Homeಅಂತರಾಷ್ಟ್ರೀಯಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

- Advertisement -
- Advertisement -

ಕತಾರ್ ರಾಜಧಾನಿ ದೋಹಾದಲ್ಲಿ ಹಮಾಸ್ ನಾಯಕತ್ವದ ಮೇಲೆ ಇಸ್ರೇಲ್ ದಾಳಿ ನಡೆಸಿರುವುದಕ್ಕೆ ಜಾಗತಿಕವಾಗಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ದಾಳಿಯಲ್ಲಿ ಹಿರಿಯ ನಾಯಕ ಖಲೀಲ್ ಅಲ್-ಹಯ್ಯ ಅವರ ಮಗ ಸೇರಿದಂತೆ ತನ್ನ ಐವರು ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿದೆ. ಕತಾರ್ ಭದ್ರತಾ ಪಡೆಗಳ ಒಬ್ಬ ಸದಸ್ಯ ಕೂಡ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಕತಾರ್, ಇದು ಹೇಡಿತನದ ಕೃತ್ಯ ಅಮೆರಿಕದಿಂದ ದಾಳಿಯ ಬಗ್ಗೆ ಯಾವುದೇ ಪೂರ್ವ ಎಚ್ಚರಿಕೆ ಇರಲಿಲ್ಲ ಎಂದು ಹೇಳಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯು ಮಂಗಳವಾರ ದೋಹಾದಲ್ಲಿ ಹಮಾಸ್ ನಾಯಕರ ವಿರುದ್ಧ ಇಸ್ರೇಲ್ ಸೇನೆ ದಾಳಿ ನಡೆಸಿದೆ ಎಂದು ದೃಢಪಡಿಸಿದೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಮಾತುಕತೆಯಲ್ಲಿ ಪ್ರಮುಖ ಮಧ್ಯವರ್ತಿಯಾಗಿರುವ ಮತ್ತು ಈ ಪ್ರದೇಶದ ಅತಿದೊಡ್ಡ ಯುನೈಟೆಡ್ ಸ್ಟೇಟ್ಸ್ ಮಿಲಿಟರಿ ನೆಲೆಯಾದ ಅಲ್ ಉದೈದ್ ವಾಯುನೆಲೆಯನ್ನು ಹೊಂದಿರುವ ಕತಾರ್ ಮೇಲೆ ಇಸ್ರೇಲ್ ನಡೆಸಿದ ಮೊದಲ ದಾಳಿ ಇದಾಗಿದೆ.

ಇಸ್ರೇಲ್ ಕೃತ್ಯ ಕತಾರ್‌ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ‘ಸ್ಪಷ್ಟ ಉಲ್ಲಂಘನೆ’ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಖಂಡನೆ ವ್ಯಕ್ತಪಡಿಸಿದ್ದಾರೆ.

ಗಾಝಾ ಯುದ್ಧದಲ್ಲಿ ತೊಡಗಿಸಿಕೊಂಡಿರುವ ಎಲ್ಲಾ ಪಕ್ಷಗಳು ಶಾಶ್ವತ ಕದನ ವಿರಾಮವನ್ನು ಸಾಧಿಸುವತ್ತ ಕೆಲಸ ಮಾಡಬೇಕು, ಬದಲಾಗಿ ಗಾಝಾದ ಭವಿಷ್ಯವನ್ನು ನಾಶ ಮಾಡಬಾರದು ಎಂದು ಗುಟೆರೆಸ್ ಹೇಳಿದ್ದಾರೆ.

“ದುರದೃಷ್ಟವಶಾತ್ ಕತಾರ್ ರಾಜಧಾನಿ ದೋಹಾದ ಒಂದು ಭಾಗದಲ್ಲಿ ನೆಲೆಗೊಂಡಿದ್ದ” ಹಮಾಸ್ ಮೇಲೆ ಇಸ್ರೇಲ್ ದಾಳಿ ನಡೆಸುತ್ತಿದೆ ಎಂದು ಅಮೆರಿಕ ಮಿಲಿಟರಿಯಿಂದ ಟ್ರಂಪ್ ಆಡಳಿತಕ್ಕೆ ತಿಳಿಸಲಾಗಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೋಲಿನ್ ಲೀವಿಟ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಸಾರ್ವಭೌಮ ರಾಷ್ಟ್ರ, ಅಮೆರಿಕದ ಆಪ್ತ ಮಿತ್ರ ಹಾಗೂ ಶಾಂತಿ ಸ್ಥಾಪನೆಗಾಗಿ ನಮ್ಮೊಂದಿಗೆ ಕಠಿಣ ಪರಿಶ್ರಮಪಡುತ್ತಿರುವ, ಧೈರ್ಯದಿಂದ ಅಪಾಯಗಳನ್ನು ಎದುರಿಸುತ್ತಿರುವ ರಾಷ್ಟ್ರವಾದ ಕತಾರ್ ಒಳಗೆ ಏಕಪಕ್ಷೀಯವಾಗಿ ಬಾಂಬ್ ದಾಳಿ ನಡೆಸುವುದು ಅಮೆರಿಕ ಶಾಂತಿ ಸ್ಥಾಪನೆಯ ಗುರಿಯನ್ನು ಸಾಧಿಸಲು ಅಡ್ಡಿಯಾಗಲಿದೆ ಎಂದು ಕರೋಲಿನ್ ಲೀವಿಟ್ ಹೇಳಿದ್ದಾರೆ.

ಆದಾಗ್ಯೂ, ಗಾಝಾದ ಜನರ ದುಃಖದಿಂದ ಲಾಭ ಪಡೆದಿರುವ ಹಮಾಸ್ ಅನ್ನು ನಿರ್ಮೂಲನೆ ಮಾಡುವುದು ಯೋಗ್ಯ ಗುರಿಯಾಗಿದೆ ಎಂದಿದ್ದಾರೆ. 

ಸೌದಿ ಅರೇಬಿಯಾ ಕೂಡ ಇಸ್ರೇಲ್ ದಾಳಿಯನ್ನು ‘ಕ್ರೂರ ಆಕ್ರಮಣ’ ಎಂದಿದ್ದು, ಮಿತ್ರ ರಾಷ್ಟ್ರವಾದ ಕತಾರ್‌ನ ಸಾರ್ವಭೌಮತ್ವದ ಸ್ಪಷ್ಟ ಉಲ್ಲಂಘನೆ ಎಂದು ಹೇಳಿದೆ. ದಾಳಿಗೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಸೌದಿ ವಿದೇಶಾಂಗ ಸಚಿವಾಲಯ ‘ಕತಾರ್ ಜೊತೆ ಒಗ್ಗಟ್ಟು’ ಪ್ರದರ್ಶಿಸಿದೆ.

ಟರ್ಕಿ, ಕುವೈತ್, ಯುಎಇ, ಜೋರ್ಡಾನ್, ಇರಾನ್, ಇರಾಕ್, ಪ್ಯಾಲೆಸ್ತೀನ್, ಯೆಮನ್‌ನ ಹೌತಿ ಗುಂಪು, ಮಾಲ್ಡೀವ್ಸ್, ಪಾಕಿಸ್ತಾನ, ಲೆಬನಾನ್, ಯುನೈಟೆಡ್ ಕಿಂಗ್‌ಡಂ, ಫ್ರಾನ್ಸ್‌, ಹಮಾಸ್, ಲೆಬನಾನ್, ಮೊರಾಕ್ಕೋ, ಸಿರಿಯಾ, ಸುಡಾನ್‌, ಈಜಿಪ್ಟ್, ಗಲ್ಫ್ ಕೋ ಆಪರೇಷನ್ ಕೌನ್ಸಿಲ್, ಅಲ್‌ಜೀರಿಯಾ, ಕಝಾಕಿಸ್ತಾನ್, ಸ್ಪೇನ್, ಲಿಬಿಯಾ, ಮಾರ್ಷಿಯಸ್, ಒಮಾನ್, ಇಟಲಿ, ಜರ್ಮನಿ, ಯುರೋಪ್ ಒಕ್ಕೂಟ, ಭಾರತ ಸೇರಿದಂತೆ ಬಹುತೇಕ ಎಲ್ಲಾ ಪ್ರಮುಖ ರಾಷ್ಟ್ರಗಳು ಮತ್ತು ಗುಂಪುಗಳು ಇಸ್ರೇಲ್ ದಾಳಿಯನ್ನು ಖಂಡಿಸಿವೆ.

ನೇಪಾಳದ ನೆಪೋ ಕಿಡ್ಸ್ vs ಯುವ ಶಕ್ತಿ: ವ್ಯವಸ್ಥೆ ಬದಲಾವಣೆಯ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...