Homeಮುಖಪುಟಗಾರ್ಬಾ ಕಾರ್ಯಕ್ರಮಗಳಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ಎಂಬ ವಿಹೆಚ್‌ಪಿ ಫರ್ಮಾನು ಹಿಂಸೆಗೆ ಆಹ್ವಾನ: ಕೇಂದ್ರ ಸಚಿವ...

ಗಾರ್ಬಾ ಕಾರ್ಯಕ್ರಮಗಳಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ಎಂಬ ವಿಹೆಚ್‌ಪಿ ಫರ್ಮಾನು ಹಿಂಸೆಗೆ ಆಹ್ವಾನ: ಕೇಂದ್ರ ಸಚಿವ ಅಠಾವಳೆ

- Advertisement -
- Advertisement -

ನವರಾತ್ರಿಯ ‘ಗಾರ್ಬಾ’ ಕಾರ್ಯಕ್ರಮಗಳಿಗೆ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು ಎಂಬ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಫರ್ಮಾನುಗೆ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಭಾನುವಾರ (ಸೆ.21) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಅಂತಹ ಕರೆಗಳು ‘ಹಿಂಸೆಯನ್ನು ಆಹ್ವಾನಿಸಿದಂತೆ” ಎಂದು ಹೇಳಿದ್ದಾರೆ.

ನವರಾತ್ರಿಯು ಸಾಂಪ್ರದಾಯಿಕ ಆಧ್ಯಾತ್ಮಿಕ ಗಾರ್ಬಾ ನೃತ್ಯದೊಂದಿಗೆ ದಾಂಡಿಯಾ (ವರ್ಣರಂಜಿತ ಕೋಲುಗಳ ಹೊಡೆತ) ಪ್ರದರ್ಶನದೊಂದಿಗೆ ಗುರುತಿಸಲ್ಪಟ್ಟಿದೆ. ಇದರಲ್ಲಿ ಜೋಡಿಗಳು ವೃತ್ತಾಕಾರವಾಗಿ ನೃತ್ಯ ಮಾಡುತ್ತಾರೆ, ಈ ವರ್ಷದ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 1 ರವರೆಗೆ ಇದನ್ನು ಆಚರಿಸಲಾಗುತ್ತದೆ.

‘ಗಾರ್ಬಾ’ ಕಾರ್ಯಕ್ರಮಗಳಿಗೆ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ಶನಿವಾರ (ಸೆ.20) ವಿಎಚ್‌ಪಿ ಹೇಳಿದೆ. ‘ಲವ್ ಜಿಹಾದ್’ ತಪ್ಪಿಸಲು ಪ್ರವೇಶ ಪಡೆಯುವವರ ಆಧಾರ್ ಕಾರ್ಡ್ ಅನ್ನು ಪರಿಶೀಲಿಸುವಂತೆ ಆಯೋಜಕರಿಗೆ ಸಲಹೆ ನೀಡಿದೆ.

ಗಾರ್ಬಾ ನೃತ್ಯದ ಸಮಯದಲ್ಲಿ ಹಿಂದೂಯೇತರರ ಪ್ರವೇಶವನ್ನು ನಿರ್ಬಂಧಿಸಬೇಕು ಎಂದು ವಿಎಚ್‌ಪಿ ನಾಯಕರೊಬ್ಬರು ಹೇಳಿದ್ದು, ಗಾರ್ಬಾ ಕೇವಲ ನೃತ್ಯವೋ, ಸಾಂಸ್ಕೃತಿಕ ಕಾರ್ಯಕ್ರಮವೋ ಅಲ್ಲ. ಅದೊಂದು ಪವಿತ್ರ ಪೂಜೆ ಎಂದಿದ್ದಾರೆ.

ವಿಎಚ್‌ಪಿಯ ಸಲಹೆಗೆ ಎಕ್ಸ್‌ ಪೋಸ್ಟ್‌ ಮೂಲಕ ಆಕ್ಷೇಪ ವ್ಯಕ್ತಪಡಿಸಿರುವ ರಾಮದಾಸ್ ಅಠಾವಳೆ, “ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಗಾರ್ಬಾಗೆ ಯಾರು ಹೋಗಬೇಕು, ಯಾರು ಹೋಗಬಾರದು ಎಂದು ನಿರ್ಧರಿಸಲು ವಿಶ್ವ ಹಿಂದೂ ಪರಿಷತ್ ಯಾರು? ಈ ಸಲಹೆಯು ಕೇವಲ ಸಂಘಟಕರಿಗೆ ಮಾತ್ರ ಸೀಮಿತವಾಗಿಲ್ಲ. ಬದಲಿಗೆ, ಕೆಲವು ಮೂಲಭೂತವಾದಿ ಶಕ್ತಿಗಳಿಗೆ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಲು ಹಾಗೂ ಬಲವನ್ನು ಪ್ರಯೋಗಿಸಲು ನೀಡಿರುವ ಮುಕ್ತ ಆಹ್ವಾನವಾಗಿದೆ” ಎಂದು ಬರೆದುಕೊಂಡಿದ್ದಾರೆ.

“ಈ ಸಲಹೆಯಿಂದಾಗಿ ನವರಾತ್ರಿಯ ಸಮಯದಲ್ಲಿ ದೇಶದಲ್ಲಿ ಎಲ್ಲಿಯಾದರೂ ಯಾವುದಾದರು ಘರ್ಷಣೆಗಳು, ಹಲ್ಲೆಗಳು ಅಥವಾ ಧಾರ್ಮಿಕ ಸಂಘರ್ಷಗಳು ಸಂಭವಿಸಿದಲ್ಲಿ, ಸಂಪೂರ್ಣ ಜವಾಬ್ದಾರಿ ವಿಎಚ್‌ಪಿ ಮತ್ತು ಅದರ ಸಂಬಂಧಿತ ಸಂಸ್ಥೆಗಳ ಮೇಲಿರುತ್ತದೆ” ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆಯ ರಾಜ್ಯ ಸಚಿವ ಹೇಳಿದ್ದಾರೆ.

ಇಂತಹ ನಡೆಗಳು ಭಾರತದ ಏಕತೆ, ವೈವಿಧ್ಯತೆ ಮತ್ತು ಧಾರ್ಮಿಕ ಸಹಿಷ್ಣುತೆಯ ಹೃದಯಭಾಗಕ್ಕೆ ಹೊಡೆತ ನೀಡುತ್ತವೆ ಎಂದಿದ್ದಾರೆ.

“ನವರಾತ್ರಿ ಪೂಜೆ ಮತ್ತು ಸಂತೋಷದ ಹಬ್ಬವಾಗಿದ್ದು, ಅದನ್ನು ದ್ವೇಷ ಮತ್ತು ಅನುಮಾನದ ವೇದಿಕೆಯನ್ನಾಗಿ ಪರಿವರ್ತಿಸುವ ಪ್ರಯತ್ನ ನಡೆಯುತ್ತಿದೆ, ಇದು ಅತ್ಯಂತ ಖಂಡನೀಯ” ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಮುಖ್ಯಸ್ಥ ಕಿಡಿಕಾರಿದ್ದಾರೆ.

ಸಂವಿಧಾನವು 14, 15 ಮತ್ತು 25 ನೇ ವಿಧಿಗಳ ಅಡಿಯಲ್ಲಿ ಸಮಾನತೆ ಮತ್ತು ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ.

“ಯಾರು ಹಬ್ಬವನ್ನು ಆಚರಿಸಬೇಕೆಂದು ಯಾವುದೇ ಸಂಸ್ಥೆ ನಿರ್ಧರಿಸಲು ಸಾಧ್ಯವಿಲ್ಲ. ಗಾರ್ಬಾ ಕೇವಲ ಧಾರ್ಮಿಕ ಸಂಪ್ರದಾಯವಲ್ಲ, ಸಂಗೀತ, ನೃತ್ಯ ಮತ್ತು ಸಾಮಾಜಿಕ ಸಾಮರಸ್ಯದ ಆಚರಣೆಯೂ ಆಗಿದೆ. ಒಂದು ಸಿದ್ಧಾಂತದೊಂದಿಗೆ ಅದನ್ನು ಏಕಸ್ವಾಮ್ಯಗೊಳಿಸಲು ಪ್ರಯತ್ನಿಸುವುದು ಅನ್ಯಾಯ ಮತ್ತು ಪ್ರತಿಗಾಮಿ” ಎಂದು ಕೇಂದ್ರ ಸಚಿವ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನವರಾತ್ರಿಯ ಸಮಯದಲ್ಲಿ ಆಯೋಜಕರು ಮತ್ತು ಭಾಗವಹಿಸುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕೆಂದು ಅಠಾವಳೆ ಸರ್ಕಾರ ಮತ್ತು ಆಡಳಿತವನ್ನು ಒತ್ತಾಯಿಸಿದ್ದಾರೆ.

“ಬಲವಂತ, ಗುರುತಿನ ಪರಿಶೀಲನೆ ಅಥವಾ ಧಾರ್ಮಿಕ ತಾರತಮ್ಯದ ಯಾವುದೇ ಪ್ರಯತ್ನಗಳನ್ನು ಕಾನೂನಿನ ಅಡಿಯಲ್ಲಿ ಕಟ್ಟುನಿಟ್ಟಾಗಿ ನಿಲ್ಲಿಸಬೇಕು. ನವರಾತ್ರಿ ಎಲ್ಲರಿಗೂ ಸೇರಿದ್ದು – ಅದರ ಸಾರವು ಭಾಗವಹಿಸುವಿಕೆ ಮತ್ತು ಶಾಂತಿಯಲ್ಲಿದೆ, ಹೊರಗಿಡುವಿಕೆಯಲ್ಲಿ ಅಲ್ಲ” ಎಂದು ತಿಳಿಸಿದ್ದಾರೆ.

ಇಂದಿನ ಯುವ ಪೀಳಿಗೆ ಪ್ರಗತಿ, ಒಳಗೊಳ್ಳುವಿಕೆ ಮತ್ತು ಆಚರಣೆಯನ್ನು ಬಯಸುತ್ತಿದೆಯೇ ಹೊರತು “ದ್ವೇಷ ಅಥವಾ ಬೆದರಿಕೆಯ ರಾಜಕೀಯವಲ್ಲ” ಎಂದು ಅವರು ಹೇಳಿದ್ದಾರೆ.

ಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ ಕ್ರಮಕ್ಕೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...