Homeಅಂಕಣಗಳುಮಣಿಪುರದಲ್ಲಿ ಪ್ರಧಾನಮಂತ್ರಿ: ರಾಜಕೀಯವೋ ಅಥವಾ ಶಾಂತಿಯೋ?

ಮಣಿಪುರದಲ್ಲಿ ಪ್ರಧಾನಮಂತ್ರಿ: ರಾಜಕೀಯವೋ ಅಥವಾ ಶಾಂತಿಯೋ?

- Advertisement -
- Advertisement -

ಸಂಘರ್ಷಪೀಡಿತ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ, ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಭೇಟಿಯನ್ನು ಕೇವಲ ಒಂದು ತೋರಿಕೆಯ ಕಸರತ್ತು ಎಂದು ಟೀಕಿಸಿದರೆ, ಸರ್ಕಾರ ಇದನ್ನು ಅಭಿವೃದ್ಧಿಯ ಮೂಲಕ ಜನರ ನೋವನ್ನು ಕಡಿಮೆ ಮಾಡುವ ಉದ್ದೇಶದಿಂದ ಕೈಗೊಂಡ ಕ್ರಮ ಎಂದು ಹೇಳಿಕೊಂಡಿದೆ.

ರಾಜ್ಯದ ಕುಕಿ ಪ್ರಾಬಲ್ಯವಿರುವ ಚುರಾಚಂದ್ಪುರ ಜಿಲ್ಲೆಯಲ್ಲಿ ತಮ್ಮ ಭಾಷಣದ ವೇಳೆ, ಮೋದಿ ಅವರು ಕೇಂದ್ರವು ಸ್ಥಳೀಯ ಆಡಳಿತ ಸಂಸ್ಥೆಗಳನ್ನು ಬಲಪಡಿಸಲು ಶ್ರಮಿಸುತ್ತಿದೆ ಮತ್ತು ಅವುಗಳ ಅಭಿವೃದ್ಧಿಗಾಗಿ ಸೂಕ್ತ ನಿಧಿಗಳನ್ನು ಒದಗಿಸಲಾಗುವುದು ಎಂದು ಮಣಿಪುರ ಜನತೆಗೆ ಒತ್ತಿ ಹೇಳಿದ್ದರು. ಇದನ್ನು ಅಲ್ಲಿನ ಜನತೆ ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಇನ್ನಷ್ಟೇ ಕಾದು ನೋಡಬೇಕಿದೆ.

ರಾಜ್ಯವನ್ನುಶಾಂತಿ ಮತ್ತು ಸಮೃದ್ಧಿಯ ಸಂಕೇತವಾಗಿ ಪರಿವರ್ತಿಸುವ ಭರವಸೆ ನೀಡಿದ ಮೋದಿ, ಎಲ್ಲಾ ಗುಂಪುಗಳು ಹಿಂಸೆಯನ್ನು ತ್ಯಜಿಸಬೇಕೆಂದು ಕರೆ ನೀಡಿದರು ಮತ್ತು ಸಂಘರ್ಷದಿಂದ ನಲುಗಿರುವ ಜನರ ಜೀವನವನ್ನು ಪುನರ್ನಿರ್ಮಿಸಲು ಕೇಂದ್ರವು ಅವರೊಂದಿಗೆ ದೃಢವಾಗಿ ನಿಂತಿದೆ ಎಂದು ಭರವಸೆ ನೀಡಿದರು. ಪ್ರಧಾನಿಯ ಈ ಭರವಸೆಯನ್ನು ಅಲ್ಲಿನ ಬಂಡುಕೋರ ಗುಂಪುಗಳು ಸಕಾರಾತ್ಮಕವಾಗಿ ಸ್ವೀಕರಿಸಿಲ್ಲ ಎಂಬುದು ತಿಳಿಯುತ್ತದೆ. ಹೇಗೆಂದರೆ ಮೋದಿ ಭೇಟಿಯ ಎರಡು ದಿನದ ನಂತರ ಕುಕಿ ಬಂಡುಕೋರ ಗುಂಪುಗಳು ರಾಷ್ಟ್ರೀಯ ಹೆದ್ದಾರಿ ಮುಕ್ತ ಸಂಚಾರಕ್ಕೆ ಮುಕ್ತವಾಗಿಲ್ಲ ಎಂದು ಹೇಳಿಕೆ ನೀಡಿದವು.

ಇಂದು, ನಾನು ನಿಮಗೆ ಭರವಸೆ ನೀಡಲು ಬಯಸುತ್ತೇನೆ, ಕೇಂದ್ರವು ನಿಮ್ಮೊಂದಿಗಿದೆ. ಎಲ್ಲಾ ಗುಂಪುಗಳು ಮತ್ತು ಸಂಘಟನೆಗಳು ಶಾಂತಿಯ ಹಾದಿಯನ್ನು ಅನುಸರಿಸಬೇಕೆಂದು ನಾನು ಕರೆ ನೀಡುತ್ತೇನೆ,” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದರು. ವಿವಿಧ ಗುಂಪುಗಳು ಸಂವಾದಕ್ಕೆ ಮುಂದಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ ಅವರು, “ಸಂವಾದ, ಗೌರವ ಮತ್ತು ಪರಸ್ಪರ ತಿಳುವಳಿಕೆ ಮೇಲೆ ಕೇಂದ್ರವು ಯಾವಾಗಲೂ ಒತ್ತು ನೀಡುತ್ತದೆ ಎಂದು ತಿಳಿಸಿದರು. ಆದರೆ, ಅವರು ನಿರ್ಗಮಿಸಿದ 24 ಗಂಟೆಗಳ ಒಳಗೆ, ರಾಜ್ಯದಲ್ಲಿ ಹಿಂಸಾತ್ಮಕ ಘರ್ಷಣೆಗಳು ಮತ್ತೆ ಭುಗಿಲೆದ್ದವು ಮತ್ತು ಚುರಾಚಂದ್ಪುರದಲ್ಲಿ ಕುಕಿ ನಾಯಕರ ಮನೆಗಳನ್ನು ಧ್ವಂಸಗೊಳಿಸಲಾಯಿತು.

ಮೋದಿ ಅವರ ಭೇಟಿಗೆ ಮುನ್ನ, ಸೆಪ್ಟೆಂಬರ್ 4ರಂದು ಕೇಂದ್ರ, ಮಣಿಪುರ ಸರ್ಕಾರ ಮತ್ತು ಕುಕಿ ಗುಂಪುಗಳ ನಡುವೆ ಮಾತುಕತೆ ನಡೆದಿತ್ತು, ಅಲ್ಲಿ ಶಾಂತಿ ಒಪ್ಪಂದವನ್ನು ಒಂದು ವರ್ಷದವರೆಗೆ ವಿಸ್ತರಿಸಲು ನಿರ್ಧರಿಸಲಾಯಿತು. ಮಾತುಕತೆಗಳ ನಂತರ ಬಿಡುಗಡೆಯಾದ ಅಧಿಕೃತ ಹೇಳಿಕೆಯು, ಕುಕಿಜೋ ಕೌನ್ಸಿಲ್ (KZC) ಪ್ರಮುಖ ಹೆದ್ದಾರಿ NH-2 ಅನ್ನು ಪ್ರಯಾಣಿಕರು ಮತ್ತು ಅಗತ್ಯ ವಸ್ತುಗಳ ಮುಕ್ತ ಸಂಚಾರಕ್ಕಾಗಿ ಪುನಃ ತೆರೆಯಲು ನಿರ್ಧರಿಸಿದೆ ಎಂದು ತಿಳಿಸಿತು. ಆದರೆ ಇತರೆ 6 ಕುಕಿ ಬಂಡುಕೋರ ಗುಂಪುಗಳು ಇದಕ್ಕೆ ತದ್ವಿರುದ್ದ ಹೇಳಿಕೆ ನೀಡಿದವು. ರಾಷ್ಟ್ರೀಯ ಹೆದ್ದಾರಿಯು ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡುವುದಿಲ್ಲವೆಂದು ಹೇಳಿದವು.

ಆದರೆ, ಶಾಂತಿ ಒಪ್ಪಂದ ವಿಸ್ತರಣೆಗೆ ಸಹಿ ಹಾಕಿದ್ದ ಕುಕಿ ಗುಂಪುಗಳು, ಅಧಿಕೃತ ಹೇಳಿಕೆಯನ್ನು ತಪ್ಪಾಗಿ ರೂಪಿಸಲಾಗಿದೆ ಮತ್ತು ಹೆದ್ದಾರಿಯ ಉದ್ದಕ್ಕೂ ಶಾಂತಿಯನ್ನು ಕಾಪಾಡಲು ಭದ್ರತಾ ಪಡೆಗಳಿಂದ ಕೇವಲ ಸಹಕಾರ ಕೋರಲಾಗಿದೆ ಎಂದು ಹೇಳಿದವು. ಹೆದ್ದಾರಿ ಮಣಿಪುರ ಮತ್ತು ನೆರೆಯ ನಾಗಾಲ್ಯಾಂಡ್ ಎರಡಕ್ಕೂ ಜೀವನಾಡಿಯಾಗಿದೆ.

ಹೆದ್ದಾರಿಗಳನ್ನು ತೆರೆಯುವುದು ಕೇಂದ್ರದ ಅಧಿಕಾರವಾಗಿದೆ ಮತ್ತು ಮೊದಲನೆಯದಾಗಿ, ಇದು ಎಂದಿಗೂ ಸಂಚಾರಕ್ಕೆ ಮುಚ್ಚಿರಲಿಲ್ಲ ಮತ್ತು ಪ್ರಯಾಣಿಕರು ಪ್ರತಿದಿನ ಅದನ್ನು ಬಳಸುತ್ತಿದ್ದಾರೆ ಎಂದು ಕುಕಿ ಗುಂಪುಗಳು ಹೇಳಿದವು.

ಮತ್ತೊಂದೆಡೆ, ಮೈತೇಯಿಗಳು ಕುಕಿಗಳ ಹಕ್ಕನ್ನು ವಿರೋಧಿಸಿ, ಮಣಿಪುರದಲ್ಲಿ ಮೇ 2023ರಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಪ್ರಶ್ನಾರ್ಹ NH ಅನ್ನು ಬಳಸಲು ತಮ್ಮ ಸಮುದಾಯಕ್ಕೆ ಕುಕಿ ಗುಂಪುಗಳು ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿದರು.

ಆದರೆ, ಪ್ರಮುಖ ಪ್ರಶ್ನೆ ಏನೆಂದರೆ, ಎರಡೂ ಸಂಘರ್ಷನಿರತ ಸಮುದಾಯಗಳ ನಡುವಿನ ಆಳವಾದ ಅಪನಂಬಿಕೆ ಹಾಗೆಯೇ ಉಳಿದಿದೆ ಮತ್ತು ರಾಜ್ಯಕ್ಕೆ ಮೋದಿ ಅವರ ಭೇಟಿ ಜನರ ನಡುವೆ ಪರಸ್ಪರ ಸಮನ್ವಯದ ಯಾವುದೇ ಸಣ್ಣ ಹೆಜ್ಜೆಗಳಿಗೂ ಕಾರಣವಾಗಿಲ್ಲ.

ಸಾಮಾಜಿಕ ವಿಭಜನೆಯು ಎಷ್ಟೊಂದು ಆಳವಾಗಿದೆ ಎಂದರೆ, ಹಲವಾರು ಬಿಜೆಪಿ ಶಾಸಕರು, ಮುಖ್ಯವಾಗಿ ಕುಕಿಗಳು ಮೋದಿ ಅವರಿಗೆ ಮನವಿ ಪತ್ರ ಸಲ್ಲಿಸಿ, ಶಾಂತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ವಿನಂತಿಸಿದರು. ಮಣಿಪುರದ ಕುಕಿಪ್ರಾಬಲ್ಯವಿರುವ ಪ್ರದೇಶಗಳಿಗೆ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವನ್ನು ಸಹ ಅವರು ಒತ್ತಾಯಿಸಿದರು.

ಬಿಜೆಪಿ ಮತ್ತು ಇತರ ರಾಜಕೀಯ ಘಟಕಗಳ ಶಾಸಕರು ಸಹಿ ಮಾಡಿದ ಮನವಿ ಪತ್ರವು, ಅದರ ಉದ್ದೇಶವನ್ನು ಹೆಚ್ಚು ಸ್ಪಷ್ಟವಾಗಿ ಹೇಳಿದೆ: “ನಾವು ಈಗ ಕೇವಲ ಒಳ್ಳೆಯ ನೆರೆಹೊರೆಯವರಾಗಿ ಶಾಂತಿಯಿಂದ ಬದುಕಬಹುದು, ಎಂದಿಗೂ ಒಂದೇ ಸೂರಿನಡಿ ಇರಲು ಸಾಧ್ಯವಿಲ್ಲ.”

ಮತ್ತೊಂದೆಡೆ, ಕುಕಿ ಬಂಡುಕೋರರ ಗುಂಪುಗಳೊಂದಿಗೆ ಶಾಂತಿ ಒಪ್ಪಂದವನ್ನು ಒಂದು ವರ್ಷದವರೆಗೆ ವಿಸ್ತರಿಸಲು ಕೇಂದ್ರವು ನಿರ್ಧರಿಸಿರುವುದರಿಂದ ಬಹುಸಂಖ್ಯಾತ ಮೈತೇಯಿಗಳು ಅಸಮಾಧಾನಗೊಂಡಿದ್ದಾರೆ. ಇದರರ್ಥ, ಬಂಡುಕೋರರು ತಮ್ಮ ನಿರ್ದಿಷ್ಟ ಶಿಬಿರಗಳಿಗೆ ಹಿಂತಿರುಗುತ್ತಾರೆ, ಮತ್ತು ಶಿಬಿರಗಳನ್ನು ಮೈತೇಯಿ ಪ್ರಾಬಲ್ಯವಿರುವ ಪ್ರದೇಶಗಳಿಂದ ದೂರಕ್ಕೆ ಸ್ಥಳಾಂತರಿಸಲಾಗುವುದು.

ಇದು ಕುಕಿ ಬಂಡುಕೋರ ಗುಂಪುಗಳಿಗೆ ಅಕ್ರಮ ಗಸಗಸೆ ತೋಟಗಳನ್ನು ಬೆಳೆಸಲು ಮತ್ತುತಮ್ಮ ಶಿಬಿರಗಳಲ್ಲಿ ಇದ್ದುಕೊಂಡೇಹಿಂಸಾಚಾರದಲ್ಲಿ ತೊಡಗಲು ಹೆಚ್ಚಿನ ಸ್ವಾತಂತ್ರ್ಯ ನೀಡುತ್ತದೆ ಎಂದು ಬಹುಸಂಖ್ಯಾತ ಮೈತೇಯಿ ಹೇಳಿಕೊಂಡಿದ್ದಾರೆ.

ಒಂದೇ ರಾಜ್ಯದಲ್ಲಿ ವಾಸಿಸುತ್ತಿರುವ ಜನರ ನಡುವೆ ಇನ್ನೂ ಅಪನಂಬಿಕೆ ಮತ್ತು ವಿಶ್ವಾಸದ ಕೊರತೆ ಇರುವ ಕಾರಣ, ಪ್ರಧಾನಮಂತ್ರಿಯು ಜನರ ನಡುವೆ ವಿಶ್ವಾಸ ಮೂಡಿಸಲು ಹೆಚ್ಚು ಸಕ್ರಿಯವಾದ ವಿಧಾನವನ್ನು ಅಳವಡಿಸಿಕೊಳ್ಳಬೇಕಾಗಿದೆ. ಜನರು ಇನ್ನೂ ಎರಡು ವರ್ಷಗಳ ಕಾಲ ನಡೆದ ಜನಾಂಗೀಯ ಸಂಘರ್ಷದಿಂದಾಗಿ ಉಂಟಾದ ನೋವಿನಿಂದ ಹೊರಬಂದಿಲ್ಲ.

ಮೂಲ: ಅನಿಮೇಶ್ ಸಿಂಗ್, ದಿ ಟ್ರಿಬ್ಯೂನ್

ನೇಪಾಳದ ದಂಗೆ ಮತ್ತು ಪಾಕಿಸ್ತಾನದ ಪಾಠಗಳು: ದಕ್ಷಿಣ ಏಷ್ಯಾದಲ್ಲಿ ಯುವ ಶಕ್ತಿಯನ್ನು ಹೇಗೆ ಸಮರ್ಥವಾಗಿ ನಿರ್ವಹಿಸುವುದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...