Homeಕರ್ನಾಟಕಡಿಜಿಟಲ್ ಅರೆಸ್ಟ್: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್‌ಗೆ ರೂ. 31 ಲಕ್ಷ ವಂಚನೆ

ಡಿಜಿಟಲ್ ಅರೆಸ್ಟ್: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್‌ಗೆ ರೂ. 31 ಲಕ್ಷ ವಂಚನೆ

- Advertisement -
- Advertisement -

ಬೀದರ್ ಜಿಲ್ಲೆ ಔರಾದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರನ್ನು ಸುಮಾರು ಏಳು ದಿನಗಳ ಕಾಲ ಡಿಜಿಟಲ್ ಅರೆಸ್ಟ್‌ನಲ್ಲಿಟ್ಟು, ಬ್ಯಾಂಕ್ ಖಾತೆಯಿಂದ 30.99 ಲಕ್ಷ ರೂಪಾಯಿ ಲಪಟಾಯಿಸಿರುವ ಬಗ್ಗೆ ವರದಿಯಾಗಿದೆ.

ಈ ಸಂಬಂಧ ಗುಂಡಪ್ಪ ಅವರು ಮಂಗಳವಾರ (ಸೆ.9) ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆಗಸ್ಟ್ 12ರಂದು ತಮ್ಮ ಬ್ಯಾಂಕ್ ಖಾತೆಯಿಂದ 30.99 ಲಕ್ಷ ರೂಪಾಯಿ ಅಕ್ರಮವಾಗಿ ದೋಚಲಾಗಿದೆ. ಇದರಲ್ಲಿ ಮುಂಬೈ ಮೂಲದ ಸಂದೀಪ್ ಕುಮಾರ್ ಹಾಗೂ ನೀರಜ್ ಕುಮಾರ್ ಅವರ ಕೈವಾಡವಿದ್ದು, ಅವರ ವಿರುದ್ಧ ತನಿಖೆ ನಡೆಸುವಂತೆ ಮನವಿ ಮಾಡಿದ್ಧಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದ ಕಥೆ ಕಟ್ಟಿ ಗುಂಡಪ್ಪ ಅವರನ್ನು ಹೆದರಿಸಿದ ಸೈಬರ್ ವಂಚಕರು, ನಕಲಿ ಅಧಿಕಾರಿಗಳು, ನಕಲಿ ನ್ಯಾಯಾಧೀಶ, ನಕಲಿ ನ್ಯಾಯಾಲಯ ಹಾಗೂ ನಕಲಿ ಪೊಲೀಸ್ ಠಾಣೆಗಳ ಮೂಲಕ ವಂಚನೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಆಗಸ್ಟ್ 12ರಂದು ಅಪರಿಚಿತ ವ್ಯಕ್ತಿಯೊಬ್ಬ ಗುಂಡಪ್ಪ ಅವರಿಗೆ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ಜೆಟ್ ಏರ್‌ವೇಸ್‌ನ ಮಾಲೀಕ ನರೇಶ್ ಗೋಯಿಲ್ ಅವರಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನೀವು ಭಾಗಿಯಾಗಿದ್ದಿರಿ. ಜಪ್ತಿ ಮಾಡಲಾದ ವಸ್ತುಗಳಲ್ಲಿ ನಿಮ್ಮ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಗಳು ಸಿಕ್ಕಿವೆ. ಸಾಕಷ್ಟು ಅವ್ಯವಹಾರ ನಡೆಸಿದ್ದೀರಿ ಎಂದು ಹೇಳಿ ಡಿಜಿಟಲ್ ಅರೆಸ್ಟ್ ಮಾಡಿ ನಕಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದ. ಬಳಿಕ, ಹಂತ ಹಂತವಾಗಿ ಹಣ ವಂಚಿಸಲಾಗಿದೆ ಎಂದು ಗುಂಡಪ್ಪ ದೂರಿನಲ್ಲಿ ತಿಳಿಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಆಗಸ್ಟ್ 12 ರಂದು ಸಂಜೆ 6 ಗಂಟೆ ಸುಮಾರಿಗೆ 8464988135 ಮೊಬೈಲ್ ಸಂಖ್ಯೆಯಿಂದ ಗುಂಡಪ್ಪ ಅವರಿಗೆ ಮೊದಲ ಕರೆ ಬಂದಿದೆ. ಕರೆ ಮಾಡಿದಾತ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ಗುಂಡಪ್ಪ ಅವರನ್ನು ಡಿಜಿಟಲ್ ಅರೆಸ್ಟ್ ಮಾಡಿದ್ದಾನೆ.

ನಂತರ,ಗುಂಡಪ್ಪ ಅವರನ್ನು ಹೆದರಿಸಿ ಬ್ಯಾಂಕ್ ಖಾತೆಯದ್ದೂ ಸೇರಿದಂತೆ ಅವರಿಂದ ವೈಯಕ್ತಿಕ ಮಾಹಿತಿಗಳನ್ನು ಪಡೆದುಕೊಂಡಿದ್ದಾನೆ.

ನಂತರ ಆ ಕರೆಯನ್ನು ಉಪ ಪೊಲೀಸ್ ಆಯುಕ್ತ ನೀರಜ್ ಕುಮಾರ್ ಎನ್ನಲಾದ ಮತ್ತೊಬ್ಬ ವ್ಯಕ್ತಿಗೆ ವರ್ಗಾವಣೆ” ಮಾಡಿದ್ದಾನೆ. ಗುಂಡಪ್ಪ ಅವರು ವಂಚನೆ ತಿಳಿಯದೆ ತನಿಖೆಯಿಂದ ವಿನಾಯಿತಿ ಕೋರಿದಾಗ, ಅವರ ವಯಸ್ಸು ಮತ್ತು ಹಿನ್ನೆಲೆಯ ಕಾರಣ, ತನಿಖೆಯನ್ನು ವರ್ಚುವಲ್ ಮೂಲಕ ನಡೆಸಲಾಗುವುದು ಮತ್ತು ಅವರನ್ನು ‘ಡಿಜಿಟಲ್ ಬಂಧನ’ಕ್ಕೆ ಒಳಪಡಿಸಲಾಗುವುದು ಎಂದು ವಂಚಕರು ಹೇಳಿದ್ದಾರೆ.

ವಂಚಕರು ವಾಟ್ಸಾಪ್ ಕರೆಗಳ ಮೂಲಕ ಗುಂಡಪ್ಪ ಅವರ ಮೇಲೆ ನಿಗಾ ಇಟ್ಟಿದ್ದರು. ಪ್ರಕರಣವು “ಅತ್ಯಂತ ಸೂಕ್ಷ್ಮ” ವಾಗಿರುವುದರಿಂದ ಯಾರೊಂದಿಗೂ ಮಾತನಾಡದಂತೆ ಎಚ್ಚರಿಕೆ ನೀಡಿದ್ದರು. ಸಂಭಾಷಣೆಯ ಸಮಯದಲ್ಲಿ, ವಂಚಕರು ನಕಲಿ ಐಡಿ ಕಾರ್ಡ್‌ಗಳು ಮತ್ತು ಬಂಧನ ವಾರಂಟ್ ತೋರಿಸಿದ್ದರು. ಅಲ್ಲದೆ, ನಕಲಿ ಪೊಲೀಸ್ ಠಾಣೆಯ ಸೆಟಪ್‌ ಕೂಡ ತೋರಿಸಿದ್ದರು ಎಂದು ವರದಿಯಾಗಿದೆ.

ಆಗಸ್ಟ್ 13ರಂದು, ಗುಂಡಪ್ಪ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರಂತೆ ನಟಿಸಿದ್ದ ವ್ಯಕ್ತಿಯ ಮುಂದೆ ಹಾಜರುಪಡಿಸಿದ್ದರು. ಸಂಕ್ಷಿಪ್ತ ವಿಚಾರಣೆಯ ನಂತರ, ನಕಲಿ ನ್ಯಾಯಾಧೀಶರು ತಾನು ನಿರಪರಾಧಿ ಎಂಬ ಲಿಖಿತ ಪತ್ರವನ್ನು ಸಲ್ಲಿಸಲು ಮತ್ತು ಅಧಿಕಾರಿಗಳು ಒದಗಿಸಿದ ಬ್ಯಾಂಕ್ ಖಾತೆಗೆ ಆರ್‌ಟಿಜೆಎಸ್‌ ಮೂಲಕ 10.99 ಲಕ್ಷ ರೂ.ಗಳನ್ನು ವರ್ಗಾಯಿಸಲು ನಿರ್ದೇಶಿಸಿದ್ದರು.

ಆಗಸ್ಟ್ 14ರಿಂದ, ವಂಚಕರು ತಮ್ಮನ್ನು ನೀರಜ್ ಕುಮಾರ್ ಮತ್ತು ಸಂದೀಪ್ ಕುಮಾರ್ ಎಂದು ಪರಿಚಯಿಸಿಕೊಂಡು ದೈನಂದಿನ ವಿಚಾರಣೆ ಮುಂದುವರೆಸಿದ್ದರು. ಗುಂಡಪ್ಪ ಅವರ ಕುಟುಂಬ ಸದಸ್ಯರು, ಅವರ ಬ್ಯಾಂಕ್ ಖಾತೆಗಳು ಮತ್ತು ಇತರ ವೈಯಕ್ತಿಕ ವಿವರಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿದ್ದರು. ನಾಲ್ಕು ದಿನಗಳ ನಂತರ, ಅವರನ್ನು ಮತ್ತೆ ನಕಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅವರ ಖಾತೆಗಳು ಮತ್ತು ಆಸ್ತಿಗಳನ್ನು ‘ಪರಿಶೀಲಿಸಲು’ ಸಾಧ್ಯವಾಗುವಂತೆ ಇನ್ನೂ 20 ಲಕ್ಷ ರೂ.ಗಳನ್ನು ಠೇವಣಿ ಇಡುವಂತೆ ಆದೇಶಿಸಿದ್ದರು. ಗುಂಡಪ್ಪ ಅವರು ಆಗಸ್ಟ್ 18 ರಂದು ಹಣವನ್ನು ವರ್ಗಾಯಿಸಿದ್ದರು.

ಇದಾಗಿ, ಎರಡು ದಿನಗಳ ತಾನು ವಂಚನೆಗೊಳಗಾಗಿದ್ದೇನೆ ಎಂದು ಅರಿತುಕೊಂಡ ಗುಂಡಪ್ಪ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ. ಅದಕ್ಕೂ ಮೊದಲು ತಮ್ಮ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಸೈಬರ್ ಅಪರಾಧ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ವಂಚನೆ ಮತ್ತು ಸೋಗು ಹಾಕುವಿಕೆಯ ಪ್ರಕರಣವನ್ನು ದಾಖಲಿಸಿದ್ದಾರೆ.

Explained : ಏನಿದು ‘ಡಿಜಿಟಲ್ ಅರೆಸ್ಟ್’ ವಂಚನೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...