Homeಅಂತರಾಷ್ಟ್ರೀಯಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

- Advertisement -
- Advertisement -

ಕತಾರ್ ರಾಜಧಾನಿ ದೋಹಾದಲ್ಲಿ ಹಮಾಸ್ ನಾಯಕತ್ವದ ಮೇಲೆ ಇಸ್ರೇಲ್ ದಾಳಿ ನಡೆಸಿರುವುದಕ್ಕೆ ಜಾಗತಿಕವಾಗಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ದಾಳಿಯಲ್ಲಿ ಹಿರಿಯ ನಾಯಕ ಖಲೀಲ್ ಅಲ್-ಹಯ್ಯ ಅವರ ಮಗ ಸೇರಿದಂತೆ ತನ್ನ ಐವರು ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿದೆ. ಕತಾರ್ ಭದ್ರತಾ ಪಡೆಗಳ ಒಬ್ಬ ಸದಸ್ಯ ಕೂಡ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಕತಾರ್, ಇದು ಹೇಡಿತನದ ಕೃತ್ಯ ಅಮೆರಿಕದಿಂದ ದಾಳಿಯ ಬಗ್ಗೆ ಯಾವುದೇ ಪೂರ್ವ ಎಚ್ಚರಿಕೆ ಇರಲಿಲ್ಲ ಎಂದು ಹೇಳಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯು ಮಂಗಳವಾರ ದೋಹಾದಲ್ಲಿ ಹಮಾಸ್ ನಾಯಕರ ವಿರುದ್ಧ ಇಸ್ರೇಲ್ ಸೇನೆ ದಾಳಿ ನಡೆಸಿದೆ ಎಂದು ದೃಢಪಡಿಸಿದೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಮಾತುಕತೆಯಲ್ಲಿ ಪ್ರಮುಖ ಮಧ್ಯವರ್ತಿಯಾಗಿರುವ ಮತ್ತು ಈ ಪ್ರದೇಶದ ಅತಿದೊಡ್ಡ ಯುನೈಟೆಡ್ ಸ್ಟೇಟ್ಸ್ ಮಿಲಿಟರಿ ನೆಲೆಯಾದ ಅಲ್ ಉದೈದ್ ವಾಯುನೆಲೆಯನ್ನು ಹೊಂದಿರುವ ಕತಾರ್ ಮೇಲೆ ಇಸ್ರೇಲ್ ನಡೆಸಿದ ಮೊದಲ ದಾಳಿ ಇದಾಗಿದೆ.

ಇಸ್ರೇಲ್ ಕೃತ್ಯ ಕತಾರ್‌ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ‘ಸ್ಪಷ್ಟ ಉಲ್ಲಂಘನೆ’ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಖಂಡನೆ ವ್ಯಕ್ತಪಡಿಸಿದ್ದಾರೆ.

ಗಾಝಾ ಯುದ್ಧದಲ್ಲಿ ತೊಡಗಿಸಿಕೊಂಡಿರುವ ಎಲ್ಲಾ ಪಕ್ಷಗಳು ಶಾಶ್ವತ ಕದನ ವಿರಾಮವನ್ನು ಸಾಧಿಸುವತ್ತ ಕೆಲಸ ಮಾಡಬೇಕು, ಬದಲಾಗಿ ಗಾಝಾದ ಭವಿಷ್ಯವನ್ನು ನಾಶ ಮಾಡಬಾರದು ಎಂದು ಗುಟೆರೆಸ್ ಹೇಳಿದ್ದಾರೆ.

“ದುರದೃಷ್ಟವಶಾತ್ ಕತಾರ್ ರಾಜಧಾನಿ ದೋಹಾದ ಒಂದು ಭಾಗದಲ್ಲಿ ನೆಲೆಗೊಂಡಿದ್ದ” ಹಮಾಸ್ ಮೇಲೆ ಇಸ್ರೇಲ್ ದಾಳಿ ನಡೆಸುತ್ತಿದೆ ಎಂದು ಅಮೆರಿಕ ಮಿಲಿಟರಿಯಿಂದ ಟ್ರಂಪ್ ಆಡಳಿತಕ್ಕೆ ತಿಳಿಸಲಾಗಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೋಲಿನ್ ಲೀವಿಟ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಸಾರ್ವಭೌಮ ರಾಷ್ಟ್ರ, ಅಮೆರಿಕದ ಆಪ್ತ ಮಿತ್ರ ಹಾಗೂ ಶಾಂತಿ ಸ್ಥಾಪನೆಗಾಗಿ ನಮ್ಮೊಂದಿಗೆ ಕಠಿಣ ಪರಿಶ್ರಮಪಡುತ್ತಿರುವ, ಧೈರ್ಯದಿಂದ ಅಪಾಯಗಳನ್ನು ಎದುರಿಸುತ್ತಿರುವ ರಾಷ್ಟ್ರವಾದ ಕತಾರ್ ಒಳಗೆ ಏಕಪಕ್ಷೀಯವಾಗಿ ಬಾಂಬ್ ದಾಳಿ ನಡೆಸುವುದು ಅಮೆರಿಕ ಶಾಂತಿ ಸ್ಥಾಪನೆಯ ಗುರಿಯನ್ನು ಸಾಧಿಸಲು ಅಡ್ಡಿಯಾಗಲಿದೆ ಎಂದು ಕರೋಲಿನ್ ಲೀವಿಟ್ ಹೇಳಿದ್ದಾರೆ.

ಆದಾಗ್ಯೂ, ಗಾಝಾದ ಜನರ ದುಃಖದಿಂದ ಲಾಭ ಪಡೆದಿರುವ ಹಮಾಸ್ ಅನ್ನು ನಿರ್ಮೂಲನೆ ಮಾಡುವುದು ಯೋಗ್ಯ ಗುರಿಯಾಗಿದೆ ಎಂದಿದ್ದಾರೆ. 

ಸೌದಿ ಅರೇಬಿಯಾ ಕೂಡ ಇಸ್ರೇಲ್ ದಾಳಿಯನ್ನು ‘ಕ್ರೂರ ಆಕ್ರಮಣ’ ಎಂದಿದ್ದು, ಮಿತ್ರ ರಾಷ್ಟ್ರವಾದ ಕತಾರ್‌ನ ಸಾರ್ವಭೌಮತ್ವದ ಸ್ಪಷ್ಟ ಉಲ್ಲಂಘನೆ ಎಂದು ಹೇಳಿದೆ. ದಾಳಿಗೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಸೌದಿ ವಿದೇಶಾಂಗ ಸಚಿವಾಲಯ ‘ಕತಾರ್ ಜೊತೆ ಒಗ್ಗಟ್ಟು’ ಪ್ರದರ್ಶಿಸಿದೆ.

ಟರ್ಕಿ, ಕುವೈತ್, ಯುಎಇ, ಜೋರ್ಡಾನ್, ಇರಾನ್, ಇರಾಕ್, ಪ್ಯಾಲೆಸ್ತೀನ್, ಯೆಮನ್‌ನ ಹೌತಿ ಗುಂಪು, ಮಾಲ್ಡೀವ್ಸ್, ಪಾಕಿಸ್ತಾನ, ಲೆಬನಾನ್, ಯುನೈಟೆಡ್ ಕಿಂಗ್‌ಡಂ, ಫ್ರಾನ್ಸ್‌, ಹಮಾಸ್, ಲೆಬನಾನ್, ಮೊರಾಕ್ಕೋ, ಸಿರಿಯಾ, ಸುಡಾನ್‌, ಈಜಿಪ್ಟ್, ಗಲ್ಫ್ ಕೋ ಆಪರೇಷನ್ ಕೌನ್ಸಿಲ್, ಅಲ್‌ಜೀರಿಯಾ, ಕಝಾಕಿಸ್ತಾನ್, ಸ್ಪೇನ್, ಲಿಬಿಯಾ, ಮಾರ್ಷಿಯಸ್, ಒಮಾನ್, ಇಟಲಿ, ಜರ್ಮನಿ, ಯುರೋಪ್ ಒಕ್ಕೂಟ, ಭಾರತ ಸೇರಿದಂತೆ ಬಹುತೇಕ ಎಲ್ಲಾ ಪ್ರಮುಖ ರಾಷ್ಟ್ರಗಳು ಮತ್ತು ಗುಂಪುಗಳು ಇಸ್ರೇಲ್ ದಾಳಿಯನ್ನು ಖಂಡಿಸಿವೆ.

ನೇಪಾಳದ ನೆಪೋ ಕಿಡ್ಸ್ vs ಯುವ ಶಕ್ತಿ: ವ್ಯವಸ್ಥೆ ಬದಲಾವಣೆಯ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...