Homeಮುಖಪುಟಒಂದೇ ಮನೆಯಲ್ಲಿ 4271 ಮತದಾರರು!..ಮಹದೇವಪುರ ಬಳಿಕ ಮತ್ತೊಂದು ಭಾರೀ ಮತಗಳ್ಳತನ ಆರೋಪ

ಒಂದೇ ಮನೆಯಲ್ಲಿ 4271 ಮತದಾರರು!..ಮಹದೇವಪುರ ಬಳಿಕ ಮತ್ತೊಂದು ಭಾರೀ ಮತಗಳ್ಳತನ ಆರೋಪ

- Advertisement -
- Advertisement -

ಉತ್ತರ ಪ್ರದೇಶದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮಂಗಳವಾರ (ಸೆ.16) ಆರೋಪಿಸಿದ್ದು, ಮಹೋಬಾ ಜಿಲ್ಲೆಯ ಒಂದೇ ಮನೆಯಲ್ಲಿ 4,271 ಮತದಾರರು ದಾಖಲಾಗಿರುವುದು ಕಂಡುಬಂದಿದೆ ಎಂದಿದ್ದಾರೆ.

ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಜಯ್ ಸಿಂಗ್, “ನಿನ್ನೆ ನಾನು ಮಹೋಬಾ ಜಿಲ್ಲೆಯ ಎರಡು ಮನೆಗಳ ಬಗ್ಗೆ ತಿಳಿಸಿದ್ದೆ, ಅಲ್ಲಿ ಕ್ರಮವಾಗಿ 243 ಮತ್ತು 185 ಮತದಾರರಿದ್ದರು. ಇದು ಆಶ್ಚರ್ಯಕರವಾಗಿತ್ತು. ಆದರೆ, ಇಂದು ಒಂದೇ ಮನೆಯಲ್ಲಿ 4,271 ಮತದಾರರನ್ನು ದಾಖಲಿಸಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಂದು ಮನೆಯಲ್ಲಿ 4,271 ಮತದಾರರಿದ್ದರೆ, ಆ ಕುಟುಂಬದಲ್ಲಿ ಸುಮಾರು 12,000 ಸದಸ್ಯರಿರಬೇಕು. ಇಂತಹ ದೊಡ್ಡ ಕುಟುಂಬವನ್ನು ಯಾರಾದರೂ ಹುಡುಕಬೇಕಿದೆ” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತು ಚುನಾವಣಾ ಆಯೋಗದ ಶಾಮೀಲಿನಿಂದ ‘ಮತಗಳ್ಳತನ’ ಪ್ರಾರಂಭವಾಯಿತು ಎಂದು ಸಿಂಗ್ ಆರೋಪಿಸಿದ್ದಾರೆ.

“4,271 ಮತದಾರರಿರುವ ಮಹೋಬಾದ ಆ ಮನೆಯ ಮಾಲೀಕರಿಗೆ ನಾನು ಹೇಳಲು ಬಯಸುವುದೇನೆಂದರೆ ನೀವು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದರೆ ಸುಲಭವಾಗಿ ಗೆಲ್ಲುತ್ತೀರಿ. ನಿಮ್ಮ ಮನೆಯವರೇ ಮತ ಚಲಾಯಿಸಿದರೆ ಸಾಕು” ಎಂದು ಸಂಜಯ್ ಸಿಂಗ್ ವ್ಯಂಗ್ಯವಾಗಿ ಹೇಳಿದ್ದಾರೆ.

4,271 ಮತದಾರರನ್ನು ಹೊಂದಿರುವ ಆ ಮನೆ ಇರುವ ಗ್ರಾಮದಲ್ಲಿ ಒಟ್ಟು ಸುಮಾರು 16,000 ಮತದಾರರಿದ್ದಾರೆ ಎಂದು ಸಿಂಗ್ ಹೇಳಿಕೊಂಡಿದ್ದು, ಇದು ಮತ್ತಷ್ಟು ಚುನಾವಣಾ ಅಕ್ರಮದ ಅನುಮಾನ ಹುಟ್ಟು ಹಾಕಿದೆ.

ಬಿಹಾರದ ಭಾಗಲ್ಪುರದ ಭೂ ಹಂಚಿಕೆಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ-ಜೆಡಿ(ಯು) ಮೈತ್ರಿಕೂಟದ ವಿರುದ್ದ ವಾಗ್ದಾಳಿ ನಡೆಸಿದ ಸಂಜಯ್ ಸಿಂಗ್, ರಾಜ್ಯ ಸರ್ಕಾರ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರ ಕಂಪನಿ ಸಮೂಹದ ಮೂರು ವಿದ್ಯುತ್ ಸ್ಥಾವರಗಳಿಗೆ 1,050 ಎಕರೆ ಭೂಮಿಯನ್ನು ಎಕರೆಗೆ 1 ರೂಪಾಯಿಯಂತೆ 25 ವರ್ಷಕ್ಕೆ ನೀಡಿದೆ ಎಂದು ಆರೋಪಿಸಿದ್ದಾರೆ.

“ಒಂದು ರೂಪಾಯಿಗೆ ಭೂಮಿ ನೀಡಿದ್ದು ಮಾತ್ರವಲ್ಲದೆ, ನೀವು ಉತ್ಪಾದಿಸುವ ಯಾವುದೇ ವಿದ್ಯುತ್ ಅನ್ನು ಮುಂದಿನ 25 ವರ್ಷಗಳವರೆಗೆ ಪ್ರತಿ ಯೂನಿಟ್‌ಗೆ 7 ರೂಪಾಯಿ ನೀಡಿ ಖರೀದಿಸಲಾಗುವುದು ಎಂಬ ಖಾತರಿಯನ್ನೂ ಅದಾನಿ ಸಮೂಹಕ್ಕೆ ಸರ್ಕಾರ ನೀಡಿದೆ. ಪ್ರತಿ ಯೂನಿಟ್‌ಗೆ 10,11 ಅಥವಾ 12 ರೂಪಾಯಿ ನೀಡಿ ವಿದ್ಯುತ್ ಖರೀದಿಸಲು ಜನರಿಗೆ ಸಾಧ್ಯವೇ? ಎಂಬುವುದು ಸರ್ಕಾರಕ್ಕೆ ಮುಖ್ಯವಲ್ಲ. ಪ್ರಧಾನ ಮಂತ್ರಿಯ ಸ್ನೇಹಿತನಿಗೆ ಯಾವುದೇ ತೊಂದರೆಯಾಗಬಾರದು” ಎಂದು ಸಿಂಗ್ ಟೀಕಿಸಿದ್ದಾರೆ.

“2012 ಮತ್ತು 2013ರ ನಡುವೆ, ಅಂದಿನ ಬಿಜೆಪಿ-ಜೆಡಿ (ಯು) ಸರ್ಕಾರ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು ಮತ್ತು ಸಾರ್ವಜನಿಕ ಖಜಾನೆಯಿಂದ ರೈತರಿಗೆ ಪರಿಹಾರವನ್ನೂ ಪಾವತಿಸಿತ್ತು. ಅಂತಹ ಭೂಮಿಯನ್ನು ಸರ್ಕಾರ ಆದಾಯ ಗಳಿಸಲು ಹೆಚ್ಚಿನ ಬೆಲೆಗೆ ಮಾರಾಟ ಮಾಡಬಹುದಿತ್ತು. ಆದರೆ, ಅದಾನಿಗೆ ಎಕರೆಗೆ 1 ರೂ.ಗೆ 25 ವರ್ಷಕ್ಕೆ ನೀಡಲಾಗಿದೆ” ಎಂದು ಸಿಂಗ್ ಹೇಳಿದ್ದಾರೆ.

ಮತಗಳ್ಳತನದ ಬಗ್ಗೆ ಜುಲೈ 24ರಂದು ಸಂಸತ್ ಮುಂದೆ ಮೊದಲ ಹೇಳಿಕೆ ಕೊಟ್ಟಿದ್ದ ರಾಹುಲ್ ಗಾಂಧಿ, ಆಗಸ್ಟ್ 7ರಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತನ್ನ ಆರೋಪದ ಕುರಿತು ದಾಖಲೆ ಬಿಡುಗಡೆ ಮಾಡಿದ್ದರು.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 2024ರ ಲೋಕಸಭೆ ಚುನಾವಣೆಯ ವೇಳೆ ಬರೋಬ್ಬರಿ 1 ಲಕ್ಷಕ್ಕೂ (1,00, 250) ಹೆಚ್ಚು ಮತಗಳ್ಳತನ ನಡೆದಿದೆ ಎಂದಿದ್ದರು. ಮಹದೇವಪುರದ ಮುನಿರೆಡ್ಡಿ ಗಾರ್ಡನ್‌ನಲ್ಲಿರುವ ಮನೆ ಸಂಖ್ಯೆ 35ರಲ್ಲಿ 80 ಮತದಾರರನ್ನು ನೋಂದಾಯಿಸಲಾಗಿದೆ ಎಂದು ನಿರ್ದಿಷ್ಟವಾಗಿ ಉಲ್ಲೇಖಿಸಿದ್ದರು.

ಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ ಚು. ಆಯುಕ್ತ ಎಸ್. ವೈ ಖುರೈಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...