Homeಮುಖಪುಟಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಶಾರ್ಜೀಲ್ ಇಮಾಮ್

ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಶಾರ್ಜೀಲ್ ಇಮಾಮ್

- Advertisement -
- Advertisement -

ದೆಹಲಿ ಗಲಭೆಗೆ ಸಂಬಂಧಿಸಿದ “ದೊಡ್ಡ ಮಟ್ಟದ ಪಿತೂರಿ”ಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾಗಿರುವ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಹೋರಾಟಗಾರ ಶಾರ್ಜೀಲ್ ಇಮಾಮ್ ಶನಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಸೆಪ್ಟೆಂಬರ್ 2ರಂದು, ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ಶಾಲಿಂದರ್ ಕೌರ್ ಅವರ ದೆಹಲಿ ಹೈಕೋರ್ಟ್ ಪೀಠವು ಶಾರ್ಜೀಲ್ ಇಮಾಮ್, ಉಮರ್ ಖಾಲಿದ್, ಮೊಹಮ್ಮದ್ ಸಲೀಮ್ ಖಾನ್, ಶಿಫಾ ಉರ್ ರೆಹಮಾನ್, ಅಥರ್ ಖಾನ್, ಮೀರನ್ ಹೈದರ್, ಅಬ್ದುಲ್ ಖಾಲಿದ್ ಸೈಫಿ ಮತ್ತು ಗುಲ್ಫಿಶಾ ಫಾತಿಮಾ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ನ್ಯಾಯಮೂರ್ತಿಗಳಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರ ಮತ್ತೊಂದು ವಿಭಾಗೀಯ ಪೀಠವು ಮತ್ತೊಬ್ಬ ಆರೋಪಿ ತಸ್ಲೀಮ್ ಅಹ್ಮದ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಹತ್ತು ಆರೋಪಿಗಳು ಅಪರಾಧ ರುಜುವಾತಾಗದೆ ಕಳೆದ ಐದು ವರ್ಷಗಳಿಗೂ ಹೆಚ್ಚು ಸಮಯದಿಂದ ಜೈಲಿನಲ್ಲಿದ್ದಾರೆ.

2020ರಲ್ಲಿ ನಡೆದ ದೆಹಲಿ ಹಿಂಸಾಚಾರದಲ್ಲಿ 53 ಜನರು ಸಾವನ್ನಪ್ಪಿದ್ದರು ಮತ್ತು ನೂರಾರು ಜನರು ಗಾಯಗೊಂಡಿದ್ದರು. ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಮುಸ್ಲಿಮರು.

ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಕೆಡವಲು ರೂಪಿಸಿದ್ದ ದೊಡ್ಡ ಪಿತೂರಿಯ ಭಾಗವಾಗಿ ಈ ಹಿಂಸಾಚಾರ ನಡೆದಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆಗಳನ್ನು ಆಯೋಜಿಸಿದ್ದವರೇ ಇದನ್ನು ಯೋಜಿಸಿದ್ದರು ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.

ಸೆಪ್ಟೆಂಬರ್ 2 ರಂದು, ನ್ಯಾಯಮೂರ್ತಿಗಳಾದ ಚಾವ್ಲಾ ಮತ್ತು ಕೌರ್ ಅವರನ್ನೊಳಗೊಂಡ ಪೀಠವು ಜಾಮೀನು ಅರ್ಜಿಗಳನ್ನು ವಜಾಗೊಳಿಸುವ ವೇಳೆ, ಪ್ರಾಥಮಿಕವಾಗಿ ಆಪಾದಿತ ಪಿತೂರಿಯಲ್ಲಿ ಇಮಾಮ್ ಮತ್ತು ಖಾಲಿದ್ ಅವರ ಪಾತ್ರದ ಕುರಿತು ಮಾಡಿರುವ ಆರೋಪಗಳು ‘ಗಂಭೀರವಾಗಿವೆ’ ಮತ್ತು ಅವರು ಕೋಮು ಆಧಾರದ ಮೇಲೆ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದಾರೆ ಎಂದು ಹೇಳಿದೆ.

ಪ್ರಾಸಿಕ್ಯೂಷನ್ ‘ವಿವರವಾದ ತನಿಖೆ’ ನಡೆಸಿದೆ ಎಂದು ನ್ಯಾಯಾಲಯ ಹೇಳಿದೆ. ಇದರ ಪರಿಣಾಮವಾಗಿ ನಾಲ್ಕು ಪೂರಕ ಆರೋಪಪಟ್ಟಿಗಳನ್ನು ಸಲ್ಲಿಸಲಾಗಿದೆ. ಇದಲ್ಲದೆ, 58 ಸಾಕ್ಷಿಗಳ ಹೇಳಿಕೆಗಳನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ವಿಚಾರಣೆ ವಿಳಂಬವಾಗಿದೆ ಎಂಬ ಕಾರಣ ಮುಂದಿಟ್ಟು ಇಮಾಮ್ ಮತ್ತು ಇತರ ಆರೋಪಿಗಳು ಜಾಮೀನು ಕೋರಿದ್ದರು. ಪ್ರಕರಣದ ಇತರ ಸಹ-ಆರೋಪಿಗಳಾದ ವಿದ್ಯಾರ್ಥಿ ಹೋರಾಟಗಾರರಾದ ಆಸಿಫ್ ಇಕ್ಬಾಲ್ ತನ್ಹಾ, ದೇವಾಂಗನಾ ಕಲಿತಾ ಮತ್ತು ನತಾಶಾ ನರ್ವಾಲ್ ಅವರಿಗೆ ಜಾಮೀನು ನೀಡಿದಂರೆ ತಮಗೂ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಜೂನ್ 2021ರಲ್ಲಿ ಈ ಮೂವರಿಗೆ ಜಾಮೀನು ದೊರೆತಿದೆ.

ಮುಸ್ಲಿಮರ ಮೇಲೆ ದೋಷಾರೋಪಣೆಗೆ ಯತ್ನ: ಗಣೇಶ ಚತುರ್ಥಿ ವೇಳೆ ಹುಸಿ ಬೆದರಿಕೆ ಹಾಕಿದ ಹಿಂದೂ ವ್ಯಾಪಾರಿ ಸೆರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...