Homeಅಂತರಾಷ್ಟ್ರೀಯಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

- Advertisement -
- Advertisement -

ಪ್ಯಾಲೆಸ್ತೀನ್ ಸಮಸ್ಯೆಯನ್ನು ಶಾಂತಿಯುತ ಮಾರ್ಗಗಳ ಮೂಲಕ ಪರಿಹರಿಸುವುದು ಮತ್ತು ದ್ವಿರಾಷ್ಟ್ರ ಪರಿಹಾರವನ್ನು ಮುನ್ನಡೆಸುವ ‘ನ್ಯೂಯಾರ್ಕ್ ಘೋಷಣೆ’ಯನ್ನು ಬೆಂಬಲಿಸುವ ನಿರ್ಣಯವನ್ನು ಭಾರತ ಶುಕ್ರವಾರ (ಸೆ.12) ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಬೆಂಬಲಿಸಿದೆ.

ಫ್ರಾನ್ಸ್ ಮಂಡಿಸಿದ ನಿರ್ಣಯದ ಪರವಾಗಿ 142 ಮತಗಳು, ವಿರುದ್ದ 10 ಮತಗಳು ಬಿದ್ದಿವೆ. 12 ರಾಷ್ಟ್ರಗಳು ಮತದಾನದಿಂದ ದೂರ ಉಳಿದಿವೆ. ಹೆಚ್ಚು ಮತಗಳು ಪರ ಬಿದ್ದಿರುವುದರಿಂದ ನಿರ್ಣಯ ಅಂಗೀಕಾರಗೊಂಡಿದೆ. ಅಮೆರಿಕ, ಇಸ್ರೇಲ್, ಅರ್ಜೆಂಟೀನಾ ಮತ್ತು ಹಂಗೇರಿ ನಿರ್ಣಯ ವಿರೋಧಿಸಿದ ರಾಷ್ಟ್ರಗಳಲ್ಲಿ ಸೇರಿವೆ.

‘ಪ್ಯಾಲೆಸ್ತೀನ್‌ ಸಮಸ್ಯೆಗಳ ಶಾಂತಿಯುತ ಇತ್ಯರ್ಥ ಮತ್ತು ದ್ವಿರಾಷ್ಟ್ರ ಪರಿಹಾರದ ಅನುಷ್ಠಾನದ ಕುರಿತು ನ್ಯೂಯಾರ್ಕ್ ಘೋಷಣೆಯ ಅನುಮೋದನೆ’ ಎಂಬ ಔಪಚಾರಿಕ ಶೀರ್ಷಿಕೆಯ ನಿರ್ಣಯವನ್ನು ಜುಲೈನಲ್ಲಿ ಫ್ರಾನ್ಸ್ ಮತ್ತು ಸೌದಿ ಅರೇಬಿಯಾ ಸಹ-ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮುನ್ನೆಲೆಗೆ ತರಲಾಗಿತ್ತು.

ನಿರ್ಣಯದ ಪ್ರಕಾರ, ಗಾಝಾದಲ್ಲಿನ ಯುದ್ಧವನ್ನು ಕೊನೆಗೊಳಿಸಲು, ದ್ವಿರಾಷ್ಟ್ರ ಪರಿಹಾರದ ಪರಿಣಾಮಕಾರಿ ಅನುಷ್ಠಾನದ ಆಧಾರದ ಮೇಲೆ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನ್ಯಾಯಯುತ, ಶಾಂತಿಯುತ ಮತ್ತು ಶಾಶ್ವತ ಇತ್ಯರ್ಥವನ್ನು ಸಾಧಿಸಲು ಮತ್ತು ಪ್ಯಾಲೆಸ್ತೀನಿಯರು, ಇಸ್ರೇಲಿಗಳು ಹಾಗೂ ಆ ಪ್ರದೇಶದ ಎಲ್ಲಾ ಜನರಿಗೆ ಉತ್ತಮ ಭವಿಷ್ಯವನ್ನು ನಿರ್ಮಿಸಲು ಸಾಮೂಹಿಕ ಕ್ರಮ ಕೈಗೊಳ್ಳಲು ರಾಷ್ಟ್ರಗಳು ಒಪ್ಪಿಕೊಂಡಿವೆ.

ಸಾರ್ವಭೌಮ ಮತ್ತು ಕಾರ್ಯಸಾಧ್ಯವಾದ ಪ್ಯಾಲೆಸ್ತೀನ್ ರಾಷ್ಟ್ರದ ಮಾನ್ಯತೆ ಸೇರಿದಂತೆ ದ್ವಿರಾಷ್ಟ್ರ ಪರಿಹಾರಕ್ಕೆ ಸ್ಪಷ್ಟವಾದ ಸಾರ್ವಜನಿಕ ಬದ್ಧತೆಯನ್ನು ಹೊರಡಿಸಲು ನಿರ್ಣಯದ ಮೂಲಕ ಇಸ್ರೇಲ್‌ಗೆ ರಾಷ್ಟ್ರಗಳು ಒತ್ತಾಯಿಸಿವೆ.

ಪ್ಯಾಲೆಸ್ತೀನಿಯರ ವಿರುದ್ಧದ ಹಿಂಸಾಚಾರ ಮತ್ತು ಪ್ರಚೋದನೆಯನ್ನು ತಕ್ಷಣವೇ ಕೊನೆಗೊಳಿಸಬೇಕು. ಪೂರ್ವ ಜೆರುಸಲೆಮ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್‌ ಪ್ರದೇಶದಲ್ಲಿನ ಎಲ್ಲಾ ವಸಾಹತು, ಭೂಕಬಳಿಕೆ ಮತ್ತು ಸ್ವಾಧೀನ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸಬೇಕು. ಯಾವುದೇ ಸ್ವಾಧೀನ ಯೋಜನೆ ಅಥವಾ ವಸಾಹತು ನೀತಿಯನ್ನು ಸಾರ್ವಜನಿಕವಾಗಿ ತ್ಯಜಿಸಬೇಕು ಮತ್ತು ವಸಾಹತುಗಾರರ ಹಿಂಸಾಚಾರವನ್ನು ಕೊನೆಗೊಳಿಸಬೇಕು ಎಂದು ನಿರ್ಣಯ ಇಸ್ರೇಲ್‌ಗೆ ಅಗ್ರಹಿಸಿದೆ.

ನಿರ್ಣಯವು ‘ಪ್ಯಾಲೆಸ್ತೀನ್ ಜನರ ಸ್ವ-ನಿರ್ಣಯದ ಹಕ್ಕಿಗೆ ಬೆಂಬಲ’ವನ್ನು ಪುನರುಚ್ಚರಿಸಿದೆ. ಇತ್ತೀಚಿನ ಬೆಳವಣಿಗೆಗಳು ಮತ್ತೊಮ್ಮೆ, ಎಂದಿಗಿಂತಲೂ ಹೆಚ್ಚಾಗಿ, ಭಯಾನಕ ಮಾನವ ಸಾವುನೋವು ಮತ್ತು ಮಧ್ಯಪ್ರಾಚ್ಯ ಸಂಘರ್ಷದ ನಿರಂತರತೆಯ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಗಂಭೀರ ಪರಿಣಾಮಗಳನ್ನು ಎತ್ತಿ ತೋರಿಸಿವೆ ಎಂದು ನಿರ್ಣಯ ಹೇಳಿದೆ.

ದ್ವಿರಾಷ್ಟ್ರ ಪರಿಹಾರ ಮತ್ತು ಬಲವಾದ ಅಂತಾರಾಷ್ಟ್ರೀಯ ಖಾತರಿಗಳ ಕಡೆಗೆ ನಿರ್ಣಾಯಕ ಕ್ರಮಗಳ ಕೊರತೆಯಿಂದ ಸಂಘರ್ಷವು ಹೆಚ್ಚಾಗುತ್ತದೆ ಮತ್ತು ಪ್ರಾದೇಶಿಕ ಶಾಂತಿ ಅಸ್ಪಷ್ಟವಾಗಿ ಉಳಿಯುತ್ತದೆ.
ಗಾಝಾ ಪ್ಯಾಲೆಸ್ತೀನ್ ರಾಷ್ಟ್ರದ ಅವಿಭಾಜ್ಯ ಅಂಗವಾಗಿದೆ. ಅದನ್ನು ಪಶ್ಚಿಮ ದಂಡೆಯೊಂದಿಗೆ ಏಕೀಕರಿಸಲ್ಪಡಬೇಕು. ಯಾವುದೇ ಆಕ್ರಮಣ, ಮುತ್ತಿಗೆ, ಪ್ರಾದೇಶಿಕ ಕಡಿತ ಅಥವಾ ಬಲವಂತದ ಸ್ಥಳಾಂತರ ಇರಬಾರದು ಎಂದು ನಿರ್ಣಯ ಹೇಳಿದೆ.

ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...