HomeUncategorizedಪೌರತ್ವ ಮಸೂದೆ: ಗೃಹಮಂತ್ರಿ ಅಮಿತ್ ಶಾಗೆ ಕಾದಿದೆಯಾ ಅಮೆರಿಕಾದ ಬಹಿಷ್ಕಾರ!?

ಪೌರತ್ವ ಮಸೂದೆ: ಗೃಹಮಂತ್ರಿ ಅಮಿತ್ ಶಾಗೆ ಕಾದಿದೆಯಾ ಅಮೆರಿಕಾದ ಬಹಿಷ್ಕಾರ!?

- Advertisement -
- Advertisement -

ಬಹುವಿವಾದಿತ ಪೌರತ್ವ ತಿದ್ದುಪಡಿ ಮಸೂದೆಗೆ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅನುಮೋದನೆ ಲಭಿಸಿ, ರಾಷ್ಟ್ರಪತಿಗಳ ಅಂಕಿತವೂ ಬೀಳುತ್ತಿದ್ದಂತೆ ಜಾಗತಿಕ ಮಟ್ಟದಲ್ಲಿ ಮೋದಿ ಸರ್ಕಾರ ಹಲವು ದೇಶಗಳ ರಾಜತಾಂತ್ರಿಕ ಒತ್ತಡಕ್ಕೆ ಸಿಲುಕುತ್ತಿದೆ. ಮುಖ್ಯವಾಗಿ ಅಮೆರಿಕಾ ಸಂಸತ್ ಸದಸ್ಯರು ಭಾರತ ಸರ್ಕಾರದ ಪೌರತ್ವ ತಿದ್ದುಪಡಿಯನ್ನು ತೀವ್ರವಾಗಿ ಖಂಡಿಸಿರುವುದು ಮೋದಿ ಸರ್ಕಾರವನ್ನು ಕಂಗೆಡಿಸಿರುವಂತೆ ಕಾಣುತ್ತಿದೆ. ಹಾಗಾಗಿ ಅಲ್ಲಿನ ಸಂಸದರಿಗೆ ನೂತನ ಮಸೂದೆಯ ಬಗ್ಗೆ ಮನವರಿಕೆ ಮಾಡಿಕೊಡಲು ಡಿಸೆಂಬರ್ 18ರಂದು ವಿದೇಶಾಂಗ ಸಚಿವ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಾಷಿಂಗ್ಟನ್‍ಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸ್ವತಃ ಭಾರತ ವಿದೇಶಾಂಗ ಸಚಿವಾಲಯವೇ ತನ್ನ ಹೇಳಿಕೆಯೊಂದರಲ್ಲಿ, ಪೌರತ್ವ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಅಮೆರಿಕಾ ಸಂಸತ್ತಿನ ವಿದೇಶಾಂಗ ವ್ಯವಹಾರ ಸಮಿತಿಯು, “ಪೌರತ್ವ ನಿರ್ಧರಣೆಗೆ ಧಾರ್ಮಿಕ ಮಾನದಂಡವನ್ನು ಬಳಸುವ” ಯಾವುದೇ ಪ್ರಯತ್ನವು ಭಾರತೀಯ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲಿದೆ ಎಂದು ಉಲ್ಲೇಖಿಸಿರುವುದು ನಮ್ಮ ಗಮನಕ್ಕೆ ಬಂದಿದೆ’ ಎಂದು ತಿಳಿಸಿದೆ.

ಮಸೂದೆ ತಿದ್ದುಪಡಿಗೆ ರಾಜ್ಯಸಭೆಯಲ್ಲಿ ಅನುಮೋದನೆ ದೊರೆಯುತ್ತಿದ್ದಂತೆಯೇ ಅಮೆರಿಕಾ ಸಂಸತ್ ಸದಸ್ಯರಾದ ಆಂಡ್ರೆ ಕಾರ್ಸನ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಪೌರತ್ವ ತಿದ್ದುಪಡಿಯನ್ನು `ಕರಾಳ’ ಕಾಯ್ದೆ ಎಂದು ಕರೆದಿದ್ದ ಅವರು, ಈ ಪ್ರಯತ್ನದಿಂದಾಗಿ `ಭಾರತದಲ್ಲಿ ಮುಸ್ಲಿಮರನ್ನು ಎರಡನೇ ದರ್ಜೆ ನಾಗರಿಕರನ್ನಾಗಿಸುವ ಹುನ್ನಾರ ಅಡಗಿದೆ’ ಎಂದಿದ್ದರು.

ಇದಕ್ಕೂ ಮುನ್ನ, ಲೋಕಸಭೆಯಲ್ಲಿ ಮಸೂದೆಗೆ ಅಂಗೀಕಾರ ದೊರೆಯುತ್ತಿದ್ದಂತೆಯೇ ಅಮೆರಿಕಾದ ಅರೆಸರ್ಕಾರಿ ಸ್ವಾಯತ್ತ ಸಂಸ್ಥೆಯಾದ `ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ’ವು ಮೋದಿ ಸರ್ಕಾರದ ಕ್ರಮವನ್ನು ಕಟುವಾಗಿ ಖಂಡಿಸಿ, “ಅಪ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನಗಳಿಂದ ವಲಸೆ ಬರುವ ನಿರ್ಗತಿಕರಲ್ಲಿ ಮುಸ್ಲಿಮರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪೌರತ್ವ ನೀಡುವ ಕೋಮು ಭಾವನೆಯ ಈ ಮಸೂದೆಯನ್ನು ಕಾಯ್ದೆಯಾಗಿ ಜಾರಿಗೆ ತಂದಿದ್ದೇ ಆದಲ್ಲಿ ಗೃಹಮಂತ್ರಿ ಅಮಿತ್ ಶಾ ಹಾಗೂ ಇತರೆ ನಾಯಕರ ಮೇಲೆ ಅಮೆರಿಕಾ ಸರ್ಕಾರ ನಿರ್ಬಂಧ ಹೇರಬೇಕು” ಎಂದು ಟ್ರಂಪ್ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಕೂಡಲೇ ಎಚ್ಚೆತ್ತುಕೊಂಡಿದ್ದ ಭಾರತೀಯ ವಿದೇಶಾಂಗ ಸಚಿವಾಲಯ ಅಮೆರಿಕಾ ಸಂಸತ್ ಸದಸ್ಯರ ಜೊತೆ ಮಾತುಕತೆಗೆ ಮುಂದಾಗಿತ್ತು.

ಆದಾಗ್ಯೂ ಅಮೆರಿಕಾ ಸಂಸತ್ ಸದಸ್ಯರು ಕಾಯ್ದೆಯನ್ನು ಸಂಸತ್ತಿನಲ್ಲೇ ಟೀಕಿಸುತ್ತಿರುವುದರಿಂದ ಆ ಸರ್ಕಾರ ಭಾರತದ ಮೇಲೆ ಕಠಿಣ ಕ್ರಮಕ್ಕೆ ಮುಂದಾಗುವ ಸಾಧ್ಯತೆಯನ್ನು ಮನಗಂಡು ಸ್ವತಃ ವಿದೇಶಾಂಗ ಸಚಿವ ಹಾಗೂ ರಕ್ಷಣಾ ಸಚಿವರು ತುರ್ತು ಅಮೆರಿಕಾ ಭೇಟಿಗೆ ಮುಂದಾಗಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಅಂದಹಾಗೆ, ಕಾಶ್ಮೀರದಲ್ಲಿ 370 ವಿಧಿಯನ್ನು ರದ್ದು ಮಾಡಿದ ಸಂದರ್ಭದಲ್ಲಿ ಭಾರತ ಸರ್ಕಾರದ ಕ್ರಮವನ್ನು ಟೀಕಿಸಿ ಅಮೆರಿಕಾ ಸಂಸತ್ತಿನಲ್ಲಿ ಖಂಡನಾ ನಿರ್ಣಯವೊಂದನ್ನು ಮಂಡಿಸಲಾಗಿತ್ತು. ಹಲವು ದಶಕಗಳ ಕಾಶ್ಮೀರ ವಿವಾದದ ಇತಿಹಾಸದಲ್ಲಿ ಅಮೆರಿಕಾ ಸಂಸತ್ತು ಭಾರತವನ್ನು ಖಂಡಿಸಿ ನಿರ್ಣಯ ಮಂಡಿಸಿದ್ದು ಇದೇ ಮೊದಲು. ಈಗ ಪೌರತ್ವ ಮಸೂದೆಗೂ ಅಮೆರಿಕಾ ಸಂಸತ್ತು ಅಷ್ಟೇ ಟೀಕಾತ್ಮಕವಾಗಿ ಪ್ರತಿಕ್ರಿಯಿಸುತ್ತಿರುವುದು ಮೋದಿ ಸರ್ಕಾರವನ್ನು ರಾಜತಾಂತ್ರಿಕ ಒತ್ತಡಕ್ಕೆ ಸಿಲುಕಿಸಿದೆ.

ಇತ್ತ ಮಸೂದೆಯನ್ನು ಮಂಡಿಸುತ್ತ ಲೋಕಸಭೆಯಲ್ಲಿ ಗೃಹಮಂತ್ರಿ ಅಮಿತ್ ಶಾ “ಪಾಕಿಸ್ತಾನ, ಅಪ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ ದೌರ್ಜನ್ಯಕ್ಕೆ ತುತ್ತಾಗಿ ನಿರ್ವಸತಿಗರಾಗಿ ಬರುವ ವಲಸಿಗರಿಗೆ ಈ ಕಾಯ್ದೆ ಆಶ್ರಯ ಒದಗಿಸಲಿದೆ” ಎಂದು ಹೇಳಿದ್ದ ಹೇಳಿಕೆಗೆ ಅಪ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ಸರ್ಕಾರಗಳು ಅಸಮಾಧಾನ ವ್ಯಕ್ತಪಡಿಸಿವೆ. ಇವೆರಡೂ ಇತ್ತೀಚಿನ ದಿನಗಳಲ್ಲಿ ಭಾರತದ ಮಿತ್ರರಾಷ್ಟ್ರಗಳ ಸಾಲಿಗೆ ಸೇರ್ಪಡೆಯಾಗಿದ್ದವು.

ಇಂಡಿಯಾ ಟುಡೆ ಟೀವಿ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಅಪ್ಘಾನಿಸ್ತಾನದ ರಾಯಭಾರಿ ತಹೀರ್ ಖಾದ್ರಿಯವರು “ಅಪ್ಘಾನಿಸ್ತಾನವನ್ನು ಪಾಕಿಸ್ತಾನದೊಂದಿಗೆ ಹೋಲಿಕೆ ಮಾಡಿರೋದು ಸರಿಯಲ್ಲ. ಘನಿಯವರ ಸರ್ಕಾರವು ಅಪ್ಘಾನಿಸ್ತಾನದ ಅಲ್ಪಸಂಖ್ಯಾತರ ಪ್ರಾತಿನಿಧಿತ್ವ ಮತ್ತು ಹಕ್ಕುಗಳ ರಕ್ಷಣೆಗೆ ಪೂರ್ಣಪ್ರಮಾಣದಲ್ಲಿ ಶ್ರಮಿಸುತ್ತಿದೆ” ಎಂದಿದ್ದಾರೆ. ಇನ್ನು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎಕೆ ಅಬ್ದುಲ್ ಮೊಮಿನ್ ಅವರು ಗುರುವಾರ ನವದೆಹಲಿಗೆ ನೀಡಬೇಕಿದ್ದ ಭೇಟಿಯನ್ನು ಕೊನೇ ಕ್ಷಣದಲ್ಲಿ ರದ್ದು ಪಡಿಸಿರುವುದು ಭಾರತವು ಬಾಂಗ್ಲಾದೇಶದ ಮೇಲೆ ಅಲ್ಪಸಂಖ್ಯಾತರಿಗೆ ಕಿರುಕುಳು ನೀಡುತ್ತಿರುವ ಆರೋಪ ಹೊರಿಸಿದ ಕಾರಣಕ್ಕೆ ಎನ್ನಲಾಗುತ್ತಿದೆ.

ಅತ್ತ, ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಅಸ್ಸಾಂನಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವುದರಿಂದ ಜಪಾನ್ ಪ್ರಧಾನಿ ಶಿಂಜೋ ಅಬೆಯವರು ಕೂಡಾ ಭಾರತದ ಪ್ರವಾಸವನ್ನು ಮುಂದೂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...