Homeಕರ್ನಾಟಕಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನತೆಗೆ ಸಿಎಂ ಕರೆ

ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನತೆಗೆ ಸಿಎಂ ಕರೆ

- Advertisement -
- Advertisement -

ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಾತಿ ವ್ಯವಸ್ಥೆಯಿಂದ ಅಸಮಾನತೆ

ದೇಶದಲ್ಲಿ ವಿವಿಧ ಜಾತಿ, ಧರ್ಮಗಳ ವ್ಯವಸ್ಥೆಯಿದೆ. ಬಹು ಸಂಸ್ಕೃತಿಯುಳ್ಳ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಲು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ತರಲಾಗಿದೆ. ಜಾತಿ ವ್ಯವಸ್ಥೆಯಿಂದಾಗಿ ಅಸಮಾನತೆ ಉಂಟಾಗಿದೆ. ಆದ್ದರಿಂದ, ಡಾ.ಬಿ.ಆರ್ ಅಂಬೇಡ್ಕರ್‌ ಅವರು ಸಂವಿಧಾನ ಜಾರಿಗೊಂಡ ಸಂದರ್ಭದಲ್ಲಿ ವೈರುಧ್ಯತೆಯಿರುವ ಸಮಾಜಕ್ಕೆ ನಾವು ಕಾಲಿಡುತ್ತಿದ್ದು, ಸಾಮಾಜಿಕ, ರಾಜಕೀಯ, ಆರ್ಥಿಕ, ಶೈಕ್ಷಣಿಕ ಅಸಮಾನತೆಗಳಿವೆ. ದೇಶದಲ್ಲಿ ಜನರಿಗೆ ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸ್ವಾತಂತ್ರ್ಯ ಯಶಸ್ವಿಯಾಗುತ್ತದೆ ಎಂದಿದ್ದರು ಎಂದು ಸಿಎಂ ತಿಳಿಸಿದರು.

12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಬಸವಣ್ಣನವರು ಪ್ರಜಾಪ್ರಭುತ್ವದ ಪರಿಕಲ್ಪನೆಗೆ ಜೀವ ತುಂಬಿದ್ದರು. ಅತ್ಯಂತ ತಳ ಸಮುದಾಯದವರಾದ ಅಲ್ಲಮ ಪ್ರಭು ಅವರನ್ನು ಅನುಭವ ಮಂಟಪದ ಅಧ್ಯಕ್ಷರಾಗಿಸಿದ್ದರು. ಇದರಲ್ಲಿ ಮಹಿಳೆಯರೂ ಸೇರಿದಂತೆ ಸಮಾಜದ ಎಲ್ಲ ವರ್ಗದವರೂ ಪ್ರಾತಿನಿಧ್ಯವನ್ನು ಹೊಂದಿದ್ದರು. ಎಲ್ಲಿ ಎಲ್ಲ ವರ್ಗದವರ ಅಭಿಪ್ರಾಯಕ್ಕೆ ಬೆಲೆ ದೊರಕುವುದು, ಅಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸ್ಥಾಪಿತವಾಗಿದೆ ಎಂದು ಹೇಳಬಹುದು ಎಂದರು.

ಮತಗಳ್ಳತನದಿಂದ ಸಂವಿಧಾನವನ್ನು ದುರ್ಬಲಗೊಳಿಸುವ ಕುತಂತ್ರ ನಡೆಯುತ್ತಿದೆ

ಇಂದಿನ ಪ್ರಜಾಪ್ರಭುತ್ವ ದಿನಾಚರಣೆಯ ಘೋಷವಾಕ್ಯ ‘ನನ್ನ ಮತ ನನ್ನ ಹಕ್ಕು’. ಈ ಶಕ್ತಿಯನ್ನು ದುರ್ಬಲಗೊಳಿಸುವ ಹುನ್ನಾರ ಪಟ್ಟಭದ್ರ ಹಿತಾಸಕ್ತಿಗಳಿಂದ ನಡೆದಿದೆ. ಶ್ರೀಮಂತರಿಗೆ ಅಧಿಕಾರ ದೊರೆಯುವ ಕಾಲವೊಂದಿತ್ತು. ಆದರೆ, ಈಗ ಶ್ರೀಮಂತ, ಬಡವ ಬಲ್ಲಿದ ಎಂಬ ಬೇಧವಿಲ್ಲದೇ ಎಲ್ಲರಿಗೂ ಒಂದೇ ಮತದ ಅಧಿಕಾರ ನೀಡಲಾಗಿದೆ. ಡಾ.ಬಿ.ಆರ್ ಅಂಬೇಡ್ಕರ್ ಅವರು ‘ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ’ ಎಂದಿದ್ದರು. ಆದರೆ, ಇದರ ದುರುಪಯೋಗಪಡಿಸಿಕೊಂಡು, ಸಂವಿಧಾನವನ್ನು ದುರ್ಬಲಗೊಳಿಸುವ ಕುತಂತ್ರ ನಡೆಯುತ್ತಿದ್ದು, ಇದನ್ನು ನಡೆಯದಂತೆ ನೋಡಿಕೊಳ್ಳಬೇಕಿದೆ. ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಮ್ಮ ಜಾತಿ ವ್ಯವಸ್ಥೆಗೆ ಚಲನೆಯಿಲ್ಲದೆ ಸಮಾಜದಲ್ಲಿ ಆಳವಾಗಿ ಬೇರೂರಿದೆ. ಆರ್ಥಿಕ, ಸಾಮಾಜಿಕ ಸಮಾನತೆ ತರದೇ ಜಾತಿ ವ್ಯವಸ್ಥೆ ನಿರ್ಮೂಲಗೊಳಿಸಲು ಸಾಧ್ಯವಿಲ್ಲ. ಎಲ್ಲರಿಗೂ ಸಮಾನ ಅವಕಾಶಗಳು ದೊರೆತಾಗ ಮಾತ್ರ ಬದಲಾವಣೆ ಸಾಧ್ಯ. ಹಿಂದಿನಿಂದಿಲೂ ಮಹಿಳೆಯರು ಹಾಗೂ ಶೂದ್ರರು ಅಕ್ಷರ ಸಂಸ್ಕೃತಿ ಹಾಗೂ ಅವಕಾಶಗಳಿಂದ ವಂಚಿಕತರಾಗಿದ್ದ ಕಾರಣ, ಅಸಮಾನತೆ ತಲೆದೋರಿದೆ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಅಂಬೇಡ್ಕರ್ ಅವರು ಬೋಧಿಸಿದ್ದರು. ಸಮಾಜದಲ್ಲಿ ಬಹುಸಂಖ್ಯಾತರು ಎಚ್ಚರದಿಂದಿರಬೇಕು ಎಂದರು.

ಪ್ರಜಾಪ್ರಭುತ್ವದಲ್ಲಿ ಎಲ್ಲಾ ಜಾತಿ, ಧರ್ಮವೂ ಸಮಾನ

ಅಧಿಕಾರವನ್ನು ಉಳಿಸಿಕೊಳ್ಳಲು ಮತಗಳ್ಳತನದ ಹಾದಿಯನ್ನು ಹಿಡಿದಿದ್ದಾರೆ. ಆದ್ದರಿಂದ, ನನ್ನ ಮತ ನನ್ನ ಹಕ್ಕು ಎಂಬುದು ಇಂತಹ ಸನ್ನಿವೇಶದಲ್ಲಿ ಪ್ರಮುಖವಾಗಿದ್ದು, ಮತಗಳ ದುರುಪಯೋಗ ಆಗಬಾರದು. ಮತಗಳ್ಳತನಕ್ಕೆ ಅವಕಾಶ ನೀಡಬೇಡಿ. ಪ್ರಜಾಪ್ರಭುತ್ವ ಉಳಿಸಿ, ಹಕ್ಕುಗಳನ್ನು ರಕ್ಷಿಸುವ ಪ್ರಮಾಣವನ್ನು ಸ್ವೀಕರಿಸಲಾಗಿದೆ. ಸಂವಿಧಾನ ನೀಡುವ ಹಕ್ಕು ಹಾಗೂ ಕರ್ತವ್ಯಗಳ ಪಾಲನೆಯಾಗಬೇಕು. ಪ್ರಜಾಪ್ರಭುತ್ವದಲ್ಲಿ ಎಲ್ಲಾ ಜಾತಿ, ಧರ್ಮವೂ ಸಮಾನವಾಗಿದೆ. ಇಂತಹ ಸಂವಿಧಾನಕ್ಕೆ ಧಕ್ಕೆ ತರುವ ಕೆಲಸವನ್ನು ಮನುವಾದಿಗಳು ಪ್ರಯತ್ನಿಸುತ್ತಿದ್ದಾರೆ. ಸ್ವಾತಂತ್ರ್ಯ ಬಂದಾಗಿನಿಂದಲೂ ಸಂವಿಧಾನ ವಿರೋಧಿಗಳು ಇದ್ದಾರೆ. ಅಸಮಾನತೆ ನಿವಾರಣೆಯಾದರೆ ಶೋಷಣೆ ಸಾಧ್ಯವಿಲ್ಲಎಂದು ಹೇಳಿದರು.

ಮತಾಂಧತೆಯ ವರ್ತನೆಯನ್ನು ಎಲ್ಲರೂ ಒಗ್ಗಟ್ಟಾಗಿ ಖಂಡಿಸಬೇಕು

ಸಾಹಿತಿ ಬಾನು ಮುಷ್ತಾಕ್ ಅವರು ಅನ್ಯ ಧರ್ಮದವರೆಂದು, ದಸರಾ ಉದ್ಘಾಟಿಸಬಾರದೆಂದು ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಎಲ್ಲರೂ ರೂಢಿಸಿಕೊಳ್ಳಬೇಕು. ಜಾತಿ, ಧರ್ಮ, ವರ್ಗ ವ್ಯವಸ್ಥೆಯನ್ನು ಮೀರಿ, ಸಮಾನತೆ ನೆಲೆಸಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಪಟ್ಟಭದ್ರ ಹಿತಾಸಕ್ತಿಗಳು, ಮತಾಂಧತೆಯ ವರ್ತನೆಯನ್ನು ಎಲ್ಲರೂ ಒಗ್ಗಟ್ಟಾಗಿ ಖಂಡಿಸಬೇಕು. ಚರ್ಚೆಯೇ ಪ್ರಜಾಪ್ರಭುತ್ವದ ಜೀವಾಳ. ಜನರನ್ನು ತಪ್ಪದಾರಿಗೆಳೆಯುವ ಪ್ರಯತ್ನಗಳು ಖಂಡನೀಯ. ಆರ್ಥಿಕ ಅಸಮಾನತೆ ನಿವಾರಣೆಗಾಗಿ ಗ್ಯಾರಂಟಿ ಯೋಜನೆಗಳ ಮೂಲಕ 98,950 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಸಂವಿಧಾನ ಆಶಯಗಳ ಅರಿವು ಅಗತ್ಯ

ಸಂವಿಧಾನ ಆಶಯಗಳ ಅರಿವು ಎಲ್ಲರೂ ಹೊಂದಬೇಕೆಂಬ ದೃಷ್ಟಿಯಿಂದ, ಸರ್ಕಾರ ಎಲ್ಲ ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಓದಲು ಕ್ರಮ ಕೈಗೊಂಡಿದೆ. ಸಂವಿಧಾನವನ್ನು ಪ್ರತಿಯೊಬ್ಬರು ಅರ್ಥೈಸಿಕೊಳ್ಳಬೇಕು. ಸಂವಿಧಾನದ ಬಗ್ಗೆ ಅರಿವಿಲ್ಲದೇ, ಅದರ ದುರುಪಯೋಗಕ್ಕೆ ಬಲಿಯಾಗುತ್ತಿದ್ದಾರೆ ಎಂದರು.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಪ್ರತಾಪ್ ಸಿಂಹ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...