Homeಕರ್ನಾಟಕಮದ್ದೂರು ತಮಿಳು ಕಾಲೋನಿ ನಿವಾಸಿಗಳಿಂದ ಭೂಕಬಳಿಕೆ ವಿರೋಧಿಸಿ ಅಹೋರಾತ್ರಿ ಪ್ರತಿಭಟನೆ: ಅಧಿಕಾರಿಗಳಿಗೆ ಚಾಟಿ ಬೀಸಿದ ಜಿಲ್ಲಾಧಿಕಾರಿ...

ಮದ್ದೂರು ತಮಿಳು ಕಾಲೋನಿ ನಿವಾಸಿಗಳಿಂದ ಭೂಕಬಳಿಕೆ ವಿರೋಧಿಸಿ ಅಹೋರಾತ್ರಿ ಪ್ರತಿಭಟನೆ: ಅಧಿಕಾರಿಗಳಿಗೆ ಚಾಟಿ ಬೀಸಿದ ಜಿಲ್ಲಾಧಿಕಾರಿ ಡಾ. ಕುಮಾರ್

- Advertisement -
- Advertisement -

ಮಂಡ್ಯ: ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ ಮತ್ತು ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದ ನೇತೃತ್ವದಲ್ಲಿ ಮಂಡ್ಯದ ಜಿಲ್ಲಾಧಿಕಾರಿ ಎದುರು ನಡೆಯುತ್ತಿರುವ ‘ಅಹೋರಾತ್ರಿ ಪ್ರತಿಭಟನೆ’ಯು ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಜಿಲ್ಲಾಡಳಿತದ ಗಮನ ಸೆಳೆದಿದೆ. ಪ್ರತಿಭಟನಾನಿರತರ ಬೇಡಿಕೆಗಳಿಗೆ ಸ್ಪಂದಿಸದ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.

ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಎಚ್ಚರಿಕೆ

ಮದ್ದೂರು ತಮಿಳು ಕಾಲೋನಿಯ ಜಾಗದ ವಿಚಾರವಾಗಿ ಕಳೆದ ಏಳು ದಿನಗಳಿಂದ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಭೇಟಿ ಮಾಡಲು (ಭಾನುವಾರ) ಬಂದಿದ್ದ ಜಿಲ್ಲಾಧಿಕಾರಿಗಳು, ಈ ಸಂದರ್ಭದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳ ಗೈರುಹಾಜರಿ ಕಂಡು ಕೆಂಡಾಮಂಡಲರಾದರು. ಕರ್ತವ್ಯ ನಿರ್ಲಕ್ಷ್ಯ ತೋರಿದ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಾರ್ಯನಿರ್ವಾಹಕ ಇಂಜಿನಿಯರ್ (EE) ಮತ್ತು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಅವರನ್ನು ಅವರ ಮನೆಗಳಿಂದಲೇ ತಕ್ಷಣವೇ ಪ್ರತಿಭಟನಾ ಸ್ಥಳಕ್ಕೆ ಕರೆಸಿ, ಸಮಸ್ಯೆಗಳನ್ನು ಪರಿಹರಿಸುವವರೆಗೂ ಜಾಗದಿಂದ ಕದಲಬಾರದೆಂದು ಖಡಕ್ ಆದೇಶ ನೀಡಿದರು.

ಜಿಲ್ಲಾಧಿಕಾರಿಗಳು ಸ್ವತಃ ಪ್ರತಿಭಟನಾಕಾರರ ಜೊತೆ ಸ್ಥಳದಲ್ಲೇ ಕುಳಿತುಕೊಂಡು ನಾಲ್ಕು ಗಂಟೆಗಳ ಕಾಲ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಅವರು, ಸಮಸ್ಯೆಯನ್ನು ಪರಿಹರಿಸಿದ ನಂತರವೇ ತಮ್ಮಿಂದ ಅನುಮತಿ ಪಡೆದು ಇಲ್ಲಿಂದ ತೆರಳಬೇಕೆಂದು ತಾಕೀತು ಮಾಡಿದರು. ಹೀಗಾಗಿ, ಸ್ಲಂ ಬೋರ್ಡ್ ಅಧಿಕಾರಿಗಳು ಸಂಜೆಯವರೆಗೆ ಪ್ರತಿಭಟನಾಕಾರರ ಮಧ್ಯೆಯೇ ಕುಳಿತುಕೊಳ್ಳಬೇಕಾಯಿತು. ಈ ಸಂದರ್ಭದಲ್ಲಿ ಹೋರಾಟಗಾರರು, ಅಧಿಕಾರಿಗಳು ಮಾಡಿರುವ ತಪ್ಪುಗಳ ಬಗ್ಗೆ ಪಾಠ ಹೇಳಿದರಲ್ಲದೆ, ಅವರನ್ನು ಒಂದು ರೀತಿಯ ದಿಗ್ಬಂಧನದಲ್ಲಿ ಇರಿಸಿದ್ದರು.

ಅಕ್ರಮ ಒತ್ತುವರಿ ತಡೆಗೆ ಕಾನೂನು ಕ್ರಮ

ಈ ನಡುವೆ, ಕೊಳಗೇರಿ ಅಭಿವೃದ್ಧಿ ಮಂಡಳಿಯ ಆಯುಕ್ತರು, ಮಂಡಳಿ ವಕೀಲರು ಮತ್ತು ಮದ್ದೂರು ತಹಸೀಲ್ದಾರ್ ಜೊತೆ ಮಾತುಕತೆ ನಡೆಸಿದ ಅಧಿಕಾರಿಗಳು, ಆದಷ್ಟು ಬೇಗ ಸಮಸ್ಯೆ ಬಗೆಹರಿಸುವುದಾಗಿ ಆಯುಕ್ತರು ಭರವಸೆ ನೀಡಿದ್ದಾರೆಂದು ಪ್ರತಿಭಟನಾಕಾರರಿಗೆ ತಿಳಿಸಿದರು.

ಈ ವಿಷಯಕ್ಕೆ ಸಂಬಂಧಿಸಿದಂತೆ, ಅಕ್ರಮ ಭೂಕಬಳಿಕೆದಾರರು ಮತ್ತು ರಿಯಲ್ ಎಸ್ಟೇಟ್ ಮಾಫಿಯಾಗಳ ವಿರುದ್ಧ ಹೋರಾಟಗಾರರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಜಿಲ್ಲಾಡಳಿತ ನೀಡಿರುವ 3 ಎಕರೆ ಜಾಗವನ್ನು ರಕ್ಷಿಸಲು ತಕ್ಷಣದ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ, ಮೂರು ಇಲಾಖೆಗಳ ವತಿಯಿಂದ ಮಧ್ಯಂತರ ಅರ್ಜಿಯನ್ನು (IP) ಸಲ್ಲಿಸಲಾಗುತ್ತಿದೆ.

ಪ್ರತಿಭಟನಾಕಾರರ ಪರ ವಕೀಲರು, ಅಧಿಕಾರಿಗಳ ಪರ ವಕೀಲರ ಜೊತೆ ಚರ್ಚಿಸಿ, ಎರಡೂ ಕಡೆಯಿಂದಲೂ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಈ ಎಲ್ಲಾ ಕೆಲಸಗಳನ್ನು ಇಂದು ಸೋಮವಾರವೇ ಮಾಡಿ, ಜಿಲ್ಲಾಧಿಕಾರಿಗಳಿಗೂ ಈ ಬಗ್ಗೆ ಮಾಹಿತಿ ನೀಡಲಾಗುವುದು ಹಾಗೂ ಪ್ರತಿಭಟನಾ ಸ್ಥಳಕ್ಕೂ ಬಂದು ತಿಳಿಸುವುದಾಗಿ ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ.

ಈ ಸಂದರ್ಭದಲ್ಲಿ, ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಸಿದ್ದರಾಜು, ಮುಖಂಡರಾದ ವೈದುನಾ, ಚಂದ್ರು, ಸೇಲ್ವಿ, ರಾಮು, ಲಕ್ಷ್ಮಿ, ಪ್ರಕಾಶ್ ಸೇರಿದಂತೆ ಮದ್ದೂರು ತಮಿಳು ಕಾಲೋನಿ ನಿವಾಸಿಗಳು ಉಪಸ್ಥಿತರಿದ್ದರು.

ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಶಾರ್ಜೀಲ್ ಇಮಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...