Homeಮುಖಪುಟಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ವರದಿ ಆರೋಪ: ಎಎನ್‌ಐ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ಪ್ರಕರಣ...

ಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ವರದಿ ಆರೋಪ: ಎಎನ್‌ಐ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಕೋರ್ಟ್

- Advertisement -
- Advertisement -

ಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ಸುದ್ದಿಗಳನ್ನು ಪ್ರಕಟಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಲಕ್ನೋ ಜಿಲ್ಲೆಯ ನ್ಯಾಯಾಲಯವು ಎಎನ್‌ಐ ಸುದ್ದಿ ಸಂಸ್ಥೆಯ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ದೂರು ಪ್ರಕರಣ ದಾಖಲಿಸಿಕೊಂಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಮಾಜಿ ಐಪಿಎಸ್ ಅಧಿಕಾರಿ ಅಮಿತಾಬ್ ಠಾಕೂರ್ ಅವರು ನೀಡಿದ ದೂರಿಗೆ ಸಂಬಂಧಿಸಿದಂತೆ ನ್ಯಾಯಾಲಯ ದೂರು ಪ್ರಕರಣ ದಾಖಲಿಸಿಕೊಂಡಿದೆ ಎಂದು ವರದಿ ಹೇಳಿದೆ.

ದೂರು ಪ್ರಕರಣ ಎಂದರೆ ಒಂದು ಅಪರಾಧ ನಡೆದಿದೆ ಎಂದು ನ್ಯಾಯಾಲದ ಮುಂದೆ ಔಪಚಾರಿಕವಾಗಿ ಮಾಡಲಾಗುವ ಆರೋಪವಾಗಿದೆ.

ಅಮಿತಾಬ್ ಠಾಕೂರ್ ಅವರ ದೂರು ಪರಿಶೀಲಿಸಿದ ನ್ಯಾಯಾಲವು “ಈ ಹಂತದಲ್ಲಿ ಪ್ರಾದೇಶಿಕ ನ್ಯಾಯವ್ಯಾಪ್ತಿಯ ಅರ್ಹತೆಗಳು ಅಥವಾ ಸಾಕಷ್ಟು ಆಧಾರಗಳ ಹೊರತಾಗಿಯೂ, ಈ ದೂರು ಕಾರ್ಯವಿಧಾನವಾಗಿ ಕ್ರಮಬದ್ಧವಾಗಿದೆ ಎಂದು ಕಂಡುಬಂದಿದೆ. ಅಧ್ಯಾಯ XV BNSSನ ನಿಬಂಧನೆಗಳ ಅಡಿಯಲ್ಲಿ, ಈ ದೂರು ದೂರು ಪ್ರಕರಣವಾಗಿ ನೋಂದಾಯಿಸಲು ಅರ್ಹವಾಗಿದೆ” ಎಂದು ಸೆಪ್ಟೆಂಬರ್ 11, 2025ರಂದು ಹೊರಡಿಸಿದ ಆದೇಶದಲ್ಲಿ ಲಕ್ನೋದ ನ್ಯಾಯಾಂಗ ಮ್ಯಾಜಿಸ್ಟ್ರೇಟ್-III ಹೇಳಿದ್ದಾರೆ.

“ಈ ಪ್ರಕರಣವನ್ನು ದೂರು ಪ್ರಕರಣವಾಗಿ ದಾಖಲಿಸಲಿ. ದೂರುದಾರರು ಹೇಳಿಕೆಯನ್ನು ದಾಖಲಿಸಲು ದಿನಾಂಕ 26 ಸೆಪ್ಟೆಂಬರ್ 2025 ರಂದು ಹಾಜರಾಗಲಿ” ಎಂದು ನ್ಯಾಯಾಲಯ ತಿಳಿಸಿದೆ.

ದೂರಿನಲ್ಲಿರುವ ಆರೋಪಗಳು

ಬಿಎನ್‌ಎಸ್‌ಎಸ್‌ನ ಸೆಕ್ಷನ್ 210ರ ಅಡಿಯಲ್ಲಿ ನೀಡಿದ ವಿವರವಾದ ದೂರಿನಲ್ಲಿ, “ಚುನಾವಣಾ ಆಯೋಗ ತನ್ನ ವೆಬ್‌ಸೈಟ್ ಅಥವಾ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಪ್ರಕಟಿಸಿರದ ವಿಷಯಗಳನ್ನು, ಚುನಾವಣಾ ಆಯೋಗ ಹೇಳಿದೆ ಎಂದು ಸ್ಮಿತಾ ಪ್ರಕಾಶ್ ನೇತೃತ್ವದ ಎಎನ್‌ಐ ಪದೇ ಪದೇ ವರದಿ ಮಾಡುತ್ತಿದೆ. ಈ ಮೂಲಕ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅಮಿತಾಬ್ ಠಾಕೂರ್ ಆರೋಪಿಸಿದ್ದಾರೆ.

ದೂರಿನಲ್ಲಿ ಆಗಸ್ಟ್ 2025ರ ಹಲವಾರು ಉದಾಹರಣೆಗಳನ್ನು ಉಲ್ಲೇಖಿಸಿದ್ದಾರೆ. ಅದರಲ್ಲಿ ಚುನಾವಣಾ ಆಯೋಗ ಅಧಿಕೃತವಾಗಿ ಪ್ರಕಟಿಸುವ ಮೊದಲು ಅಥವಾ ಪ್ರಕಟಿಸಿರದ ವಿಷಯಗಳನ್ನು ಎಎನ್‌ಐ ತನ್ನ ಎಕ್ಸ್‌ ಹ್ಯಾಂಡಲ್‌ನಲ್ಲಿ ಪೋಸ್ಟ್‌ ಮಾಡಿದೆ ಎಂದು ಹೇಳಿದ್ದಾರೆ.

“ಆಗಸ್ಟ್ 1, 2025ರಂದು ಮಧ್ಯಾಹ್ನ 15:08ಕ್ಕೆ (3.08) ರಾಹುಲ್ ಗಾಂಧಿಯ ‘ಮತಗಳ್ಳತನ’ ಆರೋಪಗಳನ್ನು ಆಕ್ಷೇಪಿಸಿ ಚುನಾವಣಾ ಆಯೋಗ ಹೇಳಿಕೆ ನೀಡಿದೆ ಎಂದು ಎಎನ್‌ಐ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿತ್ತು. ಆದರೆ, ಚುನಾವಣಾ ಆಯೋಗ ತನ್ನ ಅಧಿಕೃತ ಹೇಳಿಕೆಯನ್ನು ಹಿಂದಿಯಲ್ಲಿ ಸಂಜೆ 17:59ಕ್ಕೆ (5.59) ಇಂಗ್ಲಿಷ್‌ನಲ್ಲಿ ಸಂಜೆ 19:55ಕ್ಕೆ (9.55) ಪ್ರಕಟಿಸಿದೆ. ಅದರಲ್ಲಿ ರಾಹುಲ್ ಗಾಂಧಿಯ ಹೇಳಿಕೆಯು ‘ದಾರಿತಪ್ಪಿಸುವ, ಆಧಾರರಹಿತ ಮತ್ತು ಬೆದರಿಕೆ’ಎಂದಿದೆ. ಇಲ್ಲಿ ಚುನಾವಣಾ ಆಯೋಗ ಹೇಳಿಕೆ ನೀಡುವ ಮೊದಲೇ ಅದರ ಹೆಸರಿನಲ್ಲಿ ಎಎನ್‌ಐ ಪೋಸ್ಟ್ ಮಾಡಿತ್ತು” ಎಂದು ಠಾಕೂರ್ ವಿವರಿಸಿದ್ದಾರೆ.

ಹೀಗೆ, ಚುನಾವಣಾ ಆಯೋಗ ತನ್ನ ವೆಬ್‌ಸೈಟ್, ಸುದ್ದಿಗೋಷ್ಠಿ ಸೇರಿದಂತೆ ಎಲ್ಲೂ ಹೇಳಿರದ ಅನೇಕ ಸುದ್ದಿಗಳನ್ನು ಎಎನ್‌ಐ ಚುನಾವಣಾ ಆಯೋಗದ ಹೆಸರಿನಲ್ಲಿ ಪ್ರಕಟಿಸಿದೆ ಎಂದು ಹೇಳಿದ್ದಾರೆ.

ಈ ಆಧಾರಗಳ ಮೇಲೆ, ಎಎನ್‌ಐ ಕೃತ್ಯಗಳು ಪ್ರಾಥಮಿಕವಾಗಿ ಕಾನೂನುಬಾಹಿರ ಮತ್ತು ಕ್ರಿಮಿನಲ್ ಕೃತ್ಯಗಳಾಗಿವೆ. ವಿಶೇಷವಾಗಿ ಸೆಕ್ಷನ್ 318(2) ಬಿಎನ್ಎಸ್ ಅಡಿಯಲ್ಲಿ ಎಂದು ಅಮಿತಾಬ್ ಠಾಕೂರ್ ತಿಳಿಸಿದ್ದಾರೆ.

ಪೊಲೀಸರ ಮೂಲಕ ಎಫ್‌ಐಆರ್ ದಾಖಲಿಸಲು ಕೋರಬಹುದಿತ್ತು. ಆದರೆ, ಪೊಲೀಸರು ವಿವಿಧ ಕಾರಣಗಳಿಂದ ಪ್ರತಿವಾದಿಗಳ ಪ್ರಭಾವಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿದ್ದು, ಆದ್ದರಿಂದ ನ್ಯಾಯಾಲಯದ ಮುಂದೆ ನೇರ ದೂರು ಪ್ರಕರಣ ದಾಖಲಿಸುವುದು ಹೆಚ್ಚು ಸೂಕ್ತ ಎಂಬುವುದಾಗಿ ತೀರ್ಮಾನಿಸಿದೆ ಎಂದು ಠಾಕೂರ್ ಹೇಳಿದ್ದಾರೆ.

‘ಭಾರತ ದುರ್ಬಲ ಪ್ರಧಾನಿಯನ್ನು ಹೊಂದಿದೆ..’; ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...