Homeಕರ್ನಾಟಕಸಂಡೂರು: ಜಿಂದಾಲ್ ಕಂಪೆನಿಯಿಂದ ದಲಿತರ ಭೂಮಿ ಕಬಳಿಕೆ ಆರೋಪ: ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ...

ಸಂಡೂರು: ಜಿಂದಾಲ್ ಕಂಪೆನಿಯಿಂದ ದಲಿತರ ಭೂಮಿ ಕಬಳಿಕೆ ಆರೋಪ: ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ

- Advertisement -
- Advertisement -

ಸಂಡೂರು: ತಾಲೂಕಿನ ತಾರನಗರ ಗ್ರಾಮದಲ್ಲಿ ದಲಿತರಿಗೆ ಮಂಜೂರಾದ ಜಮೀನಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ತ್ಯಾಜ್ಯ ಸುರಿಯುತ್ತಿರುವ ಜಿಂದಾಲ್ ಮತ್ತು ಇತರ ಗಣಿ ಕಂಪನಿಗಳ ವಿರುದ್ಧ ದಲಿತರ ಪ್ರತಿಭಟನೆ ತೀವ್ರಗೊಂಡಿದೆ. ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಮಂಜುನಾಥ್ ಅವರ ನೇತೃತ್ವದಲ್ಲಿ ದಲಿತ ಸಮುದಾಯದ ಮುಖಂಡರು ಇಂದು (ಸೆ.8) ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಐದು ದಶಕಗಳ ಹಿಂದಿನ ಹಕ್ಕು ಕಬಳಿಕೆ

ತಾರನಗರದ ಸರ್ವೇ ನಂ. 94/ಎ ರಲ್ಲಿರುವ ಸುಮಾರು 4 ಎಕರೆಯ ಈ ಜಮೀನು 1981ರಲ್ಲಿಯೇ ಒಂದೇ ಕುಟುಂಬದ 20 ಸದಸ್ಯರನ್ನು ಹೊಂದಿರುವ ದಲಿತರಿಗೆ ಮಂಜೂರಾಗಿತ್ತು. 2018ರವರೆಗೂ ಈ ದಲಿತ ರೈತರು ಈ ಭೂಮಿಯನ್ನು ಉಳುಮೆ ಮಾಡಿಕೊಂಡು ಬಂದಿದ್ದರು. ಆದರೆ ಕೊರೊನಾ ಸಾಂಕ್ರಾಮಿಕದ ಲಾಕ್‌ಡೌನ್ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಗಣಿ ಕಂಪನಿಗಳು ಅಕ್ರಮವಾಗಿ ಗಣಿಗಾರಿಕೆಯ ತ್ಯಾಜ್ಯವನ್ನು ಈ ಜಮೀನಿನ ಮೇಲೆ ಸುರಿಯಲು ಪ್ರಾರಂಭಿಸಿದವು. ಈಗ 50 ಅಡಿಗೂ ಹೆಚ್ಚು ಎತ್ತರಕ್ಕೆ ತ್ಯಾಜ್ಯ ಸುರಿದಿದ್ದು, ಭೂಮಿ ಸಂಪೂರ್ಣವಾಗಿ ಹಾಳಾಗಿದೆ ಎಂದು ಮಂಜುನಾಥ್ ಅವರು ತಿಳಿಸಿದರು.

ಅಧಿಕಾರಿಗಳೇ ಶಾಮೀಲು; ದಲಿತರಿಗೆ ಅನ್ಯಾಯ

ಈ ಸಮಸ್ಯೆ ಕಳೆದ ಐದು ವರ್ಷಗಳಿಂದ ತಾರನಗರದಲ್ಲಿ ಮುಂದುವರಿದಿದೆ. ಜಮೀನು ಕಬಳಿಕೆ ಬಗ್ಗೆ ಸ್ಥಳೀಯ ಅಧಿಕಾರಿಗಳನ್ನು ಪ್ರಶ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಂಜುನಾಥ್ ಆರೋಪಿಸಿದ್ದಾರೆ. ಸ್ಥಳೀಯ ಅಧಿಕಾರಿಗಳು, ಸರ್ವೇ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಗಣಿ ಕಂಪನಿಗಳೊಂದಿಗೆ ಶಾಮೀಲಾಗಿರುವುದರಿಂದ ನ್ಯಾಯ ಸಿಗುತ್ತಿಲ್ಲ ಎಂದು ಅವರು ಹೇಳಿದರು.

“ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಅಧಿಕಾರಿಗಳು ಸ್ಪಂದಿಸಿಲ್ಲ. ತಹಶೀಲ್ದಾರ್ ಅವರು ಕೇವಲ ಐದು ನಿಮಿಷ ಸ್ಥಳಕ್ಕೆ ಬಂದು ದಾಖಲೆಗಳನ್ನು ಪರಿಶೀಲಿಸುವುದಾಗಿ ಹೇಳಿ ಹೋಗುತ್ತಾರೆ. ಯಾವುದೇ ಭರವಸೆಯನ್ನು ಕೊಡುವುದಿಲ್ಲ. ಗಣಿ ಇಲಾಖೆಯ ನೌಕರರು ಕಂಪನಿಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ಹೋಗುತ್ತಿದ್ದಾರೆ” ಎಂದು ಮಂಜುನಾಥ್ ಅಸಹಾಯಕತೆ ವ್ಯಕ್ತಪಡಿಸಿದರು.

ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಕೆ

ಈ ಅಕ್ರಮದ ವಿರುದ್ಧ ಜಿಲ್ಲಾಧಿಕಾರಿಗಳು ತಕ್ಷಣವೇ ಕಾನೂನು ಕ್ರಮ ಕೈಗೊಳ್ಳದಿದ್ದರೆ, ತಾವು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಮಂಜುನಾಥ್ ಎಚ್ಚರಿಕೆ ನೀಡಿದರು.

“ಇದು ಕೇವಲ ಒಂದು ಜಮೀನಿನ ಸಮಸ್ಯೆಯಲ್ಲ, ಬದಲಿಗೆ ಬಡ ದಲಿತರ ಭೂಮಿ ಹಕ್ಕುಗಳನ್ನು ಕಬಳಿಸುವ ದೊಡ್ಡ ಭೂ ಮಾಫಿಯಾ. ದಲಿತರ ಭೂಮಿಯನ್ನು ರಕ್ಷಿಸಲು ಅಗತ್ಯವಾದ ಎಲ್ಲ ಕಾನೂನು ಹೋರಾಟಗಳನ್ನು ಮತ್ತು ಪ್ರತಿಭಟನೆಗಳನ್ನು ನಾವು ಮುಂದುವರಿಸುತ್ತೇವೆ” ಎಂದು ಅವರು ಸ್ಪಷ್ಟಪಡಿಸಿದರು. ದಲಿತರ ಜಮೀನಿನಿಂದ ತ್ಯಾಜ್ಯ ತೆರವುಗೊಳಿಸಿ, ಮೂಲ ಹಕ್ಕುದಾರರಿಗೆ ಅದನ್ನು ಮರಳಿಸಬೇಕು ಎಂದು ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಜಮೀನಿನ ವಿವರ ಮತ್ತು ಹೋರಾಟದ ಹಿನ್ನೆಲೆ

ಸಂಡೂರು ತಾಲೂಕಿನ ತಾರನಗರ ಗ್ರಾಮದ ಸರ್ವೇ ನಂ. 94/ಎ ರಲ್ಲಿರುವ ಸುಮಾರು 4.13 ಎಕರೆ ಜಮೀನು, 1981ರಲ್ಲಿ ಹರಿಜನ ದೊಡ್ಡ ಸಕ್ರಪ್ಪ ಎಂಬುವವರಿಗೆ ಸರ್ಕಾರದಿಂದ ಮಂಜೂರಾಗಿತ್ತು. ನಂತರ 1982ರ ಫೆಬ್ರವರಿ 20ರಂದು ಸಂಡೂರು ತಹಶೀಲ್ದಾರ್ ಅವರು ಸಾಗುವಳಿ ಚೀಟಿ ನೀಡಿದ್ದರು. ಈ ಜಮೀನನ್ನು ಹರಿಜನ ದೊಡ್ಡ ಸಕ್ರಪ್ಪ ಅವರ ಕುಟುಂಬ ಸುಮಾರು ನಾಲ್ಕು ದಶಕಗಳಿಂದ ಬೇಸಾಯ ಮಾಡಿಕೊಂಡು ಬಂದಿದೆ.

ಆದರೆ, ಕಳೆದ ಐದು ವರ್ಷಗಳಿಂದ, ಮುಖ್ಯವಾಗಿ ಕೊರೊನಾ ಲಾಕ್‌ಡೌನ್ ಸಮಯದಲ್ಲಿ, ಜಿಂದಾಲ್, JSW, ಪೇಜ್ ಹೆಚ್, ತುಂಗಾ & ಭದ್ರಾ ಮೈನ್ಸ್‌ ಸೇರಿದಂತೆ ಕೆಲವು ಗಣಿ ಕಂಪನಿಗಳು ಈ ಜಮೀನಿನ ಮೇಲೆ ಅಕ್ರಮವಾಗಿ ಗಣಿಗಾರಿಕೆಯ ತ್ಯಾಜ್ಯ ಸುರಿಯುತ್ತಿವೆ. ಇದರಿಂದ ಜಮೀನು ಸಂಪೂರ್ಣವಾಗಿ ಹಾಳಾಗಿದ್ದು, ನ್ಯಾಯಕ್ಕಾಗಿ ಕುಟುಂಬಸ್ಥರು ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ.

ಕಾನೂನು ಹೋರಾಟ ಮತ್ತು ಬೇಡಿಕೆಗಳು

ದಲಿತರ ಜಮೀನಿನ ಹಕ್ಕನ್ನು ರಕ್ಷಿಸಲು ಈ ಕೆಳಗಿನ ಕ್ರಮಗಳನ್ನು ತಕ್ಷಣವೇ ಕೈಗೊಳ್ಳುವಂತೆ ಮಂಜುನಾಥ್ ಅವರು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ:

  • ಜಮೀನಿನಲ್ಲಿ ಅಕ್ರಮವಾಗಿ ಹಾಕಿರುವ ತ್ಯಾಜ್ಯವನ್ನು ಕೂಡಲೇ ತೆರವುಗೊಳಿಸಬೇಕು.
  • ಜಮೀನು ಕಬಳಿಸಿದ ಗಣಿ ಕಂಪನಿಗಳ ವಿರುದ್ಧ ಮತ್ತು ಕರ್ತವ್ಯ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.
  • ಪಿಟಿಸಿಎಲ್ (PTCL) ಕಾಯ್ದೆಯ ಕಲಂ 8ರ ಪ್ರಕಾರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ 1989ರ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು.
  • ಸಂವಿಧಾನದ ಆಶಯದಂತೆ ಬಡ ಮತ್ತು ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು.

ನ್ಯಾಯ ಸಿಗುವವರೆಗೂ ಈ ಹೋರಾಟವನ್ನು ಮುಂದುವರಿಸುವುದಾಗಿ ಮತ್ತು ಜಿಲ್ಲಾಧಿಕಾರಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.

ಮದ್ದೂರು ತಮಿಳು ಕಾಲೋನಿ ನಿವಾಸಿಗಳಿಂದ ಭೂಕಬಳಿಕೆ ವಿರೋಧಿಸಿ ಅಹೋರಾತ್ರಿ ಪ್ರತಿಭಟನೆ: ಅಧಿಕಾರಿಗಳಿಗೆ ಚಾಟಿ ಬೀಸಿದ ಜಿಲ್ಲಾಧಿಕಾರಿ ಡಾ. ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...