Homeಕರ್ನಾಟಕಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ 'ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹ': ಹೈಕೋರ್ಟ್‌

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ ‘ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹ’: ಹೈಕೋರ್ಟ್‌

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಬುಧವಾರ (ಸೆಪ್ಟೆಂಬರ್ 17) “ಇದು ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾದ ಪ್ರಕರಣ” ಎಂದು ಮೌಖಿಕವಾಗಿ ಹೇಳಿದೆ.

2025ರ ಫೆಬ್ರವರಿ 28ರಂದು ವಿಚಾರಣಾ ನ್ಯಾಯಾಲಯವು ತನಗೆ ಸಮನ್ಸ್ ಜಾರಿ ಮಾಡಿದ್ದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಎರಡನೇ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದೆ. ಪ್ರಕರಣದಲ್ಲಿ ದಾಖಲಿಸಲಾದ ಎಫ್‌ಐಆರ್ ಮತ್ತು ಸಲ್ಲಿಸಲಾದ ಚಾರ್ಜ್‌ಶೀಟ್ ಅನ್ನು ರದ್ದುಗೊಳಿಸುವಂತೆಯೂ ಯಡಿಯೂರಪ್ಪ ಕೋರಿದ್ದಾರೆ.

ಯಡಿಯೂರಪ್ಪ ಪರ ವಕೀಲರು ಮತ್ತು ರಾಜ್ಯ ಸರ್ಕಾರದ ವಾದವನ್ನು ದೀರ್ಘವಾಗಿ ಆಲಿಸಿದ ನಂತರ ನ್ಯಾಯಮೂರ್ತಿ ಎಂ.ಐ. ಅರುಣ್ ಅವರು “ಇದು ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾದ ಪ್ರಕರಣವಾಗಿದೆ. ಖಂಡಿತ ನಾನು ನಿಮ್ಮ ವಾದವನ್ನು ಆಲಿಸುತ್ತೇನೆ” ಎಂದು ಎಂದು ಯಡಿಯೂರಪ್ಪ ಪರ ವಕೀಲರಿಗೆ ಮೌಖಿಕವಾಗಿ ಹೇಳಿದ್ದಾರೆ.

ಮುಂದುವರಿದು, “ಯಡಿಯೂರಪ್ಪ ವಿರೋಧ ಪಕ್ಷದಲ್ಲಿದ್ದಾರೆ ಎಂಬುದು ಸತ್ಯ. ಅವರು ತನಗೆ ಅನಗತ್ಯವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಬಹುದು. ಈ ಕಿರುಕುಳವನ್ನು ತಡೆಗಟ್ಟಲು ಕೆಲವು ಅವಲೋಕನಗಳನ್ನು ಮಾಡಬಹುದು. ಸೆಕ್ಷನ್ 482 ನಿರ್ವಹಣೆಯ ಬಗ್ಗೆ ಸಾಮಾನ್ಯ ಅವಲೋಕನಗಳನ್ನು ಕೂಡ ಮಾಡಬಹುದು. “ಇದು ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾದ ಪ್ರಕರಣ ಎಂದಷ್ಟೇ ನಾನು ಹೇಳಬಲ್ಲೆ. ಇಲ್ಲದಿದ್ದರೆ, ಈ ವಿಷಯವನ್ನು ನಾನು ಒಂದು ವಾರಕ್ಕೂ ಹೆಚ್ಚು ಕಾಲ ಆಲಿಸಬೇಕಾಗುತ್ತದೆ” ಎಂದಿದ್ದಾರೆ.

“ಪೋಕ್ಸೊ ಕಾಯ್ದೆಯಡಿಯಲ್ಲಿ, ತಪ್ಪಿತಸ್ಥರನ್ನು ಶಿಕ್ಷಿಸಲು ಸಂತ್ರಸ್ತರ ಆರೋಪ ಮಾತ್ರವೇ ಸಾಕು. ಆದರೂ, ಸಂತ್ರಸ್ತರ ಹೇಳಿಕೆಯನ್ನು ಕಾನೂನಾತ್ಮಕವಾಗಿ ಪರಿಶೀಲನೆಗೆ ಒಳಪಡಿಸಬೇಕಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆ ಮತ್ತು ಆಕೆಯ ತಾಯಿಯ ವಿರುದ್ಧ ಅರ್ಜಿದಾರ ಹನಿಟ್ರ್ಯಾಪ್ ಆರೋಪ ಮಾಡಬಹುದು. ಆದರೆ, ಅವೆಲ್ಲವೂ ವಿಚಾರಣೆಯ ವಿಷಯವಾಗುತ್ತವೆ” ಎಂದು ನ್ಯಾಯಾಲಯವು ಮೌಖಿಕವಾಗಿ ಹೇಳಿದೆ.

“ಪ್ರಾಯೋಗಿಕವಾಗಿ ನಿಮ್ಮ ಆತಂಕವೇನು? ಎಲ್ಲಿ ನೀವು ಕಿರುಕುಳಕ್ಕೊಳಗಾಗಬಹುದು ಎಂದು ಭಾವಿಸುತ್ತೀರಿ? ಅದಕ್ಕೆ ಸಂಬಂಧಿಸಿದಂತೆ ಯಾವ ಅವಲೋಕನವನ್ನು ನೀವು ಬಯಸುತ್ತೀರಿ? ಕಾರ್ಯವಿಧಾನದ ಕಿರುಕುಳ ಮತ್ತು ನ್ಯಾಯಯುತ ವಿಚಾರಣೆಗಾಗಿ ನೀವು ಸಲಹೆ ನೀಡಬಹುದು, ಮತ್ತು ನಾವು ವಿಚಾರಣಾ ನ್ಯಾಯಾಲಯಕ್ಕೆ ಈ ಪ್ರಕರಣವನ್ನು ನಿರ್ದಿಷ್ಟ ಸಮಯದಲ್ಲಿ ಇತ್ಯರ್ಥಗೊಳಿಸಲು ಸೂಚಿಸಬಹುದು” ಎಂದು ಯಡಿಯೂಪ್ಪ ಪರ ವಕೀಲರಿಗೆ ಪೀಠ ತಿಳಿಸಿದೆ.

ಆಗ, ಯಡಿಯೂರಪ್ಪ ಪರ ವಕೀಲ ಸಂದೀಪ್ ಪಾಟೀಲ್‌ ಅವರು “ನ್ಯಾಯಾಲಯದ ಅಭಿಪ್ರಾಯ ಏನಿದೆ ಎಂಬುದು ಅರ್ಥವಾಗುತ್ತದೆ. ಈ ಕುರಿತು ಚರ್ಚಿಸಿ, ವಿಚಾರ ತಿಳಿಸಲಾಗುವುದು” ಎಂದಿದ್ದಾರೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಶುಕ್ರವಾರಕ್ಕೆ (ಸೆ. 19) ನಿಗದಿ ಮಾಡಿದೆ.

ಪ್ರಕರಣದ ತನಿಖಾಧಿಕಾರಿಯು ಸಿಆರ್‌ಪಿಸಿ ಸೆಕ್ಷನ್‌ 161 ಅಡಿ ದಾಖಲಿಸಿಕೊಂಡಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರ 6 ಏಪ್ರಿಲ್ 2024 ಮತ್ತು 29 ಏಪ್ರಿಲ್ 2024ರ ಹೇಳಿಕೆಯನ್ನು ಮೆಮೊ ಜೊತೆಗೆ ರಾಜ್ಯ ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್‌ ಸಲ್ಲಿಸಿದ್ದಾರೆ. ಇದನ್ನು ನ್ಯಾಯಾಲಯ ದಾಖಲೆಯಲ್ಲಿ ಸ್ವೀಕರಿಸಿದೆ. ಇದಕ್ಕೂ ಮುನ್ನ, ಯಡಿಯೂರಪ್ಪ ಪರ ವಕೀಲರು ಆರೋಪ ಪಟ್ಟಿಯಲ್ಲಿ ತಗಡೂರು ಅವರ ಹೇಳಿಕೆಯನ್ನು ಕೈಬಿಡಲಾಗಿದೆ. ಇದನ್ನು ನ್ಯಾಯಾಲಯ ತರಿಸಿಕೊಳ್ಳಬೇಕು ಎಂದು ವಾದಿಸಿದ್ದರು.

ಮಹಿಳೆಯೊಬ್ಬರು ತನ್ನ 17 ವರ್ಷದ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ 2024ರ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಡಾಲರ್ಸ್ ಕಾಲೋನಿಯ ಮನೆಗೆ ತೆರಳಿ ಸಹಾಯ ಕೇಳಿದಾಗ ಯಡಿಯೂರಪ್ಪ ಅವರು ನನ್ನ ಮಗಳನ್ನು ಪ್ರತ್ಯೇಕ ಕೊಠಡಿಯೊಳಕ್ಕೆ ಕರೆದೊಯ್ದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವಿಷಯವನ್ನು ಯಾರಿಗೂ ಹೇಳದಂತೆ ಒಂದಿಷ್ಟು ಹಣ ನೀಡಿದ್ದರು ಎಂದು ಸಂತ್ರಸ್ತ ಬಾಲಕಿಯ ತಾಯಿ ಆರೋಪಿಸಿದ್ದರು.

ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ ಸದಾಶಿವನಗರ ಪೊಲೀಸರು ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಎಫ್​ಐಆರ್ ದಾಖಲಿಸಿದ್ದರು. ನಂತರ ಸರ್ಕಾರ ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿತ್ತು.

‘ಇಸ್ಲಾಮೋಫೋಬಿಕ್’ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...