Homeಅಂತರಾಷ್ಟ್ರೀಯನೇಪಾಳದಲ್ಲಿ ತೀವ್ರ ಹಿಂಸಾಚಾರಕ್ಕೆ ತಿರುಗಿದ ಯುವಜನರ ಪ್ರತಿಭಟನೆ: ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ

ನೇಪಾಳದಲ್ಲಿ ತೀವ್ರ ಹಿಂಸಾಚಾರಕ್ಕೆ ತಿರುಗಿದ ಯುವಜನರ ಪ್ರತಿಭಟನೆ: ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ

- Advertisement -
- Advertisement -

ನೇಪಾಳದಲ್ಲಿ ವಿದ್ಯಾರ್ಥಿಗಳು, ಯುವಜನರ ಬೃಹತ್ ಸರ್ಕಾರಿ ವಿರೋಧಿ ಪ್ರತಿಭಟನೆ ಮಂಗಳವಾರ ಎರಡನೇ ದಿನವೂ ಮುಂದುವರೆದಿದ್ದು, ಪ್ರತಿಭಟನಾಕಾರರು ಪ್ರಧಾನಿಯ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ಈ ನಡುವೆ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ನೂರಾರು ಪ್ರತಿಭಟನಾಕಾರರು ಸರ್ಕಾರಿ ವಿರೋಧಿ ಘೋಷಣೆಗಳನ್ನು ಕೂಗುತ್ತಾ ಓಲಿ ಅವರ ಕಚೇರಿಗೆ ಪ್ರವೇಶಿಸಿದ ಸ್ವಲ್ಪ ಸಮಯದ ನಂತರ ಅವರು ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಕೆಲವು ಗಂಟೆಗಳ ಮೊದಲು, ಸೋಮವಾರ ನಡೆದ ಸಾವುನೋವುಗಳ ಹೊಣೆ ಹೊತ್ತುಕೊಳ್ಳುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಬಾಲ್ಕೋಟ್‌ನಲ್ಲಿರುವ ಪ್ರಧಾನಿಯ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನೇಪಾಳದ ನಾಲ್ಕನೇ ಅತಿದೊಡ್ಡ ರಾಷ್ಟ್ರೀಯ ಪಕ್ಷವಾದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಇಪ್ಪತ್ತೊಂದು ಸಂಸದರು ಮಂಗಳವಾರ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.

‘ಜೆನ್‌ ಝೀ’ ಬ್ಯಾನರ್ ಅಡಿಯಲ್ಲಿ, ರಾಜಧಾನಿ ಕಠ್ಮಂಡುವಿನ ಹಲವು ಭಾಗಗಳಲ್ಲಿ “ಕೆಪಿ ಚೋರ್, ದೇಶ್ ಛೋಡ್” (ಕೆಪಿ ಕಳ್ಳ, ದೇಶ ಬಿಟ್ಟು ತೊಲಗಿ) ಮತ್ತು ‘”ಭ್ರಷ್ಟ ನಾಯಕರ ವಿರುದ್ಧ ಕ್ರಮ ಕೈಗೊಳ್ಳಿ” ಮುಂತಾದ ಘೋಷಣೆಗಳನ್ನು ಪ್ರತಿಭಟನಾಕಾರರು ಕೂಗಿದ್ದಾರೆ.

ಭಕ್ತಪುರದ ಬಾಲ್ಕೋಟ್‌ನಲ್ಲಿರುವ ಪ್ರಧಾನಿ ಓಲಿ ಅವರ ನಿವಾಸಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. ಓಲಿ ಪ್ರಸ್ತುತ ಬಲ್ವತಾರ್‌ನಲ್ಲಿರುವ ಪ್ರಧಾನಿ ನಿವಾಸದಲ್ಲಿದ್ದಾರೆ ಎಂದು ವರದಿ ಹೇಳಿದೆ.

ಸಾಮಾಜಿಕ ಮಾಧ್ಯಮ ತಾಣಗಳ ಮೇಲಿನ ಸರ್ಕಾರದ ನಿಷೇಧವನ್ನು ಪ್ರತಿಭಟಿಸುತ್ತಿದ್ದ ಯುವಕರ ಮೇಲೆ ಪೊಲೀಸರು ಬಲಪ್ರಯೋಗ ನಡೆಸಿದ್ದ ಪರಿಣಾಮ ಸೋಮವಾರ 19 ಜನರು ಸಾವನ್ನಪ್ಪಿದ್ದಾರೆ ಮತ್ತು 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಸೋಮವಾರದಂದು ಮಾಜಿ ಗೃಹ ಸಚಿವ ರಮೇಶ್ ಲೇಖಕ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಪ್ರತಿಭಟನಾಕಾರರು ಅವರ ನಿವಾಸಕ್ಕೂ ಮಂಗಳವಾರ ಬೆಂಕಿ ಹಚ್ಚಿದ್ದಾರೆ. ಗೃಹ ಸಚಿವರ ನಿರ್ಗಮನ ಸಾಕಾಗುವುದಿಲ್ಲ ಎಂದು ಹೇಳಿದ ಪ್ರತಿಭಟನಾಕಾರರು ಪ್ರಧಾನಿ ಓಲಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದರು.

ಪ್ರಮುಖ ಆನ್‌ಲೈನ್ ಸುದ್ದಿ ಪೋರ್ಟಲ್‌ಗಳು ಸೋಮವಾರ ಕಠ್ಮಂಡುವಿನಲ್ಲಿ ನಡೆದ ಪೊಲೀಸ್ ದಮನ ಕಾರ್ಯಾಚರಣೆಯನ್ನು ತೀವ್ರವಾಗಿ ಟೀಕಿಸಿದ್ದು, ನೇಪಾಳದ ಇತ್ತೀಚಿನ ಇತಿಹಾಸದಲ್ಲಿ ಇದು ಅತ್ಯಂತ ಕರಾಳ ದಿನಗಳಲ್ಲಿ ಒಂದು ಎಂದು ಬಣ್ಣಿಸಿವೆ.

ಜನಪ್ರಿಯ ಸುದ್ದಿ ಪೋರ್ಟಲ್ Ukeraa.com ಸೆಪ್ಟೆಂಬರ್ 8ಅನ್ನು ‘ಕರಾಳ ದಿನ’ ಎಂದು ಬಣ್ಣಿಸಿತ್ತು. ನೇಪಾಳದ ಇತಿಹಾಸದಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ ಎಂದಿದ್ದ ಮಾಧ್ಯಮ ಸಂಸ್ಥೆ, ಪ್ರಧಾನಿ ಓಲಿ ಅವರ ರಾಜೀನಾಮೆಗೆ ಒತ್ತಾಯಿಸಿತ್ತು.

ಮತ್ತೊಂದು ಸುದ್ದಿ ಪೋರ್ಟಲ್, ರಾಟೋಪತಿ, ಸರ್ಕಾರವು ಪ್ರತಿಭಟನಾ ನಿರತ ಯುವಜನರು ಮತ್ತು ವಿದ್ಯಾರ್ಥಿಗಳ ಮೇಲೆ ವಿವೇಚನೆಯಿಲ್ಲದೆ ಗುಂಡು ಹಾರಿಸಿದೆ ಎಂದು ಆರೋಪಿಸಿದೆ. ಇದು ‘ಹೇಡಿತನ’ ಮತ್ತು ‘ಅತ್ಯಂತ ಶೋಚನೀಯ’ ಕ್ರಮ ಎಂದು ಬಣ್ಣಿಸಿದೆ.

ಯುವ ನೇಪಾಳಿಗಳು ನಡೆಸಿದ ಆಂದೋಲನವು ರಾಜಕೀಯ ಪ್ರೇರಿತವಲ್ಲ, ಬದಲಾಗಿ ಭ್ರಷ್ಟಾಚಾರ, ಸ್ವಜನಪಕ್ಷಪಾತ, ನಿರುದ್ಯೋಗ ಮತ್ತು ಬೆಳೆಯುತ್ತಿರುವ ಸಾಮಾಜಿಕ ಅವ್ಯವಸ್ಥೆ ಹತಾಶೆಯಿಂದ ಹೊರ ಹೊಮ್ಮಿದ ಆಕ್ರೋಶ ಎಂದು ಪೋರ್ಟಲ್ ಹೇಳಿದೆ.

ಮಂಗಳವಾರ ಕಠ್ಮಂಡು ಮತ್ತು ದೇಶದ ಇತರ ಭಾಗಗಳಲ್ಲಿ ಕರ್ಫ್ಯೂ ಆದೇಶಗಳ ಹೊರತಾಗಿಯೂ ಪ್ರತಿಭಟನೆಗಳು ಉಲ್ಬಣಗೊಂಡಿದ್ದವು. ಕಠ್ಮಂಡುವಿನ ಕಲಾಂಕಿ, ಕಾಲಿಮತಿ, ತಹಚಲ್ ಮತ್ತು ಬನೇಶ್ವರ್ ಹಾಗೂ ಲಲಿತಪುರ ಜಿಲ್ಲೆಯ ಚ್ಯಾಸಲ್, ಚಾಪಗೌ ಮತ್ತು ಥೆಚೊ ಪ್ರದೇಶಗಳಲ್ಲಿ ಬೃಹತ್ ಪ್ರತಿಭಟನೆಗಳು ವರದಿಯಾಗಿವೆ.

ಪ್ರತಿಭಟನಾಕಾರರು (ಹೆಚ್ಚಾಗಿ ವಿದ್ಯಾರ್ಥಿಗಳು) ಸಾರ್ವಜನಿಕ ಸಭೆಗಳ ಮೇಲಿನ ನಿರ್ಬಂಧಗಳನ್ನು ಧಿಕ್ಕರಿಸಿ “ವಿದ್ಯಾರ್ಥಿಗಳನ್ನು ಕೊಲ್ಲಬೇಡಿ” ಎಂಬ ಘೋಷಣೆಗಳನ್ನು ಕೂಗಿದ್ದಾರೆ.

ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ, ಕಲಾಂಕಿಯಲ್ಲಿ ಬೆಳಗಿನ ಜಾವದಿಂದಲೇ ಪ್ರತಿಭಟನಾಕಾರರು ರಸ್ತೆಗಳನ್ನು ತಡೆದು, ಟೈರ್‌ಗಳನ್ನು ಸುಟ್ಟು ಆಕ್ರೋಶ ಹೊರ ಹಾಕಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಪೊಲೀಸರು ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದರಿಂದ ನಾಲ್ವರು ಗಾಯಗೊಂಡಿದ್ದಾರೆ. ಲಲಿತಪುರ ಜಿಲ್ಲೆಯ ಸುನಕೋಠಿಯಲ್ಲಿರುವ ಸಂವಹನ ಸಚಿವ ಪೃಥ್ವಿ ಸುಬ್ಬ ಗುರುಂಗ್ ಅವರ ನಿವಾಸದ ಮೇಲೂ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗುರುಂಗ್ ಅವರು ಸಾಮಾಜಿಕ ಮಾಧ್ಯಮ ತಾಣಗಳ ಮೇಲೆ ನಿಷೇಧ ಹೇರಲು ಆದೇಶಿಸಿದ್ದರು.

ಪ್ರತಿಭಟನಾಕಾರರು ಲಲಿತ್‌ಪುರದ ಖುಮಾಲ್ತಾರ್‌ನಲ್ಲಿರುವ ಮಾಜಿ ಪ್ರಧಾನಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಅವರ ನಿವಾಸವನ್ನು ಧ್ವಂಸಗೊಳಿಸಿದ್ದಾರೆ. ಕಠ್ಮಂಡುವಿನ ಬುಧನೀಲಕಂಠದಲ್ಲಿರುವ ಮಾಜಿ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರ ಮನೆಯ ಮೇಲೂ ದಾಳಿ ನಡೆಸಲಾಗಿದೆ.

ಭ್ರಷ್ಟಾಚಾರದ ವಿರುದ್ಧ ಹೋರಾಟ ರೂಪಿಸಿದ್ದ ‘ಜೆನ್‌ ಝೀ’ ಗುಂಪು, ಮಂತ್ರಿಗಳು ಮತ್ತು ಇತರ ಪ್ರಭಾವಿ ವ್ಯಕ್ತಿಗಳ ಮಕ್ಕಳ ಐಶಾರಾಮಿ ಜೀವನಶೈಲಿ, ದುಂದುವೆಚ್ಚವನ್ನು ಬಹಿರಂಗಪಡಿಸಲು ರೆಡ್ಡಿಟ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸಿಕೊಂಡಿದ್ದರು.

ಭ್ರಷ್ಟಾಚಾರದಿಂದ ಬಂದ ಸಂಪತ್ತಿಗೆ ಹಣಕಾಸು ಒದಗಿಸುವ ಮೂಲಗಳನ್ನು ಪ್ರಶ್ನಿಸಿ ಅವರು ವಿಡಿಯೋಗಳು ಮತ್ತು ಫೋಟೋಗಳನ್ನು ಪೋಸ್ಟ್ ಮಾಡುತ್ತಿದ್ದರು. ಇದು ರಾಜಕೀಯ ನಾಯಕರಿಗೆ ಮುಜುಗರ ತರಿಸಿತ್ತು. ಈ ಕಾರಣಕ್ಕೆ ಸಾಮಾಜಿಕ ಮಾಧ್ಯಮಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ ಎಂದು ಹೇಳಲಾಗ್ತಿದೆ.

ಸರ್ಕಾರ ಫೇಸ್‌ಬುಕ್, ಎಕ್ಸ್ ಸೇರಿದಂತೆ 26 ಸಾಮಾಜಿಕ ಮಾಧ್ಯಮ ತಾಣಗಳು ಕಾನೂನು ಪ್ರಕಾರ ನೋಂದಾಯಿಸಲು ವಿಫಲವಾಗಿವೆ ಎಂಬ  ಕಾರಣ ನೀಡಿ ನಿಷೇಧಿಸಲು ಆದೇಶಿಸಿತ್ತು. ಆದರೆ, ಯುವಜನರ ಆಕ್ರೋಶ ಎದುರಿಸಲಾಗದೆ ಸೋಮವಾರ ತಡರಾತ್ರಿ ಆದೇಶವನ್ನು ವಾಪಸ್ ಪಡೆದಿದೆ. ಆದರೂ, ಪ್ರತಿಭಟನೆ ಮಂಗಳವಾರ ತೀವ್ರ ಸ್ವರೂಪ ಪಡೆದುಕೊಂಡಿದೆ.

ರಾಷ್ಟ್ರೀಯ ಲಾಂಛನ ವಿರೂಪ ಪ್ರಕರಣ: ಹಜರತ್ಬಲ್‌ನಲ್ಲಿ 30ಕ್ಕೂ ಹೆಚ್ಚು ಬಂಧನ; “ಕಾಶ್ಮೀರಿಗಳ ಹತ್ಯಾಕಾಂಡ” ಎಂದ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...