದಿ’ ಎಂಬ ಕಾಲ್ಪನಿಕ ಗುಂಪಿನ ಹೆಸರಿನಲ್ಲಿ ಕಳುಹಿಸಲಾಗಿದ್ದು, ಇದರಿಂದ ಮುಸ್ಲಿಮರನ್ನು ಉದ್ದೇಶಪೂರ್ವಕವಾಗಿ ಸಿಲುಕಿಸುವ ಪ್ರಯತ್ನ ಇದಾಗಿದೆ ಎಂದು ತಕ್ಷಣವೇ ಅನುಮಾನ ಮೂಡಿತು. ಈ ಬೆದರಿಕೆಯಿಂದ ಪೊಲೀಸರು ಮುಂಬೈ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಉನ್ನತ ಮಟ್ಟದ ಎಚ್ಚರಿಕೆ ಘೋಷಿಸಿದರು. ನಂತರ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜಂಟಿ ಪೊಲೀಸ್ ಆಯುಕ್ತ ರಾಜೀವ್ ನಾರಾಯಣ್ ಮಿಶ್ರಾ ಅವರು ನೋಯ್ಡಾ ಪೊಲೀಸ್ ಆಯುಕ್ತ ಲಕ್ಷ್ಮಿ ಸಿಂಗ್ ಅವರ ನೆರವಿನಿಂದ ಆರೋಪಿಯನ್ನು ಬಂಧಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ತನಿಖಾಧಿಕಾರಿಗಳು ಸಿಸಿಟಿವಿ ದೃಶ್ಯಾವಳಿ ಮತ್ತು ತಾಂತ್ರಿಕ ಕಣ್ಗಾವಲು ಮೂಲಕ ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ಆತನಿಗೆ ಸಿಮ್ ಕಾರ್ಡ್ ಪಡೆಯಲು ಸಹಾಯ ಮಾಡಿದ ಮತ್ತೊಬ್ಬ ವ್ಯಕ್ತಿಯನ್ನು ಕೂಡ ವಶಕ್ಕೆ ಪಡೆಯಲಾಗಿದೆ.

ಸಂದೇಶ ಕಳುಹಿಸಿದ ನಂತರ ಸುಪ್ರಾ ತನ್ನ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿದ್ದರೂ, ಅಂತಿಮವಾಗಿ ಪತ್ತೆಹಚ್ಚಿ ಬಂಧಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಈಗ ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.

ಮುಂಬೈನ ಮುಸ್ಲಿಂ ಮುಖಂಡರು ಈ ಸುದ್ದಿಗೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಇಂತಹ ಕಪೋಲಕಲ್ಪಿತ ಬೆದರಿಕೆಗಳು ಕೋಮು ದ್ವೇಷ ಹರಡಲು ಬಳಸಲಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಇದು ಕೇವಲ ಹುಸಿ ಬೆದರಿಕೆಯಲ್ಲ, ಇದು ಮುಸ್ಲಿಮರನ್ನು ಭಯೋತ್ಪಾದಕರೆಂದು ಚಿತ್ರಿಸುವ ಒಂದು ಲೆಕ್ಕಾಚಾರದ ಪ್ರಯತ್ನ” ಎಂದು ಮುಂಬೈನ ಹಿರಿಯ ಧಾರ್ಮಿಕ ಮುಖಂಡ ಮೌಲಾನ ಸಯೀದ್ ಖಾಸ್ಮಿ ಹೇಳಿದ್ದಾರೆ.

“ಪ್ರತಿ ಹಬ್ಬ ಅಥವಾ ದೊಡ್ಡ ಸಮಾರಂಭದ ಸಮಯದಲ್ಲಿ, ಕೆಲವರು ಮುಸ್ಲಿಮರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಾರೆ. ಇಂತಹ ಪ್ರಚಾರಗಳಿಂದ ಯಾವುದೇ ಮುಗ್ಧ ಮುಸ್ಲಿಮರಿಗೆ ಕಿರುಕುಳ ಆಗದಂತೆ ಪೊಲೀಸರು ನೋಡಿಕೊಳ್ಳಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಗಣೇಶ ಚತುರ್ಥಿಯ ಸಂದರ್ಭದಲ್ಲಿ ಈ ಹುಸಿ ಬೆದರಿಕೆ ಸಂಶಯಾಸ್ಪದ ಮತ್ತು ಅಪಾಯಕಾರಿ ಎಂದು ಸಮುದಾಯದ ಕಾರ್ಯಕರ್ತರು ಹೇಳಿದ್ದಾರೆ.

“ಹಬ್ಬಗಳ ಸಂದರ್ಭದಲ್ಲಿ ಭಾವನೆಗಳು ತೀವ್ರವಾಗಿರುತ್ತವೆ ಎಂಬುದು ಎಲ್ಲರಿಗೂ ಗೊತ್ತು. ಈ ಸಮಯದಲ್ಲಿ ಮುಸ್ಲಿಮರನ್ನು ಭಯೋತ್ಪಾದನೆಗೆ ಲಿಂಕ್ ಮಾಡುವ ಮೂಲಕ ಆರೋಪಿ ಗಲಭೆ ಮತ್ತು ದ್ವೇಷವನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾನೆ ಎಂಬುದು ಸ್ಪಷ್ಟ” ಎಂದು ಮಾನವ ಹಕ್ಕುಗಳ ವಕೀಲರಾದ ಅರ್ಷದ್ ಶೇಖ್ ಹೇಳಿದ್ದಾರೆ.

ಗಣೇಶ ಚತುರ್ಥಿ ಆಚರಣೆಗಳಿಗಾಗಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಮತ್ತು ನಾಗರಿಕರು ಭಯಪಡಬಾರದು ಎಂದು ಮುಂಬೈ ಪೊಲೀಸರು ಭರವಸೆ ನೀಡಿದ್ದಾರೆ.

“ನಗರದಾದ್ಯಂತ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ಜನರು ಭಯವಿಲ್ಲದೆ ಹಬ್ಬ ಆಚರಿಸಬೇಕು. ಈ ಸುಳ್ಳು ಬೆದರಿಕೆ ಹರಡಿದ ಆರೋಪಿ ನಮ್ಮ ವಶದಲ್ಲಿದ್ದಾರೆ” ಎಂದು ಒಬ್ಬ ಪೊಲೀಸ್ ಅಧಿಕಾರಿ ಹೆಸರು ಹೇಳಲು ಇಚ್ಚಿಸದೆ ತಿಳಿಸಿದ್ದಾರೆ.

ಆದರೆ, ಕೇವಲ ಒಬ್ಬ ವ್ಯಕ್ತಿಯನ್ನು ಬಂಧಿಸುವುದಲ್ಲದೆ, ಇಂತಹ ಸುಳ್ಳು ಪ್ರಚಾರವನ್ನು ಉತ್ತೇಜಿಸುತ್ತಿರುವ ದೊಡ್ಡ ಜಾಲಗಳ ಬಗ್ಗೆ ತನಿಖೆ ಮಾಡಬೇಕು ಎಂದು ಮುಸ್ಲಿಂ ಗುಂಪುಗಳು ಹೇಳಿವೆ.

“ಒಬ್ಬ ವ್ಯಕ್ತಿಯನ್ನು ಬಂಧಿಸಿದರೆ ಸಾಲದು. ಈ ರೀತಿಯ ಕೃತ್ಯಗಳ ಹಿಂದೆ ರಾಜಕೀಯ ಅಥವಾ ಕೋಮು ಗುಂಪುಗಳ ಬೆಂಬಲ ಇದೆಯೇ ಎಂದು ನಮಗೆ ತಿಳಿಯಬೇಕು” ಎಂದು ಸಾಮಾಜಿಕ ಕಾರ್ಯಕರ್ತ ಪ್ರೊಫೆಸರ್ ನದೀಮ್ ಅನ್ಸಾರಿ ಹೇಳಿದ್ದಾರೆ.

“ಭಾರತೀಯ ಮುಸ್ಲಿಮರು ಯಾವಾಗಲೂ ಶಾಂತಿಯುತವಾಗಿ ಬದುಕಿದ್ದಾರೆ, ಮತ್ತು ಇಂತಹ ಸುಳ್ಳು ಭಯೋತ್ಪಾದನಾ ಬೆದರಿಕೆಗಳಿಂದ ನಮ್ಮನ್ನು ದೂಷಿಸುವುದು ತಪ್ಪು” ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದಾದ್ಯಂತ ಅದ್ಧೂರಿಯಾಗಿ ಆಚರಿಸುವ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಪ್ರತಿ ವರ್ಷ ಮುಂಬೈಗೆ ಬರುತ್ತಾರೆ. ಈ ಹಬ್ಬದ ಸಂದರ್ಭದಲ್ಲಿ ಮುಸ್ಲಿಮರು ಯಾವಾಗಲೂ ತಮ್ಮ ಹಿಂದೂ ನೆರೆಹೊರೆಯವರಿಗೆ ಬೆಂಬಲ ನೀಡಿದ್ದಾರೆ. ಆದರೂ, ಇಂತಹ ಘಟನೆಗಳು ಅವರನ್ನು ಸುಲಭ ಗುರಿಗಳನ್ನಾಗಿ ಮಾಡುತ್ತವೆ ಎಂದು ಸಮುದಾಯದ ಸದಸ್ಯರು ಹೇಳುತ್ತಾರೆ.

“ನಾವು ನೀರು ವಿತರಿಸುತ್ತೇವೆ, ಸಂಚಾರ ನಿರ್ವಹಿಸುತ್ತೇವೆ ಮತ್ತು ಗಣೇಶ ವಿಸರ್ಜನೆಯ ಸಮಯದಲ್ಲಿ ವೈದ್ಯಕೀಯ ಶಿಬಿರಗಳನ್ನು ಸಹ ನಡೆಸುತ್ತೇವೆ. ಮುಸ್ಲಿಮರು ಯಾವಾಗಲೂ ಈ ಆಚರಣೆಗಳ ಭಾಗವಾಗಿದ್ದಾರೆ” ಎಂದು ಬೈಕುಲ್ಲಾದ ಸ್ವಯಂಸೇವಕ ಮೊಹಮ್ಮದ್ ಇರ್ಫಾನ್ ಹೇಳಿದ್ದಾರೆ.

“ಆದರೂ, ಒಂದು ಸುಳ್ಳು ಸಂದೇಶ ನಮ್ಮ ಮೇಲೆ ಅನುಮಾನಕ್ಕೆ ಕಾರಣವಾಗಬಹುದು. ಅದಕ್ಕಾಗಿಯೇ ಇಂತಹ ಪಿತೂರಿಗಳನ್ನು ತೀವ್ರವಾಗಿ ಖಂಡಿಸಬೇಕು” ಎಂದು ಅವರು ಹೇಳಿದ್ದಾರೆ.

ತನಿಖೆಗೆ ಸಹಾಯ ಮಾಡಲು ಭಯೋತ್ಪಾದನಾ ನಿಗ್ರಹ ದಳವನ್ನು (ಎಟಿಎಸ್) ಸಹ ತೊಡಗಿಸಿಕೊಳ್ಳಲಾಗಿದೆ, ಮತ್ತು ಆರೋಪಿಯ ವಿರುದ್ಧ ಕಾನೂನು ಪ್ರಕ್ರಿಯೆಗಳು ಮುಂದುವರಿಯುತ್ತಿವೆ. ಪೊಲೀಸರ ಕ್ಷಿಪ್ರ ಕ್ರಮವನ್ನು ಮುಸ್ಲಿಂ ಮುಖಂಡರು ಸ್ವಾಗತಿಸಿದ್ದಾರೆ. ಆದರೆ, ತಮ್ಮ ಸಮುದಾಯದ ವಿರುದ್ಧ ಭಯೋತ್ಪಾದನಾ ಆರೋಪಗಳ ಪುನರಾವರ್ತಿತ ದುರುಪಯೋಗದಲ್ಲಿ ನಿಜವಾದ ಅಪಾಯ ಅಡಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

“ಶಾಂತಿಗೆ ದೊಡ್ಡ ಬೆದರಿಕೆ ಮುಸ್ಲಿಮರಲ್ಲ” ಎಂದು ಮೌಲಾನ ಖಾಸ್ಮಿ ಹೇಳಿದ್ದಾರೆ. “ಸ್ವಾರ್ಥ ಉದ್ದೇಶಗಳಿಗಾಗಿ ಧರ್ಮವನ್ನು ಬಳಸುವವರು ಉತ್ಪಾದಿಸುವ ದ್ವೇಷವೇ ದೊಡ್ಡ ಅಪಾಯ. ಸುಳ್ಳುಗಳನ್ನು ನಿಲ್ಲಿಸದಿದ್ದರೆ ಕೋಮು ಸೌಹಾರ್ದತೆ ಎಷ್ಟು ದುರ್ಬಲವಾಗಬಹುದು ಎಂಬುದಕ್ಕೆ ಈ ಪ್ರಕರಣವು ಒಂದು ಜ್ಞಾಪಕ” ಎಂದು ಅವರು ಹೇಳಿದ್ದಾರೆ.

ಕೌಶಂಬಿ: ‘ನಕಲಿ ಎನ್‌ಕೌಂಟರ್’ ಆರೋಪ; ಮುಸ್ಲಿಂ ಯುವಕನಿಗೆ ಗುಂಡು, ಸಹೋದರ ನಾಪತ್ತೆ; ನ್ಯಾಯಕ್ಕಾಗಿ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...