Homeಮುಖಪುಟ'ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ': ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

‘ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ’: ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

- Advertisement -
- Advertisement -

ಜನಾಂಗೀಯ ಸಂಘರ್ಷ ಭುಗಿಲೆದ್ದ ಬಳಿಕ ಮೊದಲ ಬಾರಿಗೆ ಶನಿವಾರ (ಸೆ.13) ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಭೇಟಿ ನೀಡಿದ್ದು, ಇಂಫಾಲ್ ಮತ್ತು ಚುರಚಂದಪುರದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಇದಕ್ಕೂ ಮೊದಲು, ಸಂಘರ್ಷದ ಪರಿಣಾಮ ಆಂತರಿಕವಾಗಿ ಸ್ಥಳಾಂತರಗೊಂಡ ಮೈತೇಯಿ ಮತ್ತು ಕುಕಿ-ಝೋ ಬುಡಕಟ್ಟು ಸಮುದಾಯಗಳ ಜನರನ್ನು (ಐಡಿಪಿಗಳು) ಪ್ರಧಾನಿ ಭೇಟಿಯಾಗಿದ್ದಾರೆ. ಈ ವೇಳೆ ಅವರು ನಡೆಸಿರುವ ಚರ್ಚೆಯ ಕುರಿತು ಎರಡೂ ಸಮುದಾಯಗಳ ಜನರನ್ನು ಅತೃಪ್ತಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನಿರಾಶ್ರಿತರಿಗೆ ಪ್ರಧಾನಿ ಜೊತೆ ಇಂತಿಷ್ಟೇ ಮಾತನಾಡಬೇಕು ಮತ್ತು ನಿರ್ದಿಷ್ಟ ವಿಷಯಗಳನ್ನು ಮಾತ್ರ ಪ್ರಸ್ತಾಪಿಸಬೇಕು ಎಂಬ ಒಂದು ಮಿತಿಯನ್ನು ನಿಗದಿಪಡಿಸಲಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿರುವ ಚುರಚಂದಪುರದ ಕೆಲವು ಸ್ಥಳೀಯರು, ಕೇಂದ್ರಾಡಳಿತ ಪ್ರದೇಶ ರಚನೆಯ ಮೂಲಕ ‘ಪ್ರತ್ಯೇಕ ಆಡಳಿತ’ದ ನಮ್ಮ ಬೇಡಿಕೆಯನ್ನು ಮುಂದಿಡಲು ಸಾಧ್ಯವಾಗಿಲ್ಲ” ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

“ಪ್ರತ್ಯೇಕ ಆಡಳಿತದ ಬಗ್ಗೆ ಪ್ರಧಾನಿಯೊಂದಿಗೆ ಏನನ್ನೂ ಕೇಳಬಾರದು ಎಂದು ನಮಗೆ ಸೂಚಿಸಲಾಗಿತ್ತು. ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಇತ್ಯಾದಿ ವಿಷಯಗಳ ಬಗ್ಗೆ ಮಾತ್ರ ಮಾತನಾಡಲು ಅನುಮತಿ ನೀಡಲಾಗಿತ್ತು” ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಚುರಚಂದಪುರದ ನಿವಾಸಿಯೊಬ್ಬರು ಹೇಳಿದ್ದಾಗಿ ವರದಿ ವಿವರಿಸಿದೆ.

ಪ್ರಧಾನಿ ಮೋದಿ ಹಿಂದಿಯಲ್ಲಿ ಮಾತನಾಡಿದ ಬಗ್ಗೆಯೂ ಸ್ಥಳೀಯರ ಒಂದು ಗುಂಪು ಅಸಮಾಧಾನ ವ್ಯಕ್ತಪಡಿಸಿದೆ.

“ಅವರು ಮಿಜೋರಾಂನಲ್ಲಿ ಇಂಗ್ಲಿಷ್‌ನಲ್ಲಿ ಭಾಷಣ ಮಾಡಿದ್ದರು. ಆದರೆ, ಚುರಚಂದಪುರದಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದ್ದಾರೆ. ಈ ಬಗ್ಗೆ ನಮಗೆ ಅಸಮಾಧಾನವಿದೆ. ಅವರು ನಮ್ಮ ಸಮಸ್ಯೆಗಳನ್ನು ಪರಿಹರಿಸಿಲ್ಲ. ಅಭಿವೃದ್ಧಿ ಪ್ಯಾಕೇಜ್ ಮೂಲಕ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ” ಎಂದು ಹೆಸರು ಬಹಿರಂಗಪಡಿಸಲು ಬಯಸದ ಮತ್ತೊಬ್ಬರು ಸ್ಥಳೀಯರು ಹೇಳಿದ್ದಾರೆ.

ಇದು ಒಬ್ಬ ವ್ಯಕ್ತಿಯ ಭಾವನೆಯಲ್ಲ, ಬದಲಾಗಿ ಸಾರ್ವಜನಿಕ ಭಾವನೆ ಎಂದು ಆ ಸ್ಥಳೀಯ ತಿಳಿಸಿದ್ದಾರೆ.

“ಸಂಘರ್ಷವನ್ನು ಪರಿಹರಿಸುವ ಯಾವುದೇ ಯೋಜನೆಗಳ ಬಗ್ಗೆ ಪ್ರಧಾನಿ ಮಾತನಾಡಿಲ್ಲ. ಸರ್ಕಾರಕ್ಕೆ ಯೋಜನೆಗಳಿದ್ದರೆ, ಅವರೇ ಏನಾದರೂ ಹೇಳಬೇಕೆಂದು ನಾವೆಲ್ಲರೂ ಬಯಸುತ್ತಿದ್ದೆವು. ಅಲ್ಲದೆ, ಭಾಷಣವೂ ಸಂಕ್ಷಿಪ್ತವಾಗಿತ್ತು. ಆದರೆ, ಪ್ರತಿಕೂಲ ಹವಾಮಾನದ ಹೊರತಾಗಿಯೂ ಅವರು ಬಂದಿದ್ದಕ್ಕೆ ನಮಗೆ ಸಂತೋಷವಾಗಿದೆ” ಎಂದು ಮತ್ತೊಬ್ಬರು ಸ್ಥಳೀಯ ಮುಂಗ್ ಹಂಘಲ್ ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ಇಂಫಾಲದಲ್ಲಿ ಪ್ರಧಾನಿ ಮೋದಿ ಜನರನ್ನು ಉದ್ದೇಶಿಸಿ ಮಾತನಾಡುವ ಮೊದಲು ನಿರಾಶ್ರಿತರನ್ನು ಭೇಟಿಯಾದಾಗ, ಅವರಲ್ಲಿ ಕೆಲವರು ಕಣ್ಣೀರು ಹಾಕಿದ್ದಾರೆ ಎಂದು ವರದಿಯಾಗಿದೆ. ಪ್ರಧಾನಿಯ ಮಾತುಗಳಿಂದ ಸ್ಥಳೀಯರು ತೃಪ್ತರಾಗಿಲ್ಲ ಎಂದು ವರದಿ ಹೇಳಿದೆ.

ಚುರಚಂದಪುರದಂತೆಯೇ, ಇಂಫಾಲದ ಜನರೂ ಕೂಡ ಪ್ರಧಾನಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಾರೆಂದು ನಿರೀಕ್ಷಿಸಿದ್ದರು. “ಪ್ರಧಾನಿಯ ಭಾಷಣ ಚೆನ್ನಾಗಿತ್ತು, ಆದರೆ ನನಗೆ ಖಚಿತವಿಲ್ಲ. ಪರಿಹಾರದ ಹಾದಿ ನಮಗೆ ತಿಳಿದಿಲ್ಲ” ಎಂದು ಇಂಫಾಲದ ಸ್ಥಳೀಯ ಸೂರಜ್‌ಕುಮಾರ್ ಸಿಂಗ್ ಹೇಳಿದ್ದಾರೆ.

“ಪ್ರಧಾನಿ ಭೇಟಿಯಿಂದ ಕೆಲವು ಅಭಿವೃದ್ಧಿ ಯೋಜನೆಗಳು ಘೋಷಣೆಯಾಗಿವೆ. ಆದರೆ, ಪರಿಹಾರ ಶಿಬಿರಗಳಲ್ಲಿ ಇನ್ನೂ ನರಳುತ್ತಿರುವ ಸ್ಥಳಾಂತರಗೊಂಡ ಮೈತೇಯಿ ಕುಟುಂಬಗಳಿಗೆ ಅದು ದೊಡ್ಡ ಭರವಸೆ ನೀಡಿಲ್ಲ. ಪುನರ್ವಸತಿ ಬಗ್ಗೆ ಸ್ಪಷ್ಟತೆಯನ್ನು ನಾವು ನಿರೀಕ್ಷಿಸಿದ್ದೆವು. ಜನರು ಯಾವಾಗ ತಮ್ಮ ಮನೆಗಳಿಗೆ ಮರಳಲು ಸಾಧ್ಯವಾಗುತ್ತದೆ, ಅವರ ಸುರಕ್ಷತೆಯನ್ನು ಹೇಗೆ ಖಚಿತಪಡಿಸಿಕೊಳ್ಳಲಾಗುತ್ತದೆ ಮತ್ತು ಯಾವ ಪುನರ್ವಸತಿ ಪ್ಯಾಕೇಜ್‌ಗಳನ್ನು ನೀಡಲಾಗುತ್ತದೆ?”ಎಂದು ಇಂಫಾಲದ ನಿವಾಸಿ ಲೀಶಾಂಗ್ಥೆಮ್ ಪ್ರಿಯೊ ಪ್ರಶ್ನಿಸಿದ್ದಾರೆ.

Courtesy :newindianexpress.com

ಮೋದಿ ಮಣಿಪುರ ಭೇಟಿ ದೊಡ್ಡ ವಿಷಯವೇನಲ್ಲ, ‘ಮತಗಳ್ಳತನ’ ಈಗ ದೇಶದ ಮುಂದಿರುವ ಪ್ರಮುಖ ಚರ್ಚೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...