Homeಕರ್ನಾಟಕ'ರಾಜ್ಯದಲ್ಲಿ ವಿದೇಶಿ ವಿವಿಗಳಿಗೆ ಅವಕಾಶ’ ಎಸ್‌ಇಪಿ ವರದಿಗೆ ತದ್ವಿರುದ್ಧ: ದುರ್ಗೇಶ್ ಬರಗೂರು

‘ರಾಜ್ಯದಲ್ಲಿ ವಿದೇಶಿ ವಿವಿಗಳಿಗೆ ಅವಕಾಶ’ ಎಸ್‌ಇಪಿ ವರದಿಗೆ ತದ್ವಿರುದ್ಧ: ದುರ್ಗೇಶ್ ಬರಗೂರು

- Advertisement -
- Advertisement -

ಇತ್ತೀಚೆಗೆ ಲಂಡನ್ ಪ್ರವಾಸ ಕೈಗೊಂಡಿದ್ದ ಉನ್ನತ ಶಿಕ್ಷಣ ಸಚಿವರು ರಾಜ್ಯದಲ್ಲಿ ವಿದೇಶಿ ವಿಶ್ವ ವಿದ್ಯಾನಿಲಯಗಳಿಗೆ ಅವಕಾಶ ಕಲ್ಪಿಸುವುದಾಗಿ ಹೇಳಿರುವುದು ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಆಯೋಗ ವರದಿಗೆ ತದ್ವಿರುದ್ಧವಾಗಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ (ಕೆವಿಎಸ್‌) ರಾಜ್ಯ ಸಂಚಾಲಕ ದುರ್ಗೇಶ್ ಬರಗೂರು ಹೇಳಿದ್ದಾರೆ.

ಭಾನುವಾರ (ಸೆ.14) ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಶಿಕ್ಷಣ ನೀತಿ ಆಯೋಗವು ವಿದೇಶಿ ವಿಶ್ವ ವಿದ್ಯಾನಿಲಯಗಳಿಗೆ ಅವಕಾಶ ನೀಡಬಾರದೆಂದು ವರದಿಯಲ್ಲಿ ಸ್ಪಷ್ಟವಾಗಿ ಹೇಳಿದೆ. ಹೀಗಿರುವಾಗ ಉನ್ನತ ಶಿಕ್ಷಣ ಸಚಿವರ ಹೇಳಿಕೆಯು ರಾಜ್ಯ ಸರ್ಕಾರದ ನಿಲುವಿಗೆ ವಿರುದ್ದವಾಗಿದೆ ಎಂದಿದ್ದಾರೆ.

ರಾಜ್ಯದ ಸರ್ಕಾರಿ ವಿಶ್ವ ವಿದ್ಯಾನಿಲಯಗಳು ಅನುದಾನಗಳಿಲ್ಲದೇ, ಅಧ್ಯಾಪಕರ ಕೊರತೆಯಿಂದ ಮತ್ತು ಮೂಲಭೂತ ಸೌಕರ್ಯಗಳ ಸಮಸ್ಯೆಗಳಿಂದ ತೀವ್ರವಾಗಿ ಬಳಲುತ್ತಿವೆ. ಇಂತಹ ಸಂದರ್ಭದಲ್ಲಿ ಪ್ರಸ್ತುತ ವಿಶ್ವ ವಿದ್ಯಾನಿಲಯಗಳನ್ನು ಅಭಿವೃದ್ಧಿಪಡಿಸುವುದರ ಕಡೆ ಗಮನ ನೀಡುವುದು ಬಿಟ್ಟು, ವಿದೇಶಿ ವಿಶ್ವ ವಿದ್ಯಾನಿಲಯಗಳಿಗೆ ಅವಕಾಶ ಕಲ್ಪಿಸಲಾಗುವುದೆಂದು ಹೇಳಿರುವುದು ಹಾಸ್ಯಾಸ್ಪದವಾಗಿದೆ. ಪ್ರಸ್ತುತ ಸರ್ಕಾರಿ ಕಾಲೇಜುಗಳಲ್ಲಿರುವ ಶುಲ್ಕಗಳನ್ನು ಭರಿಸಲು ಸಾಧ್ಯವಾಗದೇ, ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ದೂರ ಉಳಿಯುತ್ತಿದ್ದಾರೆ ಎಂದು ದುರ್ಗೇಶ್ ಹೇಳಿದ್ದಾರೆ.

ಸರ್ಕಾರ ನಿಜವಾಗಿಯೂ ನಮ್ಮ ಸಾರ್ವಜನಿಕ ಸಂಸ್ಥೆಗಳನ್ನು ಸುಧಾರಿಸಲು ಬದ್ಧವಾಗಿದ್ದರೆ, ಅದು ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಬೇಕು. ಕಾರ್ಪೊರೇಟ್ ಸಂಸ್ಥೆಗಳಿಗೆ ನೀಡುವ ಬೃಹತ್ ತೆರಿಗೆ ವಿನಾಯಿತಿಗಳನ್ನು ನಿಲ್ಲಿಸಬೇಕು ಮತ್ತು ಶಾಸಕ, ಸಚಿವರ ಸಂಬಳ ಹಾಗೂ ಭತ್ಯೆಗಳನ್ನು ಕಡಿತಗೊಳಿಸಬೇಕು. ಆ ಹಣವನ್ನು ಶಿಕ್ಷಣದ ಸಧೃಡೀಕರಣಕ್ಕೆ ವಿನಿಯೋಗಿಸಬೇಕು. ಎಲ್ಲರಿಗೂ ಉಚಿತ, ಗುಣಮಟ್ಟದ ಶಿಕ್ಷಣವನ್ನು ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ವೈದ್ಯಕೀಯ ಶಿಕ್ಷಣದಿಂದ ದಲಿತರನ್ನು ಹೊರಗಿಡುವ ಕುತಂತ್ರ!

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್‌ಆರ್‌ಐ ಕೋಟಾವನ್ನು ಜಾರಿಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರ, ದಲಿತ, ಮಧ್ಯಮ ವರ್ಗದ ಬಡ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದಿಂದ ದೂರ ತಳ್ಳುವ ಕುತಂತ್ರವಾಗಿದೆ. ಅಷ್ಟೇ ಅಲ್ಲದೇ, ಸೀಟುಗಳನ್ನು ಮಾರಾಟ ಮಾಡಲು ಅವಕಾಶ ನೀಡುವುದು ಪ್ರಜಾಸತ್ತಾತ್ಮಕ ಶಿಕ್ಷಣ, ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯದ ಗುಣಮಟ್ಟದ ತಳಹದಿಯ ಮೇಲಿನ ನೇರ ಪ್ರಹಾರವಾಗಿದೆ ಎಂದು ದುರ್ಗೇಶ್ ಬರಗೂರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಪಡೆಯಲು ‘ನೀಟ್’ ಪರೀಕ್ಷೆ ಜಾರಿಯಲ್ಲಿದ್ದು, ಇದರಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ರಷ್ಟು ಅಂಕಗಳನ್ನು ಗಳಿಸಿದ್ದರೂ ಪ್ರವೇಶಾತಿ ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ‘ನೀಟ್’ ಪರೀಕ್ಷೆ ರದ್ದು ಮಾಡುವುದು ಬಿಟ್ಟು, ಎನ್‌ಆರ್‌ಐ ಕೋಟಾ ಜಾರಿ ಮಾಡುತ್ತಿರುವುದು ಬಡವರ, ಮಧ್ಯಮ ವರ್ಗದವರ ಕನಸುಗಳನ್ನು ನುಚ್ಚುನೂರು ಮಾಡುವಾದಾಗಿದೆ ಮತ್ತು ವಿದ್ಯಾರ್ಥಿ ವಿರೋಧಿಯಾಗಿದೆ ಎಂದು ಹೇಳಿದ್ದಾರೆ.

ಡ್ರಗ್ ಪೆಡ್ಲರ್‌ಗಳ ಜೊತೆ ಸಂಪರ್ಕ ಆರೋಪ: 11 ಮಂದಿ ಪೊಲೀಸರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...