Homeದಲಿತ್ ಫೈಲ್ಸ್ತಮಿಳುನಾಡು| ಪ್ರಬಲ ಜಾತಿ ಯುವತಿಯೊಂದಿಗೆ ಸಂಬಂಧ; ದಲಿತ ಯುವಕನ ಕೊಲೆ

ತಮಿಳುನಾಡು| ಪ್ರಬಲ ಜಾತಿ ಯುವತಿಯೊಂದಿಗೆ ಸಂಬಂಧ; ದಲಿತ ಯುವಕನ ಕೊಲೆ

- Advertisement -
- Advertisement -

ಪ್ರಬಲ ಜಾತಿ ಯುವತಿಯೊಂದಿಗೆ ಸಂಬಂಧದ ಆರೋಪದ ಮೇಲೆ ಪರಯರ್ ಸಮುದಾಯದ 28 ವರ್ಷದ ದಲಿತ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಸೆಪ್ಟೆಂಬರ್ 15 ರ ಸೋಮವಾರ ತಡರಾತ್ರಿ ತಮಿಳುನಾಡಿನ ಮೈಲಾಡುತುರೈ ಜಿಲ್ಲೆಯಲ್ಲಿ ನಡೆದಿದೆ ಎಂದು ‘ದಿ ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

ಯುವಕನ ಹತ್ಯೆಯು ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದು, ಪದೇಪದೇ ದೂರುಗಳು ಬಂದರೂ ಪೊಲೀಸರು ಅಪರಾಧವನ್ನು ತಡೆಯಲು ವಿಫಲರಾಗಿದ್ದಾರೆ ಎಂದು ರಾಜಕೀಯ ನಾಯಕರು ಆರೋಪಿಸಿದ್ದಾರೆ.

ಮೃತನನ್ನು ಡಿಎಂಇಯಲ್ಲಿ ಡಿಪ್ಲೊಮಾ ಪದವೀಧರ ಮತ್ತು ಆದಿಯಮಂಗಲಂ ಗ್ರಾಮದ ದ್ವಿಚಕ್ರ ವಾಹನ ಮೆಕ್ಯಾನಿಕ್ ಆಗಿರುವ ಕೆ. ವೈರಮುತ್ತು ಎಂದು ಗುರುತಿಸಲಾಗಿದ್ದು, ಚೆನ್ನೈನಲ್ಲಿ ಉದ್ಯೋಗದಲ್ಲಿರುವ ಎಂಬಿಎ ಪದವೀಧರೆ ಮಾಲಿನಿ (26) ಅವರೊಂದಿಗೆ ಹಲವು ವರ್ಷಗಳಿಂದ ಸಂಬಂಧ ಹೊಂದಿದ್ದರು ಎಂದು ವರದಿಯಾಗಿದೆ. ಆಕೆಯ ಕುಟುಂಬವು ಈ ಸಂಬಂಧವನ್ನು ವಿರೋಧಿಸಿತ್ತು.

ವರದಿಗಳ ಪ್ರಕಾರ, ರಾತ್ರಿ 10.30 ರ ಸುಮಾರಿಗೆ ವೈರಮುತ್ತು ಮನೆಗೆ ಹೋಗುತ್ತಿದ್ದಾಗ, ಪುರುಷರ ಗುಂಪೊಂದು ಅವರನ್ನು ಅಡ್ಡಗಟ್ಟಿ ಕುಡುಗೋಲುಗಳಿಂದ ಹಲ್ಲೆ ನಡೆಸಿತು. ಅವರ ಕುತ್ತಿಗೆ ಮತ್ತು ಮಣಿಕಟ್ಟುಗಳಿಗೆ ಆಳವಾದ ಗಾಯಗಳಾಗಿದ್ದು, ಗಾಯಾಳುವನ್ನು ಕೂಡಲೇ ಮೈಲಾಡುತುರೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದರು.

ಮಾಲಿನಿಯ ತಂದೆ ಪರೈಯರ್ ಸಮುದಾಯಕ್ಕೆ ಸೇರಿದವರಾಗಿದ್ದರೂ, ತಾಯಿ ವಿಜಯಾ ಹಿಂದುಳಿದ ವರ್ಗ (ಬಿಸಿ) ಚೆಟ್ಟಿಯಾರ್ ಸಮುದಾಯದವರು ಎಂದು ವರದಿಯಾಗಿದೆ. ಮಾಲಿನಿಯ ವೈರಮುತ್ತು ಜೊತೆಗಿನ ಸಂಬಂಧ ಮತ್ತು ಅವರ ವಿವಾಹ ಯೋಜನೆಗಳನ್ನು ವಿಜಯಾ ತೀವ್ರವಾಗಿ ವಿರೋಧಿಸಿದ್ದರು ಎಂದು ಹೇಳಲಾಗಿದೆ.

ಸೆಪ್ಟೆಂಬರ್ 14 ರಂದು, ಪೊಲೀಸರು ಎರಡು ಕುಟುಂಬಗಳ ನಡುವೆ ಮಧ್ಯಸ್ಥಿಕೆ ವಹಿಸಿದ್ದರು. ಮಾಲಿನಿ ವೈರಮುತ್ತು ಅವರನ್ನು ಮದುವೆಯಾಗುವ ನಿರ್ಧಾರವನ್ನು ಪ್ರತಿಪಾದಿಸಿದರು. ಆದರೆ, ಅವರ ಕುಟುಂಬದ ಪ್ರಬಲ ವಿರೋಧದ ನಂತರವೂ ಯುವಕನೊಂದಿಗೆ ವಾಸಿಸುತ್ತಿದ್ದರು. ಅವರ ಕುಟುಂಬವು ಮದುವೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪೊಲೀಸರಿಗೆ ಲಿಖಿತ ಹೇಳಿಕೆಯನ್ನೂ ನೀಡಿತ್ತು.

ವೈರಮುತ್ತು ಹತ್ಯೆ ಖಂಡಿಸಿ ವಿವಿಧ ಸಂಘಟನೆಗಳಿಂದ ರಸ್ತೆ ತಡೆದು ಪ್ರತಿಭಟನೆ

ಕೊಲೆಯಾದ ದಿನ, ಮಾಲಿನಿ ತಮ್ಮ ಮದುವೆಯನ್ನು ನೋಂದಾಯಿಸಲು ದಾಖಲೆಗಳನ್ನು ಸಂಗ್ರಹಿಸಲು ಚೆನ್ನೈಗೆ ಪ್ರಯಾಣ ಬೆಳೆಸಿದ್ದರು. ಆ ರಾತ್ರಿ, ವೈರಮುತ್ತು ಅವರನ್ನು ಅಡ್ಡಗಟ್ಟಿ ಕೊಲ್ಲಲಾಯಿತು.

ವೈರಮುತ್ತು ಅವರ ತಾಯಿ ರಾಜಲಕ್ಷ್ಮಿ ಅವರ ದೂರಿನ ನಂತರ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ಕು ವಿಶೇಷ ತಂಡಗಳನ್ನು ರಚಿಸಿದರು. ಮಾಲಿನಿಯ ಸಹೋದರರಾದ ಗುಗನ್ ಮತ್ತು ಗುಣಲ್ ಸೇರಿದಂತೆ ಕನಿಷ್ಠ 10 ಶಂಕಿತರನ್ನು ಕೊಲೆಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಬಂಧಿಸಲಾಗಿದೆ.

ಈ ಹತ್ಯೆಯು ಮೈಲಾಡುತುರೈನಲ್ಲಿ ಪ್ರತಿಭಟನೆಗೆ ಕಾರಣವಾಗಿದ್ದು, ಮಾಲಿನಿ, ವೈರಮುತ್ತು ಅವರ ಸಂಬಂಧಿಕರು ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್) ಸಿಪಿಐ(ಎಂ), ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ), ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಮತ್ತು ತಮಿಳುನಾಡು ಅಸ್ಪೃಶ್ಯತಾ ನಿರ್ಮೂಲನಾ ರಂಗದ ಸದಸ್ಯರು ಸೇರಿದಂತೆ 150 ಕ್ಕೂ ಹೆಚ್ಚು ಜನರು ಮೈಲಾಡುತುರೈ ಸರ್ಕಾರಿ ಆಸ್ಪತ್ರೆ ಬಳಿ ಮತ್ತು ಮೈಲಾಡುತುರೈ-ಕುಂಭಕೋಣಂ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದರು.

ವಿಜಯ ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ವೈರಮುತ್ತು ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ವೈರಮುತ್ತು ಅವರ ಶವವನ್ನು ಸ್ವೀಕರಿಸಲು ನಿರಾಕರಿಸಿದ್ದರಿಂದ ಮಂಗಳವಾರ ಹೆದ್ದಾರಿಯಲ್ಲಿ ಗಂಟೆಗಟ್ಟಲೆ ಸಂಚಾರ ಅಸ್ತವ್ಯಸ್ತವಾಯಿತು.

ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಹತ್ಯೆಯನ್ನು ಖಂಡಿಸಿದರು, ಇದನ್ನು ಜಾತಿ ಆಧಾರಿತ ಕೊಲೆ ಎಂದು ಬಣ್ಣಿಸಿದರು ಮತ್ತು ಪದೇ ಪದೇ ಬೆದರಿಕೆಗಳು ಮತ್ತು ದೂರುಗಳ ಹೊರತಾಗಿಯೂ, ಪೊಲೀಸರು ವೈರಮುತ್ತು ಅವರಿಗೆ ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಚೆನ್ನೈ| ಅನ್ಯಜಾತಿ ಯುವತಿಯನ್ನು ಭೇಟಿಯಾದ ದಲಿತ ಅಪ್ರಾಪ್ತನನ್ನು ವಿವಸ್ತ್ರಗೊಳಿಸಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....