Homeಕರ್ನಾಟಕಡ್ರಗ್ ಪೆಡ್ಲರ್‌ಗಳ ಜೊತೆ ಸಂಪರ್ಕ ಆರೋಪ: 11 ಮಂದಿ ಪೊಲೀಸರು ಅಮಾನತು

ಡ್ರಗ್ ಪೆಡ್ಲರ್‌ಗಳ ಜೊತೆ ಸಂಪರ್ಕ ಆರೋಪ: 11 ಮಂದಿ ಪೊಲೀಸರು ಅಮಾನತು

- Advertisement -
- Advertisement -

ಮಾದಕವಸ್ತು ಮಾರಾಟಗಾರರ ಗುಂಪಿನೊಂದಿಗೆ ಶಾಮೀಲಾಗಿರುವ ಆರೋಪದ ಮೇಲೆ ಇನ್‌ಸ್ಪೆಕ್ಟರ್‌ ಸೇರಿದಂತೆ ಬೆಂಗಳೂರಿನ ಹನ್ನೊಂದು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಚಾಮರಾಜಪೇಟೆ ಪೊಲೀಸ್ ಇನ್‌ಸ್ಪೆಕ್ಟರ್‌ ಟಿ ಮಂಜಣ್ಣ, ಹೆಡ್ ಕಾನ್‌ಸ್ಟೆಬಲ್‌ಗಳಾದ ರಮೇಶ್ ಮತ್ತು ಶಿವರಾಜ್, ಕಾನ್‌ಸ್ಟೆಬಲ್‌ಗಳಾದ ಮಧುಸೂದನ್, ಪ್ರಸನ್ನ, ಶಂಕರ್ ಬೆಳಗಲಿ ಮತ್ತು ಆನಂದ್, ಜೆಜೆ ನಗರ ಪೊಲೀಸ್ ಸಿಬ್ಬಂದಿಯಾದ ಸಹಾಯಕ ಸಬ್-ಇನ್‌ಸ್ಪೆಕ್ಟರ್‌ ಕುಮಾರ್, ಹೆಡ್ ಕಾನ್‌ಸ್ಟೆಬಲ್ ಆನಂದ್, ಕಾನ್‌ಸ್ಟೆಬಲ್ ಬಸವನಗೌಡ ಮತ್ತು ಕಾನ್‌ಸ್ಟೆಬಲ್ ಮಹೇಶ್ ಕುಮಾರ್ ಅಮಾನತುಗೊಂಡವರು.

ಆಗಸ್ಟ್ 22ರಂದು ಆರ್.ಆರ್ ನಗರ ಪೊಲೀಸರು ಸಲ್ಮಾನ್, ನಯಾಝುಲ್ಲಗ್ ಖಾನ್, ನಯಾಝ್ ಖಾನ್ ಮತ್ತು ತಾಹೆರ್ ಪಟೇಲ್ ಸೇರಿದಂತೆ ಆರು ಮಂದಿ ಮಾದಕವಸ್ತು ಮಾರಾಟಗಾರರನ್ನು ಬಂಧಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಗಳು ಪ್ರಿಸ್ಕ್ರಿಪ್ಷನ್ ಮೂಲಕ ನೀಡಲಾಗುವ ಟೈಡಾಲ್ ಮಾತ್ರೆಗಳನ್ನು ವಿದ್ಯಾರ್ಥಿಗಳು ಮತ್ತು ಯುವ ವೃತ್ತಿಪರರಿಗೆ ಮಾದಕ ದ್ರವ್ಯವಾಗಿ ಮಾರಾಟ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಕಾರ್ಯಾಚರಣೆಯ ಸಮಯದಲ್ಲಿ ಸುಮಾರು 1,000 ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

“ನಮಗೆ ಆಶ್ಚರ್ಯವಾಗುವಂತೆ, ಸಲ್ಮಾನ್ ಮಾದಕ ವಸ್ತು ಮಾರಾಟಕ್ಕೆ ಪೊಲೀಸರ ಬೆಂಬಲವಿದೆ ಎಂದು ಹೇಳಿಕೊಂಡಿದ್ದ. ಆರಂಭದಲ್ಲಿ ಆತ ನಮ್ಮನ್ನು ದಾರಿ ತಪ್ಪಿಸಲು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾನೆಂದು ನಾವು ಭಾವಿಸಿದ್ದೆವು. ಆದಾಗ್ಯೂ, ಸಲ್ಮಾನ್ ಮತ್ತು ಆತನ ಸಹಚರರ ಮೊಬೈಲ್ ಫೋನ್‌ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅವರು ಚಾಮರಾಜಪೇಟೆ ಮತ್ತು ಜೆಜೆ ನಗರದ ಪೊಲೀಸ್ ಸಿಬ್ಬಂದಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆಂದು ತಿಳಿದುಬಂದಿದೆ. ಪೊಲೀಸರಿಗೆ ಕಾರ್ಯನಿರ್ವಹಿಸಲು ಅವರ ಅಧಿಕಾರ ವ್ಯಾಪ್ತಿ ಇರುವಂತೆ, ಸಲ್ಮಾನ್ ಮತ್ತು ಅವನ ಗ್ಯಾಂಗ್ ಚಾಮರಾಜಪೇಟೆ ಮತ್ತು ಜೆಜೆ ನಗರ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದರು. ಆರೋಪಿ ಪೊಲೀಸರಿಗೆ ಮಾದಕವಸ್ತು ಮಾರಾಟಗಾರರ ಚಲನವಲನಗಳು, ಮಾದಕ ದ್ರವ್ಯಗಳನ್ನು ಮಾರಾಟ ಮಾಡುವ ಸ್ಥಳಗಳು ಇತ್ಯಾದಿ ತಿಳಿದಿತ್ತು” ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಎಸ್. ಗಿರೀಶ್ ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಬಂಧಿತ ಮಾದಕವಸ್ತು ವ್ಯಾಪಾರಿಗಳು ಸುಗಮವಾಗಿ ತಮ್ಮ ಕೆಲಸ ಮಾಡಲು ಪ್ರತಿ ತಿಂಗಳು 2 ಲಕ್ಷ ರೂ.ಗಳವರೆಗೆ ಹಣವನ್ನು ಪೊಲೀಸರಿಗೆ ಪಾವತಿಸುತ್ತಿದ್ದರು. ಕೆಲ ಪೊಲೀಸ್ ಸಿಬ್ಬಂದಿ ವ್ಯಾಪಾರಿಗಳೊಂದಿಗೆ ಪಾರ್ಟಿಗಳಲ್ಲಿ ಭಾಗವಹಿಸಿದ್ದಾರೆಂದು ಆರೋಪಿಸಲಾಗಿದೆ.

ಪ್ರಕರಣ ಸಂಬಂಧ ಕೆಂಗೇರಿ ಗೇಟ್‌ನ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಭರತ್ ರೆಡ್ಡಿ ಅವರು ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಎಸ್. ಗಿರೀಶ್ ಅವರಿಗೆ ವಿವರವಾದ ವರದಿಯನ್ನು ಸಲ್ಲಿಸಿದ್ದಾರೆ. ನಂತರ ತನಿಖೆಯನ್ನು ವಿಜಯನಗರ ಎಸಿಪಿ ಚಂದನ್ ಅವರಿಗೆ ಹಸ್ತಾಂತರಿಸಲಾಗಿದೆ. ವಿಚಾರಣೆಯಲ್ಲಿ ಅಮಾನತುಗೊಂಡ ಪೊಲೀಸ್ ಅಧಿಕಾರಿಗಳು ಮಾದಕವಸ್ತು ಕಳ್ಳಸಾಗಣೆದಾರರನ್ನು ರಕ್ಷಿಸುವಲ್ಲಿ ಭಾಗಿಯಾಗಿರುವುದು ದೃಢಪಟ್ಟಿದೆ ಎಂದು ವರದಿಯಾಗಿದೆ.

ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಇನ್‌ಸ್ಪೆಕ್ಟರ್‌ ಮಂಜಣ್ಣ ಅವರನ್ನು ಅಮಾನತುಗೊಳಿಸಿದರೆ, ಇತರ ಸಿಬ್ಬಂದಿಯನ್ನು ಡಿಸಿಪಿ ಗಿರೀಶ್ ಅಮಾನತುಗೊಳಿಸಿದ್ದಾರೆ.

ಮಾದಕ ವಸ್ತುಗಳ ಜಾಲಗಳನ್ನು ಹತ್ತಿಕ್ಕುವ ಬಗ್ಗೆ ಧ್ವನಿ ಎತ್ತುತ್ತಿದ್ದ ನಗರ ಪೊಲೀಸರಿಗೆ ಈ ಪ್ರಕರಣ ಮುಜುಗರ ತಂದಿದೆ. ನಿಷೇಧಿತ ಮಾತ್ರೆಗಳು ಎನ್‌ಡಿಪಿಎಸ್‌ ಕಾಯ್ದೆಯಡಿಯಲ್ಲಿ ಬರದ ಕಾರಣ, ಅಂತಹ ಪ್ರಕರಣಗಳ ವಿಚಾರಣೆ ಇನ್ನೂ ಕಷ್ಟಕರವಾಗಿದೆ ಎಂದು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಹಾಗಾಗಿ, ವೈದ್ಯಕೀಯ ವ್ಯವಸ್ಥೆಗಳ ದುರ್ಬಳಕೆಗೆ ಸಂಬಂಧಪಟ್ಟ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 278ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಕರ್ನಾಟಕ ಸರ್ಕಾರ ರಾಜ್ಯವನ್ನು ಮಾದಕವಸ್ತು ಮುಕ್ತಗೊಳಿಸಲು ಪ್ರತಿಜ್ಞೆ ಮಾಡುತ್ತಿರುವ ಸಮಯದಲ್ಲಿ ಪೊಲೀಸ್ ಸಿಬ್ಬಂದಿಯೇ ಮಾದಕವಸ್ತು ಜಾಲದ ಜೊತೆ ಶಾಮೀಲಾಗಿ ಅಮಾನತುಗೊಂಡಿರುವುದು ವಿಪರ್ಯಾಸ.

ಹಾಸನ ಅಪಘಾತ: ಘಟನೆಗೆ ಕೋಮು ಬಣ್ಣ ಬಳಿಯುವವರ ಮೇಲೆ ಕಾನೂನು ಕ್ರಮ; ಸಚಿವ ಕೃಷ್ಣ ಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...