Homeಅಂತರಾಷ್ಟ್ರೀಯಇಂಗ್ಲೆಂಡ್‌ನಲ್ಲಿ ಸಿಖ್ ಯುವತಿ ಮೇಲೆ 'ಜನಾಂಗೀಯ ಪ್ರೇರಿತ' ಅತ್ಯಾಚಾರ: ಖಂಡನೆ ವ್ಯಕ್ತಪಡಿಸಿದ 40 ಸಂಘಟನೆಗಳು, ನ್ಯಾಯಕ್ಕಾಗಿ...

ಇಂಗ್ಲೆಂಡ್‌ನಲ್ಲಿ ಸಿಖ್ ಯುವತಿ ಮೇಲೆ ‘ಜನಾಂಗೀಯ ಪ್ರೇರಿತ’ ಅತ್ಯಾಚಾರ: ಖಂಡನೆ ವ್ಯಕ್ತಪಡಿಸಿದ 40 ಸಂಘಟನೆಗಳು, ನ್ಯಾಯಕ್ಕಾಗಿ ಒತ್ತಾಯ

- Advertisement -
- Advertisement -

ಸೆಪ್ಟೆಂಬರ್ 9ರಂದು ಇಂಗ್ಲೆಂಡ್‌ನ ವೆಸ್ಟ್ ಮಿಡ್‌ಲ್ಯಾಂಡ್ಸ್‌ ಪ್ರಾಂತ್ಯದ ಓಲ್ಡ್‌ಬರಿ ಟೇಮ್ ರಸ್ತೆ ಬಳಿ ‘ಜನಾಂಗೀಯ ಪ್ರೇರಿತ ದಾಳಿ’ಯಲ್ಲಿ ಸಿಖ್ ಯುವತಿ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.

20 ವರ್ಷದ ಯುವತಿ ಮೇಲೆ ಇಬ್ಬರು ಬಿಳಿಯ ಪುರುಷರು ಹಲ್ಲೆ ನಡೆಸಿ, ಅತ್ಯಾಚಾರವೆಸಗಿದ್ದಾರೆ. ಅಲ್ಲದೆ, “ನೀನು ಇಲ್ಲಿಗೆ ಸೇರಿದವಲಲ್ಲ, ಹೊರಟು ಹೋಗು” ಎಂಬುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಘಟನೆ ಖಂಡಿಸಿ ಸಿಖ್ ಸಮುದಾಯದ ಜನರು ಪ್ರತಿಭಟನೆ ನಡೆಸಿದ ನಂತರ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ದುಷ್ಕೃತ್ಯ ಖಂಡಿಸಿ ಹಲವಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರೆ, ಸಾಮಾಜಿಕ ಮಾಧ್ಯಮಗಳಲ್ಲಿ ನೂರಾರು ಜನರು ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ.

ಅತ್ಯಾಚಾರ ಸಂತ್ರಸ್ತೆಯ ಪರವಾಗಿ ದಕ್ಷಿಣ ಏಷ್ಯಾದ 40 ಕಪ್ಪುವರ್ಣ, ವಲಸಿಗ, ನಿರಾಶ್ರಿತರ ಮತ್ತು ಜನಾಂಗೀಯ ವಿರೋಧಿ ಸಂಘಟನೆಗಳು ಒಗ್ಗಟ್ಟು ಪ್ರದರ್ಶಿಸಿವೆ.

ತಮ್ಮ ಹೇಳಿಕೆಯಲ್ಲಿ ಸಂಘಟನೆಗಳು, ಭಯಾನಕ ಲೈಂಗಿಕ ಮತ್ತು ಜನಾಂಗೀಯ ದೌರ್ಜನ್ಯವನ್ನು ಹೇಳಿಕೊಳ್ಳಲು ಮುಂದೆ ಬಂದ ಸಂತ್ರಸ್ತೆಯ ಧೈರ್ಯವನ್ನು ಶ್ಲಾಘಿಸಿವೆ. “ನಾವು ಸಂತ್ರಸ್ತೆಯ ಜೊತೆ ಬಲವಾದ ಒಗ್ಗಟ್ಟನ್ನು ವ್ಯಕ್ತಪಡಿಸುತ್ತೇವೆ ಮತ್ತು ಬೇಷರತ್ತಾಗಿ ಆಕೆಯ ಬೆಂಬಲಕ್ಕೆ ನಿಲ್ಲುತ್ತೇವೆ” ಎಂದು ಹೇಳಿವೆ.

ಸಿಖ್ ವುಮೆನ್ ಏಡ್, ಸೌತ್ ಏಷ್ಯಾ ಸಾಲಿಡಾರಿಟಿ ಗ್ರೂಪ್, ಮಿಲಿಯನ್ ವುಮೆನ್ ರೈಸ್ ಮೂವ್‌ಮೆಂಟ್, ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಯುಕೆ, ಬರ್ಮಿಂಗ್‌ಹ್ಯಾಮ್ ಬ್ಲ್ಯಾಕ್ ಸಿಸ್ಟರ್ಸ್, ಇಂಡಿಯನ್ ವರ್ಕರ್ಸ್ ಅಸೋಸಿಯೇಷನ್ ​​(ಜಿಬಿ), ವುಮೆನ್ ಅಸಿಲಮ್ ಸೀಕರ್ಸ್, ರೆಫ್ಯೂಜೀಸ್ ಅಂಡ್ ಮೈಗ್ರಂಟ್ಸ್ (ವಾರ್ಮ್), ಯುಕೆ ಇಂಡಿಯನ್ ಮುಸ್ಲಿಂ ಕೌನ್ಸಿಲ್ (ಯುಕೆ-ಐಎಂಸಿ), ಕ್ಯಾಸ್ಟ್‌ವಾಚ್ ಯುಕೆ, ಇಂಡಿಯಾ ಲೇಬರ್ ಸಾಲಿಡಾರಿಟಿ (ಐಎಲ್ಎಸ್), ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ ಯುಕೆ, ಮುಸ್ಲಿಂ ಸೋಶಿಯಲ್ ಜಸ್ಟೀಸ್ ಇನಿಶಿಯೇಟಿವ್ ಮತ್ತು ಸ್ಟ್ರೈವ್ ಯುಕೆ ಸೇರಿದಂತೆ ಇತರ ಸಂಘಟನೆಗಳು ಸಂತ್ರಸ್ತೆಯ ಪರ ಹೇಳಿಕೆಗೆ ಸಹಿ ಹಾಕಿವೆ ಎಂದು ವರದಿಗಳು ಹೇಳಿವೆ.

ಸಂತ್ರಸ್ತ ಯುವತಿ ಸಿಖ್ ಫೆಡರೇಶನ್ (ಯುಕೆ) ಮೂಲಕ ಸಾರ್ವಜನಿಕ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ಸ್ಥಳೀಯ ಸಮುದಾಯ ತನಗೆ ತೋರಿಸಿದ ಪ್ರೀತಿಗೆ ನಿಜವಾಗಿಯೂ ವಿನಮ್ರಳಲಾಗಿದ್ದೇನೆ” ಎಂದು ಹೇಳಿರುವುದಾಗಿ ವರದಿಗಳು ವಿವರಿಸಿವೆ.

ಬಿಳಿಯರ ಪ್ರಾಬಲ್ಯವಾದಿ ಅಭಿಯಾನಗಳಿಗೆ ಹೆಸರುವಾಸಿಯಾದ ಟಾಮಿ ರಾಬಿನ್ಸನ್ ನೇತೃತ್ವದಲ್ಲಿ ಸಾವಿರಾರು ಬಲಪಂಥೀಯರು ಲಂಡನ್‌ನ ಬೀದಿಗಳಲ್ಲಿ ಇಸ್ಲಾಮೋಫೋಬಿಕ್, ವಲಸಿಗ ವಿರೋಧಿ ಮತ್ತು ಜನಾಂಗೀಯ ಘೋಷಣೆಗಳೊಂದಿಗೆ ಮೆರವಣಿಗೆ ನಡೆಸಿದ ಅದೇ ದಿನ ಓಲ್ಡ್‌ಬರಿ ಘಟನೆ ಬೆಳಕಿಗೆ ಬಂದಿದೆ.

ಸಂತ್ರಸ್ತೆಯ ಪರ ಹೇಳಿಕೆಗೆ ಸಹಿ ಹಾಕಿದವರು, ಬಲಪಂಥೀಯ ಅಭಿಯಾನಗಳು ಜನಾಂಗೀಯ ಅಲ್ಪಸಂಖ್ಯಾತರು, ವಲಸಿಗರು ಮತ್ತು ನಿರಾಶ್ರಿತರ ವಿರುದ್ದ ದೌರ್ಜನ್ಯವನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿವೆ. ಈ ವಾತಾವರಣವು ಜನಾಂಗೀಯ ಪ್ರೇರಿತ ಅತ್ಯಾಚಾರ ಸೇರಿದಂತೆ ಇಂತಹ ಘಟನೆಗಳಿಗೆ ಕಾರಣವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿವೆ.

ಗಾಝಾ ನಗರದಲ್ಲಿ ಆಕ್ರಮಣ ವಿಸ್ತರಿಸಿದ ಇಸ್ರೇಲ್: ಅಸಹಾಯಕ ನಾಗರಿಕರಿಂದ ಮಹಾ ಪಲಾಯನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...