Homeಮುಖಪುಟಪೌರತ್ವ ಮಸೂದೆ: ಕೇಂದ್ರದ ಕಾಯ್ದೆಯನ್ನು ತಿರಸ್ಕರಿಸುವ ಸಾಂವಿಧಾನಿಕ ಹಕ್ಕು ರಾಜ್ಯಗಳಿಗೆ ಇದೆಯೇ?

ಪೌರತ್ವ ಮಸೂದೆ: ಕೇಂದ್ರದ ಕಾಯ್ದೆಯನ್ನು ತಿರಸ್ಕರಿಸುವ ಸಾಂವಿಧಾನಿಕ ಹಕ್ಕು ರಾಜ್ಯಗಳಿಗೆ ಇದೆಯೇ?

- Advertisement -
- Advertisement -

ರಾಷ್ಟ್ರಪತಿಗಳ ಅನುಮೋದನೆಯ ಮೂಲಕ ಗುರುವಾರ ರಾತ್ರಿಯಿಂದಲೇ ಕಾಯ್ದೆಯಾಗಿ ಜಾರಿಗೆ ಬಂದಿರುವ ಪೌರತ್ವ ತಿದ್ದುಪಡಿ ಮಸೂದೆಗೆ ವಿಪರೀತ ಪ್ರತಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಕೇರಳ ರಾಜ್ಯ ಸರ್ಕಾರಗಳು ಈ ಕಾಯ್ದೆಯನ್ನು ತಮ್ಮ ರಾಜ್ಯಗಳಲ್ಲಿ ಅನುಷ್ಠಾನಕ್ಕೆ ತರಲು ಬಿಡುವುದಿಲ್ಲ ಎಂಬ ಹೇಳಿಕೆ ನೀಡಿವೆ. ಮಧ್ಯಪ್ರದೇಶದ ಕಮಲನಾಥ್ ಸರ್ಕಾರವು ಕೂಡಾ ಇದೇ ನಿಲುವಿನ ಸುಳಿವು ನೀಡಿದೆ. ಆದರೆ ಲೋಕಸಭೆ, ರಾಜ್ಯಸಭೆಗಳೆರಡರಲ್ಲು ಅನುಮೋದನೆ ಪಡೆದು ರಾಷ್ಟ್ರಪತಿಗಳಿಂದ ಅಂಕಿತವನ್ನೂ ಹಾಕಿಸಿದ, ಶಾಸನಬದ್ಧ ಪ್ರಕ್ರಿಯೆಗಳನ್ನೆಲ್ಲ ಪೂರೈಸಿದ ಕಾನೂನನ್ನು ತಿರಸ್ಕರಿಸುವ ಸಾಂವಿಧಾನಿಕ ಅವಕಾಶ ರಾಜ್ಯ ಸರ್ಕಾರಗಳಿಗೆ ಇದೆಯೇ? ಹಾಗೊಮ್ಮೆ ಅಸಹಕಾರ ತೋರಿದರೆ ಏನೆಲ್ಲ ಆಡಳಿತಾತ್ಮಕ ಬಿಕ್ಕಟ್ಟುಗಳು ಎದುರಾಗಬಹುದು? ಎಂಬ ಕುರಿತು ದಿ ಪ್ರಿಂಟ್ ಪತ್ರಿಕೆಯು ಖ್ಯಾತ ಕಾನೂನು ತಜ್ಞರನ್ನು ಮಾತಾಡಿಸಿ ಅವರ ಅಭಿಪ್ರಾಯಗಳನ್ನು ದಾಖಲಿಸಿದೆ. ಅದರ ಸಾರಾಂಶ ಇಲ್ಲಿದೆ.

ಸಂವಿಧಾನ ಏನು ಹೇಳುತ್ತೆ?
ಬಹುಪಾಲು ಕಾನೂನು ತಜ್ಞರ ಪ್ರಕಾರ ರಾಜ್ಯ ಸರ್ಕಾರಗಳಿಗೆ ಇಂತಹ ಸ್ವಾತಂತ್ರ್ಯ ಇಲ್ಲ! ಯಾಕೆಂದರೆ ಪೌರತ್ವ, ಪೌರತ್ವ ನೋಂದಣಿ ಮತ್ತು ವಿದೇಶಿ ವಲಸಿಗರ ಗುರುತಿಸುವಿಕೆಗಳು ಭಾರತ ಸಂವಿಧಾನದ ಕೇಂದ್ರ ಪಟ್ಟಿಯ ವ್ಯಾಪ್ತಿಗೆ ಒಳಪಡುತ್ತವೆ. ಅಂದರೆ ಈ ಕುರಿತು ಶಾಸನಗಳನ್ನು ರೂಪಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇರುತ್ತದೆ.
ಜೊತೆಗೆ, ೨೫೬ನೇ ವಿಧಿಯು ಕೇಂದ್ರದ ಕಾನೂನುಗಳ ಅನುಷ್ಠಾನವನ್ನು ಖಾತ್ರಿಪಡಿಸುವುದು ರಾಜ್ಯಗಳ ಕರ್ತವ್ಯ ಎಂದು ಉಲ್ಲೇಖಿಸುತ್ತದೆ. ಆ ವಿಧಿಯು, ಆ ರಾಜ್ಯಕ್ಕೆ ಅನ್ವಯವಾಗುವ ಈಗಾಗಲೇ ಅಸ್ತಿತ್ವದಲ್ಲಿರುವ ಕಾನೂನುಗಳು ಮತ್ತು ಸಂಸತ್ತಿನ ಮೂಲಕ ರೂಪಿಸಲ್ಪಟ್ಟ ಹೊಸ ಕಾಯ್ದೆಗಳನ್ನು ಅನುಷ್ಠಾನಕ್ಕೆ ತಂದು ಖಾತ್ರಿಪಡಿಸುವುದು ಪ್ರತಿ ರಾಜ್ಯದ ಕಾರ್ಯಾಂಗಾಧಿಕಾರದ ಹೊಣೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದೆ.

ಇದನ್ನೂ ಓದಿ: ಪೌರತ್ವ ಮಸೂದೆ ಜಾರಿಗೆ ತಂದ ಗೃಹಮಂತ್ರಿ ಅಮಿತ್ ಶಾಗೆ ಕಾದಿದೆಯಾ ಅಮೆರಿಕಾ ಬಹಿಷ್ಕಾರ?

ರಾಜ್ಯಗಳಿಗೆ ಬೇರೆ ದಾರಿಯೇ ಇಲ್ಲ
ಹಿರಿಯ ವಕೀಲರಾದ ಕೆ.ಟಿ.ಎಸ್.ತುಳಸಿಯವರು ಪ್ರಿಂಟ್ ಪತ್ರಿಕೆ ಜೊತೆ ಹಂಚಿಕೊಂಡಿರುವ ಅಭಿಪ್ರಾಯದ ಪ್ರಕಾರ ರಾಜ್ಯ ಸರ್ಕಾರಗಳಿಗೆ ಬೇರೆ ದಾರಿಯೇ ಇಲ್ಲ. ಕಾಯ್ದೆಯಾಗಿ ರೂಪಿಸಲ್ಪಟ್ಟ ಶಾಸನಗಳ ಪ್ರಕಾರವೇ ರಾಜ್ಯಗಳು ಕಾರ್ಯನಿರ್ವಹಿಸಬೇಕು. ರಾಜ್ಯದ ಶಾಸನಗಳಿಗಿಂತ ಕೇಂದ್ರದ ಶಾಸನಗಳು ನಮ್ಮ ಸಂವಿಧಾನದಲ್ಲಿ ಹೆಚ್ಚು ಮಾನ್ಯತೆ ಪಡೆದವು. ಹಾಗಾಗಿ ರಾಜ್ಯಗಳಿಗೆ ಬೇರೆ ದಾರಿಯಿಲ್ಲ. ರಾಜ್ಯಗಳು ನಿರ್ದಿಷ್ಟ ಕಾಯ್ದೆ ಬಗ್ಗೆ ತನಗೆ ಸಮ್ಮತಿ ಇಲ್ಲದಿರುವ ಬಗ್ಗೆ ಅಸಮಾಧಾನ ಹೊರಹಾಕಬಹುದು, ಆದರೆ ಅನುಷ್ಠಾನದ ವಿಚಾರಕ್ಕೆ ಬಂದಾಗ ಅವು ಮಾಡಲೇಬೇಕು. ಒಂದೊಮ್ಮೆ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರದಿದ್ದರೆ, ಆಯಾ ರಾಜ್ಯದ ಹೈಕೋರ್ಟ್‌ಗಳು ಅದನ್ನು ಜಾರಿಗೆ ತರುತ್ತವೆ ಎಂದಿದ್ದಾರೆ ಅವರು.

ಮಾಜಿ ಲೋಕಸಭಾ ಕಾರ್ಯದರ್ಶಿ ಮತ್ತು ಕಾನೂನು ತಜ್ಞರಾದ ಪಿ.ಡಿ.ಟಿ. ಆಚಾರಿ ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಿಂದ ಶಾಸನವಾಗಿ ರೂಪಿಸಲ್ಪಟ್ಟ ಕಾನೂನುಗಳನ್ನು ಅನುಷ್ಠಾನಕ್ಕೆ ತರಲು ಬಿಡುವುದಿಲ್ಲ ಎಂದು ಹೇಳಲು ರಾಜ್ಯ ಸರ್ಕಾರಗಳಿಗೆ ಯಾವ ಸಾಂವಿಧಾನಿಕ ಅವಕಾಶಗಳೂ ಇಲ್ಲ. ಈ ವಿಚಾರದಲ್ಲಿ ಸಂವಿಧಾನ ಬಹಳ ಸ್ಪಷ್ಟವಾಗಿದೆ. ಹಾಗಾಗಿ ರಾಜ್ಯ ಸರ್ಕಾರಗಳಿಗೆ ಬೇರೆ ದಾರಿ ಇಲ್ಲ ಎಂದಿದ್ದಾರೆ. ಆದರೆ ಅನುಷ್ಠಾನಕ್ಕೆ ತರದಿದ್ದರೆ ಏನಾಗುತ್ತದೆ ಎಂಬ ಕುರಿತು ಅವರು ಬೇರೆಯದೇ ಸಾಧ್ಯತೆಯನ್ನು ಮುಂದಿಡುತ್ತಾರೆ, ಒಂದೊಮ್ಮೆ ರಾಜ್ಯ ಸರ್ಕಾರಗಳು ಒಪ್ಪದಿದ್ದರೆ, ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತಂದು ಆಡಳಿತವನ್ನು ತನ್ನ ಕೈವಶ ಮಾಡಿಕೊಳ್ಳಬಹುದು ಎನ್ನುತ್ತಾರೆ ಅವರು.

ಇನ್ನು ಮತ್ತೊಬ್ಬ ಹಿರಿಯ ವಕೀಲ ಗೋಪಾಲ ಶಂಕರನಾರಾಯಣನ್ ಅವರು, ಒಂದು ಶಾಸನವನ್ನು ಅನುಷ್ಠಾನಕ್ಕೆ ತರಲು ಸಹಮತಿ ಸೂಚಿಸದೆ ಅಸಹಕಾರ ತೋರುವ ಅವಕಾಶ ರಾಜ್ಯ ಸರ್ಕಾರಕ್ಕೆ ಇದೆ. ಆದರೆ ಮುಂಬರುವ ಪರಿಣಾಮಗಳನ್ನು ಅದು ಎದುರಿಸಲು ಸಿದ್ದವಾಗಿರಬೇಕಾಗುತ್ತದೆ ಎನ್ನುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್‌ ಆಡಳಿತದ ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಛತ್ತೀಸ್‌ಘಡದಲ್ಲಿ ಸಿಎಬಿ ಜಾರಿ ಇಲ್ಲ…

ಇದು ಕೇಂದ್ರ ಸರ್ಕಾರದ ಕಾಯ್ದೆಯೇ ಇರಬಹುದು ಮತ್ತು ಪೌರತ್ವದ ವಿಚಾರದ ರಾಷ್ಟ್ರೀಯ ಒಕ್ಕೂಟಕ್ಕೆ ಸಂಬಂಧಿಸಿದ ವಿಷಯವೇ ಆಗಿರಬಹುದು, ಆದರೆ ಅನುಷ್ಠಾನದ ವಿಚಾರಕ್ಕೆ ಬಂದಾಗ ಕೇಂದ್ರವು ಸಹಾ ಪ್ರಾದೇಶಿಕ ಪ್ರಾಧಿಕಾರಗಳನ್ನು (ಕಾರ್ಯಾಂಗ ಮತ್ತು ನ್ಯಾಯಾಂಗ ಎರಡೂ) ಅವಲಂಬಿಸಲೇಬೇಕಾಗುತ್ತದೆ. ಹಾಗಾಗಿ ಕೇಂದ್ರ ಸರ್ಕಾರಕ್ಕೆ ಆಯಾ ಸ್ಥಳೀಯ ಆಡಳಿತದ ಯಂತ್ರಾಂಗ ಮತ್ತು ಪೊಲೀಸ್ ವ್ಯವಸ್ಥೆಯ ಅಗತ್ಯವಿರುತ್ತದೆ. ಇವು ಆಯಾ ರಾಜ್ಯ ಸರ್ಕಾರಗಳ ಸುಪರ್ದಿಯಲ್ಲಿರುತ್ತವೆ. ರಾಜ್ಯ ಸರ್ಕಾರ ತನ್ನ ಆಡಳಿತ ಯಂತ್ರಾಂಗಕ್ಕೆ ಅನುಷ್ಠಾನದ ವಿಚಾರದಲ್ಲಿ ಅಸಹಕಾರ ತೋರುವಂತೆ ನಿರ್ದೇಶನ ನೀಡಿದರೆ ಕೇಂದ್ರದ ಕಾಯ್ದೆ ಅನುಷ್ಠಾನಕ್ಕೆ ಬರುವುದು ಅಸಾಧ್ಯವಾಗುತ್ತದೆ ಎನ್ನುವ ಅವರು, ಅದರ ನಂತರದ ಪರಿಣಾಮಗಳನ್ನು ಹೀಗೆ ಬಿಚ್ಚಿಡುತ್ತಾರೆ, ಆದರೆ ಕೇಂದ್ರದ ಕೆಂಗಣ್ಣಿಗೆ ಗುರಿಯಾಗುವ ರಾಜ್ಯವು ಮುಂದಿನ ಕೆಟ್ಟ ಪರಿಣಾಮಗಳಿಗೂ ಸಿದ್ದವಾಗಿರಬೇಕಾಗುತ್ತದೆ. ರಾಜ್ಯದಲ್ಲಿ ಸಾಂವಿಧಾನಿಕ ಯಂತ್ರಾಂಗ ವೈಫಲ್ಯವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸುವ ಕೇಂದ್ರ, ರಾಷ್ಟ್ರಪತಿ ಆಳ್ವಿಕೆ ಹೇರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಒಟ್ಟಾರೆ ಈ ಎಲ್ಲಾ ಕಾನೂನುತಜ್ಞರ ಅಭಿಪ್ರಾಯಗಳ ಪ್ರಕಾರ ಕೇಂದ್ರ ಪಟ್ಟಿಗೆ ಸೇರುವ ಒಂದು ಕಾಯ್ದೆಗೆ ತನ್ನ ಅಸಮಾಧಾನವನ್ನು ಹೊರಹಾಕುವ ಅವಕಾಶ ರಾಜ್ಯ ಸರ್ಕಾರಕ್ಕೆ ಇರಬಹುದಾದರು, ಅನುಷ್ಠಾನ ಮಾಡದೆ ಇರಲು ಸಾಧ್ಯವಿಲ್ಲ. ಹಾಗೊಮ್ಮೆ ಅಸಹಕಾರ ಮುಂದುವರೆಸಿದರೆ ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಿ, ಕಾಯ್ದೆಯನ್ನು ಜಾರಿಗೆ ತರುವ ಸಾಂವಿಧಾನಿಕ ಅವಕಾಶ ಕೇಂದ್ರದ ಮುಂದಿರುತ್ತದೆ. ಆದಾಗ್ಯೂ ಕೇಂದ್ರ ಮತ್ತು ರಾಜ್ಯಗಳ ನಡುವೆ ತಿಕ್ಕಾಟ ಬರದಂತೆ ಹೊಂದಾಣಿಕೆಯ ಮೂಲಕ ಆಡಳಿತ ನಡೆಸುವುದು ನಮ್ಮ ಒಟ್ಟಾರೆ ಸಂವಿಧಾನದ ಆಶಯವಾಗಿದೆ, ಒಕ್ಕೂಟ ವ್ಯವಸ್ಥೆಯ ಶ್ರೇಯವಾಗಿದೆ ಎಂಬುದನ್ನು ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ಮರೆಯದಿರುವುದು ದೇಶದ ಹಿತದೃಷ್ಟಿಯಿಂದ ಒಳಿತು.

ಕೃಪೆ: ಪ್ರಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರಿ ಆದರೆ ಅನುಷ್ಠಾನಕ್ಕೆ ಬಂದಿರುವ ಕಾನೂನೆ ಸಂವಿಧಾನಕ್ಕೆ ವಿರುದ್ದವಾಗಿದ್ದರೆ?
    ಅನುಷ್ಠಾನ ಮಾಡುವವರು ಮೊದಲು ಸಂವಿಧಾನವನ್ನು ಓದಿದ್ದರೆ ತಿಳಿಯಬಹುದು.
    ಜನರು ಧಂಗೆ ಹೇಳಲು ಯಾರಪ್ಪನ ಅನುಮತಿಯೂ ಬೆಕಾಗಿಲ್ಲತಾನೆ.

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...