Homeಅಂತರಾಷ್ಟ್ರೀಯನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ

ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ

- Advertisement -
- Advertisement -

ನೇಪಾಳದಲ್ಲಿ ಯುವ ಜನರ ಹಿಂಸಾತ್ಮಕ ಹೋರಾಟದ ಪರಿಣಾಮ ಕೆ.ಪಿ ಶರ್ಮಾ ಓಲಿ ನೇತೃತ್ವದ ಸರ್ಕಾರ ಪತನಗೊಂಡ ಬಳಿಕ, ಸುಶೀಲಾ ಕರ್ಕಿ ಶುಕ್ರವಾರ (ಸೆ.12) ಮಧ್ಯಂತರ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಸರ್ಕಾರವನ್ನು ಮುನ್ನಡೆಸಲಿದ್ದಾರೆ.

ನೇಪಾಳದ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು ರಾಷ್ಟ್ರಪತಿ ಕಚೇರಿಯಾದ ಶೀತಲ್ ನಿವಾಸ್‌ನಲ್ಲಿ ನಡೆದ ಸಮಾರಂಭದಲ್ಲಿ ಕರ್ಕಿ ಅವರಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ.

ಆರು ತಿಂಗಳೊಳಗೆ ಚುನಾವಣೆ ನಡೆಸಿ ಹೊಸ ಸರ್ಕಾರ ರಚನೆ ಮಾಡುವ ಜವಾಬ್ದಾರಿ ಈಗ ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ ಹೆಗಲಿಗೆ ಬಿದ್ದಿದೆ.

ಭಾರತದ ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ಹಳೆಯ ವಿದ್ಯಾರ್ಥಿಯಾಗಿರುವ ಕರ್ಕಿ, ಅಧ್ಯಕ್ಷ ಪೌಡೆಲ್, ಸೇನಾ ಮುಖ್ಯಸ್ಥ ಜನರಲ್ ಅಶೋಕ್ ರಾಜ್ ಸಿಗ್ಡೆಲ್ ಮತ್ತು ‘ಜೆನ್‌ ಝೀ’ ಎಂದು ಕರೆಯಲ್ಪಡುವ ಯುವ ಪ್ರತಿಭಟನಾಕಾರರ ಪ್ರತಿನಿಧಿಗಳ ಸಮಾಲೋಚನೆಯ ನಂತರ ಅಂತಿಮವಾಗಿ ಆಯ್ಕೆಯಾದ ಮೊದಲು ನಾಲ್ವರು ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದರು.

ನೇಪಾಳ ವಿದ್ಯುತ್ ಪ್ರಾಧಿಕಾರದ ಮಾಜಿ ಮುಖ್ಯಸ್ಥ ಕುಲ್ಮನ್ ಘಿಸಿಂಗ್, ಕಠ್ಮಂಡು ಮೇಯರ್ ಬಾಲೇಂದ್ರ ಶಾ ಮತ್ತು ಧರಣ್ ಮೇಯರ್ ಹರ್ಕಾ ಸಂಪಂಗ್ ಪ್ರಧಾನಿ ಹುದ್ದೆಯ ರೇಸ್‌ನಲ್ಲಿದ್ದ ಇತರ ನಾಯಕರು.

ನೇಪಾಳದಲ್ಲಿ ಆರಂಭದಲ್ಲಿ, ಸರ್ಕಾರದ ಸಾಮಾಜಿಕ ಮಾಧ್ಯಮ ನಿಷೇಧ ಆದೇಶದ ವಿರುದ್ದ ಭುಗಿಲೆದ್ದ ಯುವಜನರ ಪ್ರತಿಭಟನೆ ಬಳಿಕ ಹಿಂಸಾತ್ಮಕ ರೂಪ ಪಡೆದಿತ್ತು. ‘ಜೆನ್‌ ಝೀ’ ಯುವಜನರು, ವಿದ್ಯಾರ್ಥಿಗಳು ಸಂಸತ್ ಭವನ, ಪ್ರಧಾನಿ ಮತ್ತು ಸಚಿವರ ಮನೆಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರ ಹಾಕಿದ್ದರು.

ಕೆಲ ಸಚಿವರನ್ನು ಪ್ರತಿಭಟನಾಕಾರರು ಅಟ್ಟಾಡಿಸಿ ಥಳಿಸಿದ್ದರು. ಈ ನಡುವೆ ತನ್ನ ಹುದ್ದೆಗೆ ರಾಜೀನಾಮೆ ಕೊಟ್ಟ ಪ್ರಧಾನಿ ಕೆ.ಪಿ ಶರ್ಮಾ ಓಲಿ, ದೇಶ ಬಿಟ್ಟು ಪಲಾಯನ ಮಾಡಿದ್ದಾರೆ ಎನ್ನಲಾಗಿದೆ.

ಯುವಜನರ ಪ್ರತಿಭಟನೆ ಸಾಮಾಜಿಕ ಮಾಧ್ಯಮ ನಿಷೇಧದ ವಿರುದ್ದ ಪ್ರಾರಂಭಗೊಂಡರೂ, ಬಳಿಕ ಅದು ಪಡೆದುಕೊಂಡ ಸ್ವರೂಪ ರಾಜಕಾರಣಿಗಳ ಮಿತಿ ಮೀರಿದ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಸೇರಿದಂತೆ ಜನ ವಿರೋಧಿ ನಡೆಗಳ ವಿರುದ್ದ ಆಕ್ರೋಶದ ಕಟ್ಟೆ ಒಡೆದಿರುವುದಾಗಿ ಎಂದು ವರದಿಗಳು ಹೇಳಿವೆ.

ನಾಲ್ಕೈದು ದಿನಗಳ ಹಿಂಸಾತ್ಮಕ ಪ್ರತಿಭಟನೆಯಿಂದ ನೇಪಾಳದಲ್ಲಿ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಸುಮಾರು 20ರಷ್ಟು ಜನರು ಸಾವಿಗೀಡಾಗಿದ್ದಾರೆ. ದೇಶವನ್ನು ಹೊಸದಾಗಿ ಕಟ್ಟುವ ಜವಾಬ್ದಾರಿ ಮಧ್ಯಂತರ ಸರ್ಕಾರ ಮೇಲಿದೆ.

ಪ್ರಸ್ತುತ ಪ್ರತಿಭಟನೆಗಳು ಕಡಿಮೆಯಾಗಿವೆ. ಪರಿಸ್ಥಿತಿಯ ಸೇನೆಯ ನಿಯಂತ್ರಣಕ್ಕೆ ಬಂದಿದೆ.

ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ ಯಾರು?

ಜುಲೈ 2016ರಲ್ಲಿ ನೇಪಾಳದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಳ್ಳುವ ಮೂಲಕ ಸುಶೀಲಾ ಕರ್ಕಿ ಅವರು ಇತಿಹಾಸ ನಿರ್ಮಿಸಿದ್ದರು. ಆದಾಗ್ಯೂ, ಜನಪ್ರತಿನಿಧಿಗಳು ಪಕ್ಷಪಾತದ ತೀರ್ಪುಗಳನ್ನು ನೀಡಿದ್ದಾರೆ ಮತ್ತು ಕಾರ್ಯಾಂಗದಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ಆರೋಪಿಸಿ ಪದಚ್ಯುತಿ ನಿರ್ಣಯ ಮಂಡಿಸಿದ ನಂತರ ಅವರ ಅಧಿಕಾರಾವಧಿಯು ಒಂದು ವರ್ಷದೊಳಗೆ ಕೊನೆಗೊಂಡಿತ್ತು.

ನೇಪಾಳ ಸುಪ್ರೀಂ ಕೋರ್ಟ್ ಪೊಲೀಸ್ ಮುಖ್ಯಸ್ಥರ ನೇಮಕಾತಿಗಳ ಕುರಿತ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ ನಂತರ ಕರ್ಕಿ ಅವರನ್ನು ನ್ಯಾಯಮೂರ್ತಿ ಹುದ್ದೆಯಿಂದ ಕೆಳಗಿಳಿಸಲಾಗಿತ್ತು. ಹಿರಿತನವನ್ನು ಅನ್ಯಾಯವಾಗಿ ನಿರ್ಲಕ್ಷಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ತನಿಖೆ ಬಾಕಿ ಇರುವಾಗಲೇ ಕರ್ಕಿ ಅವರನ್ನು ಅಮಾನತುಗೊಳಿಸಲಾಗಿದ್ದರೂ, ಜೂನ್ 2017ರಲ್ಲಿ ಅವರ ನಿವೃತ್ತಿಗೆ ಮೊದಲು ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತವನ್ನು ಪಡೆಯಲು ಸಾಧ್ಯವಾಗದೆ ಪದಚ್ಯುತಿ ನಿರ್ಣಯ ವಿಫಲಗೊಂಡಿತ್ತು.

ಜೂನ್ 7,1952 ರಂದು ಬಿರಾಟ್‌ನಗರದಲ್ಲಿ ಜನಿಸಿದ ಸುಶೀಲಾ ಕರ್ಕಿ, 1975 ರಲ್ಲಿ ಬಿಎಚ್‌ಯುನಲ್ಲಿ ರಾಜಕೀಯ ವಿಜ್ಞಾನವನ್ನು ಮತ್ತು 1978ರಲ್ಲಿ ತ್ರಿಭುವನ್ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನ ಮಾಡಿದರು. ಮುಖ್ಯ ನ್ಯಾಯಾಧೀಶರಾಗುವ ಮೊದಲು, ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶೆ, ಹಿರಿಯ ವಕೀಲೆ ಮತ್ತು ಕಾನೂನು ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿದ್ದರು. ಲಿಂಗ ಸಮಾನತೆಯ ಕುರಿತು ಲೇಖಕಿಯೂ ಆಗಿದ್ದ ಸುಶೀಲಾ ಕರ್ಕಿ, ಮಾನವ ಹಕ್ಕುಗಳು ಮತ್ತು ಮಹಿಳಾ ನ್ಯಾಯಾಂಗ ಸಂಸ್ಥೆಗಳಲ್ಲಿ ದೀರ್ಘಕಾಲ ತೊಡಗಿಸಿಕೊಂಡಿದ್ದರು.

ನೇಪಾಳದಲ್ಲಿ ಜೈಲು ಘರ್ಷಣೆ: 15,000ಕ್ಕೂ ಹೆಚ್ಚು ಕೈದಿಗಳ ಪರಾರಿ, ಮೂವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...