Homeಕರ್ನಾಟಕತುಮಕೂರು ದಲಿತನ ಕೊಲೆ ಪ್ರಕರಣ: ಸಂತ್ರಸ್ತ ಕುಟುಂಬಕ್ಕೆ ಭೂಮಿ, ಪರಿಹಾರ ನೀಡಲು ಹೋರಾಟಗಾರರ ಒತ್ತಾಯ

ತುಮಕೂರು ದಲಿತನ ಕೊಲೆ ಪ್ರಕರಣ: ಸಂತ್ರಸ್ತ ಕುಟುಂಬಕ್ಕೆ ಭೂಮಿ, ಪರಿಹಾರ ನೀಡಲು ಹೋರಾಟಗಾರರ ಒತ್ತಾಯ

- Advertisement -
- Advertisement -

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪೋಲೇನಹಳ್ಳಿಯಲ್ಲಿ ಇತ್ತೀಚೆಗೆ ಹತ್ಯೆಗೀಡಾದ ದಲಿತ ವ್ಯಕ್ತಿ ಆನಂದ ಅವರ ಕುಟುಂಬಕ್ಕೆ ಸರ್ಕಾರ ಐದು ಎಕರೆ ಜಮೀನು ಮಂಜೂರು ಮಾಡಬೇಕು ಮತ್ತು 25 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ರಾಜ್ಯ ಒಳ ಮೀಸಲಾತಿ ಹೋರಾಟದ ಒಕ್ಕೂಟಗಳ ಸಮಿತಿಯ ರಾಜ್ಯ ಮುಖಂಡ ಬಸವರಾಜ ಕೌತಾಳ್ ಒತ್ತಾಯಿಸಿದರು.

ಆನಂದ ಅವರ ಕುಟುಂಬಸ್ಥರ ಮನೆಗೆ ವಿವಿಧ ದಲಿತ, ಪ್ರಗತಿಪರ ಹೋರಾಟಗಾರರು ಸೋಮವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಘಟನೆಯ ನೈಜತೆಯ ಬಗ್ಗೆ ಕುಟುಂಬಸ್ಥರಿಂದ ಮಾಹಿತಿ ಪಡೆದು. ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೌತಾಳ್, “ಕೊಲೆಯಾಗಿರುವ ಆನಂದ ಅವರ ಹೆಂಡತಿಗೆ ಸರ್ಕಾರ ಉದ್ಯೋಗ ನೀಡಬೇಕು ಮತ್ತು ಅವರ ಮಗುವಿನ ಶಿಕ್ಷಣದ ವೆಚ್ಚವನ್ನು ಭರಿಸಬೇಕು” ಎಂದು ಆಗ್ರಹಿಸಿದರು.

ಆರೋಪಿ ನಾಗೇಶ ಅವರ ತಂದೆ-ತಾಯಿಯನ್ನೂ ಆರೋಪಿಗಳನ್ನಾಗಿಸಿ ಬಂಧಿಸಬೇಕು. ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್, ಶಾಸಕ ಕೆ.ಎನ್ ರಾಜಣ್ಣ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ಕಾನೂನಾತ್ಮಕವಾಗಿ ಶಿಕ್ಷೆಗೆ ಒಳಪಡಿಸಬೇಕು ಎಂದು ಹೇಳಿದರು.

ಪ್ರಗತಿಪರ ಚಿಂತಕ ಪ್ರೊ. ನರಸಿಂಹಪ್ಪ ಕಾಳೇನಹಳ್ಳಿ ಮಾತನಾಡಿ, “ಸೌಹಾರ್ದಯುತವಾಗಿ ಬಾಳಿ ಬದುಕಬೇಕಾದ ಎಸ್‌ಸಿ- ಎಸ್ಟಿ ಸಮುದಾಯಗಳು, ಈ ರೀತಿ ಸಣ್ಣ ವಿಷಯಕ್ಕೆ ಜಗಳವಾಡಿ ಕೊಲೆಯಲ್ಲಿ ಅಂತ್ಯವಾಗಿರುವುದು ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ದಲಿತರಾಗಿದ್ದು, ರಾಜಕೀಯ ಜನ್ಮ ನೀಡಿದ ಮಧುಗಿರಿ ತಾಲೂಕಿನಲ್ಲಿ ಆಗಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಶೋಷಿತರ ಪರ ನಿಲ್ಲಬೇಕಾಗಿದೆ. ಅವರು ಇದುವರೆಗೂ ಘಟನಾ ಸ್ಥಳಕ್ಕೆ ಭೇಟಿ ನೀಡದೇ ಇರುವುದು ದಲಿತರ ಮೇಲೆ ಇರುವ ಕಾಳಜಿ ಎಂತದ್ದು ಎಂಬುವುದನ್ನು ತಿಳಿಸುತ್ತದೆ. ಕೇಂದ್ರ ಸಚಿವ ವಿ. ಸೋಮಣ್ಣ ಮತ್ತು ಶಾಸಕ ಕೆ.ಎನ್ ರಾಜಣ್ಣ ಕೂಡ ಸ್ಥಳಕ್ಕೆ ಆಗಮಿಸಿ ನೊಂದ ಕುಟುಂಬಕ್ಕೆ ನೆರವು ಒದಗಿಸಲು ಮುಂದಾಗಬೇಕೆಂದು ಮನವಿ ಮಾಡಿದರು.

ದಲಿತ ಮುಖಂಡ ಡಿ.ಟಿ ವೆಂಕಟೇಶ್ ಮಾತನಾಡಿ, “ಕೊಲೆಯಾದ ಆನಂದ ಅವರ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮ ಪಂಚಾಯತಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕು. ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಧೈರ್ಯದಿಂದ ಬದುಕುವ ವಾತಾವರಣ ನಿರ್ಮಾಣ ಮಾಡಬೇಕು. ಆನಂದ ಅವರ ಕುಟುಂಬಕ್ಕೆ ಅಗತ್ಯ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ಹಿರಿಯ ಹೋರಾಟಗಾರ ಪ್ರೊ. ದೊರೆರಾಜು ಮಾತನಾಡಿ, “ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು. ಗ್ರಾಮದಲ್ಲಿ ಜನತೆ ಧೈರ್ಯದಿಂದ ಬದುಕುವ ವಾತಾವರಣ ನಿರ್ಮಾಣ ಮಾಡಬೇಕಾಗಿದೆ” ಎಂದು ಹೇಳಿದರು.

ರೇಷ್ಮೆ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಬಾಲಕೃಷ್ಣಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರವಿಕುಮಾರ್ ನೀಹ, ದಸಂಸ ಜಿಲ್ಲಾ ಸಂಚಾಲಕ ದೊಡ್ಡೇರಿ ಕಣಿಮಯ್ಯ, ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹರಾಜು, ಜಾಗೃತ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಅನಿಲ್ ಕುಮಾರ್ ಚಿಕ್ಕದಾಳವಟ್ಟ, ತೊಂಡೋಟಿ ರಾಮಾಂಜಿನಪ್ಪ, ವಕೀಲ ನರಸಿಂಹಮೂರ್ತಿ, ಜೀವಿಕ ಮಂಜು, ಚಿಕ್ಕಮ್ಮ, ನಿವೃತ್ತ ಪ್ರಾಂಶುಪಾಲ ಮುನೀಂದ್ರ ಕುಮಾರ್, ಉಪನ್ಯಾಸಕ ರಾಮಚಂದ್ರಪ್ಪ, ನವೀನ್ ಪೂಜಾರಹಳ್ಳಿ, ನರಸಿಯಪ್ಪ,ನರಸಿಂಹಣ್ಣ, ವಿ.ಎಲ್ ನರಸಿಂಹಮೂರ್ತಿ, ನಾಗಭೂಷಣ್ ಬಗ್ಗನಾಡು, ವಕೀಲ ಕಿಶೋರ್, ಅಶ್ವಿನಿ ಬೋದ್ , ಪೂರ್ಣ ರವಿಶಂಕರ್, ಶಶಾಂಕ್, ವೇಣುಗೋಪಾಲ ಮೌರ್ಯ, ಮಂಜು ಪಿಟಿಸಿಎಲ್, ಮಂಜನಾಥ್, ಮನೋಜ್, ಅಶ್ವಥ್ ನಾರಾಯಣ ಗುಟ್ಟೆ, ಹಾಗೂ ಎಸ್‌ಸಿ, ಎಸ್ಟಿ ಸಮುದಾಯಗಳ ಹೋರಾಟಗಾರರು ಆನಂದ ಅವರ ಮನೆಗೆ ಭೇಟಿ ನೀಡಿದ ತಂಡದಲ್ಲಿದ್ದರು.

ತುಮಕೂರು: ಕುಡಿಯುವ ನೀರಿನ ಸಂಪರ್ಕ ವಿಚಾರಕ್ಕೆ ಜಗಳ; ದಲಿತ ವ್ಯಕ್ತಿಯ ಭೀಕರ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...