Homeಕರ್ನಾಟಕಜಾತಿಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗಳನ್ನು ಕೈಬಿಡಲಾಗಿದೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್...

ಜಾತಿಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗಳನ್ನು ಕೈಬಿಡಲಾಗಿದೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್

- Advertisement -
- Advertisement -

ವಿವಿಧ ಜಾತಿಗಳ ಮುಂದೆ ‘ಕ್ರಿಶ್ಚಿಯನ್’ ಎಂಬ ಪದ ಸೇರಿಸಿದ್ದ ವಿಚಾರ ವಿವಾದ ಸ್ವರೂಪ ಪಡೆದ ಹಿನ್ನೆಲೆ,
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಿಂದ ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಸೇರಿದಂತೆ 33 ಜಾತಿಗಳನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಬಿಟ್ಟಿದೆ.

ಭಾನುವಾರ (ಸೆ.21) ದೇವರಾಜು ಅರಸು ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್.ನಾಯ್ಕ್‌, “ಸೆ.22ರಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯದಾದ್ಯಂತ ಪ್ರಾರಂಭಗೊಳ್ಳಲಿದೆ. ಇದರಲ್ಲಿ ಪಟ್ಟಿ ಮಾಡಿರುವ 1,561 ಜಾತಿಗಳ ಪೈಕಿ 33 ಜಾತಿಗಳನ್ನು ಕೈಬಿಡಲಾಗಿದೆ ಎಂದು ತಿಳಿಸಿದರು.

ಈ ಹಿಂದಿನ ಕಾಂತರಾಜು ಆಯೋಗದ ಸಮೀಕ್ಷೆಯಲ್ಲಿ ಇದ್ದ ಮಾಹಿತಿ, ಕಲಂಗಳನ್ನೇ ಉಪಯೋಗಿಸಿಕೊಂಡು ಸಮೀಕ್ಷೆ ಮಾಡಲಾಗುತ್ತಿದೆ. ಇದರಿಂದ ಕಾನೂನು ಉಲ್ಲಂಘನೆ ಆಗಿಲ್ಲ. ಈ ಮಾಹಿತಿಯನ್ನು ಸಮುದಾಯಗಳ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪರಿಸ್ಥಿತಿಗಳನ್ನು ಬಗ್ಗೆ ತಿಳಿಯಲು ಸಂಗ್ರಹಿಸಿತ್ತಿದ್ದೇವೆಯೇ ಹೊರತು, ಬೇರೆ ಉದ್ದೇಶಕ್ಕಾಗಿ ಉಪಯೋಗ ಮಾಡುವುದಿಲ್ಲ ಎಂದರು.

ಈ ಹಿಂದೆಯೇ ಆಯೋಗ ಸಮೀಕ್ಷೆ ನಡೆಸುವ ಮೊದಲೇ ಬಿಟ್ಟು ಹೋದ ಜಾತಿಗಳನ್ನು ಗಮನಕ್ಕೆ ತನ್ನಿ ಎಂದು ಜಾಗೃತಿ ಮೂಡಿಸುವ ಪ್ರಕಟಣೆಯೊಂದನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿತ್ತು. ಇದಾದ ಬಳಿಕ ಅನೇಕರು ತಮ್ಮ ಜಾತಿಗಳನ್ನು ಪರಿಗಣಿಸುವಂತೆ ಕೋರಿದ್ದರು. ಅದರಂತೆ 148 ಜಾತಿಗಳನ್ನು ಸಮೀಕ್ಷೆಯಲ್ಲಿ ಸೇರಿಸಲಾಗಿದೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದರು.

33 ಜಾತಿಗಳನ್ನು ಕೈಬಿಡಲಾಗಿದೆ ಎಂದರೆ ಅದನ್ನು ತೆಗೆದು ಹಾಕಿದ್ದೇವೆ ಎಂದಲ್ಲ. ಅರ್ಹ ಜಾತಿಯವರು ತಮ್ಮ ಮೂಲವನ್ನು ಸಮೀಕ್ಷೆದಾರರಿಗೆ ತಿಳಿಸಿ ಉಲ್ಲೇಖ ಮಾಡಬಹುದು ಎಂದೂ ಹೇಳಿದರು.

ಸಮೀಕ್ಷೆಯಲ್ಲಿ 60 ಪ್ರಶ್ನೆಗಳಿರುತ್ತವೆ. ಅದನ್ನು ಸಮೀಕ್ಷೆ ಮಾಡುವವರ ಮೊಬೈಲ್‌ಗೆ ಅಪ್ಲೋಡ್ ಮಾಡಲಾಗಿದೆ. ಅವುಗಳ ಮೂಲಕ ಮಾಹಿತಿ ಕಲೆ ಹಾಕಲಾಗುತ್ತದೆ. ಏನು ಪ್ರಶ್ನೆಗಳಿರುತ್ತವೆ ಎಂದು ನಾವು ಜನರಿಗೆ ತಿಳಿವಳಿಕೆ ಕೊಟ್ಟಿದ್ದೇವೆ. ಹ್ಯಾಂಡ್ ಬಿಲ್ ಪ್ರಿಂಟ್ ಮಾಡಿ ಮನೆ ಮನೆಗ ತಲುಪಿಸಲು ವ್ಯವಸ್ಥೆ ಮಾಡಿದ್ದೇವೆ. ಇನ್ನೆರಡು ದಿನಗಳಲ್ಲಿ ಅದು ಪೂರ್ಣಗೊಳ್ಳಲಿದೆ ಎಂದರು.

ಏನಿದು ‘ಕ್ರಿಶ್ಚಿಯನ್’ ಜಾತಿ ವಿವಾದ

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಬಳಿಕವೂ ನಾನಾ ಕಾರಣಕ್ಕಾಗಿ ಮೂಲ ಜಾತಿಯನ್ನೂ ಸೇರಿಸಿಕೊಂಡು ಕ್ರಿಶ್ಚಿಯನ್ ಎಂಬುದಾಗಿ ಗುರುತಿಸಿಕೊಂಡಿರುವ ಜಾತಿಗಳ ಹೆಸರು ಆಯೋಗ ಪ್ರಕಟಿಸಿರುವ ಜಾತಿಗಳ ಪಟ್ಟಿಯಲ್ಲಿ ದಾಖಲಾಗಿತ್ತು.

ಬ್ರಾಹ್ಮಣ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್, ವಾಲ್ಮೀಕಿ ಕ್ರಿಶ್ಚಿಯನ್, ಆದಿ ಆಂಧ್ರ ಕ್ರಿಶ್ಚಿಯನ್, ಆದಿ ದ್ರಾವಿಡ ಕ್ರಿಶ್ಚಿಯನ್, ಆದಿ ಕರ್ನಾಟಕ ಕ್ರಿಶ್ಚಿಯನ್ ಸೇರಿದಂತೆ ಸುಮಾರು 46 ಜಾತಿಗಳ ಹೆಸರಿನೊಂದಿಗೆ ಕ್ರಿಶ್ಚಿಯನ್ ಎಂಬುದಾಗಿ ದಾಖಲಿಸಿರುವುದು ಕಂಡುಬಂದಿತ್ತು.

ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು. ನಾನಾ ಜಾತಿ- ಸಮುದಾಯಗಳ ನಾಯಕರು, ಸ್ವಾಮೀಜಿಗಳು ಕೂಡ ಮತಾಂತರದ ಬಳಿಕ ಹಿಂದೂ ಮೂಲ ಜಾತಿಯನ್ನು ಸೇರಿಸಿಕೊಂಡು ಕ್ರಿಶ್ಚಿಯನ್ ಎಂಬುದಾಗಿ ದಾಖಲಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಹಲವು ಸಚಿವರು, ಶಾಸಕರಿಂದಲೂ ಪರೋಕ್ಷವಾಗಿ ಈ ಬಗ್ಗೆ ಆಕ್ಷೇಪ ಕೇಳಿಬಂದಿತ್ತು. ಸಚಿವ ಸಂಪುಟ ಸಭೆಯಲ್ಲೂಈ ಬಗ್ಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಜನಾಭಿಪ್ರಾಯ, ಆಕ್ಷೇಪಗಳ ಬಗ್ಗೆ ಆಯೋಗದ ಗಮನಕ್ಕೆ ತಂದಿತ್ತು.

ಸೆ.22ರಿಂದ ಸಮೀಕ್ಷೆ

ರಾಜ್ಯದ ವಿವಿಧ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕಲೆ ಹಾಕಲು ಸೆ.22ರಿಂದ, ಅಂದರೆ ನಾಳೆಯಿಂದ ಸಮೀಕ್ಷೆ ನಡೆಯಲಿದೆ. ಇದಕ್ಕಾಗಿ ಶಿಕ್ಷಕರು, ಕಂದಾಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲಾಗುತ್ತಿದೆ. ಅವರಿಗೆ ಈಗಾಗಲೇ ಈ ಬಗ್ಗೆ ತರಬೇತಿ ನೀಡಲಾಗಿದೆ. ಈ ಬಾರಿ ಸಂಪೂರ್ಣ ಡಿಜಿಟಲ್ ಮಾದರಿಯಲ್ಲಿ ಸಮೀಕ್ಷೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಸಮೀಕ್ಷೆ ತಡ

ಬೆಂಗಳೂರಿನಲ್ಲಿ ಎರಡು ಮೂರು ದಿನ ಸಮೀಕ್ಷೆ ತಡವಾಗಿ ಆರಂಭ ಆಗಲಿದೆ. ತರಬೇತಿ ನೀಡುವುದಕ್ಕೆ ಒಂದು ವಾರ ತಡವಾಗಿದೆ. ಜೊತೆಗೆ ಜಿಬಿಎ ನೊಟಿಫಿಕೇಷನ್ ತಡ ಆಗಿದ್ದರಿಂದ ಇಲ್ಲಿ ತಡ ಆಗಿದೆ. ಬೆಂಗಳೂರು ನಗರದಲ್ಲಿ ಹೆಚ್ಚುವರಿ ಸಿಬ್ಬಂದಿ ನೇಮಿಸಲಾಗಿದೆ. ಬೇರೆ ಇಲಾಖೆಯಿಂದಲೂ ನೇಮಕ ಮಾಡಲಾಗಿದೆ ಎಂದು ಮಧುಸೂದನ್ ನಾಯ್ಕ್ ತಿಳಿಸಿದ್ದಾರೆ.

ಆಧಾರ್ ಕಾರ್ಡ್‌ ಕಡ್ಡಾಯ

ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ಪ್ರತಿಯೊಬ್ಬರು ತಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿದರೆ ಮಾತ್ರ ಸಮೀಕ್ಷೆಯಲ್ಲಿ ಪರಿಗಣಿಸಲಾಗುವುದು ಎಂದು ಮಧುಸೂದನ್ ನಾಯ್ಕ್ ತಿಳಿಸಿದ್ದಾರೆ.

ಆಳಂದ ಸೇರಿ ರಾಜ್ಯದ ಎಲ್ಲಾ ‘ಮತಗಳ್ಳತನ’ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...