Homeಮುಖಪುಟಉಪರಾಷ್ಟ್ರಪತಿ ಚುನಾವಣೆಯಲ್ಲೂ ಮತಗಳ್ಳತನ: ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖ್ಯ ಸಚೇತಕ ಮಾಣಿಕಂ ಟ್ಯಾಗೋರ್ ಆರೋಪ!

ಉಪರಾಷ್ಟ್ರಪತಿ ಚುನಾವಣೆಯಲ್ಲೂ ಮತಗಳ್ಳತನ: ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖ್ಯ ಸಚೇತಕ ಮಾಣಿಕಂ ಟ್ಯಾಗೋರ್ ಆರೋಪ!

- Advertisement -
- Advertisement -

ಉಪರಾಷ್ಟ್ರಪತಿ ಚುನಾವಣೆಯಲ್ಲೂ ಬಿಜೆಪಿ ‘ಮತಗಳ್ಳತನ’ ಮಾಡಿದೆ ಎಂದು ಕಾಂಗ್ರೆಸ್ ಸಂಸದ, ಲೋಕಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕರಾಗಿರುವ ಮಾಣಿಕಂ ಟ್ಯಾಗೋರ್ ಆರೋಪಿಸಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡ ಮತದಾನದ ಊಹಾಪೋಹಗಳು ಹರಡಿದೆ. ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಎರಡೂ ಸದನಗಳಲ್ಲಿರುವ ತನ್ನ ಸಾಮೂಹಿಕ ಸಾಮರ್ಥ್ಯಕ್ಕಿಂತ ಕಡಿಮೆ ಮತ ಪಡೆಯುವಂತಾಗಲು ಇಂಡಿಯಾ ಮೈತ್ರಿಕೂಟದ ಅಂಗಪಕ್ಷಗಳಾದ ಶಿವಸೇನೆ (ಉದ್ಧವ್ ಬಣ) ಹಾಗೂ ಎಎಪಿಯ ಕೆಲ ಸಂಸದರು ಎನ್‌ಡಿಎ ಅಭ್ಯರ್ಥಿ ಪರ ಮತ ಚಲಾಯಿಸಿರುವುದು ಕಾರಣ ಎಂಬ ಅನುಮಾನಗಳು ವ್ಯಕ್ತವಾಗಿದೆ. ಈ ಬೆನ್ನಿಗೇ, ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಮತಗಳ್ಳತನ ಮಾಡಿದೆ ಎಂಬ ಗಂಭೀರ ಆರೋಪವನ್ನು ಮಾಣಿಕಂ ಟ್ಯಾಗೋರ್ ಮಾಡಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಇಂಡಿಯಾ ಅಭ್ಯರ್ಥಿ ಪರ ಬಿದ್ದ ಮತಗಳ ಸಂಖ್ಯೆ ಹೇಗೆ ಕಡಿಮೆ ಆದವು ಎಂಬುದರ ಕುರಿತು ವಿಪಕ್ಷಗಳ ನಾಯಕರು ಅನೌಪಚಾರಿಕ ತನಿಖೆಗಳನ್ನು ಪ್ರಾರಂಭಿಸಿದ್ದಾರೆ. ಅವರ ಸ್ವಂತ ಅಂದಾಜಿನ ಪ್ರಕಾರ, ಬಹುತೇಕ ಪರಿಪೂರ್ಣ ಹಾಜರಾತಿಯನ್ನು ಹೊಂದಿದ್ದರೂ, ಇಂಡಿಯಾ ಅಭ್ಯರ್ಥಿಯು ಅಂದಾಜು ಮಾಡಿದ ಸಂಖ್ಯೆಗಿಂತ ಕನಿಷ್ಠ 15 ಮತಗಳನ್ನು ಕಡಿಮೆ ಪಡೆದಿದ್ದಾರೆ. ಒಂದು ಅಂದಾಜಿನ ಪ್ರಕಾರ, ಆರು ಪಕ್ಷಗಳ ಸದಸ್ಯರು ಅಡ್ಡ-ಮತದಾನ ಮಾಡಿದ್ದಾರೆ ಅಥವಾ ಅವರ ಮತಗಳು ಅಮಾನ್ಯಗೊಂಡಿವೆ.

“ಎನ್‌ಡಿಎ ಅಭ್ಯರ್ಥಿಗೆ ಅವರ ಸಂಖ್ಯಾಬಲಕ್ಕಿಂತ ಹೆಚ್ಚು ಮತಗಳು ಹೇಗೆ ಬಿದ್ದವು ಎಂಬುದರ ಕುರಿತು ನಾವು ಮಾತನಾಡುವುದಿಲ್ಲ. ನಮಗೆ ದೊರೆತ 300 ಮತಗಳನ್ನು ನಾವು ವಿಶ್ಲೇಷಿಸಿದ್ದೇವೆ. ಮೂರು ಶಿವಸೇನೆ (ಯುಬಿಟಿ) ಮತಗಳು, ನಾಲ್ಕು ಆಮ್ ಆದ್ಮಿ ಪಕ್ಷದ (ಎಎಪಿ) ಮತಗಳು, ಎರಡು ಎನ್‌ಸಿಪಿ (ಶರದ್ ಪವಾರ್) ಮತಗಳು ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ಒಂದು ಅಥವಾ ಎರಡು ಮತಗಳು ನಮಗೆ ಲೆಕ್ಕಕ್ಕೆ ಸಿಕ್ಕಿಲ್ಲ. ಈ ಮತಗಳು ಅಮಾನ್ಯಗೊಂಡಿವೆಯೇ? ಇಲ್ಲ, ಸಂಸದರು ಎನ್‌ಡಿಎ ಅಭ್ಯರ್ಥಿ ಪರ ಮತಚಲಾಯಿಸಿದ್ದಾರೆಯೇ? ಎಂಬುವುದನ್ನು ಹೇಳಲು ಸಾಧ್ಯವಿಲ್ಲ. ಕಾಂಗ್ರೆಸ್‌ಗೆ ಒಂದು ಮತ ಮತ್ತು ಸಮಾಜವಾದಿ ಪಕ್ಷಕ್ಕೆ ಎರಡು ಮತಗಳ ಲೆಕ್ಕ ಸಿಕ್ಕಿಲ್ಲ ಎಂದು ಹೆಸರು ಹೇಳಲು ಇಚ್ಚಿಸದ ವಿರೋಧ ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಈ ಕುರಿತು ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ನಾಯಕ ಮಾಣಿಕಂ ಟ್ಯಾಗೋರ್, “ಶಿವಸೇನೆಯ ಸಂಸದ ಶ್ರೀಕಾಂತ್ ಶಿಂದೆಯೇಕೆ ಇಂಡಿಯಾ ಸಂಸದರಿಗೆ ಧನ್ಯವಾದ ಸಲ್ಲಿಸುತ್ತಿದ್ದಾರೆ? ಸಚಿವ ಕಿರಣ್ ರಿಜಿಜು ಏಕೆ ವಿರೋಧ ಪಕ್ಷಗಳ ಆತ್ಮಸಾಕ್ಷಿಯ ಮತದಾನವನ್ನು ಸಂಭ್ರಮಿಸುತ್ತಿದ್ದಾರೆ? ಇದು ನಿಜಕ್ಕೂ ಆತ್ಮಸಾಕ್ಷಿಯದ್ದೆ? ಅಥವಾ ಸಿಬಿಐ/ಈಡಿ ಒತ್ತಡ ಹಾಗೂ ಕುದುರೆ ವ್ಯಾಪಾರವನ್ನು ಆತ್ಮಸಾಕ್ಷಿ ಎಂದು ಸಮರ್ಥಿಸಿಕೊಳ್ಳಾಲಾಗುತ್ತಿದೆಯೆ?” ಎಂದು ಪ್ರಶ್ನಿಸಿದ್ದಾರೆ.

ವಿರೋಧ ಪಕ್ಷದ ಮತಗಳು ಎನ್‌ಡಿಎಗೆ ಹೋಗಿವೆ ಎಂದು ಬಿಜೆಪಿ ನಾಯಕರೇ ಒಪ್ಪಿಕೊಂಡಿರುವಾಗ, ಇದು ಸಂಸತ್ತಿನೊಳಗೆ ‘ಮತಗಳ್ಳತನ’ ನಡೆದಿದೆ ಎಂಬುವುದಕ್ಕೆ ಪುರಾವೆಯಲ್ಲವೇ ಟ್ಯಾಗೋರ್ ಕೇಳಿದ್ದಾರೆ.

“ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಆಧಾರ್ ಲಿಂಕ್ ಮಾಡಲಾದ ಮತದಾರರ ನಿಗ್ರಹದಿಂದ, ಈಗ ಉಪರಾಷ್ಟ್ರಪತಿ ಚುನಾವಣೆಗಳವರೆಗೆ. ಮೋದಿ-ಶಾ ಮಾದರಿ ಎಂದರೆ ಕೇವಲ ಮತಗಳ್ಳತನ  ಮೂಲಕ ಗೆಲ್ಲುವುದೇ? ಸಚಿವರು ಜನಾದೇಶವನ್ನು ಗೌರವಿಸುವ ಬದಲು ಮತಗಳನ್ನು ಕದಿಯುವ ಬಗ್ಗೆ ಹೆಮ್ಮೆಪಡುತ್ತಿದ್ದರೆ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಅಥವಾ 2029ರಲ್ಲಿ ಬಿಜೆಪಿಯ ಮತಗಳ್ಳತನ ರಾಜಕೀಯಕ್ಕೆ ಜನರು ಉತ್ತರಿಸುತ್ತಾರೆಯೇ?” ಎಂದು ಟ್ಯಾಗೋರ್ ಪ್ರಶ್ನಿಸಿದ್ದಾರೆ.

ಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆಗೆ ಮುಂದಾದ ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...