Homeಅಂತರಾಷ್ಟ್ರೀಯನೇಪಾಳದಲ್ಲಿ ತೀವ್ರ ಹಿಂಸಾಚಾರಕ್ಕೆ ತಿರುಗಿದ ಯುವಜನರ ಪ್ರತಿಭಟನೆ: ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ

ನೇಪಾಳದಲ್ಲಿ ತೀವ್ರ ಹಿಂಸಾಚಾರಕ್ಕೆ ತಿರುಗಿದ ಯುವಜನರ ಪ್ರತಿಭಟನೆ: ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ

- Advertisement -
- Advertisement -

ನೇಪಾಳದಲ್ಲಿ ವಿದ್ಯಾರ್ಥಿಗಳು, ಯುವಜನರ ಬೃಹತ್ ಸರ್ಕಾರಿ ವಿರೋಧಿ ಪ್ರತಿಭಟನೆ ಮಂಗಳವಾರ ಎರಡನೇ ದಿನವೂ ಮುಂದುವರೆದಿದ್ದು, ಪ್ರತಿಭಟನಾಕಾರರು ಪ್ರಧಾನಿಯ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ಈ ನಡುವೆ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ನೂರಾರು ಪ್ರತಿಭಟನಾಕಾರರು ಸರ್ಕಾರಿ ವಿರೋಧಿ ಘೋಷಣೆಗಳನ್ನು ಕೂಗುತ್ತಾ ಓಲಿ ಅವರ ಕಚೇರಿಗೆ ಪ್ರವೇಶಿಸಿದ ಸ್ವಲ್ಪ ಸಮಯದ ನಂತರ ಅವರು ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಕೆಲವು ಗಂಟೆಗಳ ಮೊದಲು, ಸೋಮವಾರ ನಡೆದ ಸಾವುನೋವುಗಳ ಹೊಣೆ ಹೊತ್ತುಕೊಳ್ಳುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಬಾಲ್ಕೋಟ್‌ನಲ್ಲಿರುವ ಪ್ರಧಾನಿಯ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನೇಪಾಳದ ನಾಲ್ಕನೇ ಅತಿದೊಡ್ಡ ರಾಷ್ಟ್ರೀಯ ಪಕ್ಷವಾದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಇಪ್ಪತ್ತೊಂದು ಸಂಸದರು ಮಂಗಳವಾರ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.

‘ಜೆನ್‌ ಝೀ’ ಬ್ಯಾನರ್ ಅಡಿಯಲ್ಲಿ, ರಾಜಧಾನಿ ಕಠ್ಮಂಡುವಿನ ಹಲವು ಭಾಗಗಳಲ್ಲಿ “ಕೆಪಿ ಚೋರ್, ದೇಶ್ ಛೋಡ್” (ಕೆಪಿ ಕಳ್ಳ, ದೇಶ ಬಿಟ್ಟು ತೊಲಗಿ) ಮತ್ತು ‘”ಭ್ರಷ್ಟ ನಾಯಕರ ವಿರುದ್ಧ ಕ್ರಮ ಕೈಗೊಳ್ಳಿ” ಮುಂತಾದ ಘೋಷಣೆಗಳನ್ನು ಪ್ರತಿಭಟನಾಕಾರರು ಕೂಗಿದ್ದಾರೆ.

ಭಕ್ತಪುರದ ಬಾಲ್ಕೋಟ್‌ನಲ್ಲಿರುವ ಪ್ರಧಾನಿ ಓಲಿ ಅವರ ನಿವಾಸಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. ಓಲಿ ಪ್ರಸ್ತುತ ಬಲ್ವತಾರ್‌ನಲ್ಲಿರುವ ಪ್ರಧಾನಿ ನಿವಾಸದಲ್ಲಿದ್ದಾರೆ ಎಂದು ವರದಿ ಹೇಳಿದೆ.

ಸಾಮಾಜಿಕ ಮಾಧ್ಯಮ ತಾಣಗಳ ಮೇಲಿನ ಸರ್ಕಾರದ ನಿಷೇಧವನ್ನು ಪ್ರತಿಭಟಿಸುತ್ತಿದ್ದ ಯುವಕರ ಮೇಲೆ ಪೊಲೀಸರು ಬಲಪ್ರಯೋಗ ನಡೆಸಿದ್ದ ಪರಿಣಾಮ ಸೋಮವಾರ 19 ಜನರು ಸಾವನ್ನಪ್ಪಿದ್ದಾರೆ ಮತ್ತು 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಸೋಮವಾರದಂದು ಮಾಜಿ ಗೃಹ ಸಚಿವ ರಮೇಶ್ ಲೇಖಕ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಪ್ರತಿಭಟನಾಕಾರರು ಅವರ ನಿವಾಸಕ್ಕೂ ಮಂಗಳವಾರ ಬೆಂಕಿ ಹಚ್ಚಿದ್ದಾರೆ. ಗೃಹ ಸಚಿವರ ನಿರ್ಗಮನ ಸಾಕಾಗುವುದಿಲ್ಲ ಎಂದು ಹೇಳಿದ ಪ್ರತಿಭಟನಾಕಾರರು ಪ್ರಧಾನಿ ಓಲಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದರು.

ಪ್ರಮುಖ ಆನ್‌ಲೈನ್ ಸುದ್ದಿ ಪೋರ್ಟಲ್‌ಗಳು ಸೋಮವಾರ ಕಠ್ಮಂಡುವಿನಲ್ಲಿ ನಡೆದ ಪೊಲೀಸ್ ದಮನ ಕಾರ್ಯಾಚರಣೆಯನ್ನು ತೀವ್ರವಾಗಿ ಟೀಕಿಸಿದ್ದು, ನೇಪಾಳದ ಇತ್ತೀಚಿನ ಇತಿಹಾಸದಲ್ಲಿ ಇದು ಅತ್ಯಂತ ಕರಾಳ ದಿನಗಳಲ್ಲಿ ಒಂದು ಎಂದು ಬಣ್ಣಿಸಿವೆ.

ಜನಪ್ರಿಯ ಸುದ್ದಿ ಪೋರ್ಟಲ್ Ukeraa.com ಸೆಪ್ಟೆಂಬರ್ 8ಅನ್ನು ‘ಕರಾಳ ದಿನ’ ಎಂದು ಬಣ್ಣಿಸಿತ್ತು. ನೇಪಾಳದ ಇತಿಹಾಸದಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ ಎಂದಿದ್ದ ಮಾಧ್ಯಮ ಸಂಸ್ಥೆ, ಪ್ರಧಾನಿ ಓಲಿ ಅವರ ರಾಜೀನಾಮೆಗೆ ಒತ್ತಾಯಿಸಿತ್ತು.

ಮತ್ತೊಂದು ಸುದ್ದಿ ಪೋರ್ಟಲ್, ರಾಟೋಪತಿ, ಸರ್ಕಾರವು ಪ್ರತಿಭಟನಾ ನಿರತ ಯುವಜನರು ಮತ್ತು ವಿದ್ಯಾರ್ಥಿಗಳ ಮೇಲೆ ವಿವೇಚನೆಯಿಲ್ಲದೆ ಗುಂಡು ಹಾರಿಸಿದೆ ಎಂದು ಆರೋಪಿಸಿದೆ. ಇದು ‘ಹೇಡಿತನ’ ಮತ್ತು ‘ಅತ್ಯಂತ ಶೋಚನೀಯ’ ಕ್ರಮ ಎಂದು ಬಣ್ಣಿಸಿದೆ.

ಯುವ ನೇಪಾಳಿಗಳು ನಡೆಸಿದ ಆಂದೋಲನವು ರಾಜಕೀಯ ಪ್ರೇರಿತವಲ್ಲ, ಬದಲಾಗಿ ಭ್ರಷ್ಟಾಚಾರ, ಸ್ವಜನಪಕ್ಷಪಾತ, ನಿರುದ್ಯೋಗ ಮತ್ತು ಬೆಳೆಯುತ್ತಿರುವ ಸಾಮಾಜಿಕ ಅವ್ಯವಸ್ಥೆ ಹತಾಶೆಯಿಂದ ಹೊರ ಹೊಮ್ಮಿದ ಆಕ್ರೋಶ ಎಂದು ಪೋರ್ಟಲ್ ಹೇಳಿದೆ.

ಮಂಗಳವಾರ ಕಠ್ಮಂಡು ಮತ್ತು ದೇಶದ ಇತರ ಭಾಗಗಳಲ್ಲಿ ಕರ್ಫ್ಯೂ ಆದೇಶಗಳ ಹೊರತಾಗಿಯೂ ಪ್ರತಿಭಟನೆಗಳು ಉಲ್ಬಣಗೊಂಡಿದ್ದವು. ಕಠ್ಮಂಡುವಿನ ಕಲಾಂಕಿ, ಕಾಲಿಮತಿ, ತಹಚಲ್ ಮತ್ತು ಬನೇಶ್ವರ್ ಹಾಗೂ ಲಲಿತಪುರ ಜಿಲ್ಲೆಯ ಚ್ಯಾಸಲ್, ಚಾಪಗೌ ಮತ್ತು ಥೆಚೊ ಪ್ರದೇಶಗಳಲ್ಲಿ ಬೃಹತ್ ಪ್ರತಿಭಟನೆಗಳು ವರದಿಯಾಗಿವೆ.

ಪ್ರತಿಭಟನಾಕಾರರು (ಹೆಚ್ಚಾಗಿ ವಿದ್ಯಾರ್ಥಿಗಳು) ಸಾರ್ವಜನಿಕ ಸಭೆಗಳ ಮೇಲಿನ ನಿರ್ಬಂಧಗಳನ್ನು ಧಿಕ್ಕರಿಸಿ “ವಿದ್ಯಾರ್ಥಿಗಳನ್ನು ಕೊಲ್ಲಬೇಡಿ” ಎಂಬ ಘೋಷಣೆಗಳನ್ನು ಕೂಗಿದ್ದಾರೆ.

ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ, ಕಲಾಂಕಿಯಲ್ಲಿ ಬೆಳಗಿನ ಜಾವದಿಂದಲೇ ಪ್ರತಿಭಟನಾಕಾರರು ರಸ್ತೆಗಳನ್ನು ತಡೆದು, ಟೈರ್‌ಗಳನ್ನು ಸುಟ್ಟು ಆಕ್ರೋಶ ಹೊರ ಹಾಕಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಪೊಲೀಸರು ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದರಿಂದ ನಾಲ್ವರು ಗಾಯಗೊಂಡಿದ್ದಾರೆ. ಲಲಿತಪುರ ಜಿಲ್ಲೆಯ ಸುನಕೋಠಿಯಲ್ಲಿರುವ ಸಂವಹನ ಸಚಿವ ಪೃಥ್ವಿ ಸುಬ್ಬ ಗುರುಂಗ್ ಅವರ ನಿವಾಸದ ಮೇಲೂ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗುರುಂಗ್ ಅವರು ಸಾಮಾಜಿಕ ಮಾಧ್ಯಮ ತಾಣಗಳ ಮೇಲೆ ನಿಷೇಧ ಹೇರಲು ಆದೇಶಿಸಿದ್ದರು.

ಪ್ರತಿಭಟನಾಕಾರರು ಲಲಿತ್‌ಪುರದ ಖುಮಾಲ್ತಾರ್‌ನಲ್ಲಿರುವ ಮಾಜಿ ಪ್ರಧಾನಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಅವರ ನಿವಾಸವನ್ನು ಧ್ವಂಸಗೊಳಿಸಿದ್ದಾರೆ. ಕಠ್ಮಂಡುವಿನ ಬುಧನೀಲಕಂಠದಲ್ಲಿರುವ ಮಾಜಿ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರ ಮನೆಯ ಮೇಲೂ ದಾಳಿ ನಡೆಸಲಾಗಿದೆ.

ಭ್ರಷ್ಟಾಚಾರದ ವಿರುದ್ಧ ಹೋರಾಟ ರೂಪಿಸಿದ್ದ ‘ಜೆನ್‌ ಝೀ’ ಗುಂಪು, ಮಂತ್ರಿಗಳು ಮತ್ತು ಇತರ ಪ್ರಭಾವಿ ವ್ಯಕ್ತಿಗಳ ಮಕ್ಕಳ ಐಶಾರಾಮಿ ಜೀವನಶೈಲಿ, ದುಂದುವೆಚ್ಚವನ್ನು ಬಹಿರಂಗಪಡಿಸಲು ರೆಡ್ಡಿಟ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸಿಕೊಂಡಿದ್ದರು.

ಭ್ರಷ್ಟಾಚಾರದಿಂದ ಬಂದ ಸಂಪತ್ತಿಗೆ ಹಣಕಾಸು ಒದಗಿಸುವ ಮೂಲಗಳನ್ನು ಪ್ರಶ್ನಿಸಿ ಅವರು ವಿಡಿಯೋಗಳು ಮತ್ತು ಫೋಟೋಗಳನ್ನು ಪೋಸ್ಟ್ ಮಾಡುತ್ತಿದ್ದರು. ಇದು ರಾಜಕೀಯ ನಾಯಕರಿಗೆ ಮುಜುಗರ ತರಿಸಿತ್ತು. ಈ ಕಾರಣಕ್ಕೆ ಸಾಮಾಜಿಕ ಮಾಧ್ಯಮಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ ಎಂದು ಹೇಳಲಾಗ್ತಿದೆ.

ಸರ್ಕಾರ ಫೇಸ್‌ಬುಕ್, ಎಕ್ಸ್ ಸೇರಿದಂತೆ 26 ಸಾಮಾಜಿಕ ಮಾಧ್ಯಮ ತಾಣಗಳು ಕಾನೂನು ಪ್ರಕಾರ ನೋಂದಾಯಿಸಲು ವಿಫಲವಾಗಿವೆ ಎಂಬ  ಕಾರಣ ನೀಡಿ ನಿಷೇಧಿಸಲು ಆದೇಶಿಸಿತ್ತು. ಆದರೆ, ಯುವಜನರ ಆಕ್ರೋಶ ಎದುರಿಸಲಾಗದೆ ಸೋಮವಾರ ತಡರಾತ್ರಿ ಆದೇಶವನ್ನು ವಾಪಸ್ ಪಡೆದಿದೆ. ಆದರೂ, ಪ್ರತಿಭಟನೆ ಮಂಗಳವಾರ ತೀವ್ರ ಸ್ವರೂಪ ಪಡೆದುಕೊಂಡಿದೆ.

ರಾಷ್ಟ್ರೀಯ ಲಾಂಛನ ವಿರೂಪ ಪ್ರಕರಣ: ಹಜರತ್ಬಲ್‌ನಲ್ಲಿ 30ಕ್ಕೂ ಹೆಚ್ಚು ಬಂಧನ; “ಕಾಶ್ಮೀರಿಗಳ ಹತ್ಯಾಕಾಂಡ” ಎಂದ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...