Homeಕರ್ನಾಟಕ'ಎಕೆ, ಎಡಿ, ಎಎ'ಗಳನ್ನು ಎಸ್‌ಸಿ ಪಟ್ಟಿಯಿಂದ ಕೈಬಿಡುವಂತೆ ಒಳಮೀಸಲಾತಿ ಹೋರಾಟ ಸಮಿತಿ ಆಗ್ರಹ

‘ಎಕೆ, ಎಡಿ, ಎಎ’ಗಳನ್ನು ಎಸ್‌ಸಿ ಪಟ್ಟಿಯಿಂದ ಕೈಬಿಡುವಂತೆ ಒಳಮೀಸಲಾತಿ ಹೋರಾಟ ಸಮಿತಿ ಆಗ್ರಹ

- Advertisement -
- Advertisement -

ಜಸ್ಟೀಸ್ ಎಚ್‌.ಎನ್. ನಾಗಮೋಹನ್‌ ದಾಸ್ ಸಮಿತಿಗೆ ಸಮೀಕ್ಷೆ ಸಮಯದಲ್ಲಿ ತಮ್ಮ ಮೂಲ ಜಾತಿಗಳನ್ನು ಹೇಳಿಕೊಳ್ಳದ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಜಾತಿಗಳನ್ನು ಪರಿಶಿಷ್ಟ ಜಾತಿಗಳ (ಎಸ್‌ಸಿ) ಪಟ್ಟಿಯಿಂದ ಕೈಬಿಡುವಂತೆ ‘ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಹೋರಾಟ ಸಮಿತಿ’ ಆಗ್ರಹಿಸಿದೆ.

ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿದ ಒಳಮೀಸಲಾತಿ ಹೋರಾಟ ಸಮಿತಿ ನಿಯೋಗ, “ಎಕೆ, ಎಡಿ, ಎಎ ಗುಂಪಿಗೆ ಮೂಲಜಾತಿ ಪ್ರಮಾಣ ಪತ್ರ ತೆಗೆದುಕೊಳ್ಳಲು ಕಂದಾಯ ಇಲಾಖೆ ಆದೇಶ ಹೊರಡಿಸಬೇಕು ಹಾಗೂ ಎಕೆ, ಎಡಿ, ಎಎಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಕೂಡಲೇ ಶಿಫಾರಸ್ಸು ಮಾಡಬೇಕು” ಎಂದು ಒತ್ತಾಯಿಸಿದರು.

ಜಸ್ಟೀಸ್ ನಾಗಮೋಹನ್‌ ದಾಸ್ ವರದಿಯನ್ನು ದಿನಾಂಕ: 25-08-2025ರಂದು ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಬಗ್ಗೆ ನ್ಯಾ. ಎಚ್.ಎನ್. ನಾಗಮೋಹನ್‌ ದಾಸ್ ಆಯೋಗ ನೀಡಿರುವ ವರದಿಯನ್ನು ಕೂಲಂಕುಶವಾಗಿ ಚರ್ಚಿಸಿ ಕೆಲವು ಮಾರ್ಪಾಡುಗಳೊಂದಿಗೆ ಸದರಿ ವರದಿಯನ್ನು ಸಚಿವ ಸಂಪುಟವು ಕೊಟ್ಟಿರುತ್ತದೆ. ಆದರೆ, ಸರ್ಕಾರದ ಆದೇಶದ ಪ್ಯಾರಾ-2 ಗೊಂದಲದಿಂದ ಕೂಡಿದ್ದು ಅದನ್ನು ಸರಿಪಡಿಸುವಂತೆ ಒತ್ತಾಯಿಸಿದ್ದಾರೆ.

“ಸರ್ಕಾರದ ಪ್ಯಾರ-2 ರ ಆಯೋಗದ ವರದಿಯಲ್ಲಿನ ಪ್ರವರ್ಗ-ಇ ರಲ್ಲಿನ ಆದಿಕರ್ನಾಟಕ, ಆದಿಆಂಧ್ರ, ಆದಿದ್ರಾವಿಡ ಈ ಮೂರು ಸಮುದಾಯಗಳು ತಮ್ಮ ಮೂಲ ಜಾತಿಯನ್ನು ತಿಳಿಸದೇ ಇರುವುದರಿಂದ ಸದರಿ ಮೂರು ಜಾತಿಗಳು ಅನುಬಂಧಳಲ್ಲಿರುವ ಪ್ರವರ್ಗ-ಎ ಅಥವಾ ಪ್ರವರ್ಗ-ಬಿ ಗಳಲ್ಲಿ ಮೀಸಲಾತಿ ಸೌಲಭ್ಯವನ್ನು ಪಡೆಯಬಹುದು ಎಂದು ಹೇಳಿದ್ದು, ಎಕೆ. ಎಡಿ, ಎಎ ಯ ವರಿಗೆ ಮೂಲಜಾತಿ ಪ್ರಮಾಣ ಪತ್ರ ತೆಗೆದುಕೊಳ್ಳಲು ಕಂದಾಯ ಇಲಾಖೆ ಆದೇಶ ಹೊರಡಿಸಬೇಕು ಹಾಗೂ ಎಕೆ ಎಡಿ ಎಎಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಕೂಡಲೇ ಶಿಫಾರಸ್ಸು ಮಾಡಬೇಕು” ಎಂದು ಮುಖ್ಯ ಕಾರ್ಯದರ್ಶಿಗಳ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

“2ನೇ ಶಿಫಾರಸ್ಸು ರಾಜ್ಯದಲ್ಲಿ ಚರ್ಚೆಗೆ ತುಂಬಾ ಗ್ರಾಸವಾಗಿದೆ. ಏಕೆಂದರೆ, 2ನೇ ಶಿಫಾರಸ್ಸಿನಂತೆ ಒಳಮೀಸಲಾತಿ ಜಾರಿಯಾದರೆ ಆದಿಕರ್ನಾಟಕ, ಆದಿ ಆಂಧ್ರ, ಆದಿದ್ರಾವಿಡದ ನೆಪದಲ್ಲಿ ಪ್ರವರ್ಗ-ಬಿ ಮೆರಿಟ್ ಅಭ್ಯರ್ಥಿಗಳು, ಪ್ರವರ್ಗ-ಎ ನಲ್ಲಿ ಅರ್ಜಿಗಳನ್ನು ಸಲ್ಲಿಸಿ ಕಡಿಮೆ ಮೆರಿಟ್ ಇರುವ ಮಾದಿಗ ಸಮುದಾಯಳೊಂದಿಗೆ ಸ್ಪರ್ಧಿಸಿ ಮೇಲುಗೈ ಪಡೆಯುವುದರಿಂದ ನಿಜವಾದ ಮಾದಿಗ ಸಮುದಾಯಗಳ ಅಭ್ಯರ್ಥಿಗಳಿಗೆ ಮತ್ತೊಮ್ಮೆ ನೇಮಕಾತಿಗಳಲ್ಲಿ ಹಿನ್ನಡೆಯಾಗುವ ಸಂಭವ ಹೆಚ್ಚಿದೆ” ಎಂದು ಒಳಮೀಸಲಾತಿ ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

“ಪ್ರವರ್ಗ-ಎ ಅಭ್ಯರ್ಥಿಗಳಾದ ಮಾದಿಗ ಸಮುದಾಯದ ಅಭ್ಯರ್ಥಿಗಳು ಸಹಜವಾಗಿ ಕಡಿಮೆ ಮೆರಿಟ್‌ನವರಾಗಿದ್ದು, ಪ್ರವರ್ಗ-ಬಿ ಸಮುದಾಯಗಳು ಅಧಿಕ ಮೆರಿಟ್ ಹೊಂದಿದವರಾಗಿರುವುದರಿಂದ ಪ್ರತ್ಯೇಕವಾಗಿ ಐತಿಹಾಸಿಕವಾದ ಒಳಮೀಸಲಾತಿ ಹೋರಾಟ ನಡೆಯಿತು. ಒಂದು ವೇಳೆ ದಿನಾಂಕ: 25-08-2025ರ ಆದೇಶ ಅಂತಿಮಗೊಂಡರೆ 30 ವರ್ಷಗಳಿಂದ ಹೋರಾಟ ನಡೆಸಿ ಪಡೆದ ಒಳಮೀಸಲಾತಿ ಸೌಲಭ್ಯವು ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗುವ ಎಲ್ಲ ಸಂಭವಗಳಿವೆ. ಆದ್ದರಿಂದ ಸರ್ಕಾರಿ ಆದೇಶದ ಪ್ಯಾರಾ-2ನ್ನು ತಿದ್ದುಪಡಿ ಮಾಡಬೇಕಾಗಿದೆ” ಎಂದು ಮನವಿ ಮಾಡಿದ್ದಾರೆ.

“ಪ್ಯಾರ-2 ರ ಆಯೋಗದ ವರದಿಯಲ್ಲಿನ ಪ್ರವರ್ಗ-ಇ ರಲ್ಲಿನ ಆದಿಕರ್ನಾಟಕ, ಆದಿಆಂಧ್ರ, ಆದಿದ್ರಾವಿಡ ಈ ಮೂರು ಸಮುದಾಯಗಳು ತಮ್ಮ ಮೂಲಜಾತಿಯನ್ನು ತಿಳಿಸದೇ ಇರುವುದರಿಂದ ಸದರಿ ಮೂರು ಜಾತಿಗಳು ಸರ್ಕಾರ ಪ್ರವರ್ಗವಾರು ಪ್ರವರ್ಗ-ಎ, ಪ್ರವರ್ಗ-ಬಿ ಅನುಬಂಧಗಳಲ್ಲಿ ಸೂಚಿಸಿರುವಂತೆ ತಮಗೆ ಸಂಬಂಧಿಸಿದ ಮೂಲಜಾತಿ ಪ್ರಮಾಣಪತ್ರವನ್ನು ಕಂದಾಯ ಇಲಾಖೆಯಿಂದ ಕೂಡಲೇ ಪಡೆದುಕೊಂಡು ತಮ್ಮಜಾತಿ ಸಂಬಂಧಿಸಿದ ಪ್ರವರ್ಗದಿಂದ ಮೀಸಲಾತಿ ಸೌಲಭ್ಯವನ್ನು ಪಡೆಯಲು ತಿಳಿಸಬೇಕು” ಎಂದು ಹೋರಾಟಗಾರರು ಮನವಿಯಲ್ಲು ಉಲ್ಲೇಖಿಸಿದ್ದಾರೆ.

ಜೊತೆಗೆ, “ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ನೇಮಕಾತಿ ಅಲ್ಲದೇ ಬಡ್ತಿ ನೇಮಕಾತಿ, ಬ್ಯಾಕ್ಲಾಗ್ ಅನ್ವಯಿಸಿ ರೋಸ್ಟರ್ ಬಿಂದು ಪ್ರಕಟಿಸಬೇಕು” ಎಂದು ನಿಯೋಗ ಮನವಿ ಮಾಡಿದೆ.

“ದಿನಾಂಕ:03-09-2025ರಂದು ಕರ್ನಾಟಕ ಸರ್ಕಾರ ಹೊರಡಿಸಿದ ಆದೇಶವು ಕೇವಲ ನೇರನೇಮಕಾತಿಗೆ ಮಾತ್ರ ಅನ್ವಯಿಸುವಂತಹ ತಪ್ಪು ಆದೇಶವಾಗಿದೆ. ಸಂವಿಧಾನದ ಪರಿಚ್ಛೇದ 16ರಂತೆ ಹುದ್ದೆಗಳ ನೇಮಕಾತಿ ಎಂದರೆ,  ನೇರನೇಮಕಾತಿ, ಬಡ್ತಿನೇಮಕಾತಿ ಮತ್ತು ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಅನ್ವಯಿಸುತ್ತದೆ. ಆದ್ದರಿಂದ, ಸರ್ಕಾರಿ ಆದೇಶವು ಮತ್ತೊಮ್ಮೆ ತಿದ್ದುಪಡಿ ಮಾಡಿ ಒಳಮೀಸಲಾತಿಯನ್ನು ನೇರನೇಮಕಾತಿ, ಬಡ್ತಿನೇಮಕಾತಿ ಮತ್ತು ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಅನ್ವಯಿಸಿ ಆದೇಶ ಹೊರಡಿಸಬೇಕು” ಎಂದು ಹೇಳಿದ್ದಾರೆ.

“ನೇರ ನೇಮಕಾತಿ ಮತ್ತು ಬಡ್ತಿ ನೇಮಕಾತಿ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ:04-09-2025ರಂದು ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಮಣಿವಣ್ಣನ್‌ ಅವರು, ಸರ್ಕಾರದ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಬೆಂಗಳೂರು ಇವರಿಗೆ ಸಲ್ಲಿಸಿದ ಪತ್ರದಲ್ಲಿ ಪರಿಶಿಷ್ಟ ಜಾತಿ ನೌಕರರಿಗೆ ರೋಸ್ಟರ್ ಬಿಂದುಗಳ ಬಗ್ಗೆ ಈಗ ಸರ್ಕಾರ ನಿಗಧಿಪಡಿಸಿದ ರೋಸ್ಟರ್ ಬಿಂದುಗಳಿಗೆ ಸಂಬಂಧಿಸಿದಂತೆ ತಪ್ಪು ಮತ್ತು ಸರ್ಕಾರವನ್ನು ದಾರಿತಪ್ಪಿಸುವಂತಿದೆ” ಎಂದು ನಿಯೋಗ ಕಳವಳ ವ್ಯಕ್ತಪಡಿಸಿದೆ.

ಪ್ರಮುಖ ಹಕ್ಕೊತ್ತಾಯಗಳು:

• ಆದಿಕರ್ನಾಟಕ, ಆದಿಆಂಧ್ರ, ಆದಿದ್ರಾವಿಡ ಜಾತಿಯವರಿಗೆ ಮೂಲ ಜಾತಿ ಪ್ರಮಾಣಪತ್ರ ತೆಗೆದುಕೊಳ್ಳಲು ಕಂದಾಯ ಇಲಾಖೆ ಆದೇಶ ಹೊರಡಿಸಬೇಕು ಹಾಗೂ ಆದಿಕರ್ನಾಟಕ, ಆದಿಆಂಧ್ರ, ಆದಿದ್ರಾವಿಡ ಜಾತಿಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಕೂಡಲೇ ಶಿಫಾರಸ್ಸು ಮಾಡಬೇಕು.

• ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯನ್ನು ನೇಮಕಾತಿ ಅಲ್ಲದೇ ಬಡ್ತಿ ನೇಮಕಾತಿ, ಬ್ಯಾಕ್ಲಾಗ್ ಅನ್ವಯಿಸಿ ರೋಸ್ಟರ್ ಬಿಂದು ಪ್ರಕಟಿಸಬೇಕು.

• ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಉನ್ನತ ಅಧಿಕಾರಿಗಳನ್ನು ಬದಲಾಯಿಸಬೇಕು.

• ತೆಲಂಗಾಣ ರಾಜ್ಯ ಹಾಗೂ ಆಂಧ್ರಪ್ರದೇಶದ ಮಾದರಿಯಲ್ಲಿ ಒಳಮೀಸಲಾತಿ ಪ್ರತ್ಯೇಕ ಕಾಯ್ದೆಯನ್ನು ಕೂಡಲೇ ರಚಿಸಬೇಕು.

• ಶಾಶ್ವತ ಆಯೋಗವನ್ನು ಕೂಡಲೇ ರಚಿಸಿ ಆದೇಶ ಹೊರಡಿಸಬೇಕು. ಶಾಶ್ವತ ಆಯೋಗದಲ್ಲಿ ಪರಿಶಿಷ್ಟ ಜಾತಿಗಳ ಎಲ್ಲ ಸಮುದಾಯಗಳ ಪ್ರತಿನಿಧಿಗಳು ಇರಬೇಕು.

ನಿಯೋಗದಲ್ಲಿ ಹಿರಿಯ ಹೋರಾಟಗಾರರಾದ ಎಸ್.ಮಾರೆಪ್ಪ, ಮಾರಸಂದ್ರ ಮುನಿಯಪ್ಪ, ಬಸವರಾಜ್ ಕೌತಾಳ್‌, ಅಂಬಣ್ಣ ಅರೋಲಿಕರ್,  ಶಿವರಾಯ ಅಕ್ಕರಕಿ, ಎಂ. ಶಂಕ್ರಪ್ಪ, ಪಾವಗಡಶ್ರೀರಾಮ್, ಹೇಮರಾಜ್ಅ ಸ್ಕಿಹಾಳ, ಕರಿಯಪ್ಪ ಗುಡಿಮನೆ, ವೆಂಕಟೇಶ್ ದೀಪಾಂಜಲಿನಗರ, ವೈ. ಕೆ. ಬಾಲಕೃಷ್ಣ ಸೇರಿದಂತೆ ಹಲವರು ಇದ್ದರು.

ಪ್ರಚೋದನಕಾರಿ ಭಾಷಣ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...