Homeಮುಖಪುಟರೇವಂತ್ ರೆಡ್ಡಿ ಸೂಚನೆ ಮೇರೆಗೆ ಕಾಂಗ್ರೆಸ್ ಸಂಸದರು ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ: ಬಿಆರ್‌ಎಸ್‌...

ರೇವಂತ್ ರೆಡ್ಡಿ ಸೂಚನೆ ಮೇರೆಗೆ ಕಾಂಗ್ರೆಸ್ ಸಂಸದರು ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ: ಬಿಆರ್‌ಎಸ್‌ ಶಾಸಕ ಗಂಭೀರ ಆರೋಪ

- Advertisement -
- Advertisement -

ಇತ್ತೀಚೆಗೆ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ತೆಲಂಗಾಣದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ರೇವಂತ್ ರೆಡ್ಡಿ  ಅವರು ತಮ್ಮ ಸಂಸದರಿಂದ ಅಡ್ಡ ಮತದಾನ ಮಾಡಿಸಿದ್ದಾರೆ ಎಂದು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ಶಾಸಕ ಪಡಿ ಕೌಶಿಕ್ ರೆಡ್ಡಿ ಆರೋಪಿಸಿದ್ದಾರೆ.

ರಾಜ್ಯದ ಎಂಟು ಕಾಂಗ್ರೆಸ್ ಸಂಸದರು ಬಿಜೆಪಿ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಅವರಿಗೆ ಮತ ಹಾಕಿದ್ದಾರೆ ಎಂದು ಕೌಶಿಕ್ ರೆಡ್ಡಿ ಹೇಳಿದ್ದಾರೆ. ಈ ನಡೆಯು ತೆಲಂಗಾಣದ ಜನರು ಮತ್ತು ಇಂಡಿಯಾ ಒಕ್ಕೂಟದ ಅಭ್ಯರ್ಥಿ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರಿಗೆ ಬಗೆದಿರುವ ದ್ರೋಹ ಎಂದಿದ್ದಾರೆ.

ಮಂಗಳವಾರ (ಸೆ.16) ಹೈದರಾಬಾದ್‌ನ ತೆಲಂಗಾಣ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಕೌಶಿಕ್ ರೆಡ್ಡಿ, “ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಾಗ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಪೋಸ್ಟ್‌ ಹಾಕಿದ್ದರು. ಅದರಲ್ಲಿ 315 ಮತಗಳು ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್‌ ರೆಡ್ಡಿ ಪರ ಬಿದ್ದಿವೆ ಎಂದಿದ್ದರು. ಈ ಮೂಲಕ ಇಂಡಿಯಾ ಒಕ್ಕೂಟ ಒಗ್ಗಟ್ಟು ಪ್ರದರ್ಶಿಸಿವೆ ಎಂದು ಹೇಳಿದ್ದರು. ಆದರೆ, ಚುನಾವಣಾ ಆಯೋಗದ ಅಧಿಕೃತ ಪ್ರಕಟನೆ ಮತ್ತು ಮಾಧ್ಯಮ ವರದಿಗಳು 300 ಮತಗಳು ಮಾತ್ರ ಸುದರ್ಶನ್‌ ರೆಡ್ಡಿ ಪರ ಚಲಾವಣೆಯಾಗಿವೆ ಎಂದಿವೆ. ಹಾಗಾದರೆ, 15 ಮತಗಳು ಎಲ್ಲಿಗೆ ಹೋಯಿತು?…15 ಅಡ್ಡ ಮತದಾನವಾಗಿದೆ. ಈ ಪೈಕಿ 8 ತೆಲಂಗಾಣದ ಕಾಂಗ್ರೆಸ್ ಸಂಸದರದ್ದು” ಎಂದು ಗಂಭೀರ ಆರೋಪ ಮಾಡಿದ್ದಾರೆ.

ಅಡ್ಡ ಮತದಾನದ ನಂತರ ತೆಲಂಗಾಣದ ಕಾಂಗ್ರೆಸ್ ಸಂಸದರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಸಚಿವರು ಕಾಂಗ್ರೆಸ್ ಸಂಸದರಿಗೆ ಕೃತಜ್ಞತೆ ತಿಳಿಸಿದ್ದಾರೆ ಎಂದು ಕೌಶಿಕ್ ರೆಡ್ಡಿ ಹೇಳಿದ್ದಾರೆ.

“ರಾಹುಲ್ ಗಾಂಧಿ ರಾಷ್ಟ್ರಮಟ್ಟದಲ್ಲಿ ಮತಗಳ್ಳತನದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ತೆಲಂಗಾಣದ ಅವರ ಸ್ವಂತ ಮುಖ್ಯಮಂತ್ರಿ ಮತಗಳನ್ನು ಕದಿಯುತ್ತಿದ್ದಾರೆ. ಮೂವರು ಕಾಂಗ್ರೆಸ್ ಸಂಸದರು ರೇವಂತ್ ರೆಡ್ಡಿ ಅವರ ಆಜ್ಞೆಯ ಮೇರೆಗೆ ಎನ್‌ಡಿಎ ಅಭ್ಯರ್ಥಿಗೆ ಮತ ಹಾಕಿದ್ದೇವೆ ಎಂದು ವೈಯಕ್ತಿಕವಾಗಿ ನಮ್ಮ ಬಳಿ ಒಪ್ಪಿಕೊಂಡಿದ್ದಾರೆ” ಎಂದು ಕೌಶಿಕ್ ರೆಡ್ಡಿ ತಿಳಿಸಿದ್ದಾರೆ.

ತಮ್ಮ ಮಾರ್ಗದರ್ಶಕರಾದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯಂತೆ ವರ್ತಿಸುವ ಮೂಲಕ ರೇವಂತ್ ರೆಡ್ಡಿ ತಮ್ಮ ‘ಗುರುದಕ್ಷಿಣೆ’ಯನ್ನು ಪಾವತಿಸುತ್ತಿದ್ದಾರೆ. ಮುಖ್ಯಮಂತ್ರಿಯ ಕಾರ್ಯಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಜಾಗರೂಕರಾಗಿರಬೇಕು ಎಂದು ಕೌಶಿ ರೆಡ್ಡಿ ಹೇಳಿದ್ದಾರೆ.

ಒಂದೇ ಮನೆಯಲ್ಲಿ 4271 ಮತದಾರರು!..ಮಹದೇವಪುರ ಬಳಿಕ ಮತ್ತೊಂದು ಭಾರೀ ಮತಗಳ್ಳತನ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...