Homeಮುಖಪುಟಉಪರಾಷ್ಟ್ರಪತಿ ಚುನಾವಣೆಯಲ್ಲೂ ಮತಗಳ್ಳತನ: ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖ್ಯ ಸಚೇತಕ ಮಾಣಿಕಂ ಟ್ಯಾಗೋರ್ ಆರೋಪ!

ಉಪರಾಷ್ಟ್ರಪತಿ ಚುನಾವಣೆಯಲ್ಲೂ ಮತಗಳ್ಳತನ: ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖ್ಯ ಸಚೇತಕ ಮಾಣಿಕಂ ಟ್ಯಾಗೋರ್ ಆರೋಪ!

- Advertisement -
- Advertisement -

ಉಪರಾಷ್ಟ್ರಪತಿ ಚುನಾವಣೆಯಲ್ಲೂ ಬಿಜೆಪಿ ‘ಮತಗಳ್ಳತನ’ ಮಾಡಿದೆ ಎಂದು ಕಾಂಗ್ರೆಸ್ ಸಂಸದ, ಲೋಕಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕರಾಗಿರುವ ಮಾಣಿಕಂ ಟ್ಯಾಗೋರ್ ಆರೋಪಿಸಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡ ಮತದಾನದ ಊಹಾಪೋಹಗಳು ಹರಡಿದೆ. ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಎರಡೂ ಸದನಗಳಲ್ಲಿರುವ ತನ್ನ ಸಾಮೂಹಿಕ ಸಾಮರ್ಥ್ಯಕ್ಕಿಂತ ಕಡಿಮೆ ಮತ ಪಡೆಯುವಂತಾಗಲು ಇಂಡಿಯಾ ಮೈತ್ರಿಕೂಟದ ಅಂಗಪಕ್ಷಗಳಾದ ಶಿವಸೇನೆ (ಉದ್ಧವ್ ಬಣ) ಹಾಗೂ ಎಎಪಿಯ ಕೆಲ ಸಂಸದರು ಎನ್‌ಡಿಎ ಅಭ್ಯರ್ಥಿ ಪರ ಮತ ಚಲಾಯಿಸಿರುವುದು ಕಾರಣ ಎಂಬ ಅನುಮಾನಗಳು ವ್ಯಕ್ತವಾಗಿದೆ. ಈ ಬೆನ್ನಿಗೇ, ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಮತಗಳ್ಳತನ ಮಾಡಿದೆ ಎಂಬ ಗಂಭೀರ ಆರೋಪವನ್ನು ಮಾಣಿಕಂ ಟ್ಯಾಗೋರ್ ಮಾಡಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಇಂಡಿಯಾ ಅಭ್ಯರ್ಥಿ ಪರ ಬಿದ್ದ ಮತಗಳ ಸಂಖ್ಯೆ ಹೇಗೆ ಕಡಿಮೆ ಆದವು ಎಂಬುದರ ಕುರಿತು ವಿಪಕ್ಷಗಳ ನಾಯಕರು ಅನೌಪಚಾರಿಕ ತನಿಖೆಗಳನ್ನು ಪ್ರಾರಂಭಿಸಿದ್ದಾರೆ. ಅವರ ಸ್ವಂತ ಅಂದಾಜಿನ ಪ್ರಕಾರ, ಬಹುತೇಕ ಪರಿಪೂರ್ಣ ಹಾಜರಾತಿಯನ್ನು ಹೊಂದಿದ್ದರೂ, ಇಂಡಿಯಾ ಅಭ್ಯರ್ಥಿಯು ಅಂದಾಜು ಮಾಡಿದ ಸಂಖ್ಯೆಗಿಂತ ಕನಿಷ್ಠ 15 ಮತಗಳನ್ನು ಕಡಿಮೆ ಪಡೆದಿದ್ದಾರೆ. ಒಂದು ಅಂದಾಜಿನ ಪ್ರಕಾರ, ಆರು ಪಕ್ಷಗಳ ಸದಸ್ಯರು ಅಡ್ಡ-ಮತದಾನ ಮಾಡಿದ್ದಾರೆ ಅಥವಾ ಅವರ ಮತಗಳು ಅಮಾನ್ಯಗೊಂಡಿವೆ.

“ಎನ್‌ಡಿಎ ಅಭ್ಯರ್ಥಿಗೆ ಅವರ ಸಂಖ್ಯಾಬಲಕ್ಕಿಂತ ಹೆಚ್ಚು ಮತಗಳು ಹೇಗೆ ಬಿದ್ದವು ಎಂಬುದರ ಕುರಿತು ನಾವು ಮಾತನಾಡುವುದಿಲ್ಲ. ನಮಗೆ ದೊರೆತ 300 ಮತಗಳನ್ನು ನಾವು ವಿಶ್ಲೇಷಿಸಿದ್ದೇವೆ. ಮೂರು ಶಿವಸೇನೆ (ಯುಬಿಟಿ) ಮತಗಳು, ನಾಲ್ಕು ಆಮ್ ಆದ್ಮಿ ಪಕ್ಷದ (ಎಎಪಿ) ಮತಗಳು, ಎರಡು ಎನ್‌ಸಿಪಿ (ಶರದ್ ಪವಾರ್) ಮತಗಳು ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ಒಂದು ಅಥವಾ ಎರಡು ಮತಗಳು ನಮಗೆ ಲೆಕ್ಕಕ್ಕೆ ಸಿಕ್ಕಿಲ್ಲ. ಈ ಮತಗಳು ಅಮಾನ್ಯಗೊಂಡಿವೆಯೇ? ಇಲ್ಲ, ಸಂಸದರು ಎನ್‌ಡಿಎ ಅಭ್ಯರ್ಥಿ ಪರ ಮತಚಲಾಯಿಸಿದ್ದಾರೆಯೇ? ಎಂಬುವುದನ್ನು ಹೇಳಲು ಸಾಧ್ಯವಿಲ್ಲ. ಕಾಂಗ್ರೆಸ್‌ಗೆ ಒಂದು ಮತ ಮತ್ತು ಸಮಾಜವಾದಿ ಪಕ್ಷಕ್ಕೆ ಎರಡು ಮತಗಳ ಲೆಕ್ಕ ಸಿಕ್ಕಿಲ್ಲ ಎಂದು ಹೆಸರು ಹೇಳಲು ಇಚ್ಚಿಸದ ವಿರೋಧ ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಈ ಕುರಿತು ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ನಾಯಕ ಮಾಣಿಕಂ ಟ್ಯಾಗೋರ್, “ಶಿವಸೇನೆಯ ಸಂಸದ ಶ್ರೀಕಾಂತ್ ಶಿಂದೆಯೇಕೆ ಇಂಡಿಯಾ ಸಂಸದರಿಗೆ ಧನ್ಯವಾದ ಸಲ್ಲಿಸುತ್ತಿದ್ದಾರೆ? ಸಚಿವ ಕಿರಣ್ ರಿಜಿಜು ಏಕೆ ವಿರೋಧ ಪಕ್ಷಗಳ ಆತ್ಮಸಾಕ್ಷಿಯ ಮತದಾನವನ್ನು ಸಂಭ್ರಮಿಸುತ್ತಿದ್ದಾರೆ? ಇದು ನಿಜಕ್ಕೂ ಆತ್ಮಸಾಕ್ಷಿಯದ್ದೆ? ಅಥವಾ ಸಿಬಿಐ/ಈಡಿ ಒತ್ತಡ ಹಾಗೂ ಕುದುರೆ ವ್ಯಾಪಾರವನ್ನು ಆತ್ಮಸಾಕ್ಷಿ ಎಂದು ಸಮರ್ಥಿಸಿಕೊಳ್ಳಾಲಾಗುತ್ತಿದೆಯೆ?” ಎಂದು ಪ್ರಶ್ನಿಸಿದ್ದಾರೆ.

ವಿರೋಧ ಪಕ್ಷದ ಮತಗಳು ಎನ್‌ಡಿಎಗೆ ಹೋಗಿವೆ ಎಂದು ಬಿಜೆಪಿ ನಾಯಕರೇ ಒಪ್ಪಿಕೊಂಡಿರುವಾಗ, ಇದು ಸಂಸತ್ತಿನೊಳಗೆ ‘ಮತಗಳ್ಳತನ’ ನಡೆದಿದೆ ಎಂಬುವುದಕ್ಕೆ ಪುರಾವೆಯಲ್ಲವೇ ಟ್ಯಾಗೋರ್ ಕೇಳಿದ್ದಾರೆ.

“ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಆಧಾರ್ ಲಿಂಕ್ ಮಾಡಲಾದ ಮತದಾರರ ನಿಗ್ರಹದಿಂದ, ಈಗ ಉಪರಾಷ್ಟ್ರಪತಿ ಚುನಾವಣೆಗಳವರೆಗೆ. ಮೋದಿ-ಶಾ ಮಾದರಿ ಎಂದರೆ ಕೇವಲ ಮತಗಳ್ಳತನ  ಮೂಲಕ ಗೆಲ್ಲುವುದೇ? ಸಚಿವರು ಜನಾದೇಶವನ್ನು ಗೌರವಿಸುವ ಬದಲು ಮತಗಳನ್ನು ಕದಿಯುವ ಬಗ್ಗೆ ಹೆಮ್ಮೆಪಡುತ್ತಿದ್ದರೆ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಅಥವಾ 2029ರಲ್ಲಿ ಬಿಜೆಪಿಯ ಮತಗಳ್ಳತನ ರಾಜಕೀಯಕ್ಕೆ ಜನರು ಉತ್ತರಿಸುತ್ತಾರೆಯೇ?” ಎಂದು ಟ್ಯಾಗೋರ್ ಪ್ರಶ್ನಿಸಿದ್ದಾರೆ.

ಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆಗೆ ಮುಂದಾದ ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...