Homeಅಂತರಾಷ್ಟ್ರೀಯಗಾಝಾದಲ್ಲಿ ಆಕ್ರಮಣ ತೀವ್ರಗೊಳಿಸಿದ ಇಸ್ರೇಲ್ : ಹಮಾಸ್‌ನಿಂದ 48 ಒತ್ತೆಯಾಳುಗಳ 'ವಿದಾಯ ಚಿತ್ರ' ಬಿಡುಗಡೆ

ಗಾಝಾದಲ್ಲಿ ಆಕ್ರಮಣ ತೀವ್ರಗೊಳಿಸಿದ ಇಸ್ರೇಲ್ : ಹಮಾಸ್‌ನಿಂದ 48 ಒತ್ತೆಯಾಳುಗಳ ‘ವಿದಾಯ ಚಿತ್ರ’ ಬಿಡುಗಡೆ

- Advertisement -
- Advertisement -

ಗಾಝಾ ನಗರದಲ್ಲಿ ಇಸ್ರೇಲ್ ಆಕ್ರಮಣ ತೀವ್ರಗೊಳಿಸಿರುವ ನಡುವೆ, ಹಮಾಸ್‌ನ ಸಶಸ್ತ್ರ ವಿಭಾಗವು 48 ಇಸ್ರೇಲಿ ಒತ್ತೆಯಾಳುಗಳ ‘ವಿದಾಯ’ ಚಿತ್ರವನ್ನು ಬಿಡುಗಡೆ ಮಾಡಿದೆ.

1986ರಲ್ಲಿ ಲೆಬನಾನ್‌ನಲ್ಲಿ ಕಾಣೆಯಾದ ಇಸ್ರೇಲಿ ವಾಯುಪಡೆಯ ನಾಯಕನನ್ನು ಉಲ್ಲೇಖಿಸಿ, ‘ರಾನ್ ಅರಾದ್’ ಎಂಬ ಶೀರ್ಷಿಕೆಯೊಂದಿಗೆ, ಎಲ್ಲಾ ಜೀವಂತ ಮತ್ತು ಸತ್ತ ಒತ್ತೆಯಾಳುಗಳ ಮುಖಗಳನ್ನು ತೋರಿಸುವ ಕೊಲಾಜ್ ಫೋಟೋವನ್ನು ಕಸ್ಸಮ್ ಬ್ರಿಗೇಡ್ಸ್ ಶನಿವಾರ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದೆ.

ದಕ್ಷಿಣ ಲೆಬನಾನ್ ಮೇಲಿನ ದಾಳಿಯ ಸಂದರ್ಭದಲ್ಲಿ ಇಸ್ರೇಲಿ ವಾಯುಪಡೆಯ ನಾಯಕ ಅರಾದ್ ಇದ್ದ ಎಫ್-4 ಫ್ಯಾಂಟಮ್ ವಿಮಾನವು ಬಾಂಬ್ ದಾಳಿಯಿಂದ ಪತನವಾದ ಬಳಿಕ, ಅರಾದ್ ನನ್ನು ಅಮಲ್ ಮೂವ್‌ಮೆಂಟ್ ಕೈಗೆ ಸಿಕ್ಕು ಹಿಜ್ಬುಲ್ಲಾ ಗೆ ಹಸ್ತಾಂತರ ಮಾಡಲಾಗಿತ್ತು. ಅರಾದ್ ಜೀವಿತದ ಬಗ್ಗೆ ನಿರ್ಣಾಯಕ ಪುರಾವೆ ಸಿಕ್ಕಿಲ್ಲದಿದ್ದರೂ, ಆತ ಮೃತಪಟ್ಟಿದ್ದಾರೆ ಎಂದು ನಂಬಲಾಗಿದೆ. ಹಮಾಸ್ ಇದೀಗ ಅದೇ ನಾಮಧೇಯವನ್ನು ಬಳಸಿ ಇಸ್ರೇಲಿ ಒತ್ತೆಯಾಳುಗಳ ಭವಿಷ್ಯದ ಬಗ್ಗೆ ಗಂಭೀರ ಸಂದೇಶ ಕಳುಹಿಸಿದೆ.

“ನೆತನ್ಯಾಹು ಅವರ ನಿರಾಕರಣೆ ಮತ್ತು ಝಮೀರ್ ಅವರ ಶರಣಾಗತಿಯಿಂದಾಗಿ, ಗಾಝಾ ನಗರದಲ್ಲಿ ಸೈನಿಕ ಕಾರ್ಯಾಚರಣೆ ಪ್ರಾರಂಭವಾಗುತ್ತಿದ್ದಂತೆ ವಿದಾಯ ಚಿತ್ರ” ಎಂದು ಫೋಟೋದೊಂದಿಗೆ ಹಮಾಸ್ ಪ್ರಕಟಣೆ ನೀಡಿದೆ.

ಈ ಮೂಲಕ ಹಮಾಸ್, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಲ್ಲಾ ಒಪ್ಪಂದಗಳನ್ನು ತಿರಸ್ಕರಿಸಿರುವುದನ್ನು ಹಾಗೂ ಸೇನಾ ಮುಖ್ಯಸ್ಥ ಇಯಾಲ್ ಝಮೀರ್ ನೇತೃತ್ವದಲ್ಲಿ ದಾಳಿಗಳು ತೀವ್ರಗೊಂಡಿರುವುದನ್ನು ಉಲ್ಲೇಖಿಸಿದೆ.

ಇಸ್ರೇಲ್ ಅಧಿಕಾರಿಗಳ ಪ್ರಕಾರ ಗಾಝಾದಲ್ಲಿ ಒತ್ತೆಯಾಳಾಗಿರುವವರಲ್ಲಿ ಸುಮಾರು 20 ಮಂದಿ ಜೀವಂತವಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ಸಂಖ್ಯೆ 20ಕ್ಕಿಂತ ಕಡಿಮೆಯಾಗಿರಬಹುದು ಎಂದು ಹೇಳಿದ್ದಾರೆ.

ನೆತನ್ಯಾಹು ಮತ್ತು ಟ್ರಂಪ್ ಇಬ್ಬರೂ, ಎಲ್ಲಾ ಜೀವಂತ ಮತ್ತು ಮೃತಪಟ್ಟ ಒತ್ತೆಯಾಳುಗಳನ್ನು ಮರಳಿ ತರಲಾಗುವುದು ಹಾಗೂ ಹಮಾಸ್ ಅನ್ನು ಸಂಪೂರ್ಣವಾಗಿ ನಾಶಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಇಸ್ರೇಲ್ ನಡೆಸುತ್ತಿರುವ ವಾಯು ಹಾಗೂ ಪದಾತಿ ದಳದ ದಾಳಿಗಳು ಬಂಧಿತರ ಜೀವಕ್ಕೆ ನೇರ ಅಪಾಯವಾಗುತ್ತದೆ ಎಂದು ಹಮಾಸ್ ಪುನಃ ಎಚ್ಚರಿಸಿದೆ. ಅವರ ಪ್ರಕಾರ, ಕೆಲ ಒತ್ತೆಯಾಳುಗಳು ಈಗಾಗಲೇ ಇಸ್ರೇಲಿನ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದಾರೆ. ‘ಒತ್ತೆಯಾಳುಗಳು ಗಾಝಾ ನಗರದ ವಿವಿಧ ಪ್ರದೇಶಗಳಲ್ಲಿದ್ದಾರೆ’ ಎಂದು ಹಮಾಸ್ ತಿಳಿಸಿದೆ.

ಹಮಾಸ್ ಪ್ರಕಟಣೆಯ ನಂತರ ಇಸ್ರೇಲ್‌ನಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಲಕ್ಷಾಂತರ ಜನರು ಮತ್ತೆ ಟೆಲ್ ಅವೀವ್ ಮತ್ತು ಇತರ ಪ್ರಮುಖ ನಗರಗಳಲ್ಲಿ ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ ಎನ್ನಲಾಗಿದೆ. ಯುದ್ಧವನ್ನು ಕೊನೆಗೊಳಿಸಿ, ಒತ್ತೆಯಾಳುಗಳನ್ನು ತಕ್ಷಣ ಮತ್ತು ಸುರಕ್ಷಿತವಾಗಿ ಹಿಂತಿರುಗಿಸುವಂತೆ ಒತ್ತಾಯಿಸಲಾಗುತ್ತಿದೆ.

ಈ ತಿಂಗಳ ಆರಂಭದಲ್ಲಿ, ಹಮಾಸ್ ಇಬ್ಬರು ಇಸ್ರೇಲಿ ಒತ್ತೆಯಾಳುಗಳ ವಿಡಿಯೋವನ್ನು ಬಿಡುಗಡೆ ಮಾಡಿತ್ತು. ಆ ದೃಶ್ಯಗಳಲ್ಲಿ ದುರ್ಬಲ ಸ್ಥಿತಿಯಲ್ಲಿದ್ದ ಬಂಧಿತರಲ್ಲಿ ಒಬ್ಬನು ತನ್ನದೇ ಸಮಾಧಿಯನ್ನು ತೋಡುತ್ತಿರುವುದಾಗಿ ತೋರಿಸಲಾಗಿತ್ತು. ಈ ದೃಶ್ಯಗಳು ಬಂಧಿತರ ಕುಟುಂಬಗಳಲ್ಲಿಯೂ, ಇಸ್ರೇಲಿ ಸರ್ಕಾರದಲ್ಲಿಯೂ ಹಾಗೂ ಅಮೆರಿಕ ಸೇರಿದಂತೆ ಇಸ್ರೇಲ್ ಮಿತ್ರ ರಾಷ್ಟ್ರಗಳಲ್ಲಿಯೂ ಆಕ್ರೋಶ ಹುಟ್ಟಿಸಿತ್ತು.

ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 2023ರಲ್ಲಿ ಯುದ್ಧ ಪ್ರಾರಂಭವಾದ ನಂತರದಿಂದ ಇಸ್ರೇಲ್ ನಡೆಸಿದ ದಾಳಿಗಳಲ್ಲಿ ಕನಿಷ್ಠ 65,208 ಪ್ಯಾಲೆಸ್ತೀನಿಯರು ಸಾವಿಗೀಡಾಗಿದ್ದಾರೆ ಮತ್ತು 1,66,271 ಮಂದಿ ಗಾಯಗೊಂಡಿದ್ದಾರೆ. ಮಾರ್ಚ್ 18ರಂದು ಇಸ್ರೇಲ್ ಹಮಾಸ್ ಜೊತೆಗಿನ ಕದನ ವಿರಾಮವನ್ನು ಮುರಿದ ನಂತರದಿಂದಲೇ 12,653 ಜನರು ಮೃತಪಟ್ಟು, 54,230 ಮಂದಿ ಗಾಯಗೊಂಡಿದ್ದಾರೆ.

‘ಭಾರತ ದುರ್ಬಲ ಪ್ರಧಾನಿಯನ್ನು ಹೊಂದಿದೆ..’; ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...