Homeಅಂತರಾಷ್ಟ್ರೀಯನೇಪಾಳದಲ್ಲಿ ತೀವ್ರ ಹಿಂಸಾಚಾರಕ್ಕೆ ತಿರುಗಿದ ಯುವಜನರ ಪ್ರತಿಭಟನೆ: ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ

ನೇಪಾಳದಲ್ಲಿ ತೀವ್ರ ಹಿಂಸಾಚಾರಕ್ಕೆ ತಿರುಗಿದ ಯುವಜನರ ಪ್ರತಿಭಟನೆ: ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ

- Advertisement -
- Advertisement -

ನೇಪಾಳದಲ್ಲಿ ವಿದ್ಯಾರ್ಥಿಗಳು, ಯುವಜನರ ಬೃಹತ್ ಸರ್ಕಾರಿ ವಿರೋಧಿ ಪ್ರತಿಭಟನೆ ಮಂಗಳವಾರ ಎರಡನೇ ದಿನವೂ ಮುಂದುವರೆದಿದ್ದು, ಪ್ರತಿಭಟನಾಕಾರರು ಪ್ರಧಾನಿಯ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ಈ ನಡುವೆ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ನೂರಾರು ಪ್ರತಿಭಟನಾಕಾರರು ಸರ್ಕಾರಿ ವಿರೋಧಿ ಘೋಷಣೆಗಳನ್ನು ಕೂಗುತ್ತಾ ಓಲಿ ಅವರ ಕಚೇರಿಗೆ ಪ್ರವೇಶಿಸಿದ ಸ್ವಲ್ಪ ಸಮಯದ ನಂತರ ಅವರು ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಕೆಲವು ಗಂಟೆಗಳ ಮೊದಲು, ಸೋಮವಾರ ನಡೆದ ಸಾವುನೋವುಗಳ ಹೊಣೆ ಹೊತ್ತುಕೊಳ್ಳುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಬಾಲ್ಕೋಟ್‌ನಲ್ಲಿರುವ ಪ್ರಧಾನಿಯ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನೇಪಾಳದ ನಾಲ್ಕನೇ ಅತಿದೊಡ್ಡ ರಾಷ್ಟ್ರೀಯ ಪಕ್ಷವಾದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಇಪ್ಪತ್ತೊಂದು ಸಂಸದರು ಮಂಗಳವಾರ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.

‘ಜೆನ್‌ ಝೀ’ ಬ್ಯಾನರ್ ಅಡಿಯಲ್ಲಿ, ರಾಜಧಾನಿ ಕಠ್ಮಂಡುವಿನ ಹಲವು ಭಾಗಗಳಲ್ಲಿ “ಕೆಪಿ ಚೋರ್, ದೇಶ್ ಛೋಡ್” (ಕೆಪಿ ಕಳ್ಳ, ದೇಶ ಬಿಟ್ಟು ತೊಲಗಿ) ಮತ್ತು ‘”ಭ್ರಷ್ಟ ನಾಯಕರ ವಿರುದ್ಧ ಕ್ರಮ ಕೈಗೊಳ್ಳಿ” ಮುಂತಾದ ಘೋಷಣೆಗಳನ್ನು ಪ್ರತಿಭಟನಾಕಾರರು ಕೂಗಿದ್ದಾರೆ.

ಭಕ್ತಪುರದ ಬಾಲ್ಕೋಟ್‌ನಲ್ಲಿರುವ ಪ್ರಧಾನಿ ಓಲಿ ಅವರ ನಿವಾಸಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. ಓಲಿ ಪ್ರಸ್ತುತ ಬಲ್ವತಾರ್‌ನಲ್ಲಿರುವ ಪ್ರಧಾನಿ ನಿವಾಸದಲ್ಲಿದ್ದಾರೆ ಎಂದು ವರದಿ ಹೇಳಿದೆ.

ಸಾಮಾಜಿಕ ಮಾಧ್ಯಮ ತಾಣಗಳ ಮೇಲಿನ ಸರ್ಕಾರದ ನಿಷೇಧವನ್ನು ಪ್ರತಿಭಟಿಸುತ್ತಿದ್ದ ಯುವಕರ ಮೇಲೆ ಪೊಲೀಸರು ಬಲಪ್ರಯೋಗ ನಡೆಸಿದ್ದ ಪರಿಣಾಮ ಸೋಮವಾರ 19 ಜನರು ಸಾವನ್ನಪ್ಪಿದ್ದಾರೆ ಮತ್ತು 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಸೋಮವಾರದಂದು ಮಾಜಿ ಗೃಹ ಸಚಿವ ರಮೇಶ್ ಲೇಖಕ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಪ್ರತಿಭಟನಾಕಾರರು ಅವರ ನಿವಾಸಕ್ಕೂ ಮಂಗಳವಾರ ಬೆಂಕಿ ಹಚ್ಚಿದ್ದಾರೆ. ಗೃಹ ಸಚಿವರ ನಿರ್ಗಮನ ಸಾಕಾಗುವುದಿಲ್ಲ ಎಂದು ಹೇಳಿದ ಪ್ರತಿಭಟನಾಕಾರರು ಪ್ರಧಾನಿ ಓಲಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದರು.

ಪ್ರಮುಖ ಆನ್‌ಲೈನ್ ಸುದ್ದಿ ಪೋರ್ಟಲ್‌ಗಳು ಸೋಮವಾರ ಕಠ್ಮಂಡುವಿನಲ್ಲಿ ನಡೆದ ಪೊಲೀಸ್ ದಮನ ಕಾರ್ಯಾಚರಣೆಯನ್ನು ತೀವ್ರವಾಗಿ ಟೀಕಿಸಿದ್ದು, ನೇಪಾಳದ ಇತ್ತೀಚಿನ ಇತಿಹಾಸದಲ್ಲಿ ಇದು ಅತ್ಯಂತ ಕರಾಳ ದಿನಗಳಲ್ಲಿ ಒಂದು ಎಂದು ಬಣ್ಣಿಸಿವೆ.

ಜನಪ್ರಿಯ ಸುದ್ದಿ ಪೋರ್ಟಲ್ Ukeraa.com ಸೆಪ್ಟೆಂಬರ್ 8ಅನ್ನು ‘ಕರಾಳ ದಿನ’ ಎಂದು ಬಣ್ಣಿಸಿತ್ತು. ನೇಪಾಳದ ಇತಿಹಾಸದಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ ಎಂದಿದ್ದ ಮಾಧ್ಯಮ ಸಂಸ್ಥೆ, ಪ್ರಧಾನಿ ಓಲಿ ಅವರ ರಾಜೀನಾಮೆಗೆ ಒತ್ತಾಯಿಸಿತ್ತು.

ಮತ್ತೊಂದು ಸುದ್ದಿ ಪೋರ್ಟಲ್, ರಾಟೋಪತಿ, ಸರ್ಕಾರವು ಪ್ರತಿಭಟನಾ ನಿರತ ಯುವಜನರು ಮತ್ತು ವಿದ್ಯಾರ್ಥಿಗಳ ಮೇಲೆ ವಿವೇಚನೆಯಿಲ್ಲದೆ ಗುಂಡು ಹಾರಿಸಿದೆ ಎಂದು ಆರೋಪಿಸಿದೆ. ಇದು ‘ಹೇಡಿತನ’ ಮತ್ತು ‘ಅತ್ಯಂತ ಶೋಚನೀಯ’ ಕ್ರಮ ಎಂದು ಬಣ್ಣಿಸಿದೆ.

ಯುವ ನೇಪಾಳಿಗಳು ನಡೆಸಿದ ಆಂದೋಲನವು ರಾಜಕೀಯ ಪ್ರೇರಿತವಲ್ಲ, ಬದಲಾಗಿ ಭ್ರಷ್ಟಾಚಾರ, ಸ್ವಜನಪಕ್ಷಪಾತ, ನಿರುದ್ಯೋಗ ಮತ್ತು ಬೆಳೆಯುತ್ತಿರುವ ಸಾಮಾಜಿಕ ಅವ್ಯವಸ್ಥೆ ಹತಾಶೆಯಿಂದ ಹೊರ ಹೊಮ್ಮಿದ ಆಕ್ರೋಶ ಎಂದು ಪೋರ್ಟಲ್ ಹೇಳಿದೆ.

ಮಂಗಳವಾರ ಕಠ್ಮಂಡು ಮತ್ತು ದೇಶದ ಇತರ ಭಾಗಗಳಲ್ಲಿ ಕರ್ಫ್ಯೂ ಆದೇಶಗಳ ಹೊರತಾಗಿಯೂ ಪ್ರತಿಭಟನೆಗಳು ಉಲ್ಬಣಗೊಂಡಿದ್ದವು. ಕಠ್ಮಂಡುವಿನ ಕಲಾಂಕಿ, ಕಾಲಿಮತಿ, ತಹಚಲ್ ಮತ್ತು ಬನೇಶ್ವರ್ ಹಾಗೂ ಲಲಿತಪುರ ಜಿಲ್ಲೆಯ ಚ್ಯಾಸಲ್, ಚಾಪಗೌ ಮತ್ತು ಥೆಚೊ ಪ್ರದೇಶಗಳಲ್ಲಿ ಬೃಹತ್ ಪ್ರತಿಭಟನೆಗಳು ವರದಿಯಾಗಿವೆ.

ಪ್ರತಿಭಟನಾಕಾರರು (ಹೆಚ್ಚಾಗಿ ವಿದ್ಯಾರ್ಥಿಗಳು) ಸಾರ್ವಜನಿಕ ಸಭೆಗಳ ಮೇಲಿನ ನಿರ್ಬಂಧಗಳನ್ನು ಧಿಕ್ಕರಿಸಿ “ವಿದ್ಯಾರ್ಥಿಗಳನ್ನು ಕೊಲ್ಲಬೇಡಿ” ಎಂಬ ಘೋಷಣೆಗಳನ್ನು ಕೂಗಿದ್ದಾರೆ.

ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ, ಕಲಾಂಕಿಯಲ್ಲಿ ಬೆಳಗಿನ ಜಾವದಿಂದಲೇ ಪ್ರತಿಭಟನಾಕಾರರು ರಸ್ತೆಗಳನ್ನು ತಡೆದು, ಟೈರ್‌ಗಳನ್ನು ಸುಟ್ಟು ಆಕ್ರೋಶ ಹೊರ ಹಾಕಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಪೊಲೀಸರು ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದರಿಂದ ನಾಲ್ವರು ಗಾಯಗೊಂಡಿದ್ದಾರೆ. ಲಲಿತಪುರ ಜಿಲ್ಲೆಯ ಸುನಕೋಠಿಯಲ್ಲಿರುವ ಸಂವಹನ ಸಚಿವ ಪೃಥ್ವಿ ಸುಬ್ಬ ಗುರುಂಗ್ ಅವರ ನಿವಾಸದ ಮೇಲೂ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗುರುಂಗ್ ಅವರು ಸಾಮಾಜಿಕ ಮಾಧ್ಯಮ ತಾಣಗಳ ಮೇಲೆ ನಿಷೇಧ ಹೇರಲು ಆದೇಶಿಸಿದ್ದರು.

ಪ್ರತಿಭಟನಾಕಾರರು ಲಲಿತ್‌ಪುರದ ಖುಮಾಲ್ತಾರ್‌ನಲ್ಲಿರುವ ಮಾಜಿ ಪ್ರಧಾನಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಅವರ ನಿವಾಸವನ್ನು ಧ್ವಂಸಗೊಳಿಸಿದ್ದಾರೆ. ಕಠ್ಮಂಡುವಿನ ಬುಧನೀಲಕಂಠದಲ್ಲಿರುವ ಮಾಜಿ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರ ಮನೆಯ ಮೇಲೂ ದಾಳಿ ನಡೆಸಲಾಗಿದೆ.

ಭ್ರಷ್ಟಾಚಾರದ ವಿರುದ್ಧ ಹೋರಾಟ ರೂಪಿಸಿದ್ದ ‘ಜೆನ್‌ ಝೀ’ ಗುಂಪು, ಮಂತ್ರಿಗಳು ಮತ್ತು ಇತರ ಪ್ರಭಾವಿ ವ್ಯಕ್ತಿಗಳ ಮಕ್ಕಳ ಐಶಾರಾಮಿ ಜೀವನಶೈಲಿ, ದುಂದುವೆಚ್ಚವನ್ನು ಬಹಿರಂಗಪಡಿಸಲು ರೆಡ್ಡಿಟ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸಿಕೊಂಡಿದ್ದರು.

ಭ್ರಷ್ಟಾಚಾರದಿಂದ ಬಂದ ಸಂಪತ್ತಿಗೆ ಹಣಕಾಸು ಒದಗಿಸುವ ಮೂಲಗಳನ್ನು ಪ್ರಶ್ನಿಸಿ ಅವರು ವಿಡಿಯೋಗಳು ಮತ್ತು ಫೋಟೋಗಳನ್ನು ಪೋಸ್ಟ್ ಮಾಡುತ್ತಿದ್ದರು. ಇದು ರಾಜಕೀಯ ನಾಯಕರಿಗೆ ಮುಜುಗರ ತರಿಸಿತ್ತು. ಈ ಕಾರಣಕ್ಕೆ ಸಾಮಾಜಿಕ ಮಾಧ್ಯಮಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ ಎಂದು ಹೇಳಲಾಗ್ತಿದೆ.

ಸರ್ಕಾರ ಫೇಸ್‌ಬುಕ್, ಎಕ್ಸ್ ಸೇರಿದಂತೆ 26 ಸಾಮಾಜಿಕ ಮಾಧ್ಯಮ ತಾಣಗಳು ಕಾನೂನು ಪ್ರಕಾರ ನೋಂದಾಯಿಸಲು ವಿಫಲವಾಗಿವೆ ಎಂಬ  ಕಾರಣ ನೀಡಿ ನಿಷೇಧಿಸಲು ಆದೇಶಿಸಿತ್ತು. ಆದರೆ, ಯುವಜನರ ಆಕ್ರೋಶ ಎದುರಿಸಲಾಗದೆ ಸೋಮವಾರ ತಡರಾತ್ರಿ ಆದೇಶವನ್ನು ವಾಪಸ್ ಪಡೆದಿದೆ. ಆದರೂ, ಪ್ರತಿಭಟನೆ ಮಂಗಳವಾರ ತೀವ್ರ ಸ್ವರೂಪ ಪಡೆದುಕೊಂಡಿದೆ.

ರಾಷ್ಟ್ರೀಯ ಲಾಂಛನ ವಿರೂಪ ಪ್ರಕರಣ: ಹಜರತ್ಬಲ್‌ನಲ್ಲಿ 30ಕ್ಕೂ ಹೆಚ್ಚು ಬಂಧನ; “ಕಾಶ್ಮೀರಿಗಳ ಹತ್ಯಾಕಾಂಡ” ಎಂದ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...