Homeಮುಖಪುಟಪೌರತ್ವ ಮಸೂದೆ: ಕೇಂದ್ರದ ಕಾಯ್ದೆಯನ್ನು ತಿರಸ್ಕರಿಸುವ ಸಾಂವಿಧಾನಿಕ ಹಕ್ಕು ರಾಜ್ಯಗಳಿಗೆ ಇದೆಯೇ?

ಪೌರತ್ವ ಮಸೂದೆ: ಕೇಂದ್ರದ ಕಾಯ್ದೆಯನ್ನು ತಿರಸ್ಕರಿಸುವ ಸಾಂವಿಧಾನಿಕ ಹಕ್ಕು ರಾಜ್ಯಗಳಿಗೆ ಇದೆಯೇ?

- Advertisement -
- Advertisement -

ರಾಷ್ಟ್ರಪತಿಗಳ ಅನುಮೋದನೆಯ ಮೂಲಕ ಗುರುವಾರ ರಾತ್ರಿಯಿಂದಲೇ ಕಾಯ್ದೆಯಾಗಿ ಜಾರಿಗೆ ಬಂದಿರುವ ಪೌರತ್ವ ತಿದ್ದುಪಡಿ ಮಸೂದೆಗೆ ವಿಪರೀತ ಪ್ರತಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಕೇರಳ ರಾಜ್ಯ ಸರ್ಕಾರಗಳು ಈ ಕಾಯ್ದೆಯನ್ನು ತಮ್ಮ ರಾಜ್ಯಗಳಲ್ಲಿ ಅನುಷ್ಠಾನಕ್ಕೆ ತರಲು ಬಿಡುವುದಿಲ್ಲ ಎಂಬ ಹೇಳಿಕೆ ನೀಡಿವೆ. ಮಧ್ಯಪ್ರದೇಶದ ಕಮಲನಾಥ್ ಸರ್ಕಾರವು ಕೂಡಾ ಇದೇ ನಿಲುವಿನ ಸುಳಿವು ನೀಡಿದೆ. ಆದರೆ ಲೋಕಸಭೆ, ರಾಜ್ಯಸಭೆಗಳೆರಡರಲ್ಲು ಅನುಮೋದನೆ ಪಡೆದು ರಾಷ್ಟ್ರಪತಿಗಳಿಂದ ಅಂಕಿತವನ್ನೂ ಹಾಕಿಸಿದ, ಶಾಸನಬದ್ಧ ಪ್ರಕ್ರಿಯೆಗಳನ್ನೆಲ್ಲ ಪೂರೈಸಿದ ಕಾನೂನನ್ನು ತಿರಸ್ಕರಿಸುವ ಸಾಂವಿಧಾನಿಕ ಅವಕಾಶ ರಾಜ್ಯ ಸರ್ಕಾರಗಳಿಗೆ ಇದೆಯೇ? ಹಾಗೊಮ್ಮೆ ಅಸಹಕಾರ ತೋರಿದರೆ ಏನೆಲ್ಲ ಆಡಳಿತಾತ್ಮಕ ಬಿಕ್ಕಟ್ಟುಗಳು ಎದುರಾಗಬಹುದು? ಎಂಬ ಕುರಿತು ದಿ ಪ್ರಿಂಟ್ ಪತ್ರಿಕೆಯು ಖ್ಯಾತ ಕಾನೂನು ತಜ್ಞರನ್ನು ಮಾತಾಡಿಸಿ ಅವರ ಅಭಿಪ್ರಾಯಗಳನ್ನು ದಾಖಲಿಸಿದೆ. ಅದರ ಸಾರಾಂಶ ಇಲ್ಲಿದೆ.

ಸಂವಿಧಾನ ಏನು ಹೇಳುತ್ತೆ?
ಬಹುಪಾಲು ಕಾನೂನು ತಜ್ಞರ ಪ್ರಕಾರ ರಾಜ್ಯ ಸರ್ಕಾರಗಳಿಗೆ ಇಂತಹ ಸ್ವಾತಂತ್ರ್ಯ ಇಲ್ಲ! ಯಾಕೆಂದರೆ ಪೌರತ್ವ, ಪೌರತ್ವ ನೋಂದಣಿ ಮತ್ತು ವಿದೇಶಿ ವಲಸಿಗರ ಗುರುತಿಸುವಿಕೆಗಳು ಭಾರತ ಸಂವಿಧಾನದ ಕೇಂದ್ರ ಪಟ್ಟಿಯ ವ್ಯಾಪ್ತಿಗೆ ಒಳಪಡುತ್ತವೆ. ಅಂದರೆ ಈ ಕುರಿತು ಶಾಸನಗಳನ್ನು ರೂಪಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇರುತ್ತದೆ.
ಜೊತೆಗೆ, ೨೫೬ನೇ ವಿಧಿಯು ಕೇಂದ್ರದ ಕಾನೂನುಗಳ ಅನುಷ್ಠಾನವನ್ನು ಖಾತ್ರಿಪಡಿಸುವುದು ರಾಜ್ಯಗಳ ಕರ್ತವ್ಯ ಎಂದು ಉಲ್ಲೇಖಿಸುತ್ತದೆ. ಆ ವಿಧಿಯು, ಆ ರಾಜ್ಯಕ್ಕೆ ಅನ್ವಯವಾಗುವ ಈಗಾಗಲೇ ಅಸ್ತಿತ್ವದಲ್ಲಿರುವ ಕಾನೂನುಗಳು ಮತ್ತು ಸಂಸತ್ತಿನ ಮೂಲಕ ರೂಪಿಸಲ್ಪಟ್ಟ ಹೊಸ ಕಾಯ್ದೆಗಳನ್ನು ಅನುಷ್ಠಾನಕ್ಕೆ ತಂದು ಖಾತ್ರಿಪಡಿಸುವುದು ಪ್ರತಿ ರಾಜ್ಯದ ಕಾರ್ಯಾಂಗಾಧಿಕಾರದ ಹೊಣೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದೆ.

ಇದನ್ನೂ ಓದಿ: ಪೌರತ್ವ ಮಸೂದೆ ಜಾರಿಗೆ ತಂದ ಗೃಹಮಂತ್ರಿ ಅಮಿತ್ ಶಾಗೆ ಕಾದಿದೆಯಾ ಅಮೆರಿಕಾ ಬಹಿಷ್ಕಾರ?

ರಾಜ್ಯಗಳಿಗೆ ಬೇರೆ ದಾರಿಯೇ ಇಲ್ಲ
ಹಿರಿಯ ವಕೀಲರಾದ ಕೆ.ಟಿ.ಎಸ್.ತುಳಸಿಯವರು ಪ್ರಿಂಟ್ ಪತ್ರಿಕೆ ಜೊತೆ ಹಂಚಿಕೊಂಡಿರುವ ಅಭಿಪ್ರಾಯದ ಪ್ರಕಾರ ರಾಜ್ಯ ಸರ್ಕಾರಗಳಿಗೆ ಬೇರೆ ದಾರಿಯೇ ಇಲ್ಲ. ಕಾಯ್ದೆಯಾಗಿ ರೂಪಿಸಲ್ಪಟ್ಟ ಶಾಸನಗಳ ಪ್ರಕಾರವೇ ರಾಜ್ಯಗಳು ಕಾರ್ಯನಿರ್ವಹಿಸಬೇಕು. ರಾಜ್ಯದ ಶಾಸನಗಳಿಗಿಂತ ಕೇಂದ್ರದ ಶಾಸನಗಳು ನಮ್ಮ ಸಂವಿಧಾನದಲ್ಲಿ ಹೆಚ್ಚು ಮಾನ್ಯತೆ ಪಡೆದವು. ಹಾಗಾಗಿ ರಾಜ್ಯಗಳಿಗೆ ಬೇರೆ ದಾರಿಯಿಲ್ಲ. ರಾಜ್ಯಗಳು ನಿರ್ದಿಷ್ಟ ಕಾಯ್ದೆ ಬಗ್ಗೆ ತನಗೆ ಸಮ್ಮತಿ ಇಲ್ಲದಿರುವ ಬಗ್ಗೆ ಅಸಮಾಧಾನ ಹೊರಹಾಕಬಹುದು, ಆದರೆ ಅನುಷ್ಠಾನದ ವಿಚಾರಕ್ಕೆ ಬಂದಾಗ ಅವು ಮಾಡಲೇಬೇಕು. ಒಂದೊಮ್ಮೆ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರದಿದ್ದರೆ, ಆಯಾ ರಾಜ್ಯದ ಹೈಕೋರ್ಟ್‌ಗಳು ಅದನ್ನು ಜಾರಿಗೆ ತರುತ್ತವೆ ಎಂದಿದ್ದಾರೆ ಅವರು.

ಮಾಜಿ ಲೋಕಸಭಾ ಕಾರ್ಯದರ್ಶಿ ಮತ್ತು ಕಾನೂನು ತಜ್ಞರಾದ ಪಿ.ಡಿ.ಟಿ. ಆಚಾರಿ ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಿಂದ ಶಾಸನವಾಗಿ ರೂಪಿಸಲ್ಪಟ್ಟ ಕಾನೂನುಗಳನ್ನು ಅನುಷ್ಠಾನಕ್ಕೆ ತರಲು ಬಿಡುವುದಿಲ್ಲ ಎಂದು ಹೇಳಲು ರಾಜ್ಯ ಸರ್ಕಾರಗಳಿಗೆ ಯಾವ ಸಾಂವಿಧಾನಿಕ ಅವಕಾಶಗಳೂ ಇಲ್ಲ. ಈ ವಿಚಾರದಲ್ಲಿ ಸಂವಿಧಾನ ಬಹಳ ಸ್ಪಷ್ಟವಾಗಿದೆ. ಹಾಗಾಗಿ ರಾಜ್ಯ ಸರ್ಕಾರಗಳಿಗೆ ಬೇರೆ ದಾರಿ ಇಲ್ಲ ಎಂದಿದ್ದಾರೆ. ಆದರೆ ಅನುಷ್ಠಾನಕ್ಕೆ ತರದಿದ್ದರೆ ಏನಾಗುತ್ತದೆ ಎಂಬ ಕುರಿತು ಅವರು ಬೇರೆಯದೇ ಸಾಧ್ಯತೆಯನ್ನು ಮುಂದಿಡುತ್ತಾರೆ, ಒಂದೊಮ್ಮೆ ರಾಜ್ಯ ಸರ್ಕಾರಗಳು ಒಪ್ಪದಿದ್ದರೆ, ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತಂದು ಆಡಳಿತವನ್ನು ತನ್ನ ಕೈವಶ ಮಾಡಿಕೊಳ್ಳಬಹುದು ಎನ್ನುತ್ತಾರೆ ಅವರು.

ಇನ್ನು ಮತ್ತೊಬ್ಬ ಹಿರಿಯ ವಕೀಲ ಗೋಪಾಲ ಶಂಕರನಾರಾಯಣನ್ ಅವರು, ಒಂದು ಶಾಸನವನ್ನು ಅನುಷ್ಠಾನಕ್ಕೆ ತರಲು ಸಹಮತಿ ಸೂಚಿಸದೆ ಅಸಹಕಾರ ತೋರುವ ಅವಕಾಶ ರಾಜ್ಯ ಸರ್ಕಾರಕ್ಕೆ ಇದೆ. ಆದರೆ ಮುಂಬರುವ ಪರಿಣಾಮಗಳನ್ನು ಅದು ಎದುರಿಸಲು ಸಿದ್ದವಾಗಿರಬೇಕಾಗುತ್ತದೆ ಎನ್ನುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್‌ ಆಡಳಿತದ ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಛತ್ತೀಸ್‌ಘಡದಲ್ಲಿ ಸಿಎಬಿ ಜಾರಿ ಇಲ್ಲ…

ಇದು ಕೇಂದ್ರ ಸರ್ಕಾರದ ಕಾಯ್ದೆಯೇ ಇರಬಹುದು ಮತ್ತು ಪೌರತ್ವದ ವಿಚಾರದ ರಾಷ್ಟ್ರೀಯ ಒಕ್ಕೂಟಕ್ಕೆ ಸಂಬಂಧಿಸಿದ ವಿಷಯವೇ ಆಗಿರಬಹುದು, ಆದರೆ ಅನುಷ್ಠಾನದ ವಿಚಾರಕ್ಕೆ ಬಂದಾಗ ಕೇಂದ್ರವು ಸಹಾ ಪ್ರಾದೇಶಿಕ ಪ್ರಾಧಿಕಾರಗಳನ್ನು (ಕಾರ್ಯಾಂಗ ಮತ್ತು ನ್ಯಾಯಾಂಗ ಎರಡೂ) ಅವಲಂಬಿಸಲೇಬೇಕಾಗುತ್ತದೆ. ಹಾಗಾಗಿ ಕೇಂದ್ರ ಸರ್ಕಾರಕ್ಕೆ ಆಯಾ ಸ್ಥಳೀಯ ಆಡಳಿತದ ಯಂತ್ರಾಂಗ ಮತ್ತು ಪೊಲೀಸ್ ವ್ಯವಸ್ಥೆಯ ಅಗತ್ಯವಿರುತ್ತದೆ. ಇವು ಆಯಾ ರಾಜ್ಯ ಸರ್ಕಾರಗಳ ಸುಪರ್ದಿಯಲ್ಲಿರುತ್ತವೆ. ರಾಜ್ಯ ಸರ್ಕಾರ ತನ್ನ ಆಡಳಿತ ಯಂತ್ರಾಂಗಕ್ಕೆ ಅನುಷ್ಠಾನದ ವಿಚಾರದಲ್ಲಿ ಅಸಹಕಾರ ತೋರುವಂತೆ ನಿರ್ದೇಶನ ನೀಡಿದರೆ ಕೇಂದ್ರದ ಕಾಯ್ದೆ ಅನುಷ್ಠಾನಕ್ಕೆ ಬರುವುದು ಅಸಾಧ್ಯವಾಗುತ್ತದೆ ಎನ್ನುವ ಅವರು, ಅದರ ನಂತರದ ಪರಿಣಾಮಗಳನ್ನು ಹೀಗೆ ಬಿಚ್ಚಿಡುತ್ತಾರೆ, ಆದರೆ ಕೇಂದ್ರದ ಕೆಂಗಣ್ಣಿಗೆ ಗುರಿಯಾಗುವ ರಾಜ್ಯವು ಮುಂದಿನ ಕೆಟ್ಟ ಪರಿಣಾಮಗಳಿಗೂ ಸಿದ್ದವಾಗಿರಬೇಕಾಗುತ್ತದೆ. ರಾಜ್ಯದಲ್ಲಿ ಸಾಂವಿಧಾನಿಕ ಯಂತ್ರಾಂಗ ವೈಫಲ್ಯವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸುವ ಕೇಂದ್ರ, ರಾಷ್ಟ್ರಪತಿ ಆಳ್ವಿಕೆ ಹೇರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಒಟ್ಟಾರೆ ಈ ಎಲ್ಲಾ ಕಾನೂನುತಜ್ಞರ ಅಭಿಪ್ರಾಯಗಳ ಪ್ರಕಾರ ಕೇಂದ್ರ ಪಟ್ಟಿಗೆ ಸೇರುವ ಒಂದು ಕಾಯ್ದೆಗೆ ತನ್ನ ಅಸಮಾಧಾನವನ್ನು ಹೊರಹಾಕುವ ಅವಕಾಶ ರಾಜ್ಯ ಸರ್ಕಾರಕ್ಕೆ ಇರಬಹುದಾದರು, ಅನುಷ್ಠಾನ ಮಾಡದೆ ಇರಲು ಸಾಧ್ಯವಿಲ್ಲ. ಹಾಗೊಮ್ಮೆ ಅಸಹಕಾರ ಮುಂದುವರೆಸಿದರೆ ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಿ, ಕಾಯ್ದೆಯನ್ನು ಜಾರಿಗೆ ತರುವ ಸಾಂವಿಧಾನಿಕ ಅವಕಾಶ ಕೇಂದ್ರದ ಮುಂದಿರುತ್ತದೆ. ಆದಾಗ್ಯೂ ಕೇಂದ್ರ ಮತ್ತು ರಾಜ್ಯಗಳ ನಡುವೆ ತಿಕ್ಕಾಟ ಬರದಂತೆ ಹೊಂದಾಣಿಕೆಯ ಮೂಲಕ ಆಡಳಿತ ನಡೆಸುವುದು ನಮ್ಮ ಒಟ್ಟಾರೆ ಸಂವಿಧಾನದ ಆಶಯವಾಗಿದೆ, ಒಕ್ಕೂಟ ವ್ಯವಸ್ಥೆಯ ಶ್ರೇಯವಾಗಿದೆ ಎಂಬುದನ್ನು ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ಮರೆಯದಿರುವುದು ದೇಶದ ಹಿತದೃಷ್ಟಿಯಿಂದ ಒಳಿತು.

ಕೃಪೆ: ಪ್ರಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರಿ ಆದರೆ ಅನುಷ್ಠಾನಕ್ಕೆ ಬಂದಿರುವ ಕಾನೂನೆ ಸಂವಿಧಾನಕ್ಕೆ ವಿರುದ್ದವಾಗಿದ್ದರೆ?
    ಅನುಷ್ಠಾನ ಮಾಡುವವರು ಮೊದಲು ಸಂವಿಧಾನವನ್ನು ಓದಿದ್ದರೆ ತಿಳಿಯಬಹುದು.
    ಜನರು ಧಂಗೆ ಹೇಳಲು ಯಾರಪ್ಪನ ಅನುಮತಿಯೂ ಬೆಕಾಗಿಲ್ಲತಾನೆ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...