Homeಮುಖಪುಟ2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಖುಲಾಸೆ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು 'ಎಲ್ಲರಿಗೂ ಮುಕ್ತ ಅವಕಾಶವಿಲ್ಲ':...

2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಖುಲಾಸೆ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ‘ಎಲ್ಲರಿಗೂ ಮುಕ್ತ ಅವಕಾಶವಿಲ್ಲ’: ಬಾಂಬೆ ಹೈಕೋರ್ಟ್

- Advertisement -
- Advertisement -

ಮುಂಬೈ: 2008 ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ ವಿರುದ್ಧ ಮೇಲ್ಮನವಿ ಸಲ್ಲಿಸಲುಎಲ್ಲರಿಗೂ ಮುಕ್ತ ಅವಕಾಶವಿಲ್ಲ’ ಎಂದು ಮಂಗಳವಾರ ಬಾಂಬೆ ಹೈಕೋರ್ಟ್ ಹೇಳಿದ್ದು, ಸಂತ್ರಸ್ತರ ಕುಟುಂಬದ ಸದಸ್ಯರನ್ನು ವಿಚಾರಣೆಯಲ್ಲಿ ಸಾಕ್ಷಿಗಳಾಗಿ ಪರಿಶೀಲಿಸಲಾಗಿದೆಯೇ ಎಂಬ ಬಗ್ಗೆ ವಿವರಗಳನ್ನು ಕೇಳಿದೆ.

ಸ್ಫೋಟದಲ್ಲಿ ಸಾವನ್ನಪ್ಪಿದ ಆರು ಜನರ ಕುಟುಂಬ ಸದಸ್ಯರು ಸಲ್ಲಿಸಿದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ಗೌತಮ್ ಅನ್ಖಡ್ ಅವರ ಪೀಠವು ಆಲಿಸಿತು. ಮೇಲ್ಮನವಿಯಲ್ಲಿ, ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಪ್ರಕರಣದ ಏಳು ಆರೋಪಿಗಳನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಲಾಗಿದೆ.

ಮಂಗಳವಾರ ಹೈಕೋರ್ಟ್ ಪೀಠವು, ಕುಟುಂಬದ ಸದಸ್ಯರನ್ನು ವಿಚಾರಣೆಯಲ್ಲಿ ಸಾಕ್ಷಿಗಳಾಗಿ ಪರಿಶೀಲಿಸಲಾಗಿದೆಯೇ ಎಂದು ತಿಳಿದುಕೊಳ್ಳಲು ಬಯಸಿತು. ಕುಟುಂಬ ಸದಸ್ಯರ ವಕೀಲರು, ಮೇಲ್ಮನವಿ ಸಲ್ಲಿಸಿದ ಮೊದಲ ವ್ಯಕ್ತಿ ನಿಸಾರ್ ಅಹ್ಮದ್, ಅವರ ಮಗ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಅವರು ವಿಚಾರಣೆಯಲ್ಲಿ ಸಾಕ್ಷಿಯಾಗಿರಲಿಲ್ಲ, ಇದರ ಬಗ್ಗೆ ಬುಧವಾರ ವಿವರಗಳನ್ನು ಸಲ್ಲಿಸುವುದಾಗಿ ಹೇಳಿದರು.

ಪೀಠವು, ಮೇಲ್ಮನವಿದಾರನ ಮಗ ಸ್ಫೋಟದಲ್ಲಿ ಸಾವನ್ನಪ್ಪಿದ್ದರೆ, ಅವರು (ನಿಸಾರ್ ಅಹ್ಮದ್) ಸಾಕ್ಷಿಯಾಗಬೇಕಿತ್ತು ಎಂದು ಹೇಳಿತು.

ನೀವು (ಅರ್ಜಿದಾರರು) ಸಾಕ್ಷಿಗಳಾಗಿದ್ದೀರಾ ಅಥವಾ ಇಲ್ಲವೇ ಎಂದು ಸೂಚಿಸಬೇಕು. ನಮಗೆ ವಿವರಗಳನ್ನು ನೀಡಿ. ಇದು ಎಲ್ಲರಿಗೂ ಮುಕ್ತ ಅವಕಾಶವಲ್ಲಎಂದು ಹೈಕೋರ್ಟ್ ಹೇಳಿದೆ.

ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ಕಳೆದ ವಾರ ಸಲ್ಲಿಸಲಾದ ಮೇಲ್ಮನವಿಯಲ್ಲಿ, ದೋಷಪೂರಿತ ತನಿಖೆ ಅಥವಾ ತನಿಖೆಯಲ್ಲಿನ ಕೆಲವು ದೋಷಗಳು ಆರೋಪಿಗಳನ್ನು ಖುಲಾಸೆಗೊಳಿಸಲು ಆಧಾರವಾಗುವುದಿಲ್ಲ ಎಂದು ಹೇಳಲಾಗಿದೆ. ಅಲ್ಲದೆ, ಸ್ಫೋಟದ ಸಂಚು ರಹಸ್ಯವಾಗಿ ರೂಪಿಸಲಾಗಿದೆ, ಆದ್ದರಿಂದ ನೇರ ಸಾಕ್ಷ್ಯ ಇರಲು ಸಾಧ್ಯವಿಲ್ಲ ಎಂದು ಮೇಲ್ಮನವಿದಾರರು ಪ್ರತಿಪಾದಿಸಿದ್ದಾರೆ.

ಜುಲೈ 31ರಂದು ಏಳು ಆರೋಪಿಗಳನ್ನು ಖುಲಾಸೆಗೊಳಿಸಿ ವಿಶೇಷ ಎನ್ಐಎ ನ್ಯಾಯಾಲಯ ನೀಡಿದ ಆದೇಶವು ತಪ್ಪು ಮತ್ತು ಕಾನೂನಿಗೆ ವಿರುದ್ಧವಾಗಿದೆ, ಆದ್ದರಿಂದ ಅದನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರು ಹೇಳಿದ್ದಾರೆ.

ಸೆಪ್ಟೆಂಬರ್ 29, 2008ರಂದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿರುವ ಮುಂಬೈನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಮಾಲೆಗಾಂವ್ ಪಟ್ಟಣದ ಮಸೀದಿಯ ಸಮೀಪ ಒಂದು ಮೋಟಾರ್ಸೈಕಲ್ಗೆ ಜೋಡಿಸಲಾದ ಸ್ಫೋಟಕ ಸಾಧನವು ಸ್ಫೋಟಗೊಂಡಿತ್ತು. ಘಟನೆಯಲ್ಲಿ ಆರು ಜನರು ಸಾವನ್ನಪ್ಪಿ 101 ಜನರು ಗಾಯಗೊಂಡಿದ್ದರು.

ಕ್ರಿಮಿನಲ್ ವಿಚಾರಣೆಯಲ್ಲಿ ವಿಚಾರಣಾ ನ್ಯಾಯಾಧೀಶರುಪೋಸ್ಟ್ಮನ್ ಅಥವಾ ಮೂಕ ಪ್ರೇಕ್ಷಕನಂತೆ ವರ್ತಿಸಬಾರದು ಎಂದು ಮೇಲ್ಮನವಿ ಹೇಳಿದೆ. ಪ್ರಾಸಿಕ್ಯೂಷನ್ ಸತ್ಯಗಳನ್ನು ಹೊರತೆಗೆಯಲು ವಿಫಲವಾದಾಗ, ವಿಚಾರಣಾ ನ್ಯಾಯಾಲಯವು ಪ್ರಶ್ನೆಗಳನ್ನು ಕೇಳಬಹುದು ಮತ್ತು/ಅಥವಾ ಸಾಕ್ಷಿಗಳಿಗೆ ಸಮನ್ಸ್ ನೀಡಬಹುದು ಎಂದು ಮೇಲ್ಮನವಿದಾರರು ಸೇರಿಸಿದ್ದಾರೆ.

ವಿಚಾರಣಾ ನ್ಯಾಯಾಲಯವು ದುರದೃಷ್ಟವಶಾತ್ ಕೇವಲ ಅಂಚೆ ಕಚೇರಿಯಂತೆ ವರ್ತಿಸಿದೆ ಮತ್ತು ದೋಷಪೂರಿತ ಪ್ರಾಸಿಕ್ಯೂಷನ್ ಆರೋಪಿಗಳಿಗೆ ಲಾಭವಾಗಲು ಅವಕಾಶ ಮಾಡಿಕೊಟ್ಟಿದೆಎಂದು ಮೇಲ್ಮನವಿ ಹೇಳಿದೆ. ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆ ಮತ್ತು ವಿಚಾರಣೆ ನಡೆಸಿದ ರೀತಿ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದು, ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಕೋರಿದೆ.

ರಾಜ್ಯ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಏಳು ಜನರನ್ನು ಬಂಧಿಸುವ ಮೂಲಕ ದೊಡ್ಡ ಸಂಚನ್ನು ಭೇದಿಸಿತು ಮತ್ತು ಅಂದಿನಿಂದ ಅಲ್ಪಸಂಖ್ಯಾತ ಸಮುದಾಯದವರು ವಾಸಿಸುವ ಪ್ರದೇಶಗಳಲ್ಲಿ ಯಾವುದೇ ಸ್ಫೋಟ ಸಂಭವಿಸಿಲ್ಲ ಎಂದು ಮೇಲ್ಮನವಿ ಹೇಳಿದೆ.

ಎನ್ಐಎ ಪ್ರಕರಣವನ್ನು ಕೈಗೆತ್ತಿಕೊಂಡ ನಂತರ ಆರೋಪಿಗಳ ಮೇಲಿನ ಆರೋಪಗಳನ್ನು ದುರ್ಬಲಗೊಳಿಸಿದೆ ಎಂದು ಅದು ಹೇಳಿಕೊಂಡಿದೆ.

ತನ್ನ ತೀರ್ಪಿನಲ್ಲಿ ವಿಶೇಷ ನ್ಯಾಯಾಲಯವು ಕೇವಲ ಅನುಮಾನವು ನಿಜವಾದ ಪುರಾವೆಯನ್ನು ಬದಲಾಯಿಸಲು ಸಾಧ್ಯವಿಲ್ಲ ಮತ್ತು ಅಪರಾಧ ಸಾಬೀತುಪಡಿಸಲು ಯಾವುದೇ ವಿಶ್ವಾಸಾರ್ಹ ಅಥವಾ ಸ್ಪಷ್ಟ ಸಾಕ್ಷ್ಯ ಇಲ್ಲ ಎಂದು ಹೇಳಿತ್ತು.

ಎನ್ಐಎ ನ್ಯಾಯಾಲಯದ ವಿಶೇಷ ನ್ಯಾಯಾಧೀಶ .ಕೆ. ಲಹೋತಿ, ಸಮಂಜಸವಾದ ಅನುಮಾನವನ್ನು ಮೀರಿ ಪ್ರಕರಣವನ್ನು ಸಾಬೀತುಪಡಿಸುವ ಯಾವುದೇವಿಶ್ವಾಸಾರ್ಹ ಮತ್ತು ಸ್ಪಷ್ಟ ಸಾಕ್ಷ್ಯಆರೋಪಿಗಳ ವಿರುದ್ಧ ಇಲ್ಲ ಎಂದು ಹೇಳಿದ್ದರು.

ಕೋಮು ಸೂಕ್ಷ್ಮ ಪ್ರದೇಶವಾದ ಮಾಲೆಗಾಂವ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯವನ್ನು ಭಯಭೀತಗೊಳಿಸುವ ಉದ್ದೇಶದಿಂದ ಬಲಪಂಥೀಯ ಉಗ್ರಗಾಮಿಗಳು ಸ್ಫೋಟ ನಡೆಸಿದ್ದಾರೆ ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು.

ಎನ್ಐಎ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಪ್ರಾಸಿಕ್ಯೂಷನ್ ಪ್ರಕರಣ ಮತ್ತು ತನಿಖೆಯಲ್ಲಿನ ಹಲವಾರು ಲೋಪದೋಷಗಳನ್ನು ಗಮನಸೆಳೆದಿದೆ ಮತ್ತು ಆರೋಪಿಗಳು ಅನುಮಾನದ ಲಾಭ ಪಡೆಯಲು ಅರ್ಹರು ಎಂದು ಹೇಳಿದೆ.

ಠಾಕೂರ್ ಮತ್ತು ಪುರೋಹಿತ್ ಜೊತೆಗೆ, ಮೇಜರ್ ರಮೇಶ್ ಉಪಾಧ್ಯಾಯ (ನಿವೃತ್ತ), ಅಜಯ್ ರಾಹೀರ್ಕರ್, ಸುಧಾಕರ್ ದ್ವಿವೇದಿ, ಸುಧಾಕರ್ ಚತುರ್ವೇದಿ ಮತ್ತು ಸಮೀರ್ ಕುಲಕರ್ಣಿ ಕೂಡ ಆರೋಪಿಗಳಾಗಿದ್ದರು.

ಪ್ರಕರಣದ ಹಿನ್ನೆಲೆ ಮತ್ತು ದೋಷಮುಕ್ತಿ

2008ರ ಸೆಪ್ಟೆಂಬರ್ 29ರಂದು ಮಹಾರಾಷ್ಟ್ರದ ಕೋಮು ಸೂಕ್ಷ್ಮ ಪ್ರದೇಶವಾದ ಮಾಲೆಗಾಂವ್‌ನ ಭಿಕ್ಕು ಚೌಕ್ ಮಸೀದಿ ಬಳಿ ಈ ಬಾಂಬ್ ಸ್ಫೋಟ ಸಂಭವಿಸಿತ್ತು. ರಂಜಾನ್ ತಿಂಗಳಿನಲ್ಲಿ ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ನಡೆದ ಈ ದಾಳಿಯಲ್ಲಿ ಆರು ಜನರು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದವು. ಆರಂಭದಲ್ಲಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ATS) ಈ ಪ್ರಕರಣದ ತನಿಖೆ ನಡೆಸಿತ್ತು.

2011ರಲ್ಲಿ, ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವರ್ಗಾಯಿಸಲಾಯಿತು. ವರ್ಷಗಳ ಕಾನೂನು ಪ್ರಕ್ರಿಯೆ, ವಾದ ವಿವಾದಗಳು ಮತ್ತು ಸಾಕ್ಷಿಗಳ ವಿಚಾರಣೆಯ ನಂತರ, ವಿಶೇಷ NIA ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಲಯವು ಏಪ್ರಿಲ್ 19ರಂದು ತೀರ್ಪನ್ನು ಕಾಯ್ದಿರಿಸಿತ್ತು. ಸುಮಾರು ಒಂದು ಲಕ್ಷ ಪುಟಗಳ ದಾಖಲೆಗಳು ಮತ್ತು 323 ಸಾಕ್ಷಿಗಳನ್ನು ನ್ಯಾಯಾಲಯವು ಪರಿಶೀಲಿಸಿತ್ತು.

ಈ ಸಾಕ್ಷಿಗಳಲ್ಲಿ 34 ಮಂದಿ ತಮ್ಮ ಹೇಳಿಕೆಗಳಿಂದ ಹಿಂದೆ ಸರಿದಿದ್ದರು.ನ್ಯಾಯಾಲಯದ ತೀರ್ಪು ಭಾರತದ ಅತ್ಯಂತ ವಿವಾದಾತ್ಮಕ ಭಯೋತ್ಪಾದನಾ ಪ್ರಕರಣಗಳಲ್ಲಿ ಒಂದನ್ನು ಕೊನೆಗೊಳಿಸಿದೆ. ತೀರ್ಪಿನಲ್ಲಿ ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಮತ್ತು ಇತರ ಐವರನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA), ಶಸ್ತ್ರಾಸ್ತ್ರ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ (IPC) ಅಡಿಯಲ್ಲಿನ ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ.

ಆರೋಪ ಸಾಬೀತುಪಡಿಸಲು ಸಾಕಷ್ಟು ಸಾಕ್ಷ್ಯಾಧಾರಗಳ ಕೊರತೆಯಿದೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ. ಈ ತೀರ್ಪು ಸಂತ್ರಸ್ತರ ಕುಟುಂಬಗಳಲ್ಲಿ ಮತ್ತು ಮಾಲೆಗಾಂವ್‌ನ ಜನರಲ್ಲಿ ಆಘಾತ ಮತ್ತು ಅಸಮಾಧಾನವನ್ನು ಉಂಟುಮಾಡಿದೆ.

ಗುಜರಾತ್‌ ಡಿಸ್ಟರ್ಬ್ಡ್‌ ಏರಿಯಾಸ್ ಆ್ಯಕ್ಟ್‌: 15ರ ಮುಸ್ಲಿಂ ಬಾಲಕಿ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...