Homeಮುಖಪುಟಎಲ್ಗರ್ ಪರಿಷತ್ ಪ್ರಕರಣ: ಹೋರಾಟಗಾರ ಮಹೇಶ್ ರಾವತ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ಎಲ್ಗರ್ ಪರಿಷತ್ ಪ್ರಕರಣ: ಹೋರಾಟಗಾರ ಮಹೇಶ್ ರಾವತ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

- Advertisement -
- Advertisement -

ಎಲ್ಗರ್ ಪರಿಷತ್-ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ, ಹೋರಾಟಗಾರ ಮಹೇಶ್ ರಾವತ್‌ ಅವರಿಗೆ ವೈದ್ಯಕೀಯ ಆಧಾರದ ಮೇಲೆ ಸುಪ್ರೀಂ ಕೋರ್ಟ್ ಮಂಗಳವಾರ (ಸೆ.16) ಆರು ವಾರಗಳ ಮಧ್ಯಂತರ ಜಾಮೀನು ನೀಡಿದೆ.

ಸೆಪ್ಟೆಂಬರ್ 2023ರಲ್ಲಿ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದರೂ, ತನ್ನ ಜೈಲು ಶಿಕ್ಷೆ ಮುಂದುವರಿಸಿರುವುದನ್ನು ಪ್ರಶ್ನಿಸಿ ಮಹೇಶ್ ರಾವತ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಸುಪ್ರೀಂ ಕೋರ್ಟ್ ಪೀಠ ವಿಚಾರಣೆ ನಡೆಸುತ್ತಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮೇಲ್ಮನವಿ ಸಲ್ಲಿಸಲು ಸಮಯ ಕೋರಿದ ಹಿನ್ನೆಲೆ, ಬಾಂಬೆ ಹೈಕೋರ್ಟ್ ಆದೇಶಕ್ಕೆ ಆರಂಭದಲ್ಲಿ ಸುಪ್ರೀಂ ಕೋರ್ಟ್‌ ಒಂದು ವಾರ ತಡೆ ನೀಡಿತ್ತು. ನಂತರ ತಡೆಯಾಜ್ಞೆ ವಿಸ್ತರಿಸಿದೆ.

ರಾವತ್ ಪರ ಸುಪ್ರೀಂ ಕೋರ್ಟ್‌ಗೆ ಹಾಜರಾಗಿದ್ದ ಹಿರಿಯ ವಕೀಲ ಸಿ.ಯು ಸಿಂಗ್, ರುಮಟಾಯ್ಡ್ ಸಂಧಿವಾತದಿಂದ ಬಳಲುತ್ತಿರುವ ರಾವತ್ ಅವರಿಗೆ ಜೈಲಿನಲ್ಲಿ ಅಥವಾ ಮುಂಬೈನ ಜೆಜೆ ಆಸ್ಪತ್ರೆಯಲ್ಲಿ ವಿಶೇಷ ವೈದ್ಯಕೀಯ ಆರೈಕೆಯ ಅಗತ್ಯವಿದೆ ಎಂದು ಹೇಳಿದ್ದರು. ಹೈಕೋರ್ಟ್ ಜಾಮೀನು ನೀಡಿ ಎರಡು ವರ್ಷಗಳಾಗಿವೆ ಎಂಬುವುದನ್ನು ಉಲ್ಲೇಖಿಸಿದ್ದರು.

ಎನ್‌ಐಎ ಪರ ವಕೀಲರು ಅರ್ಜಿಗೆ ವಿರೋಧ ವ್ಯಕ್ತಪಡಿಸಿದ, ರಾವತ್ ಅವರ ಮೇಲೆ ಮಾವೋವಾದಿಗಳಿಗೆ ಹಣವನ್ನು ವರ್ಗಾಯಿಸಿದ ಆರೋಪವಿರುವುದರಿಂದ ಈ ಪ್ರಕರಣ ಗಂಭೀರವಾದುದು ಎಂದು ವಾದಿಸಿದ್ದರು.

ವಾದ ಆಲಿಸಿ ರಾವತ್ ಅವರಿಗೆ ಮಧ್ಯಂತರ ಪರಿಹಾರ ನೀಡಿದ ಕೋರ್ಟ್, “ಅರ್ಜಿದಾರರು ನಿಜವಾಗಿಯೂ ಜಾಮೀನು ದೊರೆತಿದೆ ಎಂಬ ಅಂಶದೊಂದಿಗೆ ವೈದ್ಯಕೀಯ ಆಧಾರದ ಮೇಲೆ ಜಾಮೀನು ಕೋರುತ್ತಿದ್ದಾರೆ. ನಾವು ಆರು ವಾರಗಳ ಅವಧಿಗೆ ವೈದ್ಯಕೀಯ ಜಾಮೀನು ನೀಡಲು ಒಲವು ತೋರುತ್ತೇವೆ” ಎಂದು ಹೇಳಿದೆ.

ಜನವರಿ 1, 2018 ರಂದು ಭೀಮಾ-ಕೋರೆಗಾಂವ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಜೂನ್ 2018 ರಲ್ಲಿ ಪುಣೆ ಪೊಲೀಸರು ರಾವತ್ ಅವರನ್ನು ಬಂಧಿಸಿದ್ದರು. ಪುಣೆಯ ಶನಿವಾರವಾಡದಲ್ಲಿ ಡಿಸೆಂಬರ್ 2017 ರಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಪ್ರಚೋದನಕಾರಿ ಭಾಷಣದ ಮೂಲಕ ಹಿಂಸಾಚಾರಕ್ಕೆ ಪ್ರಚೋದನೆ ನೀಡಲಾಗಿದೆ ಎಂದು ಎನ್‌ಐಎ ಆರೋಪಿಸಿದೆ.

ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಬಂಧಿತರಾಗಿರುವ ಮಹೇಶ್ ರಾವತ್‌, ಪ್ರಸ್ತುತ ಮಹಾರಾಷ್ಟ್ರದ ತಲೋಜಾ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಜಗ್ತಾಪ್ ಜಾಮೀನು ಅರ್ಜಿ ಅಕ್ಟೋಬರ್‌ನಲ್ಲಿ ವಿಚಾರಣೆ

ಪ್ರಕರಣದ ಮತ್ತೊಬ್ಬರು ಆರೋಪ, ಹೋರಾಟಗಾರ್ತಿ ಜ್ಯೋತಿ ಜಗ್ತಾಪ್ ಕೂಡ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಹಿರಿಯ ವಕೀಲೆ ಅಪರ್ಣಾ ಭಟ್ ಅವರು ಜಗ್ತಾಪ್ ಅವರ ಅರ್ಜಿಯನ್ನು ಪೀಠದ ಮುಂದೆ ಪ್ರಸ್ತಾಪಿಸಿ, “ಜಗ್ತಾಪ್ ಸೆಪ್ಟೆಂಬರ್ 2020ರಿಂದ ವಿಚಾರಣೆಯಿಲ್ಲದೆ ಬಂಧನದಲ್ಲಿದ್ದಾರೆ” ಎಂದು ತಿಳಿಸಿದ್ದಾರೆ.

ಎಲ್ಗರ್ ಪರಿಷತ್ ಕಾರ್ಯಕ್ರಮದಲ್ಲಿ ಕಬೀರ್ ಕಲಾ ಮಂಚ್‌ನ ಇತರ ಸದಸ್ಯರೊಂದಿಗೆ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಜಗ್ತಾಪ್ ಅವರನ್ನು ಬಂಧಿಸಲಾಗಿದೆ. ಎನ್‌ಐಎ ಪ್ರಕಾರ, ಕಬೀರ್ ಕಲಾ ಮಂಚ್ ಸಿಪಿಐ (ಮಾವೋವಾದಿ) ಮುಂಚೂಣಿ ಸಾಂಸ್ಕೃತಿಕ ಸಂಘಟನೆಯಾಗಿದೆ ಎಂದು ಹೇಳಲಾಗ್ತಿದೆ.

ಜಾರ್ಖಂಡ್‌: ನಕ್ಸಲರ ಕೇಂದ್ರ ಸಮಿತಿ ಸದಸ್ಯ ಸಹದೇವ್ ಸೊರೆನ್ ಸೇರಿ ಪ್ರಮುಖ 3 ನಕ್ಸಲರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...