Homeಮುಖಪುಟಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ...

ಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ ಕ್ರಮಕ್ಕೆ ಆದೇಶ

- Advertisement -
- Advertisement -

ತನಿಖಾ ದಾಖಲೆಗಳು ಮತ್ತು ಇತರ ಸಾರ್ವಜನಿಕ ದಾಖಲೆಗಳಲ್ಲಿ ಜಾತಿ ದಾಖಲಿಸುವುದನ್ನು ನಿಲ್ಲಿಸಲು ಪೊಲೀಸ್ ಕೈಪಿಡಿಗಳನ್ನು ತಿದ್ದುಪಡಿ ಮಾಡುವಂತೆ ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ ಎಂದು ಬಾರ್ ಮತ್ತು ಬೆಂಚ್ ಶನಿವಾರ (ಸೆ.20) ವರದಿ ಮಾಡಿದೆ.

ನ್ಯಾಯಮೂರ್ತಿ ವಿನೋದ್ ದಿವಾಕರ್ ಅವರಿದ್ದ ಪೀಠವು, ವಾಹನಗಳ ಮೇಲೆ ಜಾತಿ ಆಧಾರಿತ ಘೋಷಣೆಗಳು ಮತ್ತು ಗುರುತು ಫಲಕಗಳನ್ನು ನಿಷೇಧಿಸಲು ಕೇಂದ್ರ ಮೋಟಾರು ವಾಹನ ನಿಯಮಗಳಲ್ಲಿ ಬದಲಾವಣೆಗಳನ್ನು ತರುವಂತೆಯೂ ಮತ್ತು ನಿರ್ದೇಶನಗಳನ್ನು ಪಾಲಿಸಲು ವಿಫಲರಾದ ವಾಹನ ಮಾಲೀಕರಿಗೆ ದಂಡ ವಿಧಿಸುವಂತೆಯೂ ಹೇಳಿದೆ.

ಪೊಲೀಸ್ ಅರ್ಜಿಗಳಲ್ಲಿ ಜಾತಿ ದಾಖಲಿಸುವುದನ್ನು ತೆಗೆದುಹಾಕಲು ಆದೇಶಿಸುವಾಗ, ತಂದೆ ಮತ್ತು ಗಂಡನ ಹೆಸರಿನೊಂದಿಗೆ ತಾಯಿಯ ಹೆಸರಿನ ಜಾಗ ಸೇರಿಸಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ. ಅಲ್ಲದೆ, ಪೊಲೀಸ್ ಠಾಣೆಗಳ ಸೂಚನಾ ಫಲಕಗಳಿಂದ ಜಾತಿ ಕಾಲಂಗಳನ್ನು ತೆಗೆದುಹಾಕುವಂತೆಯೂ ಆದೇಶಿಸಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ, 1989ರ ಅಡಿಯಲ್ಲಿ ಕಾನೂನುಬದ್ಧವಾಗಿ ಜಾತಿ ಘೋಷಣೆ ಅಗತ್ಯವಿರುವ ಸಂದರ್ಭಗಳಲ್ಲಿ ಮಾತ್ರ ವಿನಾಯಿತಿಗಳು ಅನ್ವಯಿಸುತ್ತವೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ನಿರ್ದೇಶನಗಳನ್ನು ಪಾಲಿಸುವುದು ಉತ್ತರ ಪ್ರದೇಶ ಸರ್ಕಾರಕ್ಕೆ ಕಡ್ಡಾಯವಾಗಿದೆ. ಪ್ರಕರಣದಲ್ಲಿ ಪಕ್ಷವಾಗಿರದ ಕೇಂದ್ರಕ್ಕೆ ಆಯ್ಕೆಯಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ವಿಚಾರಣೆಯ ಸಮಯದಲ್ಲಿ, ಆರೋಪಿಗಳನ್ನು ಜಾತಿಯಿಂದ ಗುರುತಿಸುವುದರಿಂದ ಗೊಂದಲ ನಿವಾರಣೆಯಾಗುತ್ತದೆ ಎಂಬ ಪೊಲೀಸರ ಹೇಳಿಕೆಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಬಾಡಿ ಕ್ಯಾಮರಾ, ಬೆರಳಚ್ಚು, ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ನಂಬರ್ ಮತ್ತು ಪೋಷಕರ ವಿವರಗಳಂತಹ ಆಧುನಿಕ ಸಾಧನಗಳು ನಿಖರವಾದ ಗುರುತಿಸುವಿಕೆಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದೆ.

21ನೇ ಶತಮಾನದಲ್ಲೂ ಪೊಲೀಸರು ಗುರುತಿನ ಸಾಧನವಾಗಿ ಜಾತಿಯನ್ನು ಅವಲಂಬಿಸಿರುವುದು ‘ದುರದೃಷ್ಟಕರ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಜಾತಿ ವ್ಯವಸ್ಥೆ ಹೊಂದಿರುವ ಭಾರತೀಯ ಸಮಾಜದಲ್ಲಿ ಪೊಲೀಸ್ ದಾಖಲೆಗಳಂತಹ ವಿಷಯಗಳಲ್ಲಿ ಜಾತಿ ಮತ್ತು ಧರ್ಮವನ್ನು ಉಲ್ಲೇಖಿಸುವುದು ಸಾಮಾಜಿಕ ವಿಭಜನೆಯನ್ನು ಮತ್ತಷ್ಟು ಉತ್ತೇಜಿಸುತ್ತದೆ. ಹಾಗಾಗಿ, ಈ ಪದ್ಧತಿಯನ್ನು ಪುನರ್ವಿಮರ್ಶೆ ಮಾಡುವ ಅಗತ್ಯವಿದೆ ಎಂದು ನ್ಯಾಯಾಲಯವು ಒತ್ತಿ ಹೇಳಿದೆ.

ಕಾನೂನು ಜಾರಿ ಸಂಸ್ಥೆಗಳೂ ಕೂಡ ಸಾಮಾಜಿಕ ಪಕ್ಷಪಾತಗಳಿಂದ ಮುಕ್ತವಾಗಿಲ್ಲ. ಹೀಗಿರುವಾಗ, ತನಿಖೆ ಮತ್ತು ಕಾನೂನು ಜಾರಿಯಲ್ಲಿ ನಿಷ್ಪಕ್ಷಪಾತತೆ ಅಗತ್ಯವಾಗಿದೆ. ಕಾನೂನಿಗೆ ಅಗತ್ಯವಿಲ್ಲದೆ ಜಾತಿ ದಾಖಲಿಸುವುದು ಅಥವಾ ಘೋಷಿಸುವುದು ಗುರುತಿನ ಪ್ರೊಫೈಲಿಂಗ್‌ಗೆ ಸಮನಾಗಿರುತ್ತದೆ. ಇದು ಪೂರ್ವಾಗ್ರಹವನ್ನು ಬಲಪಡಿಸುತ್ತದೆ ಮತ್ತು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.

‘ಜಾತಿ ಗುರುತಿಸುವಿಕೆ ಸಾಂವಿಧಾನಿಕ ಮೌಲ್ಯಗಳನ್ನು ದುರ್ಬಲಗೊಳಿಸುತ್ತವೆ’

ಸಾರ್ವಜನಿಕ ಮತ್ತು ಆನ್‌ಲೈನ್ ವೇದಿಕೆಗಳಲ್ಲಿ ಜಾತಿ ಗುರುತಿಸುವಿಕೆ ಮತ್ತೆ ಕಾಣಿಸಿಕೊಳ್ಳುತ್ತಿದೆ. ಇದು ಸಾಂವಿಧಾನಿಕ ಮೌಲ್ಯಗಳನ್ನು ದುರ್ಬಲಗೊಳಿಸುವ ಸಾಮಾಜಿಕ ಶಕ್ತಿಯ ಸಂಕೇತೀಕೃತ ಪ್ರತಿಪಾದನೆಯಾಗಿದೆ ಎಂದು ನ್ಯಾಯಾಲಯ ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

“ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ, ವ್ಯಕ್ತಿಗಳು ಸಾಮಾನ್ಯವಾಗಿ ತಮ್ಮ ಕಾರು, ಬೈಕ್‌ ಮತ್ತು ಕೆಲವೊಮ್ಮೆ ಮನೆಗಳನ್ನು ಎಚ್ಚರಿಕೆಗಳೊಂದಿಗೆ ಗುರುತಿಸುತ್ತಾರೆ”

ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಯುವಕರು ತಮ್ಮ ಜಾತಿಯನ್ನು ಹೆಮ್ಮೆಯಿಂದ ತೋರಿಸುತ್ತಾರೆ ಮತ್ತು ಜಾತಿಗೆ ಸಂಬಂಧಿಸಿದ ದೊಡ್ಡತನವನ್ನೋ ಅಥವಾ ಆಕ್ರಮಣಕಾರಿ ವರ್ತನೆಯನ್ನೋ ಒಳ್ಳೆಯದೆಂದು ಬಿಂಬಿಸುತ್ತಾರೆ. ಇದರ ಜೊತೆಗೆ, ಕೆಲವು ಹಳೆಯ ಆಚಾರ-ವಿಚಾರಗಳನ್ನು (ಉದಾಹರಣೆಗೆ, ಗೌರವದ ಸಂಹಿತೆ) ಅವರು ಬೆಂಬಲಿಸುತ್ತಾರೆ ಎಂದ ನ್ಯಾಯಾಲಯ, ಇದನ್ನು ಗಂಭೀರವಾದ ಸಮಸ್ಯೆಯೆಂದು ಗುರುತಿಸಿದೆ.

ಇಂತಹ ನಡವಳಿಕೆಯು ಹಳೆಯ ಶ್ರೇಣೀಕೃತ ವ್ಯವಸ್ಥೆ ಮತ್ತು ಆಧುನಿಕ ಅಭದ್ರತೆಗಳನ್ನು ಪ್ರತಿಬಿಂಬಿಸುತ್ತದೆ. ಸಾಂವಿಧಾನಿಕ ನೈತಿಕತೆಯನ್ನು ದುರ್ಬಲಗೊಳಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಜಾತಿಯನ್ನು ಮಹಿಮೆಗೊಳಿಸುವ ಅಥವಾ ದ್ವೇಷವನ್ನು ಉಂಟುಮಾಡುವ ಆನ್‌ಲೈನ್ ವಿಷಯಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲು, ಮಾಹಿತಿ ತಂತ್ರಜ್ಞಾನ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ ನಿಯಮಗಳು, 2021 ಅನ್ನು ಬಲಪಡಿಸುವ ಅಗತ್ಯವಿದೆ ಎಂದು ತಿಳಿಸಿದೆ.

ಈ ಆದೇಶದ ಪ್ರತಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಹಂಚಿಕೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ವರದಿ ಆರೋಪ: ಎಎನ್‌ಐ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...