Homeಕರ್ನಾಟಕತುಮಕೂರು ದಲಿತನ ಕೊಲೆ ಪ್ರಕರಣ: ಸಂತ್ರಸ್ತ ಕುಟುಂಬಕ್ಕೆ ಭೂಮಿ, ಪರಿಹಾರ ನೀಡಲು ಹೋರಾಟಗಾರರ ಒತ್ತಾಯ

ತುಮಕೂರು ದಲಿತನ ಕೊಲೆ ಪ್ರಕರಣ: ಸಂತ್ರಸ್ತ ಕುಟುಂಬಕ್ಕೆ ಭೂಮಿ, ಪರಿಹಾರ ನೀಡಲು ಹೋರಾಟಗಾರರ ಒತ್ತಾಯ

- Advertisement -
- Advertisement -

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪೋಲೇನಹಳ್ಳಿಯಲ್ಲಿ ಇತ್ತೀಚೆಗೆ ಹತ್ಯೆಗೀಡಾದ ದಲಿತ ವ್ಯಕ್ತಿ ಆನಂದ ಅವರ ಕುಟುಂಬಕ್ಕೆ ಸರ್ಕಾರ ಐದು ಎಕರೆ ಜಮೀನು ಮಂಜೂರು ಮಾಡಬೇಕು ಮತ್ತು 25 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ರಾಜ್ಯ ಒಳ ಮೀಸಲಾತಿ ಹೋರಾಟದ ಒಕ್ಕೂಟಗಳ ಸಮಿತಿಯ ರಾಜ್ಯ ಮುಖಂಡ ಬಸವರಾಜ ಕೌತಾಳ್ ಒತ್ತಾಯಿಸಿದರು.

ಆನಂದ ಅವರ ಕುಟುಂಬಸ್ಥರ ಮನೆಗೆ ವಿವಿಧ ದಲಿತ, ಪ್ರಗತಿಪರ ಹೋರಾಟಗಾರರು ಸೋಮವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಘಟನೆಯ ನೈಜತೆಯ ಬಗ್ಗೆ ಕುಟುಂಬಸ್ಥರಿಂದ ಮಾಹಿತಿ ಪಡೆದು. ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೌತಾಳ್, “ಕೊಲೆಯಾಗಿರುವ ಆನಂದ ಅವರ ಹೆಂಡತಿಗೆ ಸರ್ಕಾರ ಉದ್ಯೋಗ ನೀಡಬೇಕು ಮತ್ತು ಅವರ ಮಗುವಿನ ಶಿಕ್ಷಣದ ವೆಚ್ಚವನ್ನು ಭರಿಸಬೇಕು” ಎಂದು ಆಗ್ರಹಿಸಿದರು.

ಆರೋಪಿ ನಾಗೇಶ ಅವರ ತಂದೆ-ತಾಯಿಯನ್ನೂ ಆರೋಪಿಗಳನ್ನಾಗಿಸಿ ಬಂಧಿಸಬೇಕು. ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್, ಶಾಸಕ ಕೆ.ಎನ್ ರಾಜಣ್ಣ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ಕಾನೂನಾತ್ಮಕವಾಗಿ ಶಿಕ್ಷೆಗೆ ಒಳಪಡಿಸಬೇಕು ಎಂದು ಹೇಳಿದರು.

ಪ್ರಗತಿಪರ ಚಿಂತಕ ಪ್ರೊ. ನರಸಿಂಹಪ್ಪ ಕಾಳೇನಹಳ್ಳಿ ಮಾತನಾಡಿ, “ಸೌಹಾರ್ದಯುತವಾಗಿ ಬಾಳಿ ಬದುಕಬೇಕಾದ ಎಸ್‌ಸಿ- ಎಸ್ಟಿ ಸಮುದಾಯಗಳು, ಈ ರೀತಿ ಸಣ್ಣ ವಿಷಯಕ್ಕೆ ಜಗಳವಾಡಿ ಕೊಲೆಯಲ್ಲಿ ಅಂತ್ಯವಾಗಿರುವುದು ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ದಲಿತರಾಗಿದ್ದು, ರಾಜಕೀಯ ಜನ್ಮ ನೀಡಿದ ಮಧುಗಿರಿ ತಾಲೂಕಿನಲ್ಲಿ ಆಗಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಶೋಷಿತರ ಪರ ನಿಲ್ಲಬೇಕಾಗಿದೆ. ಅವರು ಇದುವರೆಗೂ ಘಟನಾ ಸ್ಥಳಕ್ಕೆ ಭೇಟಿ ನೀಡದೇ ಇರುವುದು ದಲಿತರ ಮೇಲೆ ಇರುವ ಕಾಳಜಿ ಎಂತದ್ದು ಎಂಬುವುದನ್ನು ತಿಳಿಸುತ್ತದೆ. ಕೇಂದ್ರ ಸಚಿವ ವಿ. ಸೋಮಣ್ಣ ಮತ್ತು ಶಾಸಕ ಕೆ.ಎನ್ ರಾಜಣ್ಣ ಕೂಡ ಸ್ಥಳಕ್ಕೆ ಆಗಮಿಸಿ ನೊಂದ ಕುಟುಂಬಕ್ಕೆ ನೆರವು ಒದಗಿಸಲು ಮುಂದಾಗಬೇಕೆಂದು ಮನವಿ ಮಾಡಿದರು.

ದಲಿತ ಮುಖಂಡ ಡಿ.ಟಿ ವೆಂಕಟೇಶ್ ಮಾತನಾಡಿ, “ಕೊಲೆಯಾದ ಆನಂದ ಅವರ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮ ಪಂಚಾಯತಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕು. ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಧೈರ್ಯದಿಂದ ಬದುಕುವ ವಾತಾವರಣ ನಿರ್ಮಾಣ ಮಾಡಬೇಕು. ಆನಂದ ಅವರ ಕುಟುಂಬಕ್ಕೆ ಅಗತ್ಯ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ಹಿರಿಯ ಹೋರಾಟಗಾರ ಪ್ರೊ. ದೊರೆರಾಜು ಮಾತನಾಡಿ, “ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು. ಗ್ರಾಮದಲ್ಲಿ ಜನತೆ ಧೈರ್ಯದಿಂದ ಬದುಕುವ ವಾತಾವರಣ ನಿರ್ಮಾಣ ಮಾಡಬೇಕಾಗಿದೆ” ಎಂದು ಹೇಳಿದರು.

ರೇಷ್ಮೆ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಬಾಲಕೃಷ್ಣಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರವಿಕುಮಾರ್ ನೀಹ, ದಸಂಸ ಜಿಲ್ಲಾ ಸಂಚಾಲಕ ದೊಡ್ಡೇರಿ ಕಣಿಮಯ್ಯ, ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹರಾಜು, ಜಾಗೃತ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಅನಿಲ್ ಕುಮಾರ್ ಚಿಕ್ಕದಾಳವಟ್ಟ, ತೊಂಡೋಟಿ ರಾಮಾಂಜಿನಪ್ಪ, ವಕೀಲ ನರಸಿಂಹಮೂರ್ತಿ, ಜೀವಿಕ ಮಂಜು, ಚಿಕ್ಕಮ್ಮ, ನಿವೃತ್ತ ಪ್ರಾಂಶುಪಾಲ ಮುನೀಂದ್ರ ಕುಮಾರ್, ಉಪನ್ಯಾಸಕ ರಾಮಚಂದ್ರಪ್ಪ, ನವೀನ್ ಪೂಜಾರಹಳ್ಳಿ, ನರಸಿಯಪ್ಪ,ನರಸಿಂಹಣ್ಣ, ವಿ.ಎಲ್ ನರಸಿಂಹಮೂರ್ತಿ, ನಾಗಭೂಷಣ್ ಬಗ್ಗನಾಡು, ವಕೀಲ ಕಿಶೋರ್, ಅಶ್ವಿನಿ ಬೋದ್ , ಪೂರ್ಣ ರವಿಶಂಕರ್, ಶಶಾಂಕ್, ವೇಣುಗೋಪಾಲ ಮೌರ್ಯ, ಮಂಜು ಪಿಟಿಸಿಎಲ್, ಮಂಜನಾಥ್, ಮನೋಜ್, ಅಶ್ವಥ್ ನಾರಾಯಣ ಗುಟ್ಟೆ, ಹಾಗೂ ಎಸ್‌ಸಿ, ಎಸ್ಟಿ ಸಮುದಾಯಗಳ ಹೋರಾಟಗಾರರು ಆನಂದ ಅವರ ಮನೆಗೆ ಭೇಟಿ ನೀಡಿದ ತಂಡದಲ್ಲಿದ್ದರು.

ತುಮಕೂರು: ಕುಡಿಯುವ ನೀರಿನ ಸಂಪರ್ಕ ವಿಚಾರಕ್ಕೆ ಜಗಳ; ದಲಿತ ವ್ಯಕ್ತಿಯ ಭೀಕರ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...