Homeಮುಖಪುಟನಕ್ಸಲರ ಕೇಂದ್ರ ಸಮಿತಿ ಸದಸ್ಯರಾದ ರಾಜು ದಾದಾ ಮತ್ತು ಕೋಸಾ ದಾದಾ ಎನ್‌ಕೌಂಟರ್‌ನಲ್ಲಿ ಸಾವು

ನಕ್ಸಲರ ಕೇಂದ್ರ ಸಮಿತಿ ಸದಸ್ಯರಾದ ರಾಜು ದಾದಾ ಮತ್ತು ಕೋಸಾ ದಾದಾ ಎನ್‌ಕೌಂಟರ್‌ನಲ್ಲಿ ಸಾವು

- Advertisement -
- Advertisement -

ರಾಯ್ಪುರ: ಛತ್ತೀಸ್ಗಢಮಹಾರಾಷ್ಟ್ರ ಗಡಿಯಲ್ಲಿರುವ ಅಬುಜ್ಮದ್ ಅರಣ್ಯದಲ್ಲಿ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಉನ್ನತ ಮಾವೋವಾದಿ ನಾಯಕರು (ಕೇಂದ್ರ ಸಮಿತಿ ಸದಸ್ಯರು) ಹತರಾಗಿದ್ದು, ಭದ್ರತಾ ಪಡೆಗಳು ಎಡಪಂಥೀಯ ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಮಹತ್ವದ ಯಶಸ್ಸು ಸಾಧಿಸಿವೆ.

ಅವರನ್ನು ಸಿಪಿಐ (ಮಾವೋವಾದಿ) ಕೇಂದ್ರ ಸಮಿತಿ ಸದಸ್ಯರಾದ ರಾಜು ದಾದಾ ಅಲಿಯಾಸ್ ಕಟ್ಟಾ ರಾಮಚಂದ್ರ ರೆಡ್ಡಿ ಮತ್ತು ಕೋಸಾ ದಾದಾ ಅಲಿಯಾಸ್ ಕದರಿ ಸತ್ಯನಾರಾಯಣ ರೆಡ್ಡಿ ಎಂದು ಗುರುತಿಸಲಾಗಿದೆ. ಇವರಿಬ್ಬರ ತಲೆಗೆ ಛತ್ತೀಸ್ಗಢ ಸರ್ಕಾರವು ತಲಾ ರೂ. 40 ಲಕ್ಷ ಬಹುಮಾನವನ್ನು ಘೋಷಿಸಿತ್ತು.

ನಾರಾಯಣಪುರದ ಪೊಲೀಸ್ ವರಿಷ್ಠಾಧಿಕಾರಿ ರಾಬಿನ್ಸನ್ ಅವರ ಪ್ರಕಾರ, ಸೆಪ್ಟೆಂಬರ್ 22ರಂದು ಬೆಳಗ್ಗೆ ದಟ್ಟ ಅಬುಜ್ಮದ್ ಪ್ರದೇಶದಲ್ಲಿ ಮಾವೋವಾದಿಗಳ ಚಲನವಲನದ ಬಗ್ಗೆ ಗುಪ್ತಚರ ಮಾಹಿತಿ ಲಭ್ಯವಾದ ನಂತರ ಎನ್ಕೌಂಟರ್ ಪ್ರಾರಂಭವಾಯಿತು. ದಿನವಿಡೀ ಗುಂಡಿನ ಚಕಮಕಿ ಮುಂದುವರಿದಿದ್ದು, ನಂತರ ಇಬ್ಬರು ಹಿರಿಯ ನಾಯಕರ ಮೃತದೇಹಗಳು ಪತ್ತೆಯಾಗಿವೆ.

ಸ್ಥಳದಿಂದ ಪಡೆಗಳು ಒಂದು ಎಕೆ-47 ರೈಫಲ್, ಒಂದು INSAS ರೈಫಲ್, ಒಂದು BGL ಲಾಂಚರ್, ಸ್ಫೋಟಕಗಳ ಸಂಗ್ರಹ, ಮಾವೋವಾದಿ ಸಾಹಿತ್ಯ ಮತ್ತು ಇತರೆ ದೈನಂದಿನ ಬಳಕೆಯ ವಸ್ತುಗಳನ್ನು ವಶಪಡಿಸಿಕೊಂಡಿವೆ.

ಇವರಿಬ್ಬರು ಮೂರು ದಶಕಗಳಿಂದ ದಂಡಕಾರಣ್ಯ ವಿಶೇಷ ವಲಯ ಸಮಿತಿಯಲ್ಲಿ ಸಕ್ರಿಯರಾಗಿದ್ದರು ಮತ್ತು ಭದ್ರತಾ ಸಿಬ್ಬಂದಿ ಹಾಗೂ ನಾಗರಿಕರನ್ನು ಬಲಿ ತೆಗೆದುಕೊಂಡ ಹಲವಾರು ಪ್ರಮುಖ ದಾಳಿಗಳ ಹಿಂದಿನ ರೂವಾರಿಗಳು ಎಂದು ಪರಿಗಣಿಸಲಾಗಿತ್ತು.

ಐಜಿಪಿ ಬಸ್ತರ್ ಶ್ರೇಣಿಯ ಸುಂದರರಾಜ್ ಪಿ ಕಾರ್ಯಾಚರಣೆಯನ್ನುಮಾವೋವಾದಿ ಸಂಘಟನೆಗೆ ದೊಡ್ಡ ಹಿನ್ನಡೆಎಂದು ಬಣ್ಣಿಸಿದ್ದಾರೆ. “ಸವಾಲಿನ ಭೂಪ್ರದೇಶ ಮತ್ತು ಪ್ರತಿಕೂಲ ಹವಾಮಾನದ ನಡುವೆಯೂ ನಮ್ಮ ಪಡೆಗಳು ತಮ್ಮ ಕಾರ್ಯಾಚರಣೆಯಲ್ಲಿ ದೃಢವಾಗಿವೆ. ಎನ್ಕೌಂಟರ್ ನಿರ್ಣಾಯಕ ಕಾರ್ಯಾಚರಣೆಗಳು ಮಾವೋವಾದಿ ನಾಯಕತ್ವವನ್ನು ಹಂತಹಂತವಾಗಿ ವಿಚ್ಛಿದ್ರಗೊಳಿಸುತ್ತಿರುವುದನ್ನು ಸಾಬೀತುಪಡಿಸುತ್ತದೆಎಂದು ಅವರು ಹೇಳಿದರು.

ಉಳಿದ ಮಾವೋವಾದಿ ಕಾರ್ಯಕರ್ತರಿಗೆ ಮನವಿ ಮಾಡಿದ ಸುಂದರರಾಜ್, “ಮಾವೋವಾದಿ ಚಳವಳಿ ಅಂತ್ಯದತ್ತ ಸಾಗುತ್ತಿದೆ ಎಂಬ ವಾಸ್ತವವನ್ನು ಒಪ್ಪಿಕೊಳ್ಳುವಂತೆಮತ್ತು ಸರ್ಕಾರದ ಪುನರ್ವಸತಿ ನೀತಿಯಡಿ ಶರಣಾಗುವಂತೆ ಒತ್ತಾಯಿಸಿದರು.

ಇತ್ತೀಚಿನ ಎನ್ಕೌಂಟರ್ ಬಸ್ತರ್ನಲ್ಲಿ ಮೇ ತಿಂಗಳಲ್ಲಿ ನಡೆದ ಅತ್ಯಂತ ರಕ್ತಸಿಕ್ತ ಪ್ರತಿಬಂಡಾಯ ದಾಳಿಯ ಕೆಲವೇ ತಿಂಗಳ ನಂತರ ಸಂಭವಿಸಿದೆ, ದಾಳಿಯಲ್ಲಿ ಮಾವೋವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಸವರಾಜು (ರೂ. 1.5 ಕೋಟಿ ಬಹುಮಾನ) ಸೇರಿದಂತೆ ಹಲವಾರು ಮಾವೋವಾದಿಗಳು ಹತರಾಗಿದ್ದರು. ದಾಳಿಯ ನಂತರ ಕರ್ರೆಗುಟ್ಟಾ ಕಾರ್ಯಾಚರಣೆಯಲ್ಲಿ ಛತ್ತೀಸ್ಗಢತೆಲಂಗಾಣ ಗಡಿಯಲ್ಲಿ 24 ದಿನಗಳ ಹುಡುಕಾಟದ ನಂತರ 31 ಮಾವೋವಾದಿಗಳು ಹತರಾಗಿದ್ದರು.

ಕಳೆದ ಒಂದು ವರ್ಷದಲ್ಲಿ ಜಯರಾಮ್ ಅಲಿಯಾಸ್ ಚಲಪತಿ (ರೂ. 1 ಕೋಟಿ ಬಹುಮಾನ), ರೇಣುಕಾ (ರೂ. 45 ಲಕ್ಷ), ಸುಧಾಕರ್ ಅಲಿಯಾಸ್ ನರಸಿಂಹಲಂ (ರೂ. 1 ಕೋಟಿ), ಗರ್ಲಾಲಾ ರವಿ (ರೂ. 40 ಲಕ್ಷ), ಮತ್ತು ನೀತಿ ಅಲಿಯಾಸ್ ನಿರ್ಮಲಾ (ರೂ. 25 ಲಕ್ಷ) ಸೇರಿದಂತೆ ಹಲವಾರು ಹಿರಿಯ ನಾಯಕರು ಛತ್ತೀಸ್ಗಢ, ಆಂಧ್ರಪ್ರದೇಶ, ತೆಲಂಗಾಣ, ಒಡಿಶಾ ಮತ್ತು ಮಹಾರಾಷ್ಟ್ರದಾದ್ಯಂತ ಹತರಾಗಿದ್ದಾರೆ.

ರಾಜು ದಾದಾ ಮತ್ತು ಕೋಸಾ ದಾದಾ ಅವರ ಹತ್ಯೆಯು ದಂಡಕಾರಣ್ಯ ಪ್ರದೇಶದಲ್ಲಿನ ಮಾವೋವಾದಿ ನಾಯಕತ್ವದ ಶ್ರೇಣಿಯನ್ನು ಮತ್ತಷ್ಟು ದುರ್ಬಲಗೊಳಿಸುತ್ತದೆ, ಇದು ನಡೆಯುತ್ತಿರುವ ಪ್ರತಿಬಂಡಾಯ ಪ್ರಯತ್ನದಲ್ಲಿ ಮತ್ತೊಂದು ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಟ್ರಂಪ್‌ರ H-1B ವೀಸಾ ನಿರ್ಬಂಧ: ಜಾಗತಿಕ ಬಂಡವಾಳಶಾಹಿಯ ಕೊನೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...