Homeಅಂಕಣಗಳುಮಣಿಪುರದಲ್ಲಿ ಪ್ರಧಾನಮಂತ್ರಿ: ರಾಜಕೀಯವೋ ಅಥವಾ ಶಾಂತಿಯೋ?

ಮಣಿಪುರದಲ್ಲಿ ಪ್ರಧಾನಮಂತ್ರಿ: ರಾಜಕೀಯವೋ ಅಥವಾ ಶಾಂತಿಯೋ?

- Advertisement -
- Advertisement -

ಸಂಘರ್ಷಪೀಡಿತ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ, ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಭೇಟಿಯನ್ನು ಕೇವಲ ಒಂದು ತೋರಿಕೆಯ ಕಸರತ್ತು ಎಂದು ಟೀಕಿಸಿದರೆ, ಸರ್ಕಾರ ಇದನ್ನು ಅಭಿವೃದ್ಧಿಯ ಮೂಲಕ ಜನರ ನೋವನ್ನು ಕಡಿಮೆ ಮಾಡುವ ಉದ್ದೇಶದಿಂದ ಕೈಗೊಂಡ ಕ್ರಮ ಎಂದು ಹೇಳಿಕೊಂಡಿದೆ.

ರಾಜ್ಯದ ಕುಕಿ ಪ್ರಾಬಲ್ಯವಿರುವ ಚುರಾಚಂದ್ಪುರ ಜಿಲ್ಲೆಯಲ್ಲಿ ತಮ್ಮ ಭಾಷಣದ ವೇಳೆ, ಮೋದಿ ಅವರು ಕೇಂದ್ರವು ಸ್ಥಳೀಯ ಆಡಳಿತ ಸಂಸ್ಥೆಗಳನ್ನು ಬಲಪಡಿಸಲು ಶ್ರಮಿಸುತ್ತಿದೆ ಮತ್ತು ಅವುಗಳ ಅಭಿವೃದ್ಧಿಗಾಗಿ ಸೂಕ್ತ ನಿಧಿಗಳನ್ನು ಒದಗಿಸಲಾಗುವುದು ಎಂದು ಮಣಿಪುರ ಜನತೆಗೆ ಒತ್ತಿ ಹೇಳಿದ್ದರು. ಇದನ್ನು ಅಲ್ಲಿನ ಜನತೆ ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಇನ್ನಷ್ಟೇ ಕಾದು ನೋಡಬೇಕಿದೆ.

ರಾಜ್ಯವನ್ನುಶಾಂತಿ ಮತ್ತು ಸಮೃದ್ಧಿಯ ಸಂಕೇತವಾಗಿ ಪರಿವರ್ತಿಸುವ ಭರವಸೆ ನೀಡಿದ ಮೋದಿ, ಎಲ್ಲಾ ಗುಂಪುಗಳು ಹಿಂಸೆಯನ್ನು ತ್ಯಜಿಸಬೇಕೆಂದು ಕರೆ ನೀಡಿದರು ಮತ್ತು ಸಂಘರ್ಷದಿಂದ ನಲುಗಿರುವ ಜನರ ಜೀವನವನ್ನು ಪುನರ್ನಿರ್ಮಿಸಲು ಕೇಂದ್ರವು ಅವರೊಂದಿಗೆ ದೃಢವಾಗಿ ನಿಂತಿದೆ ಎಂದು ಭರವಸೆ ನೀಡಿದರು. ಪ್ರಧಾನಿಯ ಈ ಭರವಸೆಯನ್ನು ಅಲ್ಲಿನ ಬಂಡುಕೋರ ಗುಂಪುಗಳು ಸಕಾರಾತ್ಮಕವಾಗಿ ಸ್ವೀಕರಿಸಿಲ್ಲ ಎಂಬುದು ತಿಳಿಯುತ್ತದೆ. ಹೇಗೆಂದರೆ ಮೋದಿ ಭೇಟಿಯ ಎರಡು ದಿನದ ನಂತರ ಕುಕಿ ಬಂಡುಕೋರ ಗುಂಪುಗಳು ರಾಷ್ಟ್ರೀಯ ಹೆದ್ದಾರಿ ಮುಕ್ತ ಸಂಚಾರಕ್ಕೆ ಮುಕ್ತವಾಗಿಲ್ಲ ಎಂದು ಹೇಳಿಕೆ ನೀಡಿದವು.

ಇಂದು, ನಾನು ನಿಮಗೆ ಭರವಸೆ ನೀಡಲು ಬಯಸುತ್ತೇನೆ, ಕೇಂದ್ರವು ನಿಮ್ಮೊಂದಿಗಿದೆ. ಎಲ್ಲಾ ಗುಂಪುಗಳು ಮತ್ತು ಸಂಘಟನೆಗಳು ಶಾಂತಿಯ ಹಾದಿಯನ್ನು ಅನುಸರಿಸಬೇಕೆಂದು ನಾನು ಕರೆ ನೀಡುತ್ತೇನೆ,” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದರು. ವಿವಿಧ ಗುಂಪುಗಳು ಸಂವಾದಕ್ಕೆ ಮುಂದಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ ಅವರು, “ಸಂವಾದ, ಗೌರವ ಮತ್ತು ಪರಸ್ಪರ ತಿಳುವಳಿಕೆ ಮೇಲೆ ಕೇಂದ್ರವು ಯಾವಾಗಲೂ ಒತ್ತು ನೀಡುತ್ತದೆ ಎಂದು ತಿಳಿಸಿದರು. ಆದರೆ, ಅವರು ನಿರ್ಗಮಿಸಿದ 24 ಗಂಟೆಗಳ ಒಳಗೆ, ರಾಜ್ಯದಲ್ಲಿ ಹಿಂಸಾತ್ಮಕ ಘರ್ಷಣೆಗಳು ಮತ್ತೆ ಭುಗಿಲೆದ್ದವು ಮತ್ತು ಚುರಾಚಂದ್ಪುರದಲ್ಲಿ ಕುಕಿ ನಾಯಕರ ಮನೆಗಳನ್ನು ಧ್ವಂಸಗೊಳಿಸಲಾಯಿತು.

ಮೋದಿ ಅವರ ಭೇಟಿಗೆ ಮುನ್ನ, ಸೆಪ್ಟೆಂಬರ್ 4ರಂದು ಕೇಂದ್ರ, ಮಣಿಪುರ ಸರ್ಕಾರ ಮತ್ತು ಕುಕಿ ಗುಂಪುಗಳ ನಡುವೆ ಮಾತುಕತೆ ನಡೆದಿತ್ತು, ಅಲ್ಲಿ ಶಾಂತಿ ಒಪ್ಪಂದವನ್ನು ಒಂದು ವರ್ಷದವರೆಗೆ ವಿಸ್ತರಿಸಲು ನಿರ್ಧರಿಸಲಾಯಿತು. ಮಾತುಕತೆಗಳ ನಂತರ ಬಿಡುಗಡೆಯಾದ ಅಧಿಕೃತ ಹೇಳಿಕೆಯು, ಕುಕಿಜೋ ಕೌನ್ಸಿಲ್ (KZC) ಪ್ರಮುಖ ಹೆದ್ದಾರಿ NH-2 ಅನ್ನು ಪ್ರಯಾಣಿಕರು ಮತ್ತು ಅಗತ್ಯ ವಸ್ತುಗಳ ಮುಕ್ತ ಸಂಚಾರಕ್ಕಾಗಿ ಪುನಃ ತೆರೆಯಲು ನಿರ್ಧರಿಸಿದೆ ಎಂದು ತಿಳಿಸಿತು. ಆದರೆ ಇತರೆ 6 ಕುಕಿ ಬಂಡುಕೋರ ಗುಂಪುಗಳು ಇದಕ್ಕೆ ತದ್ವಿರುದ್ದ ಹೇಳಿಕೆ ನೀಡಿದವು. ರಾಷ್ಟ್ರೀಯ ಹೆದ್ದಾರಿಯು ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡುವುದಿಲ್ಲವೆಂದು ಹೇಳಿದವು.

ಆದರೆ, ಶಾಂತಿ ಒಪ್ಪಂದ ವಿಸ್ತರಣೆಗೆ ಸಹಿ ಹಾಕಿದ್ದ ಕುಕಿ ಗುಂಪುಗಳು, ಅಧಿಕೃತ ಹೇಳಿಕೆಯನ್ನು ತಪ್ಪಾಗಿ ರೂಪಿಸಲಾಗಿದೆ ಮತ್ತು ಹೆದ್ದಾರಿಯ ಉದ್ದಕ್ಕೂ ಶಾಂತಿಯನ್ನು ಕಾಪಾಡಲು ಭದ್ರತಾ ಪಡೆಗಳಿಂದ ಕೇವಲ ಸಹಕಾರ ಕೋರಲಾಗಿದೆ ಎಂದು ಹೇಳಿದವು. ಹೆದ್ದಾರಿ ಮಣಿಪುರ ಮತ್ತು ನೆರೆಯ ನಾಗಾಲ್ಯಾಂಡ್ ಎರಡಕ್ಕೂ ಜೀವನಾಡಿಯಾಗಿದೆ.

ಹೆದ್ದಾರಿಗಳನ್ನು ತೆರೆಯುವುದು ಕೇಂದ್ರದ ಅಧಿಕಾರವಾಗಿದೆ ಮತ್ತು ಮೊದಲನೆಯದಾಗಿ, ಇದು ಎಂದಿಗೂ ಸಂಚಾರಕ್ಕೆ ಮುಚ್ಚಿರಲಿಲ್ಲ ಮತ್ತು ಪ್ರಯಾಣಿಕರು ಪ್ರತಿದಿನ ಅದನ್ನು ಬಳಸುತ್ತಿದ್ದಾರೆ ಎಂದು ಕುಕಿ ಗುಂಪುಗಳು ಹೇಳಿದವು.

ಮತ್ತೊಂದೆಡೆ, ಮೈತೇಯಿಗಳು ಕುಕಿಗಳ ಹಕ್ಕನ್ನು ವಿರೋಧಿಸಿ, ಮಣಿಪುರದಲ್ಲಿ ಮೇ 2023ರಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಪ್ರಶ್ನಾರ್ಹ NH ಅನ್ನು ಬಳಸಲು ತಮ್ಮ ಸಮುದಾಯಕ್ಕೆ ಕುಕಿ ಗುಂಪುಗಳು ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿದರು.

ಆದರೆ, ಪ್ರಮುಖ ಪ್ರಶ್ನೆ ಏನೆಂದರೆ, ಎರಡೂ ಸಂಘರ್ಷನಿರತ ಸಮುದಾಯಗಳ ನಡುವಿನ ಆಳವಾದ ಅಪನಂಬಿಕೆ ಹಾಗೆಯೇ ಉಳಿದಿದೆ ಮತ್ತು ರಾಜ್ಯಕ್ಕೆ ಮೋದಿ ಅವರ ಭೇಟಿ ಜನರ ನಡುವೆ ಪರಸ್ಪರ ಸಮನ್ವಯದ ಯಾವುದೇ ಸಣ್ಣ ಹೆಜ್ಜೆಗಳಿಗೂ ಕಾರಣವಾಗಿಲ್ಲ.

ಸಾಮಾಜಿಕ ವಿಭಜನೆಯು ಎಷ್ಟೊಂದು ಆಳವಾಗಿದೆ ಎಂದರೆ, ಹಲವಾರು ಬಿಜೆಪಿ ಶಾಸಕರು, ಮುಖ್ಯವಾಗಿ ಕುಕಿಗಳು ಮೋದಿ ಅವರಿಗೆ ಮನವಿ ಪತ್ರ ಸಲ್ಲಿಸಿ, ಶಾಂತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ವಿನಂತಿಸಿದರು. ಮಣಿಪುರದ ಕುಕಿಪ್ರಾಬಲ್ಯವಿರುವ ಪ್ರದೇಶಗಳಿಗೆ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವನ್ನು ಸಹ ಅವರು ಒತ್ತಾಯಿಸಿದರು.

ಬಿಜೆಪಿ ಮತ್ತು ಇತರ ರಾಜಕೀಯ ಘಟಕಗಳ ಶಾಸಕರು ಸಹಿ ಮಾಡಿದ ಮನವಿ ಪತ್ರವು, ಅದರ ಉದ್ದೇಶವನ್ನು ಹೆಚ್ಚು ಸ್ಪಷ್ಟವಾಗಿ ಹೇಳಿದೆ: “ನಾವು ಈಗ ಕೇವಲ ಒಳ್ಳೆಯ ನೆರೆಹೊರೆಯವರಾಗಿ ಶಾಂತಿಯಿಂದ ಬದುಕಬಹುದು, ಎಂದಿಗೂ ಒಂದೇ ಸೂರಿನಡಿ ಇರಲು ಸಾಧ್ಯವಿಲ್ಲ.”

ಮತ್ತೊಂದೆಡೆ, ಕುಕಿ ಬಂಡುಕೋರರ ಗುಂಪುಗಳೊಂದಿಗೆ ಶಾಂತಿ ಒಪ್ಪಂದವನ್ನು ಒಂದು ವರ್ಷದವರೆಗೆ ವಿಸ್ತರಿಸಲು ಕೇಂದ್ರವು ನಿರ್ಧರಿಸಿರುವುದರಿಂದ ಬಹುಸಂಖ್ಯಾತ ಮೈತೇಯಿಗಳು ಅಸಮಾಧಾನಗೊಂಡಿದ್ದಾರೆ. ಇದರರ್ಥ, ಬಂಡುಕೋರರು ತಮ್ಮ ನಿರ್ದಿಷ್ಟ ಶಿಬಿರಗಳಿಗೆ ಹಿಂತಿರುಗುತ್ತಾರೆ, ಮತ್ತು ಶಿಬಿರಗಳನ್ನು ಮೈತೇಯಿ ಪ್ರಾಬಲ್ಯವಿರುವ ಪ್ರದೇಶಗಳಿಂದ ದೂರಕ್ಕೆ ಸ್ಥಳಾಂತರಿಸಲಾಗುವುದು.

ಇದು ಕುಕಿ ಬಂಡುಕೋರ ಗುಂಪುಗಳಿಗೆ ಅಕ್ರಮ ಗಸಗಸೆ ತೋಟಗಳನ್ನು ಬೆಳೆಸಲು ಮತ್ತುತಮ್ಮ ಶಿಬಿರಗಳಲ್ಲಿ ಇದ್ದುಕೊಂಡೇಹಿಂಸಾಚಾರದಲ್ಲಿ ತೊಡಗಲು ಹೆಚ್ಚಿನ ಸ್ವಾತಂತ್ರ್ಯ ನೀಡುತ್ತದೆ ಎಂದು ಬಹುಸಂಖ್ಯಾತ ಮೈತೇಯಿ ಹೇಳಿಕೊಂಡಿದ್ದಾರೆ.

ಒಂದೇ ರಾಜ್ಯದಲ್ಲಿ ವಾಸಿಸುತ್ತಿರುವ ಜನರ ನಡುವೆ ಇನ್ನೂ ಅಪನಂಬಿಕೆ ಮತ್ತು ವಿಶ್ವಾಸದ ಕೊರತೆ ಇರುವ ಕಾರಣ, ಪ್ರಧಾನಮಂತ್ರಿಯು ಜನರ ನಡುವೆ ವಿಶ್ವಾಸ ಮೂಡಿಸಲು ಹೆಚ್ಚು ಸಕ್ರಿಯವಾದ ವಿಧಾನವನ್ನು ಅಳವಡಿಸಿಕೊಳ್ಳಬೇಕಾಗಿದೆ. ಜನರು ಇನ್ನೂ ಎರಡು ವರ್ಷಗಳ ಕಾಲ ನಡೆದ ಜನಾಂಗೀಯ ಸಂಘರ್ಷದಿಂದಾಗಿ ಉಂಟಾದ ನೋವಿನಿಂದ ಹೊರಬಂದಿಲ್ಲ.

ಮೂಲ: ಅನಿಮೇಶ್ ಸಿಂಗ್, ದಿ ಟ್ರಿಬ್ಯೂನ್

ನೇಪಾಳದ ದಂಗೆ ಮತ್ತು ಪಾಕಿಸ್ತಾನದ ಪಾಠಗಳು: ದಕ್ಷಿಣ ಏಷ್ಯಾದಲ್ಲಿ ಯುವ ಶಕ್ತಿಯನ್ನು ಹೇಗೆ ಸಮರ್ಥವಾಗಿ ನಿರ್ವಹಿಸುವುದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...