Homeಮುಖಪುಟಮುಖ್ಯ ಚುನಾವಣಾ ಆಯುಕ್ತ 'ಮತಗಳ್ಳರ ರಕ್ಷಕ' ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

ಮುಖ್ಯ ಚುನಾವಣಾ ಆಯುಕ್ತ ‘ಮತಗಳ್ಳರ ರಕ್ಷಕ’ ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

- Advertisement -
- Advertisement -

ನವದೆಹಲಿಯಲ್ಲಿ ಗುರುವಾರ (ಸೆ.18) ಮಹತ್ವದ ಸುದ್ದಿಗೋಷ್ಠಿ ನಡೆಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಲಬುರಗಿ ಜಿಲ್ಲೆ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರಲ್ಲಿ ನಡೆದ ಮತಗಳ್ಳತನ ಪ್ರಯತ್ನದ ಬಗ್ಗೆ ದಾಖಲೆ ಬಿಡುಗಡೆ ಮಾಡಿದರು.

ಇದೇ ವೇಳೆ ಚುನಾವಣಾ ಆಯೋಗದ ವಿರುದ್ದ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು “ಮತಗಳ್ಳರನ್ನು ರಕ್ಷಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಭಾರತದ ಪ್ರಜಾಪ್ರಭುತ್ವವನ್ನು ನಾಶಪಡಿಸಿದ ಜನರನ್ನು ಮುಖ್ಯ ಚುನಾವಣಾ ಆಯುಕ್ತರು ರಕ್ಷಿಸುತ್ತಿದ್ದಾರೆ ಎಂಬುದಕ್ಕೆ ನಾನು ಕಣ್ಣಿಗೆ ಕಟ್ಟುವ ಪುರಾವೆಯನ್ನು ತೋರಿಸುತ್ತೇನೆ ಮತ್ತು ಹೇಗೆ ರಕ್ಷಿಸಲಾಗುತ್ತಿದೆ ಎಂಬುದನ್ನು ಕೂಡ ತಿಳಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ನನ್ನ ಜವಾಬ್ದಾರಿಯನ್ನು ಸಂಪೂರ್ಣವಾಗಿ ಅರಿತುಕೊಂಡೇ ನಾನು ಈ ಹೇಳಿಕೆಗಳನ್ನು ನೀಡುತ್ತಿದ್ದೇನೆ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದರು.

ಕೆಲ ವರ್ಷಗಳಿಂದ ವಿವಿಧ ಚುನಾವಣೆಗಳಲ್ಲಿ ಕೆಲ ಶಕ್ತಿಗಳು ಭಾರತದಾದ್ಯಂತ ಲಕ್ಷಾಂತರ ಮತದಾರರನ್ನು ವ್ಯವಸ್ಥಿತವಾಗಿ ಗುರಿಯಾಗಿಸಿಕೊಂಡು ಮತಗಳನ್ನು ಅಳಿಸಿ ಹಾಕುತ್ತಿವೆ. ವಿರೋಧ ಪಕ್ಷಕ್ಕೆ ಮತ ಹಾಕುತ್ತಿರುವ ದಲಿತರು, ಅಲ್ಪಸಂಖ್ಯಾತರು, ಒಬಿಸಿಗಳು ಮತ್ತು ಆದಿವಾಸಿಗಳು ಸೇರಿದಂತೆ ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದರು.

ಶೇಕಡ 100ರಷ್ಟು ಸತ್ಯವಲ್ಲದ ಯಾವುದನ್ನೂ ನಾನು ಈ ವೇದಿಕೆಯಲ್ಲಿ ಹೇಳುವುದಿಲ್ಲ. ನಾನು ನನ್ನ ದೇಶವನ್ನು ಪ್ರೀತಿಸುವ ವ್ಯಕ್ತಿ, ನನ್ನ ಸಂವಿಧಾನವನ್ನು ಪ್ರೀತಿಸುತ್ತೇನೆ, ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಪ್ರೀತಿಸುತ್ತೇನೆ ಮತ್ತು ನಾನು ಆ ಪ್ರಕ್ರಿಯೆಯನ್ನು ರಕ್ಷಿಸುತ್ತಿದ್ದೇನೆ. ಹಾಗಾಗಿ, ಶೇ. 100ರಷ್ಟು ಪುರಾವೆಗಳು ಇಲ್ಲದ ಯಾವುದನ್ನೂ ನಾನು ಇಲ್ಲಿ ಹೇಳುವುದಿಲ್ಲ ಎಂದು ರಾಹುಲ್ ಗಾಂಧಿ ಒತ್ತಿ ಹೇಳಿದರು.

ಕರ್ನಾಟಕದ ಕಾಂಗ್ರೆಸ್ ಭದ್ರಕೋಟೆಯಾದ ಆಳಂದ ಕ್ಷೇತ್ರದಲ್ಲಿ, ಮತದಾರರಿಗೆ ಗೊತ್ತಾಗದಂತೆ 6000ಕ್ಕೂ ಹೆಚ್ಚು ಮತಗಳನ್ನು ಅಳಿಸಿ ಹಾಕುವ ಪ್ರಯತ್ನ ಮಾಡಲಾಗಿತ್ತು. ಯಾರೂ 6,018 ಮತದಾರರ ಹೆಸರುಗಳನ್ನು ಅಳಿಸುವಾಗ ಸಿಕ್ಕಿ ಬಿದ್ದಿದ್ದರು. ಅಲ್ಲಿ ಒಟ್ಟು ಎಷ್ಟು ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ನಮಗೆ ತಿಳಿದಿಲ್ಲ. ಆದರೆ, 6018 ಮತದಾರರ ಹೆಸರುಗಳನ್ನು ಅಳಿಸಲು ಪ್ರಯತ್ನಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ಎಂದರು.

ಆಳಂದ ಕ್ಷೇತ್ರದಲ್ಲಿ ಬೂತ್‌ ಮಟ್ಟದ ಅಧಿಕಾರಿ (ಬಿಎಲ್‌ಒ) ಒಬ್ಬರ ಚಿಕ್ಕಪ್ಪನ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸುವ ಪ್ರಯತ್ನ ಮಾಡಲಾಗಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ನೆರಮನೆಯ ವ್ಯಕ್ತಿಯೇ ಹೆಸರು ಅಳಿಸಲು ಅರ್ಜಿ ಹಾಕಿರುವುದು ಗೊತ್ತಾಗಿದೆ. ಈ ಬಗ್ಗೆ ಅವರನ್ನು ವಿಚಾರಿಸಿದಾಗ ಈ ವಿಷಯವೇ ಗೊತ್ತಿಲ್ಲ ಎಂದಿದ್ದರು. ಹಾಗಾಗಿ, ಯಾವುದೋ ಒಂದು ಶಕ್ತಿ ಇಡೀ ಪ್ರಕ್ರಿಯೆಯನ್ನು ಹೈಜಾಕ್ ಮಾಡಿ ಮತದಾರರ ಪಟ್ಟಿಯಿಂದ ಹೆಸರು ಅಳಿಸಿ ಹಾಕಿತ್ತು. ಸುದೈವವಶಾತ್ ನಮಗೆ ಅದು ಸಿಕ್ಕಿತು ಎಂದು ರಾಹುಲ್ ಗಾಂಧಿ ವಿವರಿಸಿದರು.

ಇದೇ ವೇಳೆ ಆಳಂದ ಶಾಸಕ ಬಿ.ಆರ್ ಪಾಟೀಲ್ ಮತ್ತು ಮತಗಳ್ಳತನ ವಂಚನೆಗೆ ಒಳಗಾದ ಇಬ್ಬರು ವ್ಯಕ್ತಿಗಳನ್ನು ರಾಹುಲ್ ಗಾಂಧಿ ವೇದಿಕೆಗೆ ಕರೆತಂದರು. ಈ ಪೈಕಿ ಸೂರ್ಯಕಾಂತ್ ಎಂಬವರು ಮಾತನಾಡಿ “ನಾನು ಅಳಂದದ ಸರಸಂಬಾ ಗ್ರಾಮದ ನಿವಾಸಿ. ನನ್ನ ಹೆಸರಿನಲ್ಲಿ12 ಜನರ ಹೆಸರನ್ನು ಅಳಿಸಿ ಹಾಕಲು ಅರ್ಜಿ ಸಲ್ಲಿಸಲಾಗಿತ್ತು. ನನಗೆ ಈ ವಿಷಯ ಗೊತ್ತಿರಲಿಲ್ಲ” ಎಂದರು. ಪಕ್ಕದಲ್ಲಿದ್ದ ಮಹಿಳೆಯನ್ನು ತೋರಿಸಿ..”ಇವರು ನನ್ನ ಹೆಸರನ್ನು ಏಕೆ ಡಿಲೀಟ್ ಮಾಡಿಸಿದಿರಿ?” ಎಂದು ಕೇಳಿದಾಗ ನನಗೆ ವಿಷಯ ಗೊತ್ತಾಯ್ತು. ನಾನು ಶಾಸಕ ಬಿ.ಆರ್‌ ಪಾಟೀಲ್‌ಗೆ ಮಾಹಿತಿ ನೀಡಿದೆ. ಆ ಬಳಿಕ ತಹಶೀಲ್ದಾರ್‌ಗೆ ದೂರು ನೀಡಿದೆವು. ನಂತರ ಜಿಲ್ಲಾಧಿಕಾರಿ ಪೊಲೀಸ್‌ ದೂರು ದಾಖಲಿಸಿದರು” ಎಂದು ಹೇಳಿದರು.

ಆಳಂದ ಕ್ಷೇತ್ರದಲ್ಲಿ ನಿರ್ದಿಷ್ಟವಾಗಿ ಕಾಂಗ್ರೆಸ್ ಮತದಾರರನ್ನು ಗುರಿಯಾಗಿಸಿ ಹೆಸರು ಅಳಿಸಲಾಗಿದೆ. ಈ ಪ್ರಕ್ರಿಯೆಗೆ ಅತ್ಯಾಧುನಿಕ ಕೇಂದ್ರೀಕೃತ ವ್ಯವಸ್ಥೆಯನ್ನು ಬಳಸಲಾಗಿದೆ. ಮತದಾರರ ಹೆಸರನ್ನು ಅಳಿಸಲು ಅರ್ಜಿಗಳನ್ನು ‘ಸ್ವಯಂಚಾಲಿತವಾಗಿ ಸಾಫ್ಟ್‌ವೇರ್ ಬಳಸಿ’ ಸಲ್ಲಿಸಲಾಗಿದೆ. ಕರ್ನಾಟಕದ ಹೊರಗಿನಿಂದ, ವಿವಿಧ ರಾಜ್ಯಗಳ ಮೊಬೈಲ್ ಸಂಖ್ಯೆಗಳನ್ನು ಇದಕ್ಕೆ ಬಳಸಲಾಗಿದೆ ಎಂದ ರಾಹುಲ್ ಗಾಂಧಿ, ಅರ್ಜಿದಾರರ ಸೀರಿಯಲ್ ನಂಬರ್‌ಗಳಲ್ಲಿ ಹೋಲಿಕೆಗಳನ್ನು ಎತ್ತಿ ತೋರಿಸಿದರು.

ಸೀರಿಯಲ್ ನಂಬರ್‌ಗಳನ್ನು ಗಮನಿಸಿ…ಒಂದು ಸಾಫ್ಟ್‌ವೇರ್ ಬೂತ್‌ನ ಮೊದಲ ಮತದಾರರ ಹೆಸರನ್ನು ಬಳಸಿಕೊಂಡು ಹೆಸರುಗಳನ್ನು ಅಳಿಸುತ್ತಿದೆ. ಯಾರೋ ಒಬ್ಬರು ಸ್ವಯಂಚಾಲಿತ ಪ್ರೋಗ್ರಾಂ ರಚಿಸಿದ್ದಾರೆ, ಇದರಿಂದ ಮತಗಟ್ಟೆಯಲ್ಲಿ ಮೊದಲ ಮತದಾರನೇ ಅರ್ಜಿದಾರನಾಗಿರುವಂತೆ ಮಾಡಲಾಗಿದೆ. ಅದೇ ವ್ಯಕ್ತಿಯು ರಾಜ್ಯದ ಹೊರಗಿನಿಂದ ಮೊಬೈಲ್ ಫೋನ್‌ಗಳನ್ನು ತೆಗೆದುಕೊಂಡು, ಅವುಗಳನ್ನು ಬಳಸಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಇದು ಕೇಂದ್ರೀಕೃತ ರೀತಿಯಲ್ಲಿ ಮತ್ತು ದೊಡ್ಡ ಪ್ರಮಾಣದಲ್ಲಿ ನಡೆದಿದೆ ಎಂದು ನಮಗೆ ಖಾತ್ರಿಯಿದೆ. ಇದನ್ನು ಕೆಳಮಟ್ಟದ ಕಾರ್ಯಕರ್ತರಿಂದ ಮಾಡಲಾಗಿಲ್ಲ; ಇದು ಒಂದು ಸರಳವಾದ, ಆದರೆ ದೊಡ್ಡ ಮಟ್ಟದಲ್ಲಿ ಯೋಜಿತವಾಗಿ ನಡೆದ ಕಾರ್ಯವಾಗಿದೆ,” ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಕರ್ನಾಟಕದ ತನಿಖಾ ಸಂಸ್ಥೆಗಳು ಪದೇ ಪದೇ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳಲು ಮತ್ತು ನಿರ್ಣಾಯಕ ಡೇಟಾವನ್ನು ಒದಗಿಸಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಿರಾಕರಿಸಿದ್ದಾರೆ, ಅವರು ಮತ ಅಳಿಸುವಿಕೆಯಲ್ಲಿ ನೇರ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

ಜ್ಞಾನೇಶ್ ಕುಮಾರ್ ಬಗ್ಗೆ ನಾನು ಯಾಕೆ ನೇರ ಆರೋಪ ಮಾಡುತ್ತಿದ್ದೇನೆ ಎಂಬುದನ್ನು ನೋಡೋದಾರೆ, ಕರ್ನಾಟಕದಲ್ಲಿ ಈ ಪ್ರಕರಣದ ತನಿಖೆ ನಡೆಯುತ್ತಿದೆ. ಕರ್ನಾಟಕದ ಸಿಐಡಿ 18 ತಿಂಗಳಲ್ಲಿ ಚುನಾವಣಾ ಆಯೋಗಕ್ಕೆ 18 ಪತ್ರಗಳನ್ನು ಕಳುಹಿಸಿದೆ ಮತ್ತು ಅವರು ಚುನಾವಣಾ ಆಯೋಗವನ್ನು ಕೆಲವು ಸರಳ ಸಂಗತಿಗಳನ್ನು ಕೇಳಿದ್ದಾರೆ. ಮೊದಲನೆಯದು, ಈ ಫಾರ್ಮ್‌ಗಳನ್ನು ಭರ್ತಿ ಮಾಡಿದ ಡೆಸ್ಟಿನೇಶನ್ ಐಪಿಯನ್ನು ನಮಗೆ ನೀಡಿ. ಎರಡನೆಯದು, ಈ ಅರ್ಜಿಗಳನ್ನು ಸಲ್ಲಿಸಿದ ಸಾಧನದ ಡೆಸ್ಟಿನೇಶನ್ ಪೋರ್ಟ್‌ಗಳನ್ನು ನಮಗೆ ನೀಡಿ ಮತ್ತು ಮೂರನೆಯದು, ಮುಖ್ಯವಾಗಿ, ನಮಗೆ ಒಟಿಪಿ ಟ್ರೇಲ್‌ಗಳನ್ನು ನೀಡಿ, ಏಕೆಂದರೆ ಅರ್ಜಿ ಸಲ್ಲಿಸುವಾಗ ಒಟಿಪಿ ಪಡೆಯಬೇಕಾಗುತ್ತದೆ” ಎಂದು ರಾಹುಲ್ ಗಾಂಧಿ ಹೇಳಿದರು.

“18 ತಿಂಗಳಲ್ಲಿ 18 ಬಾರಿ ಕರ್ನಾಟಕದ ಸಿಐಡಿ ಚುನಾವಣಾ ಆಯೋಗಕ್ಕೆ ಇದಕ್ಕಾಗಿ ಪತ್ರ ಬರೆದಿದೆ. ಆದರೂ, ಚುನಾವಣಾ ಆಯೋಗ ಮಾಹಿತಿ ನೀಡುತ್ತಿಲ್ಲ ಏಕೆ? ಏಕೆಂದರೆ ಇದು ಕಾರ್ಯಾಚರಣೆಯನ್ನು ಎಲ್ಲಿಗೆ ಕೊಂಡೊಯ್ಯತ್ತದೆ ಮತ್ತು ಇದು ಎಲ್ಲಿಗೆ ಹೋಗುತ್ತದೆ ಎಂದು ನಮಗೆ ಸಂಪೂರ್ಣವಾಗಿ ಮನವರಿಕೆಯಾಗಿದೆ” ರಾಹುಲ್ ಗಾಂಧಿ ತಿಳಿಸಿದರು.

‘ಆಳಂದ’ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣ: ಸಿಐಡಿ ತನಿಖೆಗೆ ಸ್ಪಂದಿಸದ ಚುನಾವಣಾ ಆಯೋಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...