Homeಮುಖಪುಟಪಂಜಾಬ್ ಪ್ರವಾಹ: ಸಾವಿನ ಸಂಖ್ಯೆ 46ಕ್ಕೆ ಏರಿಕೆ, 14,000 ಕೋಟಿ ರೂ.ಗೆ ತಲುಪಿದ ನಷ್ಟದ ಪ್ರಮಾಣ

ಪಂಜಾಬ್ ಪ್ರವಾಹ: ಸಾವಿನ ಸಂಖ್ಯೆ 46ಕ್ಕೆ ಏರಿಕೆ, 14,000 ಕೋಟಿ ರೂ.ಗೆ ತಲುಪಿದ ನಷ್ಟದ ಪ್ರಮಾಣ

- Advertisement -
- Advertisement -

ಕಳೆದ ನಾಲ್ಕು ದಶಕಗಳಲ್ಲಿಯೇ ಭೀಕರ ಪ್ರವಾಹವನ್ನು ಎದುರಿಸುತ್ತಿರುವ ಪಂಜಾಬ್‌ನಲ್ಲಿ ಕಳೆದ ಒಂದು ತಿಂಗಳಿನಿಂದ ನಲವತ್ತಾರು ಜನರು ಸಾವನ್ನಪ್ಪಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಶನಿವಾರದ ದೈನಂದಿನ ಪ್ರವಾಹ ಬುಲೆಟಿನ್‌ನಲ್ಲಿ ವರದಿಯಾಗಿರುವಂತೆ, ಹೊಸದಾಗಿ ಮೂರು ಸಾವುಗಳು ದಾಖಲಾದ ನಂತರ ಸಾವಿನ ಸಂಖ್ಯೆ 46ಕ್ಕೆ ಏರಿಕೆಯಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈ ಮಾಹಿತಿಯು ಆಗಸ್ಟ್ 1 ರಿಂದ ಸೆಪ್ಟೆಂಬರ್ 6 ರ ನಡುವಿನ ಅವಧಿಯನ್ನು ಒಳಗೊಂಡಿದೆ.

ರಾಜ್ಯ ಸರ್ಕಾರವು ಪ್ರವಾಹದಿಂದ 14,000 ಕೋಟಿ ರೂಪಾಯಿ ನಷ್ಟವನ್ನು ಅಂದಾಜಿಸಿದೆ ಎಂದು ವರದಿಯಾಗಿದೆ.

ಬುಲೆಟಿನ್ ಪ್ರಕಾರ, 1.75 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆಗಳು ಹಾನಿಗೊಳಗಾಗಿದ್ದು, 1,996 ಹಳ್ಳಿಗಳ 3.87 ಲಕ್ಷಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದೆ.

ಪಂಜಾಬ್ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ತಕ್ಷಣಕ್ಕೆ ಆರ್ಥಿಕ ಸಹಾಯ ಕೋರಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಭಾರತೀಯ ಸೇನೆ, ಗಡಿ ಭದ್ರತಾ ಪಡೆ, ಪಂಜಾಬ್ ಪೊಲೀಸರು ಮತ್ತು ಜಿಲ್ಲಾ ಅಧಿಕಾರಿಗಳನ್ನು ಒಳಗೊಂಡ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐಗೆ ತಿಳಿಸಿದೆ.

ಕಳೆದ ಒಂದು ತಿಂಗಳಿನಿಂದ ಪಂಜಾಬ್ ಮತ್ತು ನೆರೆಯ ಪರ್ವತ ರಾಜ್ಯಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಸುಮಾರು 2,000 ಹಳ್ಳಿಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜ್ಯ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಹೇಳಿದ್ದಾರೆ.

ಸುಮಾರು 200 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, 7,000 ಕ್ಕೂ ಹೆಚ್ಚು ನಿರಾಶ್ರಿತರಿಗೆ ಆಶ್ರಯ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಉತ್ತರದಾಯಿತ್ವ ಮತ್ತು ಬೆಂಬಲದ ಅವಶ್ಯಕತೆಯಿದೆ ಎಂದು ಆಮ್ ಆದ್ಮಿ ಪಕ್ಷದ ನಾಯಕ ಹೇಳಿದ್ದಾರೆ.

ಪಂಜಾಬ್‌ನಲ್ಲಿನ ಬಿಕ್ಕಟ್ಟಿಗೆ ‘ರಾಜಕೀಯ ಅವಕಾಶವಾದ’ಕ್ಕಿಂತ ಸಹಯೋಗದ ಪ್ರತಿಕ್ರಿಯೆಯ ಅಗತ್ಯವಿದೆ ಎಂದಿದ್ದಾರೆ.

ಉತ್ತರ ಭಾರತದ ಇತರ ಭಾಗಗಳಲ್ಲಿಯೂ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಹಿಮಾಚಲ ಪ್ರದೇಶದಲ್ಲಿ ಜೂನ್ 20 ರಿಂದ ಸೆಪ್ಟೆಂಬರ್ 7 ರವರೆಗೆ ಮಳೆ ಸಂಬಂಧಿತ ಘಟನೆಗಳಲ್ಲಿ 366 ಸಾವುಗಳು ಸಂಭವಿಸಿವೆ ಮತ್ತು ಒಟ್ಟು 4,079 ಕೋಟಿ ರೂ. ನಷ್ಟವಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಇವುಗಳು ಭಾರೀ ಮಳೆಯಿಂದ ಉಂಟಾದ ಮೇಘಸ್ಪೋಟ, ದಿಢೀರ್ ಪ್ರವಾಹ ಮತ್ತು ಭೂಕುಸಿತಗಳಿಂದಾಗಿ ಸಂಭವಿಸಿವೆ.

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಯಮುನಾ ಕಣಿವೆಯಲ್ಲಿ ಶನಿವಾರ ಮೇಘಸ್ಫೋಟ ಸಂಭವಿಸಿದ್ದು, ನೌಗಾಂವ್ ಪ್ರದೇಶದಲ್ಲಿ ಭಾರಿ ಹಾನಿಯಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಯಮುನಾ ಕಣಿವೆಯ ಸಿಯೋರಿ ಫಾಲ್ ಪಟ್ಟಿ ಎಂಬಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಪ್ರವಾಹದಿಂದ ತುಂಬಿದ ಹೊಳೆಯಿಂದ ಕೆಸರು ತಗ್ಗು ಪ್ರದೇಶಗಳಿಗೆ ನುಗ್ಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಶಾಂತ್ ಆರ್ಯ ತಿಳಿಸಿದ್ದಾರೆ.

ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ ಮತ್ತು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಇಲ್ಲಿಯವರೆಗೆ ಯಾವುದೇ ಜೀವಹಾನಿ ವರದಿಯಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

‘ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಶೇ. 75 ರಷ್ಟು ಸುಂಕ ವಿಧಿಸಿ..’; ಪ್ರಧಾನಿ ಮೋದಿಗೆ ಕೇಜ್ರಿವಾಲ್ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...