Homeಮುಖಪುಟಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ...

ಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ ಚು. ಆಯುಕ್ತ ಎಸ್. ವೈ ಖುರೈಶಿ

- Advertisement -
- Advertisement -

‘ಮತಗಳ್ಳತನದ’ ಆರೋಪಗಳಿಗೆ ಚುನಾವಣಾ ಆಯೋಗ ನೀಡಿರುವ ಪ್ರತಿಕ್ರಿಯೆಯನ್ನು ಭಾನುವಾರ ತೀವ್ರವಾಗಿ ಟೀಕಿಸಿದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೈಶಿ, “ಚುನಾವಣಾ ಆಯೋಗ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ‘ಆಕ್ಷೇಪಾರ್ಹ ಮತ್ತು ಆಕ್ರಮಣಕಾರಿ’ ಭಾಷೆಯಲ್ಲಿ ಕಿರುಚಾಡುವ ಬದಲು, ಅವರ ಆರೋಪಗಳ ಕುರಿತು ತನಿಖೆಗೆ ಆದೇಶಿಸಬೇಕಾಗಿತ್ತು ಎಂದು ಹೇಳಿದ್ದಾರೆ.

ಮತಗಳ್ಳತನದ ಕುರಿತು ಹೈಡ್ರೋಜನ್ ಬಾಂಬ್ ಶೀಘ್ರದಲ್ಲೇ ಬರಲಿದೆ ಎಂಬ ರಾಹುಲ್ ಗಾಂಧಿಯ ಹೇಳಿಕೆ, ಅದೊಂದು ‘ರಾಜಕೀಯ ವಾಕ್ಚಾತುರ್ಯ’. ಆದರೆ, ಅವರು ಮಾಡಿರುವ ಆರೋಪಗಳು ಗಂಭೀರವಾದದ್ದು. ಅವುಗಳ ಬಗ್ಗೆ ಸೂಕ್ತವಾದ ತನಿಖೆಯ ನಡೆಯಬೇಕು ಎಂದು ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಖುರೈಶಿ ತಿಳಿಸಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್‌) ನಡೆಸಿದ ವಿಧಾನದ ಬಗ್ಗೆ ಖುರೈಶಿ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡಿದ್ದು, ಅದು (ಚು. ಆಯೋಗ) ‘ಪಂಡೋರಾ ಪೆಟ್ಟಿಗೆ’ಯನ್ನು ತೆರೆಯುತ್ತಿದೆ. ಮಾತ್ರವಲ್ಲದೆ, ‘ಕಣಜದ ಗೂಡಿಗೆ’ ಕೈ ಹಾಕಿದೆ. ಈ ಪ್ರಕ್ರಿಯೆ ಅದಕ್ಕೇ (ಚು. ಆಯೋಗಕ್ಕೆ) ಹಾನಿ ಮಾಡಲಿದೆ ಎಂದು ಹೇಳಿದ್ದಾರೆ.

“ಚುನಾವಣಾ ಆಯೋಗವನ್ನು ಟೀಕಿಸುವುದು ನೋಡುವಾಗ ನನಗೆ ತುಂಬಾ ನೋವುಂಟಾಗುತ್ತದೆ. ಏಕೆಂದರೆ, ನಾನೊಬ್ಬ ಭಾರತ ನಾಗರಿಕನಾಗಿ, ಮುಖ್ಯ ಚುನಾವಣಾ ಆಯುಕ್ತನಾಗಿ ಆ ಸಂಸ್ಥೆಯ ಉನ್ನತಿಗಾಗಿ ಒಂದೆರಡು ಇಟ್ಟಿಗೆಗಳನ್ನು ಇಟ್ಟಿದ್ದೇನೆ ಎಂದು ಜಗ್ಗರ್ನಾಟ್ ಬುಕ್ಸ್ ಪ್ರಕಟಿಸಿದ ತಮ್ಮ ಹೊಸ ಪುಸ್ತಕ ‘ಡೆಮಾಕ್ರಸೀಸ್ ಹಾರ್ಟ್‌ಲ್ಯಾಂಡ್’ ಬಿಡುಗಡೆಗೆ ಮುಂಚಿತವಾಗಿ ಖುರೈಶಿ ಪಿಟಿಐಗೆ ತಿಳಿಸಿದ್ದಾರೆ.

“ಚುನಾವಣಾ ಆಯೋಗ ದಾಳಿಗೆ ಒಳಗಾಗುವುದು ಅಥವಾ ಯಾವುದೇ ರೀತಿಯಲ್ಲಿ ದುರ್ಬಲಗೊಂಡಿರುವುದನ್ನು ನೋಡಿದಾಗ ನನಗೆ ಕಳವಳವಾಗುತ್ತದೆ. ಈ ಬಗ್ಗೆ ಆಯೋಗ ಸ್ವತಃ ಆತ್ಮಾವಲೋಕನ ಮಾಡಿಕೊಳ್ಳಬೇಕು. ತನ್ನ ನಿರ್ಧಾರಗಳ ಮೇಲೆ ಪ್ರಭಾವ ಬೀರುವ ಎಲ್ಲಾ ಶಕ್ತಿಗಳು ಮತ್ತು ಒತ್ತಡಗಳನ್ನು ಎದುರಿಸುವುದು ಆಯೋಗದ ಜವಾಬ್ದಾರಿಯಾಗಿದೆ” ಎಂದು 2010 ಮತ್ತು 2012 ರ ನಡುವೆ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಖುರೈಶಿ ಹೇಳಿದ್ದಾರೆ.

“ಆಯೋಗವು ಜನರ ವಿಶ್ವಾಸವನ್ನು ಗೆಲ್ಲಬೇಕು. ವಿರೋಧ ಪಕ್ಷಗಳ ವಿಶ್ವಾಸವೂ ಬೇಕು. ನಾನು ಯಾವಗಲೂ ವಿರೋಧ ಪಕ್ಷಗಳಿಗೆ ಆದ್ಯತೆ ನೀಡುತ್ತಿದ್ದೆ. ಏಕೆಂದರೆ, ಅವರು ದುರ್ಬಲರು. ವಿರೋಧ ಪಕ್ಷವು ಅಧಿಕಾರದಿಂದ ಹೊರಗುಳಿದಿರುವುದರಿಂದ ಅಧಿಕಾರದಲ್ಲಿರುವ ಪಕ್ಷಕ್ಕೆ ಅದರಷ್ಟು ಮುದ್ದು ಅಗತ್ಯವಿಲ್ಲ ಎಂದು ಖುರೈಶಿ ಅಭಿಪ್ರಾಯಪಟ್ಟಿದ್ದಾರೆ.

“ನಾನು ಮುಖ್ಯ ಚುನಾವಣಾ ಆಯುಕ್ತ ಆಗಿದ್ದಾಗ ವಿರೋಧ ಪಕ್ಷಗಳಿಗೆ ಆಯೋಗದ ಬಾಗಿಲು ತೆರೆದಿಡಿ. ಅವರಿಗೆ ತಕ್ಷಣ ಅಪಾಯಿಂಟ್‌ಮೆಂಟ್ ಕೊಡಿ. ಅವರ ಮಾತನ್ನು ಆಲಿಸಿ, ಅವರೊಂದಿಗೆ ಮಾತನಾಡಿ, ಅವರಿಗೆ ಏನಾದರು ಸಣ್ಣ ಸಹಾಯ ಬೇಕಾದರೆ, ಬೇರೆಯವರಿಗೆ ಹಾನಿಯಾಗದಿದ್ದರೆ ಅದನ್ನು ಮಾಡಿ” ಎಂದು ನನ್ನ ಸಿಬ್ಬಂದಿಗೆ ಸೂಚಿಸಿದ್ದೆ” ಎಂದು ಖುರೈಶಿ ಹೇಳಿದ್ದಾರೆ.

ಇಲ್ಲಿ ವಿರೋಧ ಪಕ್ಷಗಳು ಆಗಾಗ ಸುಪ್ರೀಂ ಕೋರ್ಟ್‌ಗೆ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ. ವಾಸ್ತವವಾಗಿ, 23 ಪಕ್ಷಗಳು ತಮಗೆ ಅಪಾಯಿಂಟ್‌ಮೆಂಟ್ ಸಿಗುತ್ತಿಲ್ಲ ಮತ್ತು ಯಾರೂ ತಮ್ಮ ಮಾತನ್ನು ಕೇಳುತ್ತಿಲ್ಲ ಎಂದು ಹೇಳಬೇಕಾಗಿ ಬಂದಿದೆ. ರಾಹುಲ್ ಗಾಂಧಿಯವರ ಆರೋಪಗಳ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಕೇಳುವ ಬದಲು, ಚುನಾವಣಾ ಆಯೋಗ ತನಿಖೆಗೆ ಆದೇಶಿಸಬೇಕಿತ್ತು ಎಂದಿದ್ದಾರೆ.

“ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕ, ಬೀದಿಯಲ್ಲಿ ಹೋಗುವ ವ್ಯಕ್ತಿಯಲ್ಲ. ಅವರ ಆರೋಪಗಳ ಕುರಿತು ಚುನಾವಣಾ ಆಯೋಗ ತನಿಖೆ ನಡೆಸಬೇಕು. ಬದಲಾಗಿ, ಅವರ ವಿರುದ್ದವೇ ಕಿರುಚಾಡುವುದಲ್ಲ. ಚುನಾವಣಾ ಆಯೋಗ ನಡೆದುಕೊಳ್ಳುವ ರೀತಿ ಇದಲ್ಲ” ಎಂದು ಖುರೈಶಿ ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಲಕ್ಷಾಂತರ ಜನರನ್ನು ಪ್ರತಿನಿಧಿಸುತ್ತಿದ್ದಾರೆ. ಅವರು ಲಕ್ಷಾಂತರ ಜನರ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಅಂತಹ ವ್ಯಕ್ತಿಗೆ ಅಫಿಡವಿಟ್ ಸಲ್ಲಿಸುವಂತೆ ಚುನಾವಣಾ ಆಯೋಗ ಸೂಚಿಸಿದ ರೀತಿ, ಬಳಸಿದ ಭಾಷೆ ‘ಆಕ್ಷೇಪಾರ್ಹ ಮತ್ತು ಆಕ್ರಮಣಕಾರಿಯಾಗಿದೆ’ ಎಂದು ಖುರೈಶಿ ಹೇಳಿದ್ದಾರೆ.

ನೇಪಾಳದ ಪ್ರತಿಭಟನೆಗಳ ಕುರಿತು ವಿಡಿಯೋ: ಕಂಟೆಂಟ್ ಕ್ರಿಯೇಟರ್ ವಿರುದ್ಧ ‘ದೇಶದ್ರೋಹ’ ಪ್ರಕರಣ ದಾಖಲಿಸಿದ ಯುಪಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...