Homeಮುಖಪುಟವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ವಕ್ಫ್ (ತಿದ್ದುಪಡಿ) ಕಾಯ್ದೆ 2025ರ ಕೆಲವು ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ಇಂದು (ಸೆಪ್ಟೆಂಬರ್ 15) ತಡೆ ನೀಡಿದೆ ಎಂದು ವರದಿಯಾಗಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಅವರನ್ನೊಳಗೊಂಡ ಪೀಠವು ಈ ಕೆಳಗಿನ ನಿಬಂಧನೆಗಳಿಗೆ ತಡೆ ನೀಡಿದೆ ಎಂದು livelaw.in ವರದಿ ಮಾಡಿದೆ.

1. ವಕ್ಫ್ ಮಾಡಲು ಒಬ್ಬರು ವ್ಯಕ್ತಿಯು 5 ವರ್ಷಗಳ ಕಾಲ ಇಸ್ಲಾಂ ಧರ್ಮದ ಅನುಯಾಯಿಯಾಗಿರಬೇಕು ಎಂಬ ಸೆಕ್ಷನ್ 3(1)(r) ನಲ್ಲಿರುವ ನಿಬಂಧನೆಯನ್ನು ರಾಜ್ಯ ಸರ್ಕಾರಗಳು ಈ ಷರತ್ತಿನ ನಿರ್ಣಯಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸುವವರೆಗೆ ತಡೆಹಿಡಿಯಲಾಗಿದೆ.

2. ವಕ್ಫ್ ಆಸ್ತಿಯು ಸರ್ಕಾರಿ ಆಸ್ತಿಯನ್ನು ಅತಿಕ್ರಮಣ ಮಾಡಿದೆಯೇ ಎಂಬ ವಿವಾದವನ್ನು ನಿರ್ಧರಿಸಲು ಸರ್ಕಾರದ ನಿಯೋಜಿತ ಅಧಿಕಾರಿಗೆ ಅವಕಾಶ ನೀಡುವ ನಿಬಂಧನೆಯನ್ನು ತಡೆಹಿಡಿಯಲಾಗಿದೆ.

ಕಾರ್ಯನಿರ್ವಾಹಕ ಅಧಿಕಾರಿಯು ವೈಯಕ್ತಿಕ ನಾಗರಿಕರ ಹಕ್ಕುಗಳನ್ನು ನಿರ್ಣಯಿಸಲು ಅನುಮತಿಸಲಾಗುವುದಿಲ್ಲ. ಇದು ಅಧಿಕಾರಗಳ ಪ್ರತ್ಯೇಕತೆಯನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ. ಆದಾಗ್ಯೂ, ಟ್ರಿಬ್ಯೂನಲ್ (ನ್ಯಾಯಾಧಿಕರಣ) ಒಂದು ವಿಷಯದ ಬಗ್ಗೆ ಅಂತಿಮ ತೀರ್ಪು ಅಥವಾ ನಿರ್ಧಾರವನ್ನು ನೀಡುವವರೆಗೆ, ಆ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಮೂರನೇ ವ್ಯಕ್ತಿ (ಅಂದರೆ, ವಿಷಯದಲ್ಲಿ ನೇರವಾಗಿ ಭಾಗಿಯಾಗಿರದ ಇತರ ವ್ಯಕ್ತಿಗಳು) ಯಾವುದೇ ಹಕ್ಕುಗಳನ್ನು ಸ್ಥಾಪಿಸಲು ಅಥವಾ ದಾವೆ ಹೂಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

3. ವಕ್ಫ್ ಮಂಡಳಿಗಳಿಗೆ ಮುಸ್ಲಿಮೇತರ ಸದಸ್ಯರ ನಾಮನಿರ್ದೇಶನಕ್ಕೆ ಅವಕಾಶ ನೀಡುವ ನಿಬಂಧನೆಗೆ ತಡೆ ನೀಡಲಾಗಿಲ್ಲ. ಆದಾಗ್ಯೂ, ಸಾಧ್ಯವಾದಷ್ಟು ಮಟ್ಟಿಗೆ, ಮಂಡಳಿಯ ಪದನಿಮಿತ್ತ ಸದಸ್ಯರು ಮುಸ್ಲಿಂ ವ್ಯಕ್ತಿಯಾಗಿರಬೇಕು ಎಂದು ನ್ಯಾಯಾಲಯ ಹೇಳಿದೆ.

ಕೇಂದ್ರ ವಕ್ಫ್ ಮಂಡಳಿಯಲ್ಲಿ 4ಕ್ಕಿಂತ ಹೆಚ್ಚು ಮುಸ್ಲಿಮೇತರ ಸದಸ್ಯರು ಇರಬಾರದು, ರಾಜ್ಯ ವಕ್ಫ್ ಮಂಡಳಿ 3ಕ್ಕಿಂತ ಹೆಚ್ಚು ಮುಸ್ಲಿಮೇತರ ಸದಸ್ಯರನ್ನು ಒಳಗೊಂಡಿರಬಾರದು ಎಂದು ನ್ಯಾಯಾಲಯ ತಿಳಿಸಿದೆ.

ನೋಂದಣಿಯನ್ನು ಕಡ್ಡಾಯಗೊಳಿಸುವ ನಿಬಂಧನೆಯಲ್ಲಿ ನ್ಯಾಯಾಲಯವು ಹಸ್ತಕ್ಷೇಪ ಮಾಡಿಲ್ಲ. ಇದು ಹೊಸ ಅವಶ್ಯಕತೆಯಲ್ಲ ಎಂದು ಹೇಳಿದೆ. ಏಕೆಂದರೆ, ಈ ಷರತ್ತು 1995 ಮತ್ತು 2013ರ ಹಿಂದಿನ ಕಾಯ್ದೆಗಳಲ್ಲಿಯೂ ಇತ್ತು. ಆದಾಗ್ಯೂ, ನ್ಯಾಯಾಲಯವು ನೋಂದಣಿಗೆ ಸಮಯ ಮಿತಿಯನ್ನು ವಿಸ್ತರಿಸಿದೆ.

ಮೂರು ದಿನಗಳ ಕಾಲ ಕಕ್ಷಿದಾರರ ವಾದ ಆಲಿಸಿದ ನಂತರ ನ್ಯಾಯಾಲಯವು 2025 ಮೇ 22ರಂದು ಆದೇಶವನ್ನು ಕಾಯ್ದಿರಿಸಿತ್ತು. 2025ರಲ್ಲಿ ಸಂಸತ್ತು ಅಂಗೀಕರಿಸಿದ ತಿದ್ದುಪಡಿಗಳ ಮೂಲಕ ವಕ್ಫ್ ಕಾನೂನಿಗೆ ಮಾಡಿದ ವ್ಯಾಪಕ ಬದಲಾವಣೆಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಏಪ್ರಿಲ್‌ನಲ್ಲಿ, ಮಾಜಿ ಸಿಜೆಐ ಸಂಜೀವ್ ಖನ್ನಾ ನೇತೃತ್ವದ ಪೀಠವು ಕೆಲವು ನಿಬಂಧನೆಗಳ ಬಗ್ಗೆ ಪ್ರಾಥಮಿಕವಾಗಿ ಕೆಲವು ಅನುಮಾನಗಳನ್ನು ವ್ಯಕ್ತಪಡಿಸಿದ ನಂತರ, ಈ ವಿಷಯವು ಬಾಕಿ ಇರುವಾಗ ರಾಜ್ಯ ವಕ್ಫ್ ಮಂಡಳಿಗಳು ಮತ್ತು ಕೇಂದ್ರ ವಕ್ಫ್ ಮಂಡಳಿಗಳಿಗೆ ಮುಸ್ಲಿಮೇತರರನ್ನು ನೇಮಿಸಲಾಗುವುದಿಲ್ಲ ಎಂದು ಕೇಂದ್ರವು ಸ್ಪಷ್ಟಪಡಿಸಿತ್ತು.

ಅಲ್ಲದೆ, ಅಧಿಸೂಚನೆಯ ಮೂಲಕ ಅಥವಾ ನೋಂದಣಿ ಮೂಲಕ ಘೋಷಿಸಲ್ಪಟ್ಟ ಬಳಕೆದಾರರಿಂದ ವಕ್ಫ್‌ ಸೇರಿದಂತೆ ಯಾವುದೇ ವಕ್ಫ್ ಆಸ್ತಿಯನ್ನು ಅಧಿಸೂಚನೆಯಿಂದ ಕೈಬಿಡುವುದಿಲ್ಲ ಅಥವಾ ಸ್ಥಾನಮಾನವನ್ನು ಬದಲಾಯಿಸುವುದಿಲ್ಲ ಎಂದು ಕೇಂದ್ರವು ತಿಳಿಸಿತ್ತು.

ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ, ದೆಹಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್, ನಾಗರಿಕ ಹಕ್ಕುಗಳ ರಕ್ಷಣಾ ಸಂಘ, ಜಮಿಯತ್ ಉಲೇಮಾ-ಇ-ಹಿಂದ್ ಅಧ್ಯಕ್ಷ ಅರ್ಷದ್ ಮದನಿ, ಸಮಸ್ತ ಕೇರಳ ಜಮಿಯತ್ ಉಲೇಮಾ, ಅಂಜುಮ್ ಕದರಿ, ತೈಯಬ್ ಖಾನ್ ಸಲ್ಮಾನಿ, ಮೊಹಮ್ಮದ್ ಶಫಿ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್, ಆರ್‌ಜೆಡಿ ಸಂಸದ ಮನೋಜ್ ಕುಮಾರ್ ಝಾ, ಎಸ್‌ಪಿ ಸಂಸದ ಜಿಯಾ ಉರ್ ರೆಹಮಾನ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಡಿಎಂಕೆ ಮುಂತಾದವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಬಿಜೆಪಿ ನೇತೃತ್ವದ ಸರ್ಕಾರ ಇರುವ ಐದು ರಾಜ್ಯಗಳಾದ ಅಸ್ಸಾಂ, ರಾಜಸ್ಥಾನ, ಛತ್ತೀಸ್‌ಗಢ, ಉತ್ತರಾಖಂಡ, ಹರಿಯಾಣ ಮತ್ತು ಮಹಾರಾಷ್ಟ್ರ ಕಾಯ್ದೆಯನ್ನು ಬೆಂಬಲಿಸಿ ಪ್ರಕರಣದಲ್ಲಿ ಮಧ್ಯಂತರ ಅರ್ಜಿಗಳನ್ನು ಸಲ್ಲಿಸಿತ್ತು. ಇತ್ತೀಚೆಗೆ, ಕೇರಳ ರಾಜ್ಯ ಸರ್ಕಾರ ಕೂಡ 2025ರ ತಿದ್ದುಪಡಿಯನ್ನು ಬೆಂಬಲಿಸಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದೆ ಎಂದು livelaw.in ವರದಿ ಹೇಳಿದೆ.

ಪ್ರಧಾನಿ ಮೋದಿ ಭೇಟಿಯ ಮರುದಿನವೇ ಮಣಿಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...